Homeಮುಖಪುಟ`ಬಡವರು ಮುಟ್ಟಿದಾಗ ವ್ಯಾಸಲಿನ್ ಹಚ್ಚಿಕೊಂಡರು' ಎಂದು ಸಚಿವ ಹೆಬ್ಬಾರ್‌ ಹೇಳಿದ್ದು ಯಾರಿಗೆ?

`ಬಡವರು ಮುಟ್ಟಿದಾಗ ವ್ಯಾಸಲಿನ್ ಹಚ್ಚಿಕೊಂಡರು’ ಎಂದು ಸಚಿವ ಹೆಬ್ಬಾರ್‌ ಹೇಳಿದ್ದು ಯಾರಿಗೆ?

ನನ್ನಿಂದಾಗಲಿ, ಬಿಜೆಪಿಯಿಂದಾಗಲಿ ಮುಸ್ಲಿಮರಿಗೆ ತೊಂದರೆ ಆಗಿಲ್ಲ ಎಂದಿರುವ ಹೆಬ್ಬಾರ್, ನಾನು ಯಾವುದೇ ಪಕ್ಷದಲ್ಲಿರಲಿ ಕ್ಷೆತ್ರದ ಅಭಿವೃದ್ಧಿಯೇ ನನ್ನ ಅಭಿಲಾಶೆ ಎಂದಿದ್ದಾರೆ.

- Advertisement -
- Advertisement -

25ರಿಂದ 30 ವರ್ಷ ಮಂತ್ರಿಯಾಗಿ ಅಧಿಕಾರ ನಡೆಸಿದವರಿಂದ ಮುಂಡಗೋಡನ್ನು ಅಭಿವೃದ್ಧಿ ಮಾಡಲಾಗಲಿಲ್ಲ. ಈಗ ಮುಂಡಗೋಡಿನ ಬಗ್ಗೆ ಕಾಳಜಿ ಶುರುವಾಗಿದೆ. ಕೊರೊನಾ ನೆಪದಲ್ಲಿ ಮಗನನ್ನು ಮುಂದೆ ಮಾಡಿ ಕಿಟ್ ಹಂಚಿದ್ದಾರೆ. ಹಾಗಿದ್ದರೆ ಹಳಿಯಾಳದಲ್ಲಿ ಬಡವರಿಲ್ಲವಾ? ಬಡವರು ಮುಟ್ಟಿದಾಗ ಕಿಸೆಯಿಂದ ವ್ಯಾಸಲಿನ್ ತೆಗೆದು ಕೈಗೆ ಹಚ್ಚಿಕೊಳ್ಳುವವರಿಂದ ಬಡವರ ಉದ್ಧಾರ ಸಾಧ್ಯವಾ ಎಂದು ಉತ್ತರ ಜಿಲ್ಲೆಯ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.

ಸಚಿವ ಹೆಬ್ಬಾರ್  ಅವರು ತವರು ಕ್ಷೇತ್ರದ ಮುಂಡಗೋಡಿನಲ್ಲಿ ವಿವಿಧ ಕಾಮಗಾರಿ ಉದ್ಘಾಟಿಸಿ ಮಾತನಾಡಿದ್ದು, ಇಪ್ಪತ್ತೈದು ವರ್ಷ ಇಲ್ಲಿಯ ಶಾಸಕರಾಗಿದ್ದವರು ಕ್ಷೇತ್ರವನ್ನು ಅಭಿವೃದ್ಧಿ ಮಾಡಲಿಲ್ಲ. ಈಗ ಮಗನನ್ನು ಮುಂಡಗೋಡಲ್ಲಿ ಓಡಾಡಿಸಿ ಬಣ್ಣದ ಮಾತುಗಳಿಂದ ಜನರನ್ನು ಮರುಳಾಗಿಸಲು ಹವಣಿಸುತ್ತದ್ದಾರೆ. ಬಡವರಿಗೆ ನೆರವಾಗುವ ನಾಟಕ ಮಾಡುತ್ತಿದ್ದಾರೆ. ನಿಜವಾಗಿಯೂ ಬಡವರಿಗೆ ನೆರವಾಗುವ ಮನಸ್ಸಿದ್ದರೆ ಹಲವು ಬಾರಿ ಮಂತ್ರಿಯಾಗಿದ್ದವರು ಹಳಿಯಾಳದಲ್ಲೇ ಕಿಟ್ ಹಂಚಬಹುದಿತ್ತಲ್ಲ ಎಂದು ಪ್ರಶ್ನಿಸಿದರು.

ಉಪಚುನಾವಣೆ ಹೊತ್ತಲ್ಲಿ 12-13 ದಿನ ಈ ಕ್ಷೇತ್ರದಲ್ಲಿ ವಾಸ್ತವ್ಯ ಮಾಡಿದ್ದರಲ್ಲ, ಏನಾಯಿತು? ನನ್ನನ್ನು ಸೋಲಿಸಲಾಯಿತಾ? ಮುಂಡಗೋಡಿನ ಜನರ ಆರ್ಶೀವಾದ ನನ್ನ ಮೇಲಿದೆ. ಹೊಸ ನಾಯಕರೀಗ ಮುಂಡಗೋಡಲ್ಲಿ ತಿರುಗಾಡುತ್ತಿದ್ದಾರೆ. ಚುನಾವಣೆ ಬಂದಾಗ ಮಾತ್ರ ಇವರಿಗೆ ಬಡವರ ನೆನಪಾಗುತ್ತದೆ. 25 ವರ್ಷ ಏನೂ ಮಾಡದ ಇವರನ್ನು ನಂಬಬೇಡಿ. ಸುಳ್ಳು ಹೇಳಿ ಜನರನ್ನು ಕರೆದುಕೊಂಡು ಹೋಗಿ ಮಾಲೆ ಹಾಕಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ. ಇವರಿಗೆಲ್ಲ ಯಾರೂ ಹೆದರಬೇಕಾದ ಅವಶ್ಯಕತೆಯಿಲ್ಲ. ಹಣ ಬಲದಿಂದ ಯಾರನ್ನೂ ಕೊಂಡುಕೊಳ್ಳಲು ಸಾಧ್ಯವಿಲ್ಲ. ನಿಮ್ಮನ್ನು ಕಾಪಾಡುವ ಶಕ್ತಿ ನನಗಿದೆ ಎಂದು ಸಚಿವ ಹೆಬ್ಬಾರ್ ಹೇಳಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಮನೆ ಮನೆಗೆ ಕಿಟ್ ಹಂಚಿದ್ದೇನೆ. 550 ಕೋಟಿ ರೂ.ಗಳ ನೀರಾವರಿ ಯೋಜನೆ ತಂದಿದ್ದೇನೆ. ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ಪಣ ತೊಟ್ಟಿದ್ದೇನೆ. ಮುಸ್ಲಿಮರ ಮುಂದೆ ನಾನು ಬಿಜೆಪಿಯಲ್ಲಿವುದನ್ನು ಟೀಕಿಸಲಾಗುತ್ತಿದೆ. ಆದರೆ ನನ್ನಿಂದಾಗಲಿ, ಬಿಜೆಪಿಯಿಂದಾಗಲಿ ಮುಸ್ಲಿಮರಿಗೆ ತೊಂದರೆ ಆಗಿಲ್ಲ ಎಂದಿರುವ ಹೆಬ್ಬಾರ್, ನಾನು ಯಾವುದೇ ಪಕ್ಷದಲ್ಲಿರಲಿ ಕ್ಷೆತ್ರದ ಅಭಿವೃದ್ಧಿಯೇ ನನ್ನ ಅಭಿಲಾಶೆ ಎಂದು ಹೇಳಿದ್ದಾರೆ.

ಯಾರೋ ಬಂದು ಜಾತಿಯೋ ಇನ್ನೊಂದೊ ಎಂದು ಗೊಂದಲ ಮೂಡಿಸಿದರೆ ಏನೂ ಆಗುವುದಿಲ್ಲ. ಕಿಟಕಿಯಿಂದ ನೋಡಬೇಕಾದ ಮಂತ್ರಿ ನಾನಲ್ಲ. ಹಲವು ಬಾರಿ ಮಂತ್ರಿಯಾದವರನ್ನು ನೀವು ಕಿಟಕಿಯಿಂದ ನೋಡಬೇಕಿತ್ತು ಎಂದು ಹೆಬ್ಬಾರ್ ಸಿಟ್ಟಿನಲ್ಲಿ ಮಾತನಾಡಿದ್ದು, ಜಿಲ್ಲೆಯ ಹಿರಿಯ ರಾಜಕಾರಣಿ ಆರ್.ವಿ.ದೇಶಪಾಂಡೆ ಅವರನ್ನು ದೃಷ್ಟಿಯಲ್ಲಿಟ್ಟುಕೊಂಡೇ ವಾಗ್ದಾಳಿ ನಡೆಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕ್ಷೇತ್ರ ಪನರ್ ವಿಂಗಡಣೆಗೆ ಮೊದಲು ದೇಶಪಾಂಡೆಯವರ ಹಳಿಯಾಳ ವಿಧಾನಸಭಾ ಕ್ಷೇತ್ರಕ್ಕೆ ಮುಂಡಗೋಡ ಸೇರಿತ್ತು. ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ದೇಶಪಾಂಡೆ ಅವರು ತಮ್ಮ ಮಗ ಪ್ರಶಾಂತ ದೇಶಪಾಂಡೆಯವರನ್ನು ಹೆಬ್ಬಾರ್ ವಿರುದ್ಧ ಸ್ಪರ್ಧೆಗಿಳಿಸಲು ಸಜ್ಜಾಗಿರುವ ಹಿನ್ನೆಲೆಯಲ್ಲಿ ಮಂತ್ರಿ ಹೆಬ್ಬಾರ್ ಆಡಿರುವ ಮಾತುಗಳು ವಿಶೇಷ ಅರ್ಥವನ್ನು ಹೊಮ್ಮಿಸುತ್ತಿವೆ.

ಇದನ್ನೂ ಓದಿರಿ: ಉತ್ತರ ಕನ್ನಡ: ಹೆಬ್ಬಾರ್‌ರ ಯಲ್ಲಾಪುರದಿಂದ ಸ್ಪರ್ಧೆಗೆ ದೇಶಪಾಂಡೆ ಮಗ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...