Homeಮುಖಪುಟ`ಬಡವರು ಮುಟ್ಟಿದಾಗ ವ್ಯಾಸಲಿನ್ ಹಚ್ಚಿಕೊಂಡರು' ಎಂದು ಸಚಿವ ಹೆಬ್ಬಾರ್‌ ಹೇಳಿದ್ದು ಯಾರಿಗೆ?

`ಬಡವರು ಮುಟ್ಟಿದಾಗ ವ್ಯಾಸಲಿನ್ ಹಚ್ಚಿಕೊಂಡರು’ ಎಂದು ಸಚಿವ ಹೆಬ್ಬಾರ್‌ ಹೇಳಿದ್ದು ಯಾರಿಗೆ?

ನನ್ನಿಂದಾಗಲಿ, ಬಿಜೆಪಿಯಿಂದಾಗಲಿ ಮುಸ್ಲಿಮರಿಗೆ ತೊಂದರೆ ಆಗಿಲ್ಲ ಎಂದಿರುವ ಹೆಬ್ಬಾರ್, ನಾನು ಯಾವುದೇ ಪಕ್ಷದಲ್ಲಿರಲಿ ಕ್ಷೆತ್ರದ ಅಭಿವೃದ್ಧಿಯೇ ನನ್ನ ಅಭಿಲಾಶೆ ಎಂದಿದ್ದಾರೆ.

- Advertisement -
- Advertisement -

25ರಿಂದ 30 ವರ್ಷ ಮಂತ್ರಿಯಾಗಿ ಅಧಿಕಾರ ನಡೆಸಿದವರಿಂದ ಮುಂಡಗೋಡನ್ನು ಅಭಿವೃದ್ಧಿ ಮಾಡಲಾಗಲಿಲ್ಲ. ಈಗ ಮುಂಡಗೋಡಿನ ಬಗ್ಗೆ ಕಾಳಜಿ ಶುರುವಾಗಿದೆ. ಕೊರೊನಾ ನೆಪದಲ್ಲಿ ಮಗನನ್ನು ಮುಂದೆ ಮಾಡಿ ಕಿಟ್ ಹಂಚಿದ್ದಾರೆ. ಹಾಗಿದ್ದರೆ ಹಳಿಯಾಳದಲ್ಲಿ ಬಡವರಿಲ್ಲವಾ? ಬಡವರು ಮುಟ್ಟಿದಾಗ ಕಿಸೆಯಿಂದ ವ್ಯಾಸಲಿನ್ ತೆಗೆದು ಕೈಗೆ ಹಚ್ಚಿಕೊಳ್ಳುವವರಿಂದ ಬಡವರ ಉದ್ಧಾರ ಸಾಧ್ಯವಾ ಎಂದು ಉತ್ತರ ಜಿಲ್ಲೆಯ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.

ಸಚಿವ ಹೆಬ್ಬಾರ್  ಅವರು ತವರು ಕ್ಷೇತ್ರದ ಮುಂಡಗೋಡಿನಲ್ಲಿ ವಿವಿಧ ಕಾಮಗಾರಿ ಉದ್ಘಾಟಿಸಿ ಮಾತನಾಡಿದ್ದು, ಇಪ್ಪತ್ತೈದು ವರ್ಷ ಇಲ್ಲಿಯ ಶಾಸಕರಾಗಿದ್ದವರು ಕ್ಷೇತ್ರವನ್ನು ಅಭಿವೃದ್ಧಿ ಮಾಡಲಿಲ್ಲ. ಈಗ ಮಗನನ್ನು ಮುಂಡಗೋಡಲ್ಲಿ ಓಡಾಡಿಸಿ ಬಣ್ಣದ ಮಾತುಗಳಿಂದ ಜನರನ್ನು ಮರುಳಾಗಿಸಲು ಹವಣಿಸುತ್ತದ್ದಾರೆ. ಬಡವರಿಗೆ ನೆರವಾಗುವ ನಾಟಕ ಮಾಡುತ್ತಿದ್ದಾರೆ. ನಿಜವಾಗಿಯೂ ಬಡವರಿಗೆ ನೆರವಾಗುವ ಮನಸ್ಸಿದ್ದರೆ ಹಲವು ಬಾರಿ ಮಂತ್ರಿಯಾಗಿದ್ದವರು ಹಳಿಯಾಳದಲ್ಲೇ ಕಿಟ್ ಹಂಚಬಹುದಿತ್ತಲ್ಲ ಎಂದು ಪ್ರಶ್ನಿಸಿದರು.

ಉಪಚುನಾವಣೆ ಹೊತ್ತಲ್ಲಿ 12-13 ದಿನ ಈ ಕ್ಷೇತ್ರದಲ್ಲಿ ವಾಸ್ತವ್ಯ ಮಾಡಿದ್ದರಲ್ಲ, ಏನಾಯಿತು? ನನ್ನನ್ನು ಸೋಲಿಸಲಾಯಿತಾ? ಮುಂಡಗೋಡಿನ ಜನರ ಆರ್ಶೀವಾದ ನನ್ನ ಮೇಲಿದೆ. ಹೊಸ ನಾಯಕರೀಗ ಮುಂಡಗೋಡಲ್ಲಿ ತಿರುಗಾಡುತ್ತಿದ್ದಾರೆ. ಚುನಾವಣೆ ಬಂದಾಗ ಮಾತ್ರ ಇವರಿಗೆ ಬಡವರ ನೆನಪಾಗುತ್ತದೆ. 25 ವರ್ಷ ಏನೂ ಮಾಡದ ಇವರನ್ನು ನಂಬಬೇಡಿ. ಸುಳ್ಳು ಹೇಳಿ ಜನರನ್ನು ಕರೆದುಕೊಂಡು ಹೋಗಿ ಮಾಲೆ ಹಾಕಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ. ಇವರಿಗೆಲ್ಲ ಯಾರೂ ಹೆದರಬೇಕಾದ ಅವಶ್ಯಕತೆಯಿಲ್ಲ. ಹಣ ಬಲದಿಂದ ಯಾರನ್ನೂ ಕೊಂಡುಕೊಳ್ಳಲು ಸಾಧ್ಯವಿಲ್ಲ. ನಿಮ್ಮನ್ನು ಕಾಪಾಡುವ ಶಕ್ತಿ ನನಗಿದೆ ಎಂದು ಸಚಿವ ಹೆಬ್ಬಾರ್ ಹೇಳಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಮನೆ ಮನೆಗೆ ಕಿಟ್ ಹಂಚಿದ್ದೇನೆ. 550 ಕೋಟಿ ರೂ.ಗಳ ನೀರಾವರಿ ಯೋಜನೆ ತಂದಿದ್ದೇನೆ. ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ಪಣ ತೊಟ್ಟಿದ್ದೇನೆ. ಮುಸ್ಲಿಮರ ಮುಂದೆ ನಾನು ಬಿಜೆಪಿಯಲ್ಲಿವುದನ್ನು ಟೀಕಿಸಲಾಗುತ್ತಿದೆ. ಆದರೆ ನನ್ನಿಂದಾಗಲಿ, ಬಿಜೆಪಿಯಿಂದಾಗಲಿ ಮುಸ್ಲಿಮರಿಗೆ ತೊಂದರೆ ಆಗಿಲ್ಲ ಎಂದಿರುವ ಹೆಬ್ಬಾರ್, ನಾನು ಯಾವುದೇ ಪಕ್ಷದಲ್ಲಿರಲಿ ಕ್ಷೆತ್ರದ ಅಭಿವೃದ್ಧಿಯೇ ನನ್ನ ಅಭಿಲಾಶೆ ಎಂದು ಹೇಳಿದ್ದಾರೆ.

ಯಾರೋ ಬಂದು ಜಾತಿಯೋ ಇನ್ನೊಂದೊ ಎಂದು ಗೊಂದಲ ಮೂಡಿಸಿದರೆ ಏನೂ ಆಗುವುದಿಲ್ಲ. ಕಿಟಕಿಯಿಂದ ನೋಡಬೇಕಾದ ಮಂತ್ರಿ ನಾನಲ್ಲ. ಹಲವು ಬಾರಿ ಮಂತ್ರಿಯಾದವರನ್ನು ನೀವು ಕಿಟಕಿಯಿಂದ ನೋಡಬೇಕಿತ್ತು ಎಂದು ಹೆಬ್ಬಾರ್ ಸಿಟ್ಟಿನಲ್ಲಿ ಮಾತನಾಡಿದ್ದು, ಜಿಲ್ಲೆಯ ಹಿರಿಯ ರಾಜಕಾರಣಿ ಆರ್.ವಿ.ದೇಶಪಾಂಡೆ ಅವರನ್ನು ದೃಷ್ಟಿಯಲ್ಲಿಟ್ಟುಕೊಂಡೇ ವಾಗ್ದಾಳಿ ನಡೆಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕ್ಷೇತ್ರ ಪನರ್ ವಿಂಗಡಣೆಗೆ ಮೊದಲು ದೇಶಪಾಂಡೆಯವರ ಹಳಿಯಾಳ ವಿಧಾನಸಭಾ ಕ್ಷೇತ್ರಕ್ಕೆ ಮುಂಡಗೋಡ ಸೇರಿತ್ತು. ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ದೇಶಪಾಂಡೆ ಅವರು ತಮ್ಮ ಮಗ ಪ್ರಶಾಂತ ದೇಶಪಾಂಡೆಯವರನ್ನು ಹೆಬ್ಬಾರ್ ವಿರುದ್ಧ ಸ್ಪರ್ಧೆಗಿಳಿಸಲು ಸಜ್ಜಾಗಿರುವ ಹಿನ್ನೆಲೆಯಲ್ಲಿ ಮಂತ್ರಿ ಹೆಬ್ಬಾರ್ ಆಡಿರುವ ಮಾತುಗಳು ವಿಶೇಷ ಅರ್ಥವನ್ನು ಹೊಮ್ಮಿಸುತ್ತಿವೆ.

ಇದನ್ನೂ ಓದಿರಿ: ಉತ್ತರ ಕನ್ನಡ: ಹೆಬ್ಬಾರ್‌ರ ಯಲ್ಲಾಪುರದಿಂದ ಸ್ಪರ್ಧೆಗೆ ದೇಶಪಾಂಡೆ ಮಗ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...