Homeಮುಖಪುಟ`ಬಡವರು ಮುಟ್ಟಿದಾಗ ವ್ಯಾಸಲಿನ್ ಹಚ್ಚಿಕೊಂಡರು' ಎಂದು ಸಚಿವ ಹೆಬ್ಬಾರ್‌ ಹೇಳಿದ್ದು ಯಾರಿಗೆ?

`ಬಡವರು ಮುಟ್ಟಿದಾಗ ವ್ಯಾಸಲಿನ್ ಹಚ್ಚಿಕೊಂಡರು’ ಎಂದು ಸಚಿವ ಹೆಬ್ಬಾರ್‌ ಹೇಳಿದ್ದು ಯಾರಿಗೆ?

ನನ್ನಿಂದಾಗಲಿ, ಬಿಜೆಪಿಯಿಂದಾಗಲಿ ಮುಸ್ಲಿಮರಿಗೆ ತೊಂದರೆ ಆಗಿಲ್ಲ ಎಂದಿರುವ ಹೆಬ್ಬಾರ್, ನಾನು ಯಾವುದೇ ಪಕ್ಷದಲ್ಲಿರಲಿ ಕ್ಷೆತ್ರದ ಅಭಿವೃದ್ಧಿಯೇ ನನ್ನ ಅಭಿಲಾಶೆ ಎಂದಿದ್ದಾರೆ.

- Advertisement -
- Advertisement -

25ರಿಂದ 30 ವರ್ಷ ಮಂತ್ರಿಯಾಗಿ ಅಧಿಕಾರ ನಡೆಸಿದವರಿಂದ ಮುಂಡಗೋಡನ್ನು ಅಭಿವೃದ್ಧಿ ಮಾಡಲಾಗಲಿಲ್ಲ. ಈಗ ಮುಂಡಗೋಡಿನ ಬಗ್ಗೆ ಕಾಳಜಿ ಶುರುವಾಗಿದೆ. ಕೊರೊನಾ ನೆಪದಲ್ಲಿ ಮಗನನ್ನು ಮುಂದೆ ಮಾಡಿ ಕಿಟ್ ಹಂಚಿದ್ದಾರೆ. ಹಾಗಿದ್ದರೆ ಹಳಿಯಾಳದಲ್ಲಿ ಬಡವರಿಲ್ಲವಾ? ಬಡವರು ಮುಟ್ಟಿದಾಗ ಕಿಸೆಯಿಂದ ವ್ಯಾಸಲಿನ್ ತೆಗೆದು ಕೈಗೆ ಹಚ್ಚಿಕೊಳ್ಳುವವರಿಂದ ಬಡವರ ಉದ್ಧಾರ ಸಾಧ್ಯವಾ ಎಂದು ಉತ್ತರ ಜಿಲ್ಲೆಯ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.

ಸಚಿವ ಹೆಬ್ಬಾರ್  ಅವರು ತವರು ಕ್ಷೇತ್ರದ ಮುಂಡಗೋಡಿನಲ್ಲಿ ವಿವಿಧ ಕಾಮಗಾರಿ ಉದ್ಘಾಟಿಸಿ ಮಾತನಾಡಿದ್ದು, ಇಪ್ಪತ್ತೈದು ವರ್ಷ ಇಲ್ಲಿಯ ಶಾಸಕರಾಗಿದ್ದವರು ಕ್ಷೇತ್ರವನ್ನು ಅಭಿವೃದ್ಧಿ ಮಾಡಲಿಲ್ಲ. ಈಗ ಮಗನನ್ನು ಮುಂಡಗೋಡಲ್ಲಿ ಓಡಾಡಿಸಿ ಬಣ್ಣದ ಮಾತುಗಳಿಂದ ಜನರನ್ನು ಮರುಳಾಗಿಸಲು ಹವಣಿಸುತ್ತದ್ದಾರೆ. ಬಡವರಿಗೆ ನೆರವಾಗುವ ನಾಟಕ ಮಾಡುತ್ತಿದ್ದಾರೆ. ನಿಜವಾಗಿಯೂ ಬಡವರಿಗೆ ನೆರವಾಗುವ ಮನಸ್ಸಿದ್ದರೆ ಹಲವು ಬಾರಿ ಮಂತ್ರಿಯಾಗಿದ್ದವರು ಹಳಿಯಾಳದಲ್ಲೇ ಕಿಟ್ ಹಂಚಬಹುದಿತ್ತಲ್ಲ ಎಂದು ಪ್ರಶ್ನಿಸಿದರು.

ಉಪಚುನಾವಣೆ ಹೊತ್ತಲ್ಲಿ 12-13 ದಿನ ಈ ಕ್ಷೇತ್ರದಲ್ಲಿ ವಾಸ್ತವ್ಯ ಮಾಡಿದ್ದರಲ್ಲ, ಏನಾಯಿತು? ನನ್ನನ್ನು ಸೋಲಿಸಲಾಯಿತಾ? ಮುಂಡಗೋಡಿನ ಜನರ ಆರ್ಶೀವಾದ ನನ್ನ ಮೇಲಿದೆ. ಹೊಸ ನಾಯಕರೀಗ ಮುಂಡಗೋಡಲ್ಲಿ ತಿರುಗಾಡುತ್ತಿದ್ದಾರೆ. ಚುನಾವಣೆ ಬಂದಾಗ ಮಾತ್ರ ಇವರಿಗೆ ಬಡವರ ನೆನಪಾಗುತ್ತದೆ. 25 ವರ್ಷ ಏನೂ ಮಾಡದ ಇವರನ್ನು ನಂಬಬೇಡಿ. ಸುಳ್ಳು ಹೇಳಿ ಜನರನ್ನು ಕರೆದುಕೊಂಡು ಹೋಗಿ ಮಾಲೆ ಹಾಕಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ. ಇವರಿಗೆಲ್ಲ ಯಾರೂ ಹೆದರಬೇಕಾದ ಅವಶ್ಯಕತೆಯಿಲ್ಲ. ಹಣ ಬಲದಿಂದ ಯಾರನ್ನೂ ಕೊಂಡುಕೊಳ್ಳಲು ಸಾಧ್ಯವಿಲ್ಲ. ನಿಮ್ಮನ್ನು ಕಾಪಾಡುವ ಶಕ್ತಿ ನನಗಿದೆ ಎಂದು ಸಚಿವ ಹೆಬ್ಬಾರ್ ಹೇಳಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಮನೆ ಮನೆಗೆ ಕಿಟ್ ಹಂಚಿದ್ದೇನೆ. 550 ಕೋಟಿ ರೂ.ಗಳ ನೀರಾವರಿ ಯೋಜನೆ ತಂದಿದ್ದೇನೆ. ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ಪಣ ತೊಟ್ಟಿದ್ದೇನೆ. ಮುಸ್ಲಿಮರ ಮುಂದೆ ನಾನು ಬಿಜೆಪಿಯಲ್ಲಿವುದನ್ನು ಟೀಕಿಸಲಾಗುತ್ತಿದೆ. ಆದರೆ ನನ್ನಿಂದಾಗಲಿ, ಬಿಜೆಪಿಯಿಂದಾಗಲಿ ಮುಸ್ಲಿಮರಿಗೆ ತೊಂದರೆ ಆಗಿಲ್ಲ ಎಂದಿರುವ ಹೆಬ್ಬಾರ್, ನಾನು ಯಾವುದೇ ಪಕ್ಷದಲ್ಲಿರಲಿ ಕ್ಷೆತ್ರದ ಅಭಿವೃದ್ಧಿಯೇ ನನ್ನ ಅಭಿಲಾಶೆ ಎಂದು ಹೇಳಿದ್ದಾರೆ.

ಯಾರೋ ಬಂದು ಜಾತಿಯೋ ಇನ್ನೊಂದೊ ಎಂದು ಗೊಂದಲ ಮೂಡಿಸಿದರೆ ಏನೂ ಆಗುವುದಿಲ್ಲ. ಕಿಟಕಿಯಿಂದ ನೋಡಬೇಕಾದ ಮಂತ್ರಿ ನಾನಲ್ಲ. ಹಲವು ಬಾರಿ ಮಂತ್ರಿಯಾದವರನ್ನು ನೀವು ಕಿಟಕಿಯಿಂದ ನೋಡಬೇಕಿತ್ತು ಎಂದು ಹೆಬ್ಬಾರ್ ಸಿಟ್ಟಿನಲ್ಲಿ ಮಾತನಾಡಿದ್ದು, ಜಿಲ್ಲೆಯ ಹಿರಿಯ ರಾಜಕಾರಣಿ ಆರ್.ವಿ.ದೇಶಪಾಂಡೆ ಅವರನ್ನು ದೃಷ್ಟಿಯಲ್ಲಿಟ್ಟುಕೊಂಡೇ ವಾಗ್ದಾಳಿ ನಡೆಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕ್ಷೇತ್ರ ಪನರ್ ವಿಂಗಡಣೆಗೆ ಮೊದಲು ದೇಶಪಾಂಡೆಯವರ ಹಳಿಯಾಳ ವಿಧಾನಸಭಾ ಕ್ಷೇತ್ರಕ್ಕೆ ಮುಂಡಗೋಡ ಸೇರಿತ್ತು. ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ದೇಶಪಾಂಡೆ ಅವರು ತಮ್ಮ ಮಗ ಪ್ರಶಾಂತ ದೇಶಪಾಂಡೆಯವರನ್ನು ಹೆಬ್ಬಾರ್ ವಿರುದ್ಧ ಸ್ಪರ್ಧೆಗಿಳಿಸಲು ಸಜ್ಜಾಗಿರುವ ಹಿನ್ನೆಲೆಯಲ್ಲಿ ಮಂತ್ರಿ ಹೆಬ್ಬಾರ್ ಆಡಿರುವ ಮಾತುಗಳು ವಿಶೇಷ ಅರ್ಥವನ್ನು ಹೊಮ್ಮಿಸುತ್ತಿವೆ.

ಇದನ್ನೂ ಓದಿರಿ: ಉತ್ತರ ಕನ್ನಡ: ಹೆಬ್ಬಾರ್‌ರ ಯಲ್ಲಾಪುರದಿಂದ ಸ್ಪರ್ಧೆಗೆ ದೇಶಪಾಂಡೆ ಮಗ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...