Homeಮುಖಪುಟ`ಬಡವರು ಮುಟ್ಟಿದಾಗ ವ್ಯಾಸಲಿನ್ ಹಚ್ಚಿಕೊಂಡರು' ಎಂದು ಸಚಿವ ಹೆಬ್ಬಾರ್‌ ಹೇಳಿದ್ದು ಯಾರಿಗೆ?

`ಬಡವರು ಮುಟ್ಟಿದಾಗ ವ್ಯಾಸಲಿನ್ ಹಚ್ಚಿಕೊಂಡರು’ ಎಂದು ಸಚಿವ ಹೆಬ್ಬಾರ್‌ ಹೇಳಿದ್ದು ಯಾರಿಗೆ?

ನನ್ನಿಂದಾಗಲಿ, ಬಿಜೆಪಿಯಿಂದಾಗಲಿ ಮುಸ್ಲಿಮರಿಗೆ ತೊಂದರೆ ಆಗಿಲ್ಲ ಎಂದಿರುವ ಹೆಬ್ಬಾರ್, ನಾನು ಯಾವುದೇ ಪಕ್ಷದಲ್ಲಿರಲಿ ಕ್ಷೆತ್ರದ ಅಭಿವೃದ್ಧಿಯೇ ನನ್ನ ಅಭಿಲಾಶೆ ಎಂದಿದ್ದಾರೆ.

- Advertisement -
- Advertisement -

25ರಿಂದ 30 ವರ್ಷ ಮಂತ್ರಿಯಾಗಿ ಅಧಿಕಾರ ನಡೆಸಿದವರಿಂದ ಮುಂಡಗೋಡನ್ನು ಅಭಿವೃದ್ಧಿ ಮಾಡಲಾಗಲಿಲ್ಲ. ಈಗ ಮುಂಡಗೋಡಿನ ಬಗ್ಗೆ ಕಾಳಜಿ ಶುರುವಾಗಿದೆ. ಕೊರೊನಾ ನೆಪದಲ್ಲಿ ಮಗನನ್ನು ಮುಂದೆ ಮಾಡಿ ಕಿಟ್ ಹಂಚಿದ್ದಾರೆ. ಹಾಗಿದ್ದರೆ ಹಳಿಯಾಳದಲ್ಲಿ ಬಡವರಿಲ್ಲವಾ? ಬಡವರು ಮುಟ್ಟಿದಾಗ ಕಿಸೆಯಿಂದ ವ್ಯಾಸಲಿನ್ ತೆಗೆದು ಕೈಗೆ ಹಚ್ಚಿಕೊಳ್ಳುವವರಿಂದ ಬಡವರ ಉದ್ಧಾರ ಸಾಧ್ಯವಾ ಎಂದು ಉತ್ತರ ಜಿಲ್ಲೆಯ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.

ಸಚಿವ ಹೆಬ್ಬಾರ್  ಅವರು ತವರು ಕ್ಷೇತ್ರದ ಮುಂಡಗೋಡಿನಲ್ಲಿ ವಿವಿಧ ಕಾಮಗಾರಿ ಉದ್ಘಾಟಿಸಿ ಮಾತನಾಡಿದ್ದು, ಇಪ್ಪತ್ತೈದು ವರ್ಷ ಇಲ್ಲಿಯ ಶಾಸಕರಾಗಿದ್ದವರು ಕ್ಷೇತ್ರವನ್ನು ಅಭಿವೃದ್ಧಿ ಮಾಡಲಿಲ್ಲ. ಈಗ ಮಗನನ್ನು ಮುಂಡಗೋಡಲ್ಲಿ ಓಡಾಡಿಸಿ ಬಣ್ಣದ ಮಾತುಗಳಿಂದ ಜನರನ್ನು ಮರುಳಾಗಿಸಲು ಹವಣಿಸುತ್ತದ್ದಾರೆ. ಬಡವರಿಗೆ ನೆರವಾಗುವ ನಾಟಕ ಮಾಡುತ್ತಿದ್ದಾರೆ. ನಿಜವಾಗಿಯೂ ಬಡವರಿಗೆ ನೆರವಾಗುವ ಮನಸ್ಸಿದ್ದರೆ ಹಲವು ಬಾರಿ ಮಂತ್ರಿಯಾಗಿದ್ದವರು ಹಳಿಯಾಳದಲ್ಲೇ ಕಿಟ್ ಹಂಚಬಹುದಿತ್ತಲ್ಲ ಎಂದು ಪ್ರಶ್ನಿಸಿದರು.

ಉಪಚುನಾವಣೆ ಹೊತ್ತಲ್ಲಿ 12-13 ದಿನ ಈ ಕ್ಷೇತ್ರದಲ್ಲಿ ವಾಸ್ತವ್ಯ ಮಾಡಿದ್ದರಲ್ಲ, ಏನಾಯಿತು? ನನ್ನನ್ನು ಸೋಲಿಸಲಾಯಿತಾ? ಮುಂಡಗೋಡಿನ ಜನರ ಆರ್ಶೀವಾದ ನನ್ನ ಮೇಲಿದೆ. ಹೊಸ ನಾಯಕರೀಗ ಮುಂಡಗೋಡಲ್ಲಿ ತಿರುಗಾಡುತ್ತಿದ್ದಾರೆ. ಚುನಾವಣೆ ಬಂದಾಗ ಮಾತ್ರ ಇವರಿಗೆ ಬಡವರ ನೆನಪಾಗುತ್ತದೆ. 25 ವರ್ಷ ಏನೂ ಮಾಡದ ಇವರನ್ನು ನಂಬಬೇಡಿ. ಸುಳ್ಳು ಹೇಳಿ ಜನರನ್ನು ಕರೆದುಕೊಂಡು ಹೋಗಿ ಮಾಲೆ ಹಾಕಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ. ಇವರಿಗೆಲ್ಲ ಯಾರೂ ಹೆದರಬೇಕಾದ ಅವಶ್ಯಕತೆಯಿಲ್ಲ. ಹಣ ಬಲದಿಂದ ಯಾರನ್ನೂ ಕೊಂಡುಕೊಳ್ಳಲು ಸಾಧ್ಯವಿಲ್ಲ. ನಿಮ್ಮನ್ನು ಕಾಪಾಡುವ ಶಕ್ತಿ ನನಗಿದೆ ಎಂದು ಸಚಿವ ಹೆಬ್ಬಾರ್ ಹೇಳಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಮನೆ ಮನೆಗೆ ಕಿಟ್ ಹಂಚಿದ್ದೇನೆ. 550 ಕೋಟಿ ರೂ.ಗಳ ನೀರಾವರಿ ಯೋಜನೆ ತಂದಿದ್ದೇನೆ. ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ಪಣ ತೊಟ್ಟಿದ್ದೇನೆ. ಮುಸ್ಲಿಮರ ಮುಂದೆ ನಾನು ಬಿಜೆಪಿಯಲ್ಲಿವುದನ್ನು ಟೀಕಿಸಲಾಗುತ್ತಿದೆ. ಆದರೆ ನನ್ನಿಂದಾಗಲಿ, ಬಿಜೆಪಿಯಿಂದಾಗಲಿ ಮುಸ್ಲಿಮರಿಗೆ ತೊಂದರೆ ಆಗಿಲ್ಲ ಎಂದಿರುವ ಹೆಬ್ಬಾರ್, ನಾನು ಯಾವುದೇ ಪಕ್ಷದಲ್ಲಿರಲಿ ಕ್ಷೆತ್ರದ ಅಭಿವೃದ್ಧಿಯೇ ನನ್ನ ಅಭಿಲಾಶೆ ಎಂದು ಹೇಳಿದ್ದಾರೆ.

ಯಾರೋ ಬಂದು ಜಾತಿಯೋ ಇನ್ನೊಂದೊ ಎಂದು ಗೊಂದಲ ಮೂಡಿಸಿದರೆ ಏನೂ ಆಗುವುದಿಲ್ಲ. ಕಿಟಕಿಯಿಂದ ನೋಡಬೇಕಾದ ಮಂತ್ರಿ ನಾನಲ್ಲ. ಹಲವು ಬಾರಿ ಮಂತ್ರಿಯಾದವರನ್ನು ನೀವು ಕಿಟಕಿಯಿಂದ ನೋಡಬೇಕಿತ್ತು ಎಂದು ಹೆಬ್ಬಾರ್ ಸಿಟ್ಟಿನಲ್ಲಿ ಮಾತನಾಡಿದ್ದು, ಜಿಲ್ಲೆಯ ಹಿರಿಯ ರಾಜಕಾರಣಿ ಆರ್.ವಿ.ದೇಶಪಾಂಡೆ ಅವರನ್ನು ದೃಷ್ಟಿಯಲ್ಲಿಟ್ಟುಕೊಂಡೇ ವಾಗ್ದಾಳಿ ನಡೆಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕ್ಷೇತ್ರ ಪನರ್ ವಿಂಗಡಣೆಗೆ ಮೊದಲು ದೇಶಪಾಂಡೆಯವರ ಹಳಿಯಾಳ ವಿಧಾನಸಭಾ ಕ್ಷೇತ್ರಕ್ಕೆ ಮುಂಡಗೋಡ ಸೇರಿತ್ತು. ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ದೇಶಪಾಂಡೆ ಅವರು ತಮ್ಮ ಮಗ ಪ್ರಶಾಂತ ದೇಶಪಾಂಡೆಯವರನ್ನು ಹೆಬ್ಬಾರ್ ವಿರುದ್ಧ ಸ್ಪರ್ಧೆಗಿಳಿಸಲು ಸಜ್ಜಾಗಿರುವ ಹಿನ್ನೆಲೆಯಲ್ಲಿ ಮಂತ್ರಿ ಹೆಬ್ಬಾರ್ ಆಡಿರುವ ಮಾತುಗಳು ವಿಶೇಷ ಅರ್ಥವನ್ನು ಹೊಮ್ಮಿಸುತ್ತಿವೆ.

ಇದನ್ನೂ ಓದಿರಿ: ಉತ್ತರ ಕನ್ನಡ: ಹೆಬ್ಬಾರ್‌ರ ಯಲ್ಲಾಪುರದಿಂದ ಸ್ಪರ್ಧೆಗೆ ದೇಶಪಾಂಡೆ ಮಗ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...