Homeಮುಖಪುಟ`ಬಡವರು ಮುಟ್ಟಿದಾಗ ವ್ಯಾಸಲಿನ್ ಹಚ್ಚಿಕೊಂಡರು' ಎಂದು ಸಚಿವ ಹೆಬ್ಬಾರ್‌ ಹೇಳಿದ್ದು ಯಾರಿಗೆ?

`ಬಡವರು ಮುಟ್ಟಿದಾಗ ವ್ಯಾಸಲಿನ್ ಹಚ್ಚಿಕೊಂಡರು’ ಎಂದು ಸಚಿವ ಹೆಬ್ಬಾರ್‌ ಹೇಳಿದ್ದು ಯಾರಿಗೆ?

ನನ್ನಿಂದಾಗಲಿ, ಬಿಜೆಪಿಯಿಂದಾಗಲಿ ಮುಸ್ಲಿಮರಿಗೆ ತೊಂದರೆ ಆಗಿಲ್ಲ ಎಂದಿರುವ ಹೆಬ್ಬಾರ್, ನಾನು ಯಾವುದೇ ಪಕ್ಷದಲ್ಲಿರಲಿ ಕ್ಷೆತ್ರದ ಅಭಿವೃದ್ಧಿಯೇ ನನ್ನ ಅಭಿಲಾಶೆ ಎಂದಿದ್ದಾರೆ.

- Advertisement -
- Advertisement -

25ರಿಂದ 30 ವರ್ಷ ಮಂತ್ರಿಯಾಗಿ ಅಧಿಕಾರ ನಡೆಸಿದವರಿಂದ ಮುಂಡಗೋಡನ್ನು ಅಭಿವೃದ್ಧಿ ಮಾಡಲಾಗಲಿಲ್ಲ. ಈಗ ಮುಂಡಗೋಡಿನ ಬಗ್ಗೆ ಕಾಳಜಿ ಶುರುವಾಗಿದೆ. ಕೊರೊನಾ ನೆಪದಲ್ಲಿ ಮಗನನ್ನು ಮುಂದೆ ಮಾಡಿ ಕಿಟ್ ಹಂಚಿದ್ದಾರೆ. ಹಾಗಿದ್ದರೆ ಹಳಿಯಾಳದಲ್ಲಿ ಬಡವರಿಲ್ಲವಾ? ಬಡವರು ಮುಟ್ಟಿದಾಗ ಕಿಸೆಯಿಂದ ವ್ಯಾಸಲಿನ್ ತೆಗೆದು ಕೈಗೆ ಹಚ್ಚಿಕೊಳ್ಳುವವರಿಂದ ಬಡವರ ಉದ್ಧಾರ ಸಾಧ್ಯವಾ ಎಂದು ಉತ್ತರ ಜಿಲ್ಲೆಯ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.

ಸಚಿವ ಹೆಬ್ಬಾರ್  ಅವರು ತವರು ಕ್ಷೇತ್ರದ ಮುಂಡಗೋಡಿನಲ್ಲಿ ವಿವಿಧ ಕಾಮಗಾರಿ ಉದ್ಘಾಟಿಸಿ ಮಾತನಾಡಿದ್ದು, ಇಪ್ಪತ್ತೈದು ವರ್ಷ ಇಲ್ಲಿಯ ಶಾಸಕರಾಗಿದ್ದವರು ಕ್ಷೇತ್ರವನ್ನು ಅಭಿವೃದ್ಧಿ ಮಾಡಲಿಲ್ಲ. ಈಗ ಮಗನನ್ನು ಮುಂಡಗೋಡಲ್ಲಿ ಓಡಾಡಿಸಿ ಬಣ್ಣದ ಮಾತುಗಳಿಂದ ಜನರನ್ನು ಮರುಳಾಗಿಸಲು ಹವಣಿಸುತ್ತದ್ದಾರೆ. ಬಡವರಿಗೆ ನೆರವಾಗುವ ನಾಟಕ ಮಾಡುತ್ತಿದ್ದಾರೆ. ನಿಜವಾಗಿಯೂ ಬಡವರಿಗೆ ನೆರವಾಗುವ ಮನಸ್ಸಿದ್ದರೆ ಹಲವು ಬಾರಿ ಮಂತ್ರಿಯಾಗಿದ್ದವರು ಹಳಿಯಾಳದಲ್ಲೇ ಕಿಟ್ ಹಂಚಬಹುದಿತ್ತಲ್ಲ ಎಂದು ಪ್ರಶ್ನಿಸಿದರು.

ಉಪಚುನಾವಣೆ ಹೊತ್ತಲ್ಲಿ 12-13 ದಿನ ಈ ಕ್ಷೇತ್ರದಲ್ಲಿ ವಾಸ್ತವ್ಯ ಮಾಡಿದ್ದರಲ್ಲ, ಏನಾಯಿತು? ನನ್ನನ್ನು ಸೋಲಿಸಲಾಯಿತಾ? ಮುಂಡಗೋಡಿನ ಜನರ ಆರ್ಶೀವಾದ ನನ್ನ ಮೇಲಿದೆ. ಹೊಸ ನಾಯಕರೀಗ ಮುಂಡಗೋಡಲ್ಲಿ ತಿರುಗಾಡುತ್ತಿದ್ದಾರೆ. ಚುನಾವಣೆ ಬಂದಾಗ ಮಾತ್ರ ಇವರಿಗೆ ಬಡವರ ನೆನಪಾಗುತ್ತದೆ. 25 ವರ್ಷ ಏನೂ ಮಾಡದ ಇವರನ್ನು ನಂಬಬೇಡಿ. ಸುಳ್ಳು ಹೇಳಿ ಜನರನ್ನು ಕರೆದುಕೊಂಡು ಹೋಗಿ ಮಾಲೆ ಹಾಕಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ. ಇವರಿಗೆಲ್ಲ ಯಾರೂ ಹೆದರಬೇಕಾದ ಅವಶ್ಯಕತೆಯಿಲ್ಲ. ಹಣ ಬಲದಿಂದ ಯಾರನ್ನೂ ಕೊಂಡುಕೊಳ್ಳಲು ಸಾಧ್ಯವಿಲ್ಲ. ನಿಮ್ಮನ್ನು ಕಾಪಾಡುವ ಶಕ್ತಿ ನನಗಿದೆ ಎಂದು ಸಚಿವ ಹೆಬ್ಬಾರ್ ಹೇಳಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಮನೆ ಮನೆಗೆ ಕಿಟ್ ಹಂಚಿದ್ದೇನೆ. 550 ಕೋಟಿ ರೂ.ಗಳ ನೀರಾವರಿ ಯೋಜನೆ ತಂದಿದ್ದೇನೆ. ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ಪಣ ತೊಟ್ಟಿದ್ದೇನೆ. ಮುಸ್ಲಿಮರ ಮುಂದೆ ನಾನು ಬಿಜೆಪಿಯಲ್ಲಿವುದನ್ನು ಟೀಕಿಸಲಾಗುತ್ತಿದೆ. ಆದರೆ ನನ್ನಿಂದಾಗಲಿ, ಬಿಜೆಪಿಯಿಂದಾಗಲಿ ಮುಸ್ಲಿಮರಿಗೆ ತೊಂದರೆ ಆಗಿಲ್ಲ ಎಂದಿರುವ ಹೆಬ್ಬಾರ್, ನಾನು ಯಾವುದೇ ಪಕ್ಷದಲ್ಲಿರಲಿ ಕ್ಷೆತ್ರದ ಅಭಿವೃದ್ಧಿಯೇ ನನ್ನ ಅಭಿಲಾಶೆ ಎಂದು ಹೇಳಿದ್ದಾರೆ.

ಯಾರೋ ಬಂದು ಜಾತಿಯೋ ಇನ್ನೊಂದೊ ಎಂದು ಗೊಂದಲ ಮೂಡಿಸಿದರೆ ಏನೂ ಆಗುವುದಿಲ್ಲ. ಕಿಟಕಿಯಿಂದ ನೋಡಬೇಕಾದ ಮಂತ್ರಿ ನಾನಲ್ಲ. ಹಲವು ಬಾರಿ ಮಂತ್ರಿಯಾದವರನ್ನು ನೀವು ಕಿಟಕಿಯಿಂದ ನೋಡಬೇಕಿತ್ತು ಎಂದು ಹೆಬ್ಬಾರ್ ಸಿಟ್ಟಿನಲ್ಲಿ ಮಾತನಾಡಿದ್ದು, ಜಿಲ್ಲೆಯ ಹಿರಿಯ ರಾಜಕಾರಣಿ ಆರ್.ವಿ.ದೇಶಪಾಂಡೆ ಅವರನ್ನು ದೃಷ್ಟಿಯಲ್ಲಿಟ್ಟುಕೊಂಡೇ ವಾಗ್ದಾಳಿ ನಡೆಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕ್ಷೇತ್ರ ಪನರ್ ವಿಂಗಡಣೆಗೆ ಮೊದಲು ದೇಶಪಾಂಡೆಯವರ ಹಳಿಯಾಳ ವಿಧಾನಸಭಾ ಕ್ಷೇತ್ರಕ್ಕೆ ಮುಂಡಗೋಡ ಸೇರಿತ್ತು. ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ದೇಶಪಾಂಡೆ ಅವರು ತಮ್ಮ ಮಗ ಪ್ರಶಾಂತ ದೇಶಪಾಂಡೆಯವರನ್ನು ಹೆಬ್ಬಾರ್ ವಿರುದ್ಧ ಸ್ಪರ್ಧೆಗಿಳಿಸಲು ಸಜ್ಜಾಗಿರುವ ಹಿನ್ನೆಲೆಯಲ್ಲಿ ಮಂತ್ರಿ ಹೆಬ್ಬಾರ್ ಆಡಿರುವ ಮಾತುಗಳು ವಿಶೇಷ ಅರ್ಥವನ್ನು ಹೊಮ್ಮಿಸುತ್ತಿವೆ.

ಇದನ್ನೂ ಓದಿರಿ: ಉತ್ತರ ಕನ್ನಡ: ಹೆಬ್ಬಾರ್‌ರ ಯಲ್ಲಾಪುರದಿಂದ ಸ್ಪರ್ಧೆಗೆ ದೇಶಪಾಂಡೆ ಮಗ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...