Homeಮುಖಪುಟನಾನು ಇನ್ನೂ ಕಾಂಗ್ರೆಸ್ಸಿಗ, ಬಿಜೆಪಿ ಸೇರುವುದಿಲ್ಲ: ಪೈಲಟ್ ಮಾತಿನ ಅರ್ಥವೇನು?

ನಾನು ಇನ್ನೂ ಕಾಂಗ್ರೆಸ್ಸಿಗ, ಬಿಜೆಪಿ ಸೇರುವುದಿಲ್ಲ: ಪೈಲಟ್ ಮಾತಿನ ಅರ್ಥವೇನು?

ಕಳೆದ ವರ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿದ ನಂತರವೇ ರಾಜಸ್ಥಾನದಲ್ಲಿ ತನ್ನನ್ನು ಅವಮಾನಿಸುವ ಪ್ರಕ್ರಿಯೆಯನ್ನು ಗೆಹ್ಲೋಟ್ ಹೆಚ್ಚಿಸಿದರು ಎಂಬುದು ಪೈಲಟ್‌ ಆರೋಪವಾಗಿದೆ.

- Advertisement -
- Advertisement -

ರಾಜಸ್ಥಾನ ಬಿಕ್ಕಟ್ಟಿಗೆ ಕಾರಣವಾಗಿರುವ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ “ನಾನು ಇನ್ನೂ ಕಾಂಗ್ರೆಸ್ಸಿಗ, ಬಿಜೆಪಿ ಸೇರುವುದಿಲ್ಲ” ಎಂಬ ಹೇಳಿಕೆ ನೀಡುವ ಮೂಲಕ ಹೊಸ ಸುಳಿವುಗಳನ್ನು ನೀಡುತ್ತಿದ್ದಾರೆ. ಅದೆಂದರೆ ತನ್ನ ಪಾಲಿಗೆ ಕಾಂಗ್ರೆಸ್ ಮುಗಿದ ಅಧ್ಯಾಯವಲ್ಲ ಬದಲಿಗೆ ತನ್ನ ಬೇಡಿಕೆಗಳನ್ನು ಈಡೇರಿಸಿದರೆ ಕಾಂಗ್ರೆಸ್‌ನಲ್ಲೇ ಉಳಿಯಲು ಅಡ್ಡಿಯಿಲ್ಲ ಎಂಬುದು ಅವರ ಅಭಿಪ್ರಾಯವಾಗಿದೆ.

ಸಚಿನ್ ಪೈಲಟ್‌ ಮೇಲೆ ಕಾಂಗ್ರೆಸ್ ತೆಗೆದುಕೊಂಡ ನಿರ್ದಾಕ್ಷಿಣ್ಯ ಕ್ರಮಗಳ ನಂತರ ಇದೆಲ್ಲವೂ ಘಟಿಸಿದೆ. ರಾಜ್ಯ ಅಧ್ಯಕ್ಷ ಸ್ಥಾನದಿಂದ ಮತ್ತು ಉಪಮುಖ್ಯಮಂತ್ರಿ ಹುದ್ದೆಯಿಂದ ಕಾಂಗ್ರೆಸ್‌ ಪೈಲಟ್‌ರನ್ನು ವಜಾಗೊಳಿಸಿದೆ. ಅವರ ಸಹಚರರ ಸಚಿವ ಸ್ಥಾನವನ್ನು ಕಸಿದುಕೊಂಡಿದೆ. ಅಲ್ಲದೇ ಪಕ್ಷವಿರೋಧ ಚಟುವಟಿಕೆಗಳ ಆಧಾರದ ಮೇಲೆ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಬಾರದೇಕೆ? ಎಂದು ನೋಟಿಸ್ ಕೂಡ ನೀಡಿರುವುದು ಸಚಿನ್ ಪೈಲಟ್‌ರನ್ನು ಇಕ್ಕಟ್ಟಿಗೆ ಸಿಲುಕಿಸಲಾಗಿದೆ ಎನ್ನಲಾಗುತ್ತಿದೆ.

ಇಂದು ಬೆಳಿಗ್ಗೆ 10 ಗಂಟೆಗೆ ಕರೆದಿದ್ದ ಪತ್ರಿಕಾಗೋಷ್ಠಿಯನ್ನು ಪೈಲಟ್ ಮಧ್ಯಾಹ್ನ 1 ಗಂಟೆಗೆ ಮೂಂದೂಡಿದರು. ತದನಂತರ ಪತ್ರಿಕಾಗೊಷ್ಠಿಯನ್ನೇ ರದ್ದುಗೊಳಿಸಿದ್ದಾರೆ. ಅಲ್ಲದೇ ನಾನಿನ್ನೂ ಕಾಂಗ್ರೆಸ್‌ ಸದಸ್ಯ, ಬಿಜೆಪಿ ಸೇರುವುದಿಲ್ಲ. ಬಿಜೆಪಿ ಸೇರುತ್ತಾರೆ ಎಂಬ ವದಂತಿ ಗಾಂಧಿಯವರ ದೃಷ್ಟಿಯಲ್ಲಿ ನನ್ನನ್ನು ಕೆಟ್ಟದಾಗಿ ಬಿಂಬಿಸುವ ಪ್ರಯತ್ನ ಎಂದು ಹೇಳಿದ್ದಾರೆ.

ನಿನ್ನೆ ಪ್ರಿಯಾಂಕ ಗಾಂಧಿಯವರು ಎರಡು ಬಾರಿ ಸಚಿನ್ ಪೈಲಟ್‌ಗೆ ಫೋನ್ ಕರೆ ಮಾಡಿ ಮನವೊಲಿಸುವ ಪ್ರಯತ್ನ ಮಾಡಿದ್ದರು. ರಾಹುಲ್ ಗಾಂಧಿ ಅವರೆಂದಿಗೂ ತನ್ನ ಹೃದಯಲ್ಲಿದ್ದಾರೆ ಎಂದು ತಿಳಿಸಿದ್ದರು. ಸೋನಿಯಾ ಗಾಂಧಿ ಕೂಡ ಪಕ್ಷದ ಅಧೀಕೃತ ಮೂಲಗಳಿಂದ ಇಮೇಲ್ ಮಾಡಿ ಸಂಧಾನ ಪ್ರಕ್ರಿಯೆ ನಡೆಸಿದ್ದರು. ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲ ಪ್ರತ್ಯೇಕ ಭೇಟಿಯ ಮೂಲಕ ಮಾತುಕತೆ ನಡೆಸಲು ಪ್ರಯತ್ನಿಸಿದ್ದರು. ಆದರೆ ಇವುಗಳಿಗೆ ಪೈಲಟ್ ಬಗ್ಗಿಲ್ಲ.

ಕಳೆದ ವರ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿದ ನಂತರವೇ ರಾಜಸ್ಥಾನದಲ್ಲಿ ತನ್ನನ್ನು ಅವಮಾನಿಸುವ ಪ್ರಕ್ರಿಯೆಯನ್ನು ಗೆಹ್ಲೋಟ್ ಹೆಚ್ಚಿಸಿದರು ಎಂಬುದು ಪೈಲಟ್‌ ಆರೋಪವಾಗಿದೆ.

ಈಗ ಪೈಲಟ್ ಮುಂದಿನ ಕ್ರಮ ತೆಗೆದುಕೊಳ್ಳಲು ಸಮಯ ತೆಗೆದುಕೊಂಡಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಸರ್ಕಾರವು ಅಲ್ಪಮತಕ್ಕೆ ಕುಸಿಯುವ ಭೀತಿಯಲ್ಲಿದೆ. ಸಚಿನ್ ಜೊತೆಗಿರುವ 20ಕ್ಕು ಹೆಚ್ಚು ಶಾಸಕರನ್ನು ಅನರ್ಹಗೊಳಿಸಿದಲ್ಲಿ ಬಹುಮತದ ಸಂಖ್ಯೆ ಇಳಿಯುವುದರಿಂದ ಸರ್ಕಾರ ರಕ್ಷಿಸಿಕೊಳ್ಳಬಹುದೆಂಬ ಆಲೋಚನೆಯು ಕಾಂಗ್ರೆಸ್‌ಗಿದೆ. ಏನಾಲಿದೆ ಎಂಬುದು ಕೆಲವೇ ದಿನಗಳಲ್ಲಿ ಸ್ಪಷ್ಟವಾಗಲಿದೆ.


ಸಚಿನ್ ಪೈಲಟ್ ಕಾಂಗ್ರೆಸ್ ತೊರೆಯಲು ಕಾರಣವಾದ ಮೂರು ಪ್ರಮುಖ ಬೇಡಿಕೆಗಳಿವು…!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...