Homeಮುಖಪುಟನಾನು ಇನ್ನೂ ಕಾಂಗ್ರೆಸ್ಸಿಗ, ಬಿಜೆಪಿ ಸೇರುವುದಿಲ್ಲ: ಪೈಲಟ್ ಮಾತಿನ ಅರ್ಥವೇನು?

ನಾನು ಇನ್ನೂ ಕಾಂಗ್ರೆಸ್ಸಿಗ, ಬಿಜೆಪಿ ಸೇರುವುದಿಲ್ಲ: ಪೈಲಟ್ ಮಾತಿನ ಅರ್ಥವೇನು?

ಕಳೆದ ವರ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿದ ನಂತರವೇ ರಾಜಸ್ಥಾನದಲ್ಲಿ ತನ್ನನ್ನು ಅವಮಾನಿಸುವ ಪ್ರಕ್ರಿಯೆಯನ್ನು ಗೆಹ್ಲೋಟ್ ಹೆಚ್ಚಿಸಿದರು ಎಂಬುದು ಪೈಲಟ್‌ ಆರೋಪವಾಗಿದೆ.

- Advertisement -
- Advertisement -

ರಾಜಸ್ಥಾನ ಬಿಕ್ಕಟ್ಟಿಗೆ ಕಾರಣವಾಗಿರುವ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ “ನಾನು ಇನ್ನೂ ಕಾಂಗ್ರೆಸ್ಸಿಗ, ಬಿಜೆಪಿ ಸೇರುವುದಿಲ್ಲ” ಎಂಬ ಹೇಳಿಕೆ ನೀಡುವ ಮೂಲಕ ಹೊಸ ಸುಳಿವುಗಳನ್ನು ನೀಡುತ್ತಿದ್ದಾರೆ. ಅದೆಂದರೆ ತನ್ನ ಪಾಲಿಗೆ ಕಾಂಗ್ರೆಸ್ ಮುಗಿದ ಅಧ್ಯಾಯವಲ್ಲ ಬದಲಿಗೆ ತನ್ನ ಬೇಡಿಕೆಗಳನ್ನು ಈಡೇರಿಸಿದರೆ ಕಾಂಗ್ರೆಸ್‌ನಲ್ಲೇ ಉಳಿಯಲು ಅಡ್ಡಿಯಿಲ್ಲ ಎಂಬುದು ಅವರ ಅಭಿಪ್ರಾಯವಾಗಿದೆ.

ಸಚಿನ್ ಪೈಲಟ್‌ ಮೇಲೆ ಕಾಂಗ್ರೆಸ್ ತೆಗೆದುಕೊಂಡ ನಿರ್ದಾಕ್ಷಿಣ್ಯ ಕ್ರಮಗಳ ನಂತರ ಇದೆಲ್ಲವೂ ಘಟಿಸಿದೆ. ರಾಜ್ಯ ಅಧ್ಯಕ್ಷ ಸ್ಥಾನದಿಂದ ಮತ್ತು ಉಪಮುಖ್ಯಮಂತ್ರಿ ಹುದ್ದೆಯಿಂದ ಕಾಂಗ್ರೆಸ್‌ ಪೈಲಟ್‌ರನ್ನು ವಜಾಗೊಳಿಸಿದೆ. ಅವರ ಸಹಚರರ ಸಚಿವ ಸ್ಥಾನವನ್ನು ಕಸಿದುಕೊಂಡಿದೆ. ಅಲ್ಲದೇ ಪಕ್ಷವಿರೋಧ ಚಟುವಟಿಕೆಗಳ ಆಧಾರದ ಮೇಲೆ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಬಾರದೇಕೆ? ಎಂದು ನೋಟಿಸ್ ಕೂಡ ನೀಡಿರುವುದು ಸಚಿನ್ ಪೈಲಟ್‌ರನ್ನು ಇಕ್ಕಟ್ಟಿಗೆ ಸಿಲುಕಿಸಲಾಗಿದೆ ಎನ್ನಲಾಗುತ್ತಿದೆ.

ಇಂದು ಬೆಳಿಗ್ಗೆ 10 ಗಂಟೆಗೆ ಕರೆದಿದ್ದ ಪತ್ರಿಕಾಗೋಷ್ಠಿಯನ್ನು ಪೈಲಟ್ ಮಧ್ಯಾಹ್ನ 1 ಗಂಟೆಗೆ ಮೂಂದೂಡಿದರು. ತದನಂತರ ಪತ್ರಿಕಾಗೊಷ್ಠಿಯನ್ನೇ ರದ್ದುಗೊಳಿಸಿದ್ದಾರೆ. ಅಲ್ಲದೇ ನಾನಿನ್ನೂ ಕಾಂಗ್ರೆಸ್‌ ಸದಸ್ಯ, ಬಿಜೆಪಿ ಸೇರುವುದಿಲ್ಲ. ಬಿಜೆಪಿ ಸೇರುತ್ತಾರೆ ಎಂಬ ವದಂತಿ ಗಾಂಧಿಯವರ ದೃಷ್ಟಿಯಲ್ಲಿ ನನ್ನನ್ನು ಕೆಟ್ಟದಾಗಿ ಬಿಂಬಿಸುವ ಪ್ರಯತ್ನ ಎಂದು ಹೇಳಿದ್ದಾರೆ.

ನಿನ್ನೆ ಪ್ರಿಯಾಂಕ ಗಾಂಧಿಯವರು ಎರಡು ಬಾರಿ ಸಚಿನ್ ಪೈಲಟ್‌ಗೆ ಫೋನ್ ಕರೆ ಮಾಡಿ ಮನವೊಲಿಸುವ ಪ್ರಯತ್ನ ಮಾಡಿದ್ದರು. ರಾಹುಲ್ ಗಾಂಧಿ ಅವರೆಂದಿಗೂ ತನ್ನ ಹೃದಯಲ್ಲಿದ್ದಾರೆ ಎಂದು ತಿಳಿಸಿದ್ದರು. ಸೋನಿಯಾ ಗಾಂಧಿ ಕೂಡ ಪಕ್ಷದ ಅಧೀಕೃತ ಮೂಲಗಳಿಂದ ಇಮೇಲ್ ಮಾಡಿ ಸಂಧಾನ ಪ್ರಕ್ರಿಯೆ ನಡೆಸಿದ್ದರು. ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲ ಪ್ರತ್ಯೇಕ ಭೇಟಿಯ ಮೂಲಕ ಮಾತುಕತೆ ನಡೆಸಲು ಪ್ರಯತ್ನಿಸಿದ್ದರು. ಆದರೆ ಇವುಗಳಿಗೆ ಪೈಲಟ್ ಬಗ್ಗಿಲ್ಲ.

ಕಳೆದ ವರ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿದ ನಂತರವೇ ರಾಜಸ್ಥಾನದಲ್ಲಿ ತನ್ನನ್ನು ಅವಮಾನಿಸುವ ಪ್ರಕ್ರಿಯೆಯನ್ನು ಗೆಹ್ಲೋಟ್ ಹೆಚ್ಚಿಸಿದರು ಎಂಬುದು ಪೈಲಟ್‌ ಆರೋಪವಾಗಿದೆ.

ಈಗ ಪೈಲಟ್ ಮುಂದಿನ ಕ್ರಮ ತೆಗೆದುಕೊಳ್ಳಲು ಸಮಯ ತೆಗೆದುಕೊಂಡಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಸರ್ಕಾರವು ಅಲ್ಪಮತಕ್ಕೆ ಕುಸಿಯುವ ಭೀತಿಯಲ್ಲಿದೆ. ಸಚಿನ್ ಜೊತೆಗಿರುವ 20ಕ್ಕು ಹೆಚ್ಚು ಶಾಸಕರನ್ನು ಅನರ್ಹಗೊಳಿಸಿದಲ್ಲಿ ಬಹುಮತದ ಸಂಖ್ಯೆ ಇಳಿಯುವುದರಿಂದ ಸರ್ಕಾರ ರಕ್ಷಿಸಿಕೊಳ್ಳಬಹುದೆಂಬ ಆಲೋಚನೆಯು ಕಾಂಗ್ರೆಸ್‌ಗಿದೆ. ಏನಾಲಿದೆ ಎಂಬುದು ಕೆಲವೇ ದಿನಗಳಲ್ಲಿ ಸ್ಪಷ್ಟವಾಗಲಿದೆ.


ಸಚಿನ್ ಪೈಲಟ್ ಕಾಂಗ್ರೆಸ್ ತೊರೆಯಲು ಕಾರಣವಾದ ಮೂರು ಪ್ರಮುಖ ಬೇಡಿಕೆಗಳಿವು…!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...