ಐಎಂಎಯ ಕೋಟ್ಯಂತರ ರೂ ಹಗರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ರೋಷನ್ ಬೇಗ್ ತಲೆಮರೆಸಿಕೊಳ್ಳಲು ಸಹಾಯ ಮಾಡುವ ಬಿಜೆಪಿ ನಾಯಕರ ಬಣ್ಣ ಬಯಲಾಗಿದೆ. ಈ ಮೂಲಕ ಕುದುರೆ ವ್ಯಾಪಾರ ಮಾಡಿ ಮೈತ್ರಿ ಸರ್ಕಾರ ಅಸ್ಥಿರ ಗೊಳಿಸಲು ಬಿಜೆಪಿ ಮುಖಂಡಕರು ಪ್ರಯತ್ನಿಸಿರುವುದು ಸ್ಪಷ್ಟವಾಗಿದೆ ಎಂದು ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಕುಮಾರಸ್ವಾಮಿ “ರೋಷನ್ ಬೇಗ್ ಬೆಂಗಳೂರು ಬಿಟ್ಟು ತೆರಳಲು ಪ್ರಯತ್ನಿಸಿದ್ದರು. ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಸಂತೋಷ್ ಹಾಗೂ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್ ಬೇಗ್ ಜೊತೆಗಿದ್ದರು. ಈ ವೇಳೆ ಎಸ್.ಐ.ಟಿ ಅಧಿಕಾರಿಗಳನ್ನು ನೋಡಿದ ಕೂಡಲೇ ಯಡಿಯೂರಪ್ಪ ಆಪ್ತ ಸಂತೋಷ್ ಪರಾರಿಯಾಗಿದ್ದಾನೆ.” ಎಂದು ಆರೋಪಿಸಿ ರೋಷನ್ ಬೇಗ್ ಮತ್ತು ಸಂತೋಷ್ ಇಬ್ಬರೂ ಟಿಕೆಟ್ ಬುಕ್ ಮಾಡಿರುವ ಪ್ರತಿಯೊಂದುನ್ನು ಪೋಸ್ಟ್ ಮಾಡಿದ್ದಾರೆ.
Today SIT probing the #IMA case detained @rroshanbaig for questioning at the BIAL airport while he was trying leave along with @BSYBJP's PA Santosh on a chartered flight to Mumbai. I was told that on seeing the SIT, Santhosh ran away while the team apprehended Mr. Baig. 1/2 pic.twitter.com/MmyH4CyVfP
— H D Kumaraswamy (@hd_kumaraswamy) July 15, 2019
ರೋಷನ್ ಬೇಗ್ ಮಾಜಿ ಸಚಿವರಾಗಿದ್ದು ಲೋಕಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ನೊಡನೆ ಮುನಿಸಿಕೊಂಡಿದ್ದರು. ಸಿದ್ದರಾಮಯ್ಯ ಸೇರಿದಂತೆ ಪ್ರಮುಖ ನಾಯಕರ ವಿರುದ್ಧ ಏಕವಚನದಲ್ಲಿಯೇ ಮಾತಾಡಿದ್ದರು. ಆದಾದ ನಂತರ ಕಾಂಗ್ರೆಸ್ ಅವರನ್ನು ಪಕ್ಷದಿಂದ ಉಚ್ಛಾಟಿಸಿತ್ತು. ಆ ನಂತರ ಐಎಂಎ ಕೇಸ್ ನಲ್ಲಿ ಅವರು ಹೆಸರು ಮುಂಚೂಣಿಯಲ್ಲಿ ಕೇಳಿ ಬಂದಿತ್ತು. ಆನಂತರ ಅವರು ರಾಜೀನಾಮೆ ನೀಡಿದಾಗ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಡನೆ ಮಾತುಕತೆ ನಡೆಸಿದ್ದರು.
ಈಗ ಬಹುತೇಕ ರಾಜ್ಯ ಸರ್ಕಾರ ಪತನಗೊಳ್ಳುವುದು ಖಾತ್ರಿಯಾಗುತ್ತಿದ್ದಂತೆ ಬಿಜೆಪಿಗೆ ಹಾರಿ ತಮ್ಮೆಲ್ಲಾ ಕೇಸ್ ಗಳಿಂದ ಬಚಾವ್ ಆಗಲು ರೋಷನ್ ಬೇಗ್ ಪ್ರಯತ್ನಿಸಿದ್ದರು ಎನ್ನಲಾಗಿದೆ. ಯಡಿಯೂರಪ್ಪನವರೆ ಬಿಜೆಪಿಗೆ ಬಂದರೆ ಎಲ್ಲಾ ಕೇಸುಗಳನ್ನು ಮುಚ್ಚಿಹಾಕುವುದಾಗಿ ಭರವಸೆ ನೀಡಿ ತಮ್ಮ ಆಪ್ತ ಸಂತೋಷ್ ಜೊತೆ ವಿಮಾನದಲ್ಲಿ ಮುಂಬೈಗೆ ಕರೆದೊಯ್ಯಲು ತಯಾರಿ ನಡೆಸಿದ್ದರು. ಆದರೆ ಎಸ್.ಐ.ಟಿ ಯೂ ಈ ಮುಂಚೆಯೇ ವಿಚಾರಣೆಗೆ ನೋಟಿಸ್ ನೀಡಿದ್ದರಿಂದ ಇಂದು ವಿಚಾರಣೆಗಾಗಿ ವಶಕ್ಕೆ ಪಡೆದಿದೆ.