Homeಕರ್ನಾಟಕಐಎಂಎ ಆರೋಪಿ ರೋಷನ್ ಬೇಗ್ ತಪ್ಪಿಸಿಕೊಳ್ಳಲು ಬಿಜೆಪಿ ಸಹಾಯ ಮಾಡುತ್ತಿದೆ.- ಸಿಎಂ ಕುಮಾರಸ್ವಾಮಿ

ಐಎಂಎ ಆರೋಪಿ ರೋಷನ್ ಬೇಗ್ ತಪ್ಪಿಸಿಕೊಳ್ಳಲು ಬಿಜೆಪಿ ಸಹಾಯ ಮಾಡುತ್ತಿದೆ.- ಸಿಎಂ ಕುಮಾರಸ್ವಾಮಿ

- Advertisement -
- Advertisement -

ಐಎಂಎಯ ಕೋಟ್ಯಂತರ ರೂ ಹಗರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ರೋಷನ್ ಬೇಗ್ ತಲೆಮರೆಸಿಕೊಳ್ಳಲು ಸಹಾಯ‌ ಮಾಡುವ ಬಿಜೆಪಿ ನಾಯಕರ ಬಣ್ಣ ಬಯಲಾಗಿದೆ. ಈ ಮೂಲಕ ಕುದುರೆ ವ್ಯಾಪಾರ ಮಾಡಿ ಮೈತ್ರಿ ಸರ್ಕಾರ ಅಸ್ಥಿರ ಗೊಳಿಸಲು ಬಿಜೆಪಿ ಮುಖಂಡಕರು‌ ಪ್ರಯತ್ನಿಸಿರುವುದು ಸ್ಪಷ್ಟವಾಗಿದೆ ಎಂದು ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಕುಮಾರಸ್ವಾಮಿ “ರೋಷನ್‌ ಬೇಗ್ ಬೆಂಗಳೂರು ಬಿಟ್ಟು ತೆರಳಲು ಪ್ರಯತ್ನಿಸಿದ್ದರು. ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಸಂತೋಷ್ ಹಾಗೂ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್ ಬೇಗ್ ಜೊತೆಗಿದ್ದರು. ಈ ವೇಳೆ ಎಸ್.ಐ.ಟಿ ಅಧಿಕಾರಿಗಳನ್ನು ‌ನೋಡಿದ‌ ಕೂಡಲೇ ಯಡಿಯೂರಪ್ಪ ಆಪ್ತ ಸಂತೋಷ್ ಪರಾರಿಯಾಗಿದ್ದಾನೆ.” ಎಂದು ಆರೋಪಿಸಿ ರೋಷನ್ ಬೇಗ್ ಮತ್ತು ಸಂತೋಷ್ ಇಬ್ಬರೂ ಟಿಕೆಟ್ ಬುಕ್ ಮಾಡಿರುವ ಪ್ರತಿಯೊಂದುನ್ನು ಪೋಸ್ಟ್ ಮಾಡಿದ್ದಾರೆ.

ರೋಷನ್ ಬೇಗ್ ಮಾಜಿ ಸಚಿವರಾಗಿದ್ದು ಲೋಕಸಭಾ ಚುನಾವಣೆಯ ವೇಳೆ ಕಾಂಗ್ರೆಸ್  ನೊಡನೆ ಮುನಿಸಿಕೊಂಡಿದ್ದರು. ಸಿದ್ದರಾಮಯ್ಯ ಸೇರಿದಂತೆ ಪ್ರಮುಖ ನಾಯಕರ ವಿರುದ್ಧ ಏಕವಚನದಲ್ಲಿಯೇ ಮಾತಾಡಿದ್ದರು. ಆದಾದ ನಂತರ ಕಾಂಗ್ರೆಸ್ ಅವರನ್ನು ಪಕ್ಷದಿಂದ ಉಚ್ಛಾಟಿಸಿತ್ತು. ಆ ನಂತರ ಐಎಂಎ ಕೇಸ್ ನಲ್ಲಿ ಅವರು ಹೆಸರು ಮುಂಚೂಣಿಯಲ್ಲಿ ಕೇಳಿ ಬಂದಿತ್ತು. ಆನಂತರ ಅವರು ರಾಜೀನಾಮೆ ನೀಡಿದಾಗ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಡನೆ ಮಾತುಕತೆ ನಡೆಸಿದ್ದರು.

ಈಗ ಬಹುತೇಕ ರಾಜ್ಯ ಸರ್ಕಾರ ಪತನಗೊಳ್ಳುವುದು ಖಾತ್ರಿಯಾಗುತ್ತಿದ್ದಂತೆ ಬಿಜೆಪಿಗೆ ಹಾರಿ ತಮ್ಮೆಲ್ಲಾ ಕೇಸ್ ಗಳಿಂದ ಬಚಾವ್ ಆಗಲು ರೋಷನ್ ಬೇಗ್ ಪ್ರಯತ್ನಿಸಿದ್ದರು ಎನ್ನಲಾಗಿದೆ. ಯಡಿಯೂರಪ್ಪನವರೆ ಬಿಜೆಪಿಗೆ ಬಂದರೆ ಎಲ್ಲಾ ಕೇಸುಗಳನ್ನು ಮುಚ್ಚಿಹಾಕುವುದಾಗಿ ಭರವಸೆ ನೀಡಿ ತಮ್ಮ ಆಪ್ತ ಸಂತೋಷ್ ಜೊತೆ ವಿಮಾನದಲ್ಲಿ ಮುಂಬೈಗೆ ಕರೆದೊಯ್ಯಲು ತಯಾರಿ ನಡೆಸಿದ್ದರು. ಆದರೆ ಎಸ್.ಐ.ಟಿ ಯೂ ಈ ಮುಂಚೆಯೇ ವಿಚಾರಣೆಗೆ ನೋಟಿಸ್ ನೀಡಿದ್ದರಿಂದ ಇಂದು ವಿಚಾರಣೆಗಾಗಿ ವಶಕ್ಕೆ ಪಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...