Homeಕರ್ನಾಟಕಮೋಸ ಹೋಗುವ ಮೊದಲು ನೀವಿದನ್ನು ತಿಳಿದುಕೊಂಡಿರಬೇಕು!!!!

ಮೋಸ ಹೋಗುವ ಮೊದಲು ನೀವಿದನ್ನು ತಿಳಿದುಕೊಂಡಿರಬೇಕು!!!!

- Advertisement -
- Advertisement -

| ಮುತ್ತುರಾಜು |

ಐಎಂಎ ಗ್ರೂಪ್ ಆಫ್ ಕಂಪನಿ ಸಾವಿರಾರು ಜನರಿಗೆ ನೂರಾರು ಕೋಟಿ ರೂ ಹಣ ವಂಚನೆ ಮಾಡಿರುವ ಪ್ರಕರಣ ಬಗ್ಗೆ ನಿಮಗೆಲ್ಲಾ ತಿಳಿದಿದೆ. ರಾಜ್ಯದ ನಾನಾ ಮೂಲೆಗಳಿಂದ ಮೋಸ ಹೋಗಿರುವ ಜನರು ಬೆಂಗಳೂರಿಗೆ ಬಂದು ಕಂಪನಿ ವಿರುದ್ಧ ದೂರು ದಾಖಲಿಸುತ್ತಿದ್ದಾರೆ. ಈ ಜನರೆಲ್ಲಾ ಯಾರು? ಹಣ ಹೂಡಿಕೆ ಯಾಕೆ ಮಾಡಿದ್ದರು? ಅಂತಹ ಅಗತ್ಯವೇನಿತ್ತು? ನಿಮಗೆ ಗೊತ್ತೆ?

ದಿನಗೂಲಿ ಕಾರ್ಮಿಕರು, ಕೂಲಿಕಾರರು, ಬೀದಿ ಬದಿ ವ್ಯಾಪಾರಿಗಳು, ಗೃಹಿಣಿಯರು ಹೀಗೆ ನಾನಾ ರೀತಿಯ ಕೆಲಸ ಮಾಡುತ್ತಾ ಜೀವನ ನಡೆಸುತ್ತದ್ದ ಬಡ ಹಾಗೂ ಮಧ್ಯಮ ವರ್ಗದ ಜನರು ಮಕ್ಕಳ ಶಿಕ್ಷಣಕ್ಕಾಗಿ, ಮದುವೆ ಖರ್ಚಿಗಾಗಿ, ಸ್ವಂತ ಮನೆ, ಆಸ್ತಿ, ಜಮೀನು ಮಾಡಿಕೊಳ್ಳಬೇಕೆಂಬ ಕನಸನ್ನಿಟ್ಟುಕೊಂಡ ಇವರು ಹೆಚ್ಚು ಬಡ್ಡಿ ದೊರೆಯುತ್ತದೆ ಎಂಬ ಆಸೆಯಿಂದ ಸಾವಿರದಿಂದ ಕೋಟಿವರೆಗೂ ಹಣವನ್ನು ಹೂಡಿಕೆ ಮಾಡಿದ್ದರು.

ಕಳೆದ ಸೋಮವಾರ ಕಂಪನಿ ಮಾಲೀಕ ಹರಿಬಿಟ್ಟ ಆಡಿಯೋ ಮೂಲಕ ಹೂಡಿಕೆದಾರರಿಗೆ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಧ್ಯಕ್ಕೆ ಕರ್ನಾಟಕ ಸರ್ಕಾರ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಜನರಿಂದ ದೂರುಗಳನ್ನು ದಾಖಲಿಸುತ್ತಿದ್ದಾರೆ. ಈವರೆಗೂ ಸುಮಾರು 11 ಸಾವಿರಕ್ಕೂ ಹೆಚ್ಚು ಜನರು ಮೊಹಮ್ಮದ್ ಮನ್ಸೂರ್ ಖಾನ್ ವಿರುದ್ಧ ದೂರು ನೀಡಿದ್ದಾರೆ.

ಮುಂದಿನ ಕಥೆ ಏನು? ಜನರ ಹಣ ವಾಪಸ್ ಬರುವುದೇ?
ಈಗಾಗಲೇ ಐಎಂಎ ಕಂಪನಿಯ ನಿರ್ದೇಶಕ ಮಂಡಳಿಯ ಎಲ್ಲಾ ಸದಸ್ಯರನ್ನು ಬಂಧಿಸಲಾಗಿದ್ದು, ಮನ್ಸೂರ್ ಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಈ ಹಣ ವಂಚನೆ ಪ್ರಕರಣಗಳು ಕರ್ನಾಟಕದಲ್ಲಿ ನಡೆಯುತ್ತಿರುವುದು ಇದೇ ಮೊದಲಲ್ಲ. ಕಳೆದ 15 ವರ್ಷಗಳಲ್ಲಿ ಸುಮಾರು 20ಕ್ಕೂ ಹೆಚ್ಚು ವಂಚನೆ ಪ್ರಕರಣಗಳು ದಾಖಲಾಗಿವೆ.

ಇಂತಹ ಮೋಸದ ಕಂಪನಿಗಳ ಮಾತುಗಳಿಗೆ ಮರುಳಾದವರು ಬರೀ ಜನಸಾಮಾನ್ಯರು ಮಾತ್ರವಲ್ಲ. 2002-18ರವರೆಗೆ ವ್ಯವಹಾರ ನಡೆಸುತ್ತಿದ್ದ ವಿಕ್ರಂ ಚಿಟ್ ಫಂಡ್ ಹಗರಣದಲ್ಲಿ ಪ್ರಕಾಶ್ ಪಡುಕೋಣೆ, ರಾಹುಲ್ ದ್ರಾವಿಡ್ ಕೂಡ ಹಣ ಹೂಡಿಕೆ ಮಾಡಿ ಮೋಸ ಹೋಗಿದ್ದಾರೆ. ಆದರೆ ಇವರ್ಯಾರಿಗೂ ಹಣ ಕೈಸೇರಿಲ್ಲ.

ಈ ವರೆಗೂ ಕರ್ನಾಟಕದಲ್ಲಿ ನಡೆದಿರುವ ವಂಚನೆ ಪ್ರಕರಣಗಳ ಕುರಿತು ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ

ಕೃಪೆ: ಪ್ರಜಾವಾಣಿ

ಕಳೆದ ವರ್ಷ ಪ್ರಜಾವಾಣಿಯಲ್ಲಿ ಸುದ್ದಿಯಾದ ವರದಿಯ ಪ್ರಕಾರ 2013-18 ರವರೆಗೆ ಸುಮಾರು 16 ಕಂಪನಿಗಳಿಂದ ಒಟ್ಟು 5,200 ಕೋಟಿ ರೂ ವಂಚನೆಯಾಗಿದೆಯಾಗಿದೆ ಎಂಬುದು ವರದಿಯಾಗಿದೆ.

ಇಷ್ಟೆಲ್ಲಾ ಪ್ರಕರಣಗಳಲ್ಲಿ ಸರ್ಕಾರ ಏನು ಮಾಡುತ್ತಿದೆ?
ಪ್ರತಿ ಪ್ರಕರಣ ಘಟನೆಗಳು ನಡೆದಾಗಲೂ ಸರ್ಕಾರ ತನಿಖೆ ನಡೆಸಲು ಆದೇಶಿಸುತ್ತಿದೆ. ಐಎಂಎ ಪ್ರಕರಣ ಒಳಗೊಂಡಂತೆ ಹಲವಾರು ಪ್ರಕರಣಗಳಲ್ಲಿ ರಾಜಕೀಯ ಮುಖಂಡರು, ಪ್ರಭಾವಿ ವ್ಯಕ್ತಿಗಳ ಕೈವಾಡವು ಇರುವುದು ಕಂಡುಬಂದಿದೆ. ಈ ಬಗ್ಗೆ ಪಕ್ಷಾತೀತವಾಗಿ ತನಿಖೆ ನಡೆಯಬೇಕು. ಈ ಹಿಂದೆ ನಡೆದ ಕೆಲವು ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿದೆ. ಆದರೆ ಜನರಿಗೆ ನ್ಯಾಯ ಸಿಕ್ಕಿರುವುದು ಸಂಶಯವೇ ಸರಿ. ಇಂತಹ ಪ್ರಕರಣಗಳು ನಡೆಯದಂತೆ ತಡೆಗಟ್ಟಲು ಸರ್ಕಾರವು ಯಾವ ನೀತಿಯನ್ನು ಜಾರಿಗೊಳಿಸಿಲ್ಲ.

ಇಷ್ಟೆಲ್ಲಾ ಪ್ರಕರಣಗಳ ಬಗ್ಗೆ ಜನರಿಗೆ ಅರಿವಿದ್ದರೂ ಪದೇ ಪದೇ ಮೋಸ ಹೋಗುತ್ತಿರುವುದೇಕೆ? 
ದಿನಗೂಲಿ ಮಾಡಿ ಬದುಕು ನಡೆಸುತ್ತಿರುವ ಜನರು ತಮ್ಮ ಪುಟ್ಟ ಕನಸುಗಳಿಗಾಗಿ ಹಣ ಕೂಡಿಡುವುದು ಸಾಮಾನ್ಯ. ಹೆಚ್ಚು ಬಡ್ಡಿ ಬರುತ್ತದೆ, ಹಣ ಡಬಲ್ ಮಾಡಿಕೊಡುತ್ತೇವೆ ಎನ್ನುವ ಮೋಸದ ಮಾತುಗಳಿಗೆ ಬಲಿಯಾಗುತ್ತಿದ್ದಾರೆ. ಇನ್ನು ಮುಂದಾದರೂ ಇಂತಹ ವಂಚಕ ಕಂಪನಿಗಳ ಬಗ್ಗೆ ಜನರು ಎಚ್ಚರದಿಂದಿರಬೇಕು.

ಇಂತಹ ಮೋಸದ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡುವವರಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗದ ಜನರೇ ಹೆಚ್ಚು. ಮಕ್ಕಳ ಓದು, ಸ್ವಂತ ಮನೆ ಇವರ ಕನಸಾಗಿರುತ್ತದೆ.  ಹಾಗಾಗಿ ಸರ್ಕಾರ ಜನರ ಮೂಲಭೂತ ಅಗತ್ಯಗಳನ್ನು ಪೂರೈಸಬೇಕು. ದುಡಿಮೆಗೆ ತಕ್ಕ ಪ್ರತಿಫಲ/ಸಂಬಳ ಸಿಕ್ಕರೆ ಜನರು ಹೀಗೆ ಮೋಸ ಹೋಗಲಾರರು. ಉತ್ತಮ ಗುಣಮಟ್ಟದ ಶಿಕ್ಷಣ, ಉಚಿತ ಆರೋಗ್ಯ, ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ, ಬೀದಿ ಬದಿ ವ್ಯಾಪಾರಿಗಳಿಗೆ ಬೇಕಾದ ಮೂಲಭೂತ ಸೌಲಭ್ಯಗಳು ಇವೆಲ್ಲವನ್ನು ಸರ್ಕಾರ ಉಚಿತವಾಗಿ ಒದಗಿಸಿದರೆ ಜನರು ಮೋಸಹೋಗಲಾರರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...