Homeಕರ್ನಾಟಕಮೋಸ ಹೋಗುವ ಮೊದಲು ನೀವಿದನ್ನು ತಿಳಿದುಕೊಂಡಿರಬೇಕು!!!!

ಮೋಸ ಹೋಗುವ ಮೊದಲು ನೀವಿದನ್ನು ತಿಳಿದುಕೊಂಡಿರಬೇಕು!!!!

- Advertisement -
- Advertisement -

| ಮುತ್ತುರಾಜು |

ಐಎಂಎ ಗ್ರೂಪ್ ಆಫ್ ಕಂಪನಿ ಸಾವಿರಾರು ಜನರಿಗೆ ನೂರಾರು ಕೋಟಿ ರೂ ಹಣ ವಂಚನೆ ಮಾಡಿರುವ ಪ್ರಕರಣ ಬಗ್ಗೆ ನಿಮಗೆಲ್ಲಾ ತಿಳಿದಿದೆ. ರಾಜ್ಯದ ನಾನಾ ಮೂಲೆಗಳಿಂದ ಮೋಸ ಹೋಗಿರುವ ಜನರು ಬೆಂಗಳೂರಿಗೆ ಬಂದು ಕಂಪನಿ ವಿರುದ್ಧ ದೂರು ದಾಖಲಿಸುತ್ತಿದ್ದಾರೆ. ಈ ಜನರೆಲ್ಲಾ ಯಾರು? ಹಣ ಹೂಡಿಕೆ ಯಾಕೆ ಮಾಡಿದ್ದರು? ಅಂತಹ ಅಗತ್ಯವೇನಿತ್ತು? ನಿಮಗೆ ಗೊತ್ತೆ?

ದಿನಗೂಲಿ ಕಾರ್ಮಿಕರು, ಕೂಲಿಕಾರರು, ಬೀದಿ ಬದಿ ವ್ಯಾಪಾರಿಗಳು, ಗೃಹಿಣಿಯರು ಹೀಗೆ ನಾನಾ ರೀತಿಯ ಕೆಲಸ ಮಾಡುತ್ತಾ ಜೀವನ ನಡೆಸುತ್ತದ್ದ ಬಡ ಹಾಗೂ ಮಧ್ಯಮ ವರ್ಗದ ಜನರು ಮಕ್ಕಳ ಶಿಕ್ಷಣಕ್ಕಾಗಿ, ಮದುವೆ ಖರ್ಚಿಗಾಗಿ, ಸ್ವಂತ ಮನೆ, ಆಸ್ತಿ, ಜಮೀನು ಮಾಡಿಕೊಳ್ಳಬೇಕೆಂಬ ಕನಸನ್ನಿಟ್ಟುಕೊಂಡ ಇವರು ಹೆಚ್ಚು ಬಡ್ಡಿ ದೊರೆಯುತ್ತದೆ ಎಂಬ ಆಸೆಯಿಂದ ಸಾವಿರದಿಂದ ಕೋಟಿವರೆಗೂ ಹಣವನ್ನು ಹೂಡಿಕೆ ಮಾಡಿದ್ದರು.

ಕಳೆದ ಸೋಮವಾರ ಕಂಪನಿ ಮಾಲೀಕ ಹರಿಬಿಟ್ಟ ಆಡಿಯೋ ಮೂಲಕ ಹೂಡಿಕೆದಾರರಿಗೆ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಧ್ಯಕ್ಕೆ ಕರ್ನಾಟಕ ಸರ್ಕಾರ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಜನರಿಂದ ದೂರುಗಳನ್ನು ದಾಖಲಿಸುತ್ತಿದ್ದಾರೆ. ಈವರೆಗೂ ಸುಮಾರು 11 ಸಾವಿರಕ್ಕೂ ಹೆಚ್ಚು ಜನರು ಮೊಹಮ್ಮದ್ ಮನ್ಸೂರ್ ಖಾನ್ ವಿರುದ್ಧ ದೂರು ನೀಡಿದ್ದಾರೆ.

ಮುಂದಿನ ಕಥೆ ಏನು? ಜನರ ಹಣ ವಾಪಸ್ ಬರುವುದೇ?
ಈಗಾಗಲೇ ಐಎಂಎ ಕಂಪನಿಯ ನಿರ್ದೇಶಕ ಮಂಡಳಿಯ ಎಲ್ಲಾ ಸದಸ್ಯರನ್ನು ಬಂಧಿಸಲಾಗಿದ್ದು, ಮನ್ಸೂರ್ ಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಈ ಹಣ ವಂಚನೆ ಪ್ರಕರಣಗಳು ಕರ್ನಾಟಕದಲ್ಲಿ ನಡೆಯುತ್ತಿರುವುದು ಇದೇ ಮೊದಲಲ್ಲ. ಕಳೆದ 15 ವರ್ಷಗಳಲ್ಲಿ ಸುಮಾರು 20ಕ್ಕೂ ಹೆಚ್ಚು ವಂಚನೆ ಪ್ರಕರಣಗಳು ದಾಖಲಾಗಿವೆ.

ಇಂತಹ ಮೋಸದ ಕಂಪನಿಗಳ ಮಾತುಗಳಿಗೆ ಮರುಳಾದವರು ಬರೀ ಜನಸಾಮಾನ್ಯರು ಮಾತ್ರವಲ್ಲ. 2002-18ರವರೆಗೆ ವ್ಯವಹಾರ ನಡೆಸುತ್ತಿದ್ದ ವಿಕ್ರಂ ಚಿಟ್ ಫಂಡ್ ಹಗರಣದಲ್ಲಿ ಪ್ರಕಾಶ್ ಪಡುಕೋಣೆ, ರಾಹುಲ್ ದ್ರಾವಿಡ್ ಕೂಡ ಹಣ ಹೂಡಿಕೆ ಮಾಡಿ ಮೋಸ ಹೋಗಿದ್ದಾರೆ. ಆದರೆ ಇವರ್ಯಾರಿಗೂ ಹಣ ಕೈಸೇರಿಲ್ಲ.

ಈ ವರೆಗೂ ಕರ್ನಾಟಕದಲ್ಲಿ ನಡೆದಿರುವ ವಂಚನೆ ಪ್ರಕರಣಗಳ ಕುರಿತು ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ

ಕೃಪೆ: ಪ್ರಜಾವಾಣಿ

ಕಳೆದ ವರ್ಷ ಪ್ರಜಾವಾಣಿಯಲ್ಲಿ ಸುದ್ದಿಯಾದ ವರದಿಯ ಪ್ರಕಾರ 2013-18 ರವರೆಗೆ ಸುಮಾರು 16 ಕಂಪನಿಗಳಿಂದ ಒಟ್ಟು 5,200 ಕೋಟಿ ರೂ ವಂಚನೆಯಾಗಿದೆಯಾಗಿದೆ ಎಂಬುದು ವರದಿಯಾಗಿದೆ.

ಇಷ್ಟೆಲ್ಲಾ ಪ್ರಕರಣಗಳಲ್ಲಿ ಸರ್ಕಾರ ಏನು ಮಾಡುತ್ತಿದೆ?
ಪ್ರತಿ ಪ್ರಕರಣ ಘಟನೆಗಳು ನಡೆದಾಗಲೂ ಸರ್ಕಾರ ತನಿಖೆ ನಡೆಸಲು ಆದೇಶಿಸುತ್ತಿದೆ. ಐಎಂಎ ಪ್ರಕರಣ ಒಳಗೊಂಡಂತೆ ಹಲವಾರು ಪ್ರಕರಣಗಳಲ್ಲಿ ರಾಜಕೀಯ ಮುಖಂಡರು, ಪ್ರಭಾವಿ ವ್ಯಕ್ತಿಗಳ ಕೈವಾಡವು ಇರುವುದು ಕಂಡುಬಂದಿದೆ. ಈ ಬಗ್ಗೆ ಪಕ್ಷಾತೀತವಾಗಿ ತನಿಖೆ ನಡೆಯಬೇಕು. ಈ ಹಿಂದೆ ನಡೆದ ಕೆಲವು ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿದೆ. ಆದರೆ ಜನರಿಗೆ ನ್ಯಾಯ ಸಿಕ್ಕಿರುವುದು ಸಂಶಯವೇ ಸರಿ. ಇಂತಹ ಪ್ರಕರಣಗಳು ನಡೆಯದಂತೆ ತಡೆಗಟ್ಟಲು ಸರ್ಕಾರವು ಯಾವ ನೀತಿಯನ್ನು ಜಾರಿಗೊಳಿಸಿಲ್ಲ.

ಇಷ್ಟೆಲ್ಲಾ ಪ್ರಕರಣಗಳ ಬಗ್ಗೆ ಜನರಿಗೆ ಅರಿವಿದ್ದರೂ ಪದೇ ಪದೇ ಮೋಸ ಹೋಗುತ್ತಿರುವುದೇಕೆ? 
ದಿನಗೂಲಿ ಮಾಡಿ ಬದುಕು ನಡೆಸುತ್ತಿರುವ ಜನರು ತಮ್ಮ ಪುಟ್ಟ ಕನಸುಗಳಿಗಾಗಿ ಹಣ ಕೂಡಿಡುವುದು ಸಾಮಾನ್ಯ. ಹೆಚ್ಚು ಬಡ್ಡಿ ಬರುತ್ತದೆ, ಹಣ ಡಬಲ್ ಮಾಡಿಕೊಡುತ್ತೇವೆ ಎನ್ನುವ ಮೋಸದ ಮಾತುಗಳಿಗೆ ಬಲಿಯಾಗುತ್ತಿದ್ದಾರೆ. ಇನ್ನು ಮುಂದಾದರೂ ಇಂತಹ ವಂಚಕ ಕಂಪನಿಗಳ ಬಗ್ಗೆ ಜನರು ಎಚ್ಚರದಿಂದಿರಬೇಕು.

ಇಂತಹ ಮೋಸದ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡುವವರಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗದ ಜನರೇ ಹೆಚ್ಚು. ಮಕ್ಕಳ ಓದು, ಸ್ವಂತ ಮನೆ ಇವರ ಕನಸಾಗಿರುತ್ತದೆ.  ಹಾಗಾಗಿ ಸರ್ಕಾರ ಜನರ ಮೂಲಭೂತ ಅಗತ್ಯಗಳನ್ನು ಪೂರೈಸಬೇಕು. ದುಡಿಮೆಗೆ ತಕ್ಕ ಪ್ರತಿಫಲ/ಸಂಬಳ ಸಿಕ್ಕರೆ ಜನರು ಹೀಗೆ ಮೋಸ ಹೋಗಲಾರರು. ಉತ್ತಮ ಗುಣಮಟ್ಟದ ಶಿಕ್ಷಣ, ಉಚಿತ ಆರೋಗ್ಯ, ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ, ಬೀದಿ ಬದಿ ವ್ಯಾಪಾರಿಗಳಿಗೆ ಬೇಕಾದ ಮೂಲಭೂತ ಸೌಲಭ್ಯಗಳು ಇವೆಲ್ಲವನ್ನು ಸರ್ಕಾರ ಉಚಿತವಾಗಿ ಒದಗಿಸಿದರೆ ಜನರು ಮೋಸಹೋಗಲಾರರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...