Homeಕರ್ನಾಟಕಮೋಸ ಹೋಗುವ ಮೊದಲು ನೀವಿದನ್ನು ತಿಳಿದುಕೊಂಡಿರಬೇಕು!!!!

ಮೋಸ ಹೋಗುವ ಮೊದಲು ನೀವಿದನ್ನು ತಿಳಿದುಕೊಂಡಿರಬೇಕು!!!!

- Advertisement -
- Advertisement -

| ಮುತ್ತುರಾಜು |

ಐಎಂಎ ಗ್ರೂಪ್ ಆಫ್ ಕಂಪನಿ ಸಾವಿರಾರು ಜನರಿಗೆ ನೂರಾರು ಕೋಟಿ ರೂ ಹಣ ವಂಚನೆ ಮಾಡಿರುವ ಪ್ರಕರಣ ಬಗ್ಗೆ ನಿಮಗೆಲ್ಲಾ ತಿಳಿದಿದೆ. ರಾಜ್ಯದ ನಾನಾ ಮೂಲೆಗಳಿಂದ ಮೋಸ ಹೋಗಿರುವ ಜನರು ಬೆಂಗಳೂರಿಗೆ ಬಂದು ಕಂಪನಿ ವಿರುದ್ಧ ದೂರು ದಾಖಲಿಸುತ್ತಿದ್ದಾರೆ. ಈ ಜನರೆಲ್ಲಾ ಯಾರು? ಹಣ ಹೂಡಿಕೆ ಯಾಕೆ ಮಾಡಿದ್ದರು? ಅಂತಹ ಅಗತ್ಯವೇನಿತ್ತು? ನಿಮಗೆ ಗೊತ್ತೆ?

ದಿನಗೂಲಿ ಕಾರ್ಮಿಕರು, ಕೂಲಿಕಾರರು, ಬೀದಿ ಬದಿ ವ್ಯಾಪಾರಿಗಳು, ಗೃಹಿಣಿಯರು ಹೀಗೆ ನಾನಾ ರೀತಿಯ ಕೆಲಸ ಮಾಡುತ್ತಾ ಜೀವನ ನಡೆಸುತ್ತದ್ದ ಬಡ ಹಾಗೂ ಮಧ್ಯಮ ವರ್ಗದ ಜನರು ಮಕ್ಕಳ ಶಿಕ್ಷಣಕ್ಕಾಗಿ, ಮದುವೆ ಖರ್ಚಿಗಾಗಿ, ಸ್ವಂತ ಮನೆ, ಆಸ್ತಿ, ಜಮೀನು ಮಾಡಿಕೊಳ್ಳಬೇಕೆಂಬ ಕನಸನ್ನಿಟ್ಟುಕೊಂಡ ಇವರು ಹೆಚ್ಚು ಬಡ್ಡಿ ದೊರೆಯುತ್ತದೆ ಎಂಬ ಆಸೆಯಿಂದ ಸಾವಿರದಿಂದ ಕೋಟಿವರೆಗೂ ಹಣವನ್ನು ಹೂಡಿಕೆ ಮಾಡಿದ್ದರು.

ಕಳೆದ ಸೋಮವಾರ ಕಂಪನಿ ಮಾಲೀಕ ಹರಿಬಿಟ್ಟ ಆಡಿಯೋ ಮೂಲಕ ಹೂಡಿಕೆದಾರರಿಗೆ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಧ್ಯಕ್ಕೆ ಕರ್ನಾಟಕ ಸರ್ಕಾರ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಜನರಿಂದ ದೂರುಗಳನ್ನು ದಾಖಲಿಸುತ್ತಿದ್ದಾರೆ. ಈವರೆಗೂ ಸುಮಾರು 11 ಸಾವಿರಕ್ಕೂ ಹೆಚ್ಚು ಜನರು ಮೊಹಮ್ಮದ್ ಮನ್ಸೂರ್ ಖಾನ್ ವಿರುದ್ಧ ದೂರು ನೀಡಿದ್ದಾರೆ.

ಮುಂದಿನ ಕಥೆ ಏನು? ಜನರ ಹಣ ವಾಪಸ್ ಬರುವುದೇ?
ಈಗಾಗಲೇ ಐಎಂಎ ಕಂಪನಿಯ ನಿರ್ದೇಶಕ ಮಂಡಳಿಯ ಎಲ್ಲಾ ಸದಸ್ಯರನ್ನು ಬಂಧಿಸಲಾಗಿದ್ದು, ಮನ್ಸೂರ್ ಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಈ ಹಣ ವಂಚನೆ ಪ್ರಕರಣಗಳು ಕರ್ನಾಟಕದಲ್ಲಿ ನಡೆಯುತ್ತಿರುವುದು ಇದೇ ಮೊದಲಲ್ಲ. ಕಳೆದ 15 ವರ್ಷಗಳಲ್ಲಿ ಸುಮಾರು 20ಕ್ಕೂ ಹೆಚ್ಚು ವಂಚನೆ ಪ್ರಕರಣಗಳು ದಾಖಲಾಗಿವೆ.

ಇಂತಹ ಮೋಸದ ಕಂಪನಿಗಳ ಮಾತುಗಳಿಗೆ ಮರುಳಾದವರು ಬರೀ ಜನಸಾಮಾನ್ಯರು ಮಾತ್ರವಲ್ಲ. 2002-18ರವರೆಗೆ ವ್ಯವಹಾರ ನಡೆಸುತ್ತಿದ್ದ ವಿಕ್ರಂ ಚಿಟ್ ಫಂಡ್ ಹಗರಣದಲ್ಲಿ ಪ್ರಕಾಶ್ ಪಡುಕೋಣೆ, ರಾಹುಲ್ ದ್ರಾವಿಡ್ ಕೂಡ ಹಣ ಹೂಡಿಕೆ ಮಾಡಿ ಮೋಸ ಹೋಗಿದ್ದಾರೆ. ಆದರೆ ಇವರ್ಯಾರಿಗೂ ಹಣ ಕೈಸೇರಿಲ್ಲ.

ಈ ವರೆಗೂ ಕರ್ನಾಟಕದಲ್ಲಿ ನಡೆದಿರುವ ವಂಚನೆ ಪ್ರಕರಣಗಳ ಕುರಿತು ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ

ಕೃಪೆ: ಪ್ರಜಾವಾಣಿ

ಕಳೆದ ವರ್ಷ ಪ್ರಜಾವಾಣಿಯಲ್ಲಿ ಸುದ್ದಿಯಾದ ವರದಿಯ ಪ್ರಕಾರ 2013-18 ರವರೆಗೆ ಸುಮಾರು 16 ಕಂಪನಿಗಳಿಂದ ಒಟ್ಟು 5,200 ಕೋಟಿ ರೂ ವಂಚನೆಯಾಗಿದೆಯಾಗಿದೆ ಎಂಬುದು ವರದಿಯಾಗಿದೆ.

ಇಷ್ಟೆಲ್ಲಾ ಪ್ರಕರಣಗಳಲ್ಲಿ ಸರ್ಕಾರ ಏನು ಮಾಡುತ್ತಿದೆ?
ಪ್ರತಿ ಪ್ರಕರಣ ಘಟನೆಗಳು ನಡೆದಾಗಲೂ ಸರ್ಕಾರ ತನಿಖೆ ನಡೆಸಲು ಆದೇಶಿಸುತ್ತಿದೆ. ಐಎಂಎ ಪ್ರಕರಣ ಒಳಗೊಂಡಂತೆ ಹಲವಾರು ಪ್ರಕರಣಗಳಲ್ಲಿ ರಾಜಕೀಯ ಮುಖಂಡರು, ಪ್ರಭಾವಿ ವ್ಯಕ್ತಿಗಳ ಕೈವಾಡವು ಇರುವುದು ಕಂಡುಬಂದಿದೆ. ಈ ಬಗ್ಗೆ ಪಕ್ಷಾತೀತವಾಗಿ ತನಿಖೆ ನಡೆಯಬೇಕು. ಈ ಹಿಂದೆ ನಡೆದ ಕೆಲವು ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿದೆ. ಆದರೆ ಜನರಿಗೆ ನ್ಯಾಯ ಸಿಕ್ಕಿರುವುದು ಸಂಶಯವೇ ಸರಿ. ಇಂತಹ ಪ್ರಕರಣಗಳು ನಡೆಯದಂತೆ ತಡೆಗಟ್ಟಲು ಸರ್ಕಾರವು ಯಾವ ನೀತಿಯನ್ನು ಜಾರಿಗೊಳಿಸಿಲ್ಲ.

ಇಷ್ಟೆಲ್ಲಾ ಪ್ರಕರಣಗಳ ಬಗ್ಗೆ ಜನರಿಗೆ ಅರಿವಿದ್ದರೂ ಪದೇ ಪದೇ ಮೋಸ ಹೋಗುತ್ತಿರುವುದೇಕೆ? 
ದಿನಗೂಲಿ ಮಾಡಿ ಬದುಕು ನಡೆಸುತ್ತಿರುವ ಜನರು ತಮ್ಮ ಪುಟ್ಟ ಕನಸುಗಳಿಗಾಗಿ ಹಣ ಕೂಡಿಡುವುದು ಸಾಮಾನ್ಯ. ಹೆಚ್ಚು ಬಡ್ಡಿ ಬರುತ್ತದೆ, ಹಣ ಡಬಲ್ ಮಾಡಿಕೊಡುತ್ತೇವೆ ಎನ್ನುವ ಮೋಸದ ಮಾತುಗಳಿಗೆ ಬಲಿಯಾಗುತ್ತಿದ್ದಾರೆ. ಇನ್ನು ಮುಂದಾದರೂ ಇಂತಹ ವಂಚಕ ಕಂಪನಿಗಳ ಬಗ್ಗೆ ಜನರು ಎಚ್ಚರದಿಂದಿರಬೇಕು.

ಇಂತಹ ಮೋಸದ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡುವವರಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗದ ಜನರೇ ಹೆಚ್ಚು. ಮಕ್ಕಳ ಓದು, ಸ್ವಂತ ಮನೆ ಇವರ ಕನಸಾಗಿರುತ್ತದೆ.  ಹಾಗಾಗಿ ಸರ್ಕಾರ ಜನರ ಮೂಲಭೂತ ಅಗತ್ಯಗಳನ್ನು ಪೂರೈಸಬೇಕು. ದುಡಿಮೆಗೆ ತಕ್ಕ ಪ್ರತಿಫಲ/ಸಂಬಳ ಸಿಕ್ಕರೆ ಜನರು ಹೀಗೆ ಮೋಸ ಹೋಗಲಾರರು. ಉತ್ತಮ ಗುಣಮಟ್ಟದ ಶಿಕ್ಷಣ, ಉಚಿತ ಆರೋಗ್ಯ, ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ, ಬೀದಿ ಬದಿ ವ್ಯಾಪಾರಿಗಳಿಗೆ ಬೇಕಾದ ಮೂಲಭೂತ ಸೌಲಭ್ಯಗಳು ಇವೆಲ್ಲವನ್ನು ಸರ್ಕಾರ ಉಚಿತವಾಗಿ ಒದಗಿಸಿದರೆ ಜನರು ಮೋಸಹೋಗಲಾರರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...