Homeಕರ್ನಾಟಕಮೋಸ ಹೋಗುವ ಮೊದಲು ನೀವಿದನ್ನು ತಿಳಿದುಕೊಂಡಿರಬೇಕು!!!!

ಮೋಸ ಹೋಗುವ ಮೊದಲು ನೀವಿದನ್ನು ತಿಳಿದುಕೊಂಡಿರಬೇಕು!!!!

- Advertisement -
- Advertisement -

| ಮುತ್ತುರಾಜು |

ಐಎಂಎ ಗ್ರೂಪ್ ಆಫ್ ಕಂಪನಿ ಸಾವಿರಾರು ಜನರಿಗೆ ನೂರಾರು ಕೋಟಿ ರೂ ಹಣ ವಂಚನೆ ಮಾಡಿರುವ ಪ್ರಕರಣ ಬಗ್ಗೆ ನಿಮಗೆಲ್ಲಾ ತಿಳಿದಿದೆ. ರಾಜ್ಯದ ನಾನಾ ಮೂಲೆಗಳಿಂದ ಮೋಸ ಹೋಗಿರುವ ಜನರು ಬೆಂಗಳೂರಿಗೆ ಬಂದು ಕಂಪನಿ ವಿರುದ್ಧ ದೂರು ದಾಖಲಿಸುತ್ತಿದ್ದಾರೆ. ಈ ಜನರೆಲ್ಲಾ ಯಾರು? ಹಣ ಹೂಡಿಕೆ ಯಾಕೆ ಮಾಡಿದ್ದರು? ಅಂತಹ ಅಗತ್ಯವೇನಿತ್ತು? ನಿಮಗೆ ಗೊತ್ತೆ?

ದಿನಗೂಲಿ ಕಾರ್ಮಿಕರು, ಕೂಲಿಕಾರರು, ಬೀದಿ ಬದಿ ವ್ಯಾಪಾರಿಗಳು, ಗೃಹಿಣಿಯರು ಹೀಗೆ ನಾನಾ ರೀತಿಯ ಕೆಲಸ ಮಾಡುತ್ತಾ ಜೀವನ ನಡೆಸುತ್ತದ್ದ ಬಡ ಹಾಗೂ ಮಧ್ಯಮ ವರ್ಗದ ಜನರು ಮಕ್ಕಳ ಶಿಕ್ಷಣಕ್ಕಾಗಿ, ಮದುವೆ ಖರ್ಚಿಗಾಗಿ, ಸ್ವಂತ ಮನೆ, ಆಸ್ತಿ, ಜಮೀನು ಮಾಡಿಕೊಳ್ಳಬೇಕೆಂಬ ಕನಸನ್ನಿಟ್ಟುಕೊಂಡ ಇವರು ಹೆಚ್ಚು ಬಡ್ಡಿ ದೊರೆಯುತ್ತದೆ ಎಂಬ ಆಸೆಯಿಂದ ಸಾವಿರದಿಂದ ಕೋಟಿವರೆಗೂ ಹಣವನ್ನು ಹೂಡಿಕೆ ಮಾಡಿದ್ದರು.

ಕಳೆದ ಸೋಮವಾರ ಕಂಪನಿ ಮಾಲೀಕ ಹರಿಬಿಟ್ಟ ಆಡಿಯೋ ಮೂಲಕ ಹೂಡಿಕೆದಾರರಿಗೆ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಧ್ಯಕ್ಕೆ ಕರ್ನಾಟಕ ಸರ್ಕಾರ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಜನರಿಂದ ದೂರುಗಳನ್ನು ದಾಖಲಿಸುತ್ತಿದ್ದಾರೆ. ಈವರೆಗೂ ಸುಮಾರು 11 ಸಾವಿರಕ್ಕೂ ಹೆಚ್ಚು ಜನರು ಮೊಹಮ್ಮದ್ ಮನ್ಸೂರ್ ಖಾನ್ ವಿರುದ್ಧ ದೂರು ನೀಡಿದ್ದಾರೆ.

ಮುಂದಿನ ಕಥೆ ಏನು? ಜನರ ಹಣ ವಾಪಸ್ ಬರುವುದೇ?
ಈಗಾಗಲೇ ಐಎಂಎ ಕಂಪನಿಯ ನಿರ್ದೇಶಕ ಮಂಡಳಿಯ ಎಲ್ಲಾ ಸದಸ್ಯರನ್ನು ಬಂಧಿಸಲಾಗಿದ್ದು, ಮನ್ಸೂರ್ ಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಈ ಹಣ ವಂಚನೆ ಪ್ರಕರಣಗಳು ಕರ್ನಾಟಕದಲ್ಲಿ ನಡೆಯುತ್ತಿರುವುದು ಇದೇ ಮೊದಲಲ್ಲ. ಕಳೆದ 15 ವರ್ಷಗಳಲ್ಲಿ ಸುಮಾರು 20ಕ್ಕೂ ಹೆಚ್ಚು ವಂಚನೆ ಪ್ರಕರಣಗಳು ದಾಖಲಾಗಿವೆ.

ಇಂತಹ ಮೋಸದ ಕಂಪನಿಗಳ ಮಾತುಗಳಿಗೆ ಮರುಳಾದವರು ಬರೀ ಜನಸಾಮಾನ್ಯರು ಮಾತ್ರವಲ್ಲ. 2002-18ರವರೆಗೆ ವ್ಯವಹಾರ ನಡೆಸುತ್ತಿದ್ದ ವಿಕ್ರಂ ಚಿಟ್ ಫಂಡ್ ಹಗರಣದಲ್ಲಿ ಪ್ರಕಾಶ್ ಪಡುಕೋಣೆ, ರಾಹುಲ್ ದ್ರಾವಿಡ್ ಕೂಡ ಹಣ ಹೂಡಿಕೆ ಮಾಡಿ ಮೋಸ ಹೋಗಿದ್ದಾರೆ. ಆದರೆ ಇವರ್ಯಾರಿಗೂ ಹಣ ಕೈಸೇರಿಲ್ಲ.

ಈ ವರೆಗೂ ಕರ್ನಾಟಕದಲ್ಲಿ ನಡೆದಿರುವ ವಂಚನೆ ಪ್ರಕರಣಗಳ ಕುರಿತು ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ

ಕೃಪೆ: ಪ್ರಜಾವಾಣಿ

ಕಳೆದ ವರ್ಷ ಪ್ರಜಾವಾಣಿಯಲ್ಲಿ ಸುದ್ದಿಯಾದ ವರದಿಯ ಪ್ರಕಾರ 2013-18 ರವರೆಗೆ ಸುಮಾರು 16 ಕಂಪನಿಗಳಿಂದ ಒಟ್ಟು 5,200 ಕೋಟಿ ರೂ ವಂಚನೆಯಾಗಿದೆಯಾಗಿದೆ ಎಂಬುದು ವರದಿಯಾಗಿದೆ.

ಇಷ್ಟೆಲ್ಲಾ ಪ್ರಕರಣಗಳಲ್ಲಿ ಸರ್ಕಾರ ಏನು ಮಾಡುತ್ತಿದೆ?
ಪ್ರತಿ ಪ್ರಕರಣ ಘಟನೆಗಳು ನಡೆದಾಗಲೂ ಸರ್ಕಾರ ತನಿಖೆ ನಡೆಸಲು ಆದೇಶಿಸುತ್ತಿದೆ. ಐಎಂಎ ಪ್ರಕರಣ ಒಳಗೊಂಡಂತೆ ಹಲವಾರು ಪ್ರಕರಣಗಳಲ್ಲಿ ರಾಜಕೀಯ ಮುಖಂಡರು, ಪ್ರಭಾವಿ ವ್ಯಕ್ತಿಗಳ ಕೈವಾಡವು ಇರುವುದು ಕಂಡುಬಂದಿದೆ. ಈ ಬಗ್ಗೆ ಪಕ್ಷಾತೀತವಾಗಿ ತನಿಖೆ ನಡೆಯಬೇಕು. ಈ ಹಿಂದೆ ನಡೆದ ಕೆಲವು ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿದೆ. ಆದರೆ ಜನರಿಗೆ ನ್ಯಾಯ ಸಿಕ್ಕಿರುವುದು ಸಂಶಯವೇ ಸರಿ. ಇಂತಹ ಪ್ರಕರಣಗಳು ನಡೆಯದಂತೆ ತಡೆಗಟ್ಟಲು ಸರ್ಕಾರವು ಯಾವ ನೀತಿಯನ್ನು ಜಾರಿಗೊಳಿಸಿಲ್ಲ.

ಇಷ್ಟೆಲ್ಲಾ ಪ್ರಕರಣಗಳ ಬಗ್ಗೆ ಜನರಿಗೆ ಅರಿವಿದ್ದರೂ ಪದೇ ಪದೇ ಮೋಸ ಹೋಗುತ್ತಿರುವುದೇಕೆ? 
ದಿನಗೂಲಿ ಮಾಡಿ ಬದುಕು ನಡೆಸುತ್ತಿರುವ ಜನರು ತಮ್ಮ ಪುಟ್ಟ ಕನಸುಗಳಿಗಾಗಿ ಹಣ ಕೂಡಿಡುವುದು ಸಾಮಾನ್ಯ. ಹೆಚ್ಚು ಬಡ್ಡಿ ಬರುತ್ತದೆ, ಹಣ ಡಬಲ್ ಮಾಡಿಕೊಡುತ್ತೇವೆ ಎನ್ನುವ ಮೋಸದ ಮಾತುಗಳಿಗೆ ಬಲಿಯಾಗುತ್ತಿದ್ದಾರೆ. ಇನ್ನು ಮುಂದಾದರೂ ಇಂತಹ ವಂಚಕ ಕಂಪನಿಗಳ ಬಗ್ಗೆ ಜನರು ಎಚ್ಚರದಿಂದಿರಬೇಕು.

ಇಂತಹ ಮೋಸದ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡುವವರಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗದ ಜನರೇ ಹೆಚ್ಚು. ಮಕ್ಕಳ ಓದು, ಸ್ವಂತ ಮನೆ ಇವರ ಕನಸಾಗಿರುತ್ತದೆ.  ಹಾಗಾಗಿ ಸರ್ಕಾರ ಜನರ ಮೂಲಭೂತ ಅಗತ್ಯಗಳನ್ನು ಪೂರೈಸಬೇಕು. ದುಡಿಮೆಗೆ ತಕ್ಕ ಪ್ರತಿಫಲ/ಸಂಬಳ ಸಿಕ್ಕರೆ ಜನರು ಹೀಗೆ ಮೋಸ ಹೋಗಲಾರರು. ಉತ್ತಮ ಗುಣಮಟ್ಟದ ಶಿಕ್ಷಣ, ಉಚಿತ ಆರೋಗ್ಯ, ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ, ಬೀದಿ ಬದಿ ವ್ಯಾಪಾರಿಗಳಿಗೆ ಬೇಕಾದ ಮೂಲಭೂತ ಸೌಲಭ್ಯಗಳು ಇವೆಲ್ಲವನ್ನು ಸರ್ಕಾರ ಉಚಿತವಾಗಿ ಒದಗಿಸಿದರೆ ಜನರು ಮೋಸಹೋಗಲಾರರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...