Homeಕರ್ನಾಟಕಮೋಸ ಹೋಗುವ ಮೊದಲು ನೀವಿದನ್ನು ತಿಳಿದುಕೊಂಡಿರಬೇಕು!!!!

ಮೋಸ ಹೋಗುವ ಮೊದಲು ನೀವಿದನ್ನು ತಿಳಿದುಕೊಂಡಿರಬೇಕು!!!!

- Advertisement -
- Advertisement -

| ಮುತ್ತುರಾಜು |

ಐಎಂಎ ಗ್ರೂಪ್ ಆಫ್ ಕಂಪನಿ ಸಾವಿರಾರು ಜನರಿಗೆ ನೂರಾರು ಕೋಟಿ ರೂ ಹಣ ವಂಚನೆ ಮಾಡಿರುವ ಪ್ರಕರಣ ಬಗ್ಗೆ ನಿಮಗೆಲ್ಲಾ ತಿಳಿದಿದೆ. ರಾಜ್ಯದ ನಾನಾ ಮೂಲೆಗಳಿಂದ ಮೋಸ ಹೋಗಿರುವ ಜನರು ಬೆಂಗಳೂರಿಗೆ ಬಂದು ಕಂಪನಿ ವಿರುದ್ಧ ದೂರು ದಾಖಲಿಸುತ್ತಿದ್ದಾರೆ. ಈ ಜನರೆಲ್ಲಾ ಯಾರು? ಹಣ ಹೂಡಿಕೆ ಯಾಕೆ ಮಾಡಿದ್ದರು? ಅಂತಹ ಅಗತ್ಯವೇನಿತ್ತು? ನಿಮಗೆ ಗೊತ್ತೆ?

ದಿನಗೂಲಿ ಕಾರ್ಮಿಕರು, ಕೂಲಿಕಾರರು, ಬೀದಿ ಬದಿ ವ್ಯಾಪಾರಿಗಳು, ಗೃಹಿಣಿಯರು ಹೀಗೆ ನಾನಾ ರೀತಿಯ ಕೆಲಸ ಮಾಡುತ್ತಾ ಜೀವನ ನಡೆಸುತ್ತದ್ದ ಬಡ ಹಾಗೂ ಮಧ್ಯಮ ವರ್ಗದ ಜನರು ಮಕ್ಕಳ ಶಿಕ್ಷಣಕ್ಕಾಗಿ, ಮದುವೆ ಖರ್ಚಿಗಾಗಿ, ಸ್ವಂತ ಮನೆ, ಆಸ್ತಿ, ಜಮೀನು ಮಾಡಿಕೊಳ್ಳಬೇಕೆಂಬ ಕನಸನ್ನಿಟ್ಟುಕೊಂಡ ಇವರು ಹೆಚ್ಚು ಬಡ್ಡಿ ದೊರೆಯುತ್ತದೆ ಎಂಬ ಆಸೆಯಿಂದ ಸಾವಿರದಿಂದ ಕೋಟಿವರೆಗೂ ಹಣವನ್ನು ಹೂಡಿಕೆ ಮಾಡಿದ್ದರು.

ಕಳೆದ ಸೋಮವಾರ ಕಂಪನಿ ಮಾಲೀಕ ಹರಿಬಿಟ್ಟ ಆಡಿಯೋ ಮೂಲಕ ಹೂಡಿಕೆದಾರರಿಗೆ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಧ್ಯಕ್ಕೆ ಕರ್ನಾಟಕ ಸರ್ಕಾರ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಜನರಿಂದ ದೂರುಗಳನ್ನು ದಾಖಲಿಸುತ್ತಿದ್ದಾರೆ. ಈವರೆಗೂ ಸುಮಾರು 11 ಸಾವಿರಕ್ಕೂ ಹೆಚ್ಚು ಜನರು ಮೊಹಮ್ಮದ್ ಮನ್ಸೂರ್ ಖಾನ್ ವಿರುದ್ಧ ದೂರು ನೀಡಿದ್ದಾರೆ.

ಮುಂದಿನ ಕಥೆ ಏನು? ಜನರ ಹಣ ವಾಪಸ್ ಬರುವುದೇ?
ಈಗಾಗಲೇ ಐಎಂಎ ಕಂಪನಿಯ ನಿರ್ದೇಶಕ ಮಂಡಳಿಯ ಎಲ್ಲಾ ಸದಸ್ಯರನ್ನು ಬಂಧಿಸಲಾಗಿದ್ದು, ಮನ್ಸೂರ್ ಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಈ ಹಣ ವಂಚನೆ ಪ್ರಕರಣಗಳು ಕರ್ನಾಟಕದಲ್ಲಿ ನಡೆಯುತ್ತಿರುವುದು ಇದೇ ಮೊದಲಲ್ಲ. ಕಳೆದ 15 ವರ್ಷಗಳಲ್ಲಿ ಸುಮಾರು 20ಕ್ಕೂ ಹೆಚ್ಚು ವಂಚನೆ ಪ್ರಕರಣಗಳು ದಾಖಲಾಗಿವೆ.

ಇಂತಹ ಮೋಸದ ಕಂಪನಿಗಳ ಮಾತುಗಳಿಗೆ ಮರುಳಾದವರು ಬರೀ ಜನಸಾಮಾನ್ಯರು ಮಾತ್ರವಲ್ಲ. 2002-18ರವರೆಗೆ ವ್ಯವಹಾರ ನಡೆಸುತ್ತಿದ್ದ ವಿಕ್ರಂ ಚಿಟ್ ಫಂಡ್ ಹಗರಣದಲ್ಲಿ ಪ್ರಕಾಶ್ ಪಡುಕೋಣೆ, ರಾಹುಲ್ ದ್ರಾವಿಡ್ ಕೂಡ ಹಣ ಹೂಡಿಕೆ ಮಾಡಿ ಮೋಸ ಹೋಗಿದ್ದಾರೆ. ಆದರೆ ಇವರ್ಯಾರಿಗೂ ಹಣ ಕೈಸೇರಿಲ್ಲ.

ಈ ವರೆಗೂ ಕರ್ನಾಟಕದಲ್ಲಿ ನಡೆದಿರುವ ವಂಚನೆ ಪ್ರಕರಣಗಳ ಕುರಿತು ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ

ಕೃಪೆ: ಪ್ರಜಾವಾಣಿ

ಕಳೆದ ವರ್ಷ ಪ್ರಜಾವಾಣಿಯಲ್ಲಿ ಸುದ್ದಿಯಾದ ವರದಿಯ ಪ್ರಕಾರ 2013-18 ರವರೆಗೆ ಸುಮಾರು 16 ಕಂಪನಿಗಳಿಂದ ಒಟ್ಟು 5,200 ಕೋಟಿ ರೂ ವಂಚನೆಯಾಗಿದೆಯಾಗಿದೆ ಎಂಬುದು ವರದಿಯಾಗಿದೆ.

ಇಷ್ಟೆಲ್ಲಾ ಪ್ರಕರಣಗಳಲ್ಲಿ ಸರ್ಕಾರ ಏನು ಮಾಡುತ್ತಿದೆ?
ಪ್ರತಿ ಪ್ರಕರಣ ಘಟನೆಗಳು ನಡೆದಾಗಲೂ ಸರ್ಕಾರ ತನಿಖೆ ನಡೆಸಲು ಆದೇಶಿಸುತ್ತಿದೆ. ಐಎಂಎ ಪ್ರಕರಣ ಒಳಗೊಂಡಂತೆ ಹಲವಾರು ಪ್ರಕರಣಗಳಲ್ಲಿ ರಾಜಕೀಯ ಮುಖಂಡರು, ಪ್ರಭಾವಿ ವ್ಯಕ್ತಿಗಳ ಕೈವಾಡವು ಇರುವುದು ಕಂಡುಬಂದಿದೆ. ಈ ಬಗ್ಗೆ ಪಕ್ಷಾತೀತವಾಗಿ ತನಿಖೆ ನಡೆಯಬೇಕು. ಈ ಹಿಂದೆ ನಡೆದ ಕೆಲವು ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿದೆ. ಆದರೆ ಜನರಿಗೆ ನ್ಯಾಯ ಸಿಕ್ಕಿರುವುದು ಸಂಶಯವೇ ಸರಿ. ಇಂತಹ ಪ್ರಕರಣಗಳು ನಡೆಯದಂತೆ ತಡೆಗಟ್ಟಲು ಸರ್ಕಾರವು ಯಾವ ನೀತಿಯನ್ನು ಜಾರಿಗೊಳಿಸಿಲ್ಲ.

ಇಷ್ಟೆಲ್ಲಾ ಪ್ರಕರಣಗಳ ಬಗ್ಗೆ ಜನರಿಗೆ ಅರಿವಿದ್ದರೂ ಪದೇ ಪದೇ ಮೋಸ ಹೋಗುತ್ತಿರುವುದೇಕೆ? 
ದಿನಗೂಲಿ ಮಾಡಿ ಬದುಕು ನಡೆಸುತ್ತಿರುವ ಜನರು ತಮ್ಮ ಪುಟ್ಟ ಕನಸುಗಳಿಗಾಗಿ ಹಣ ಕೂಡಿಡುವುದು ಸಾಮಾನ್ಯ. ಹೆಚ್ಚು ಬಡ್ಡಿ ಬರುತ್ತದೆ, ಹಣ ಡಬಲ್ ಮಾಡಿಕೊಡುತ್ತೇವೆ ಎನ್ನುವ ಮೋಸದ ಮಾತುಗಳಿಗೆ ಬಲಿಯಾಗುತ್ತಿದ್ದಾರೆ. ಇನ್ನು ಮುಂದಾದರೂ ಇಂತಹ ವಂಚಕ ಕಂಪನಿಗಳ ಬಗ್ಗೆ ಜನರು ಎಚ್ಚರದಿಂದಿರಬೇಕು.

ಇಂತಹ ಮೋಸದ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡುವವರಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗದ ಜನರೇ ಹೆಚ್ಚು. ಮಕ್ಕಳ ಓದು, ಸ್ವಂತ ಮನೆ ಇವರ ಕನಸಾಗಿರುತ್ತದೆ.  ಹಾಗಾಗಿ ಸರ್ಕಾರ ಜನರ ಮೂಲಭೂತ ಅಗತ್ಯಗಳನ್ನು ಪೂರೈಸಬೇಕು. ದುಡಿಮೆಗೆ ತಕ್ಕ ಪ್ರತಿಫಲ/ಸಂಬಳ ಸಿಕ್ಕರೆ ಜನರು ಹೀಗೆ ಮೋಸ ಹೋಗಲಾರರು. ಉತ್ತಮ ಗುಣಮಟ್ಟದ ಶಿಕ್ಷಣ, ಉಚಿತ ಆರೋಗ್ಯ, ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ, ಬೀದಿ ಬದಿ ವ್ಯಾಪಾರಿಗಳಿಗೆ ಬೇಕಾದ ಮೂಲಭೂತ ಸೌಲಭ್ಯಗಳು ಇವೆಲ್ಲವನ್ನು ಸರ್ಕಾರ ಉಚಿತವಾಗಿ ಒದಗಿಸಿದರೆ ಜನರು ಮೋಸಹೋಗಲಾರರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...