Homeಕರ್ನಾಟಕಮೋಸ ಹೋಗುವ ಮೊದಲು ನೀವಿದನ್ನು ತಿಳಿದುಕೊಂಡಿರಬೇಕು!!!!

ಮೋಸ ಹೋಗುವ ಮೊದಲು ನೀವಿದನ್ನು ತಿಳಿದುಕೊಂಡಿರಬೇಕು!!!!

- Advertisement -
- Advertisement -

| ಮುತ್ತುರಾಜು |

ಐಎಂಎ ಗ್ರೂಪ್ ಆಫ್ ಕಂಪನಿ ಸಾವಿರಾರು ಜನರಿಗೆ ನೂರಾರು ಕೋಟಿ ರೂ ಹಣ ವಂಚನೆ ಮಾಡಿರುವ ಪ್ರಕರಣ ಬಗ್ಗೆ ನಿಮಗೆಲ್ಲಾ ತಿಳಿದಿದೆ. ರಾಜ್ಯದ ನಾನಾ ಮೂಲೆಗಳಿಂದ ಮೋಸ ಹೋಗಿರುವ ಜನರು ಬೆಂಗಳೂರಿಗೆ ಬಂದು ಕಂಪನಿ ವಿರುದ್ಧ ದೂರು ದಾಖಲಿಸುತ್ತಿದ್ದಾರೆ. ಈ ಜನರೆಲ್ಲಾ ಯಾರು? ಹಣ ಹೂಡಿಕೆ ಯಾಕೆ ಮಾಡಿದ್ದರು? ಅಂತಹ ಅಗತ್ಯವೇನಿತ್ತು? ನಿಮಗೆ ಗೊತ್ತೆ?

ದಿನಗೂಲಿ ಕಾರ್ಮಿಕರು, ಕೂಲಿಕಾರರು, ಬೀದಿ ಬದಿ ವ್ಯಾಪಾರಿಗಳು, ಗೃಹಿಣಿಯರು ಹೀಗೆ ನಾನಾ ರೀತಿಯ ಕೆಲಸ ಮಾಡುತ್ತಾ ಜೀವನ ನಡೆಸುತ್ತದ್ದ ಬಡ ಹಾಗೂ ಮಧ್ಯಮ ವರ್ಗದ ಜನರು ಮಕ್ಕಳ ಶಿಕ್ಷಣಕ್ಕಾಗಿ, ಮದುವೆ ಖರ್ಚಿಗಾಗಿ, ಸ್ವಂತ ಮನೆ, ಆಸ್ತಿ, ಜಮೀನು ಮಾಡಿಕೊಳ್ಳಬೇಕೆಂಬ ಕನಸನ್ನಿಟ್ಟುಕೊಂಡ ಇವರು ಹೆಚ್ಚು ಬಡ್ಡಿ ದೊರೆಯುತ್ತದೆ ಎಂಬ ಆಸೆಯಿಂದ ಸಾವಿರದಿಂದ ಕೋಟಿವರೆಗೂ ಹಣವನ್ನು ಹೂಡಿಕೆ ಮಾಡಿದ್ದರು.

ಕಳೆದ ಸೋಮವಾರ ಕಂಪನಿ ಮಾಲೀಕ ಹರಿಬಿಟ್ಟ ಆಡಿಯೋ ಮೂಲಕ ಹೂಡಿಕೆದಾರರಿಗೆ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಧ್ಯಕ್ಕೆ ಕರ್ನಾಟಕ ಸರ್ಕಾರ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಜನರಿಂದ ದೂರುಗಳನ್ನು ದಾಖಲಿಸುತ್ತಿದ್ದಾರೆ. ಈವರೆಗೂ ಸುಮಾರು 11 ಸಾವಿರಕ್ಕೂ ಹೆಚ್ಚು ಜನರು ಮೊಹಮ್ಮದ್ ಮನ್ಸೂರ್ ಖಾನ್ ವಿರುದ್ಧ ದೂರು ನೀಡಿದ್ದಾರೆ.

ಮುಂದಿನ ಕಥೆ ಏನು? ಜನರ ಹಣ ವಾಪಸ್ ಬರುವುದೇ?
ಈಗಾಗಲೇ ಐಎಂಎ ಕಂಪನಿಯ ನಿರ್ದೇಶಕ ಮಂಡಳಿಯ ಎಲ್ಲಾ ಸದಸ್ಯರನ್ನು ಬಂಧಿಸಲಾಗಿದ್ದು, ಮನ್ಸೂರ್ ಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಈ ಹಣ ವಂಚನೆ ಪ್ರಕರಣಗಳು ಕರ್ನಾಟಕದಲ್ಲಿ ನಡೆಯುತ್ತಿರುವುದು ಇದೇ ಮೊದಲಲ್ಲ. ಕಳೆದ 15 ವರ್ಷಗಳಲ್ಲಿ ಸುಮಾರು 20ಕ್ಕೂ ಹೆಚ್ಚು ವಂಚನೆ ಪ್ರಕರಣಗಳು ದಾಖಲಾಗಿವೆ.

ಇಂತಹ ಮೋಸದ ಕಂಪನಿಗಳ ಮಾತುಗಳಿಗೆ ಮರುಳಾದವರು ಬರೀ ಜನಸಾಮಾನ್ಯರು ಮಾತ್ರವಲ್ಲ. 2002-18ರವರೆಗೆ ವ್ಯವಹಾರ ನಡೆಸುತ್ತಿದ್ದ ವಿಕ್ರಂ ಚಿಟ್ ಫಂಡ್ ಹಗರಣದಲ್ಲಿ ಪ್ರಕಾಶ್ ಪಡುಕೋಣೆ, ರಾಹುಲ್ ದ್ರಾವಿಡ್ ಕೂಡ ಹಣ ಹೂಡಿಕೆ ಮಾಡಿ ಮೋಸ ಹೋಗಿದ್ದಾರೆ. ಆದರೆ ಇವರ್ಯಾರಿಗೂ ಹಣ ಕೈಸೇರಿಲ್ಲ.

ಈ ವರೆಗೂ ಕರ್ನಾಟಕದಲ್ಲಿ ನಡೆದಿರುವ ವಂಚನೆ ಪ್ರಕರಣಗಳ ಕುರಿತು ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ

ಕೃಪೆ: ಪ್ರಜಾವಾಣಿ

ಕಳೆದ ವರ್ಷ ಪ್ರಜಾವಾಣಿಯಲ್ಲಿ ಸುದ್ದಿಯಾದ ವರದಿಯ ಪ್ರಕಾರ 2013-18 ರವರೆಗೆ ಸುಮಾರು 16 ಕಂಪನಿಗಳಿಂದ ಒಟ್ಟು 5,200 ಕೋಟಿ ರೂ ವಂಚನೆಯಾಗಿದೆಯಾಗಿದೆ ಎಂಬುದು ವರದಿಯಾಗಿದೆ.

ಇಷ್ಟೆಲ್ಲಾ ಪ್ರಕರಣಗಳಲ್ಲಿ ಸರ್ಕಾರ ಏನು ಮಾಡುತ್ತಿದೆ?
ಪ್ರತಿ ಪ್ರಕರಣ ಘಟನೆಗಳು ನಡೆದಾಗಲೂ ಸರ್ಕಾರ ತನಿಖೆ ನಡೆಸಲು ಆದೇಶಿಸುತ್ತಿದೆ. ಐಎಂಎ ಪ್ರಕರಣ ಒಳಗೊಂಡಂತೆ ಹಲವಾರು ಪ್ರಕರಣಗಳಲ್ಲಿ ರಾಜಕೀಯ ಮುಖಂಡರು, ಪ್ರಭಾವಿ ವ್ಯಕ್ತಿಗಳ ಕೈವಾಡವು ಇರುವುದು ಕಂಡುಬಂದಿದೆ. ಈ ಬಗ್ಗೆ ಪಕ್ಷಾತೀತವಾಗಿ ತನಿಖೆ ನಡೆಯಬೇಕು. ಈ ಹಿಂದೆ ನಡೆದ ಕೆಲವು ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿದೆ. ಆದರೆ ಜನರಿಗೆ ನ್ಯಾಯ ಸಿಕ್ಕಿರುವುದು ಸಂಶಯವೇ ಸರಿ. ಇಂತಹ ಪ್ರಕರಣಗಳು ನಡೆಯದಂತೆ ತಡೆಗಟ್ಟಲು ಸರ್ಕಾರವು ಯಾವ ನೀತಿಯನ್ನು ಜಾರಿಗೊಳಿಸಿಲ್ಲ.

ಇಷ್ಟೆಲ್ಲಾ ಪ್ರಕರಣಗಳ ಬಗ್ಗೆ ಜನರಿಗೆ ಅರಿವಿದ್ದರೂ ಪದೇ ಪದೇ ಮೋಸ ಹೋಗುತ್ತಿರುವುದೇಕೆ? 
ದಿನಗೂಲಿ ಮಾಡಿ ಬದುಕು ನಡೆಸುತ್ತಿರುವ ಜನರು ತಮ್ಮ ಪುಟ್ಟ ಕನಸುಗಳಿಗಾಗಿ ಹಣ ಕೂಡಿಡುವುದು ಸಾಮಾನ್ಯ. ಹೆಚ್ಚು ಬಡ್ಡಿ ಬರುತ್ತದೆ, ಹಣ ಡಬಲ್ ಮಾಡಿಕೊಡುತ್ತೇವೆ ಎನ್ನುವ ಮೋಸದ ಮಾತುಗಳಿಗೆ ಬಲಿಯಾಗುತ್ತಿದ್ದಾರೆ. ಇನ್ನು ಮುಂದಾದರೂ ಇಂತಹ ವಂಚಕ ಕಂಪನಿಗಳ ಬಗ್ಗೆ ಜನರು ಎಚ್ಚರದಿಂದಿರಬೇಕು.

ಇಂತಹ ಮೋಸದ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡುವವರಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗದ ಜನರೇ ಹೆಚ್ಚು. ಮಕ್ಕಳ ಓದು, ಸ್ವಂತ ಮನೆ ಇವರ ಕನಸಾಗಿರುತ್ತದೆ.  ಹಾಗಾಗಿ ಸರ್ಕಾರ ಜನರ ಮೂಲಭೂತ ಅಗತ್ಯಗಳನ್ನು ಪೂರೈಸಬೇಕು. ದುಡಿಮೆಗೆ ತಕ್ಕ ಪ್ರತಿಫಲ/ಸಂಬಳ ಸಿಕ್ಕರೆ ಜನರು ಹೀಗೆ ಮೋಸ ಹೋಗಲಾರರು. ಉತ್ತಮ ಗುಣಮಟ್ಟದ ಶಿಕ್ಷಣ, ಉಚಿತ ಆರೋಗ್ಯ, ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ, ಬೀದಿ ಬದಿ ವ್ಯಾಪಾರಿಗಳಿಗೆ ಬೇಕಾದ ಮೂಲಭೂತ ಸೌಲಭ್ಯಗಳು ಇವೆಲ್ಲವನ್ನು ಸರ್ಕಾರ ಉಚಿತವಾಗಿ ಒದಗಿಸಿದರೆ ಜನರು ಮೋಸಹೋಗಲಾರರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...