Homeಕರ್ನಾಟಕಮೋಸ ಹೋಗುವ ಮೊದಲು ನೀವಿದನ್ನು ತಿಳಿದುಕೊಂಡಿರಬೇಕು!!!!

ಮೋಸ ಹೋಗುವ ಮೊದಲು ನೀವಿದನ್ನು ತಿಳಿದುಕೊಂಡಿರಬೇಕು!!!!

- Advertisement -
- Advertisement -

| ಮುತ್ತುರಾಜು |

ಐಎಂಎ ಗ್ರೂಪ್ ಆಫ್ ಕಂಪನಿ ಸಾವಿರಾರು ಜನರಿಗೆ ನೂರಾರು ಕೋಟಿ ರೂ ಹಣ ವಂಚನೆ ಮಾಡಿರುವ ಪ್ರಕರಣ ಬಗ್ಗೆ ನಿಮಗೆಲ್ಲಾ ತಿಳಿದಿದೆ. ರಾಜ್ಯದ ನಾನಾ ಮೂಲೆಗಳಿಂದ ಮೋಸ ಹೋಗಿರುವ ಜನರು ಬೆಂಗಳೂರಿಗೆ ಬಂದು ಕಂಪನಿ ವಿರುದ್ಧ ದೂರು ದಾಖಲಿಸುತ್ತಿದ್ದಾರೆ. ಈ ಜನರೆಲ್ಲಾ ಯಾರು? ಹಣ ಹೂಡಿಕೆ ಯಾಕೆ ಮಾಡಿದ್ದರು? ಅಂತಹ ಅಗತ್ಯವೇನಿತ್ತು? ನಿಮಗೆ ಗೊತ್ತೆ?

ದಿನಗೂಲಿ ಕಾರ್ಮಿಕರು, ಕೂಲಿಕಾರರು, ಬೀದಿ ಬದಿ ವ್ಯಾಪಾರಿಗಳು, ಗೃಹಿಣಿಯರು ಹೀಗೆ ನಾನಾ ರೀತಿಯ ಕೆಲಸ ಮಾಡುತ್ತಾ ಜೀವನ ನಡೆಸುತ್ತದ್ದ ಬಡ ಹಾಗೂ ಮಧ್ಯಮ ವರ್ಗದ ಜನರು ಮಕ್ಕಳ ಶಿಕ್ಷಣಕ್ಕಾಗಿ, ಮದುವೆ ಖರ್ಚಿಗಾಗಿ, ಸ್ವಂತ ಮನೆ, ಆಸ್ತಿ, ಜಮೀನು ಮಾಡಿಕೊಳ್ಳಬೇಕೆಂಬ ಕನಸನ್ನಿಟ್ಟುಕೊಂಡ ಇವರು ಹೆಚ್ಚು ಬಡ್ಡಿ ದೊರೆಯುತ್ತದೆ ಎಂಬ ಆಸೆಯಿಂದ ಸಾವಿರದಿಂದ ಕೋಟಿವರೆಗೂ ಹಣವನ್ನು ಹೂಡಿಕೆ ಮಾಡಿದ್ದರು.

ಕಳೆದ ಸೋಮವಾರ ಕಂಪನಿ ಮಾಲೀಕ ಹರಿಬಿಟ್ಟ ಆಡಿಯೋ ಮೂಲಕ ಹೂಡಿಕೆದಾರರಿಗೆ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಧ್ಯಕ್ಕೆ ಕರ್ನಾಟಕ ಸರ್ಕಾರ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಜನರಿಂದ ದೂರುಗಳನ್ನು ದಾಖಲಿಸುತ್ತಿದ್ದಾರೆ. ಈವರೆಗೂ ಸುಮಾರು 11 ಸಾವಿರಕ್ಕೂ ಹೆಚ್ಚು ಜನರು ಮೊಹಮ್ಮದ್ ಮನ್ಸೂರ್ ಖಾನ್ ವಿರುದ್ಧ ದೂರು ನೀಡಿದ್ದಾರೆ.

ಮುಂದಿನ ಕಥೆ ಏನು? ಜನರ ಹಣ ವಾಪಸ್ ಬರುವುದೇ?
ಈಗಾಗಲೇ ಐಎಂಎ ಕಂಪನಿಯ ನಿರ್ದೇಶಕ ಮಂಡಳಿಯ ಎಲ್ಲಾ ಸದಸ್ಯರನ್ನು ಬಂಧಿಸಲಾಗಿದ್ದು, ಮನ್ಸೂರ್ ಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಈ ಹಣ ವಂಚನೆ ಪ್ರಕರಣಗಳು ಕರ್ನಾಟಕದಲ್ಲಿ ನಡೆಯುತ್ತಿರುವುದು ಇದೇ ಮೊದಲಲ್ಲ. ಕಳೆದ 15 ವರ್ಷಗಳಲ್ಲಿ ಸುಮಾರು 20ಕ್ಕೂ ಹೆಚ್ಚು ವಂಚನೆ ಪ್ರಕರಣಗಳು ದಾಖಲಾಗಿವೆ.

ಇಂತಹ ಮೋಸದ ಕಂಪನಿಗಳ ಮಾತುಗಳಿಗೆ ಮರುಳಾದವರು ಬರೀ ಜನಸಾಮಾನ್ಯರು ಮಾತ್ರವಲ್ಲ. 2002-18ರವರೆಗೆ ವ್ಯವಹಾರ ನಡೆಸುತ್ತಿದ್ದ ವಿಕ್ರಂ ಚಿಟ್ ಫಂಡ್ ಹಗರಣದಲ್ಲಿ ಪ್ರಕಾಶ್ ಪಡುಕೋಣೆ, ರಾಹುಲ್ ದ್ರಾವಿಡ್ ಕೂಡ ಹಣ ಹೂಡಿಕೆ ಮಾಡಿ ಮೋಸ ಹೋಗಿದ್ದಾರೆ. ಆದರೆ ಇವರ್ಯಾರಿಗೂ ಹಣ ಕೈಸೇರಿಲ್ಲ.

ಈ ವರೆಗೂ ಕರ್ನಾಟಕದಲ್ಲಿ ನಡೆದಿರುವ ವಂಚನೆ ಪ್ರಕರಣಗಳ ಕುರಿತು ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ

ಕೃಪೆ: ಪ್ರಜಾವಾಣಿ

ಕಳೆದ ವರ್ಷ ಪ್ರಜಾವಾಣಿಯಲ್ಲಿ ಸುದ್ದಿಯಾದ ವರದಿಯ ಪ್ರಕಾರ 2013-18 ರವರೆಗೆ ಸುಮಾರು 16 ಕಂಪನಿಗಳಿಂದ ಒಟ್ಟು 5,200 ಕೋಟಿ ರೂ ವಂಚನೆಯಾಗಿದೆಯಾಗಿದೆ ಎಂಬುದು ವರದಿಯಾಗಿದೆ.

ಇಷ್ಟೆಲ್ಲಾ ಪ್ರಕರಣಗಳಲ್ಲಿ ಸರ್ಕಾರ ಏನು ಮಾಡುತ್ತಿದೆ?
ಪ್ರತಿ ಪ್ರಕರಣ ಘಟನೆಗಳು ನಡೆದಾಗಲೂ ಸರ್ಕಾರ ತನಿಖೆ ನಡೆಸಲು ಆದೇಶಿಸುತ್ತಿದೆ. ಐಎಂಎ ಪ್ರಕರಣ ಒಳಗೊಂಡಂತೆ ಹಲವಾರು ಪ್ರಕರಣಗಳಲ್ಲಿ ರಾಜಕೀಯ ಮುಖಂಡರು, ಪ್ರಭಾವಿ ವ್ಯಕ್ತಿಗಳ ಕೈವಾಡವು ಇರುವುದು ಕಂಡುಬಂದಿದೆ. ಈ ಬಗ್ಗೆ ಪಕ್ಷಾತೀತವಾಗಿ ತನಿಖೆ ನಡೆಯಬೇಕು. ಈ ಹಿಂದೆ ನಡೆದ ಕೆಲವು ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿದೆ. ಆದರೆ ಜನರಿಗೆ ನ್ಯಾಯ ಸಿಕ್ಕಿರುವುದು ಸಂಶಯವೇ ಸರಿ. ಇಂತಹ ಪ್ರಕರಣಗಳು ನಡೆಯದಂತೆ ತಡೆಗಟ್ಟಲು ಸರ್ಕಾರವು ಯಾವ ನೀತಿಯನ್ನು ಜಾರಿಗೊಳಿಸಿಲ್ಲ.

ಇಷ್ಟೆಲ್ಲಾ ಪ್ರಕರಣಗಳ ಬಗ್ಗೆ ಜನರಿಗೆ ಅರಿವಿದ್ದರೂ ಪದೇ ಪದೇ ಮೋಸ ಹೋಗುತ್ತಿರುವುದೇಕೆ? 
ದಿನಗೂಲಿ ಮಾಡಿ ಬದುಕು ನಡೆಸುತ್ತಿರುವ ಜನರು ತಮ್ಮ ಪುಟ್ಟ ಕನಸುಗಳಿಗಾಗಿ ಹಣ ಕೂಡಿಡುವುದು ಸಾಮಾನ್ಯ. ಹೆಚ್ಚು ಬಡ್ಡಿ ಬರುತ್ತದೆ, ಹಣ ಡಬಲ್ ಮಾಡಿಕೊಡುತ್ತೇವೆ ಎನ್ನುವ ಮೋಸದ ಮಾತುಗಳಿಗೆ ಬಲಿಯಾಗುತ್ತಿದ್ದಾರೆ. ಇನ್ನು ಮುಂದಾದರೂ ಇಂತಹ ವಂಚಕ ಕಂಪನಿಗಳ ಬಗ್ಗೆ ಜನರು ಎಚ್ಚರದಿಂದಿರಬೇಕು.

ಇಂತಹ ಮೋಸದ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡುವವರಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗದ ಜನರೇ ಹೆಚ್ಚು. ಮಕ್ಕಳ ಓದು, ಸ್ವಂತ ಮನೆ ಇವರ ಕನಸಾಗಿರುತ್ತದೆ.  ಹಾಗಾಗಿ ಸರ್ಕಾರ ಜನರ ಮೂಲಭೂತ ಅಗತ್ಯಗಳನ್ನು ಪೂರೈಸಬೇಕು. ದುಡಿಮೆಗೆ ತಕ್ಕ ಪ್ರತಿಫಲ/ಸಂಬಳ ಸಿಕ್ಕರೆ ಜನರು ಹೀಗೆ ಮೋಸ ಹೋಗಲಾರರು. ಉತ್ತಮ ಗುಣಮಟ್ಟದ ಶಿಕ್ಷಣ, ಉಚಿತ ಆರೋಗ್ಯ, ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ, ಬೀದಿ ಬದಿ ವ್ಯಾಪಾರಿಗಳಿಗೆ ಬೇಕಾದ ಮೂಲಭೂತ ಸೌಲಭ್ಯಗಳು ಇವೆಲ್ಲವನ್ನು ಸರ್ಕಾರ ಉಚಿತವಾಗಿ ಒದಗಿಸಿದರೆ ಜನರು ಮೋಸಹೋಗಲಾರರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...