Homeಮುಖಪುಟಉಕ್ರೇನ್‌ನಿಂದ ಹಿಂತಿರುಗುತ್ತಿರೋ ವಿದ್ಯಾರ್ಥಿಗಳನ್ನು ದೇಶದ ವೈದ್ಯಕೀಯ ಕಾಲೇಜುಗಳಿಗೆ ದಾಖಲಿಸಿ: ವೈದ್ಯಕೀಯ ಸಂಘ

ಉಕ್ರೇನ್‌ನಿಂದ ಹಿಂತಿರುಗುತ್ತಿರೋ ವಿದ್ಯಾರ್ಥಿಗಳನ್ನು ದೇಶದ ವೈದ್ಯಕೀಯ ಕಾಲೇಜುಗಳಿಗೆ ದಾಖಲಿಸಿ: ವೈದ್ಯಕೀಯ ಸಂಘ

ಛತ್ತೀಸ್‌ಗಢದ ಆರೋಗ್ಯ ಸಚಿವ ಟಿ.ಎಸ್. ಸಿಂಗ್ ದೇವ್ ಕೂಡ ಇದೇ ಮನವಿಯನ್ನು ಒಕ್ಕೂಟ ಸರ್ಕಾರದ ಮುಂದಿಟ್ಟಿದ್ದಾರೆ.

- Advertisement -
- Advertisement -

ಉಕ್ರೇನ್‌ನಿಂದ ಹಿಂದಿರುಗುವ ಭಾರತೀಯ ವೈದ್ಯಕೀಯ ವಿದ್ಯಾರ್ಥಿಗಳನ್ನು ದೇಶದ ವೈದ್ಯಕೀಯ ಕಾಲೇಜುಗಳಿಗೆ ದಾಖಲಿಸುವಂತೆ ಭಾರತೀಯ ವೈದ್ಯಕೀಯ ಸಂಘ ಮತ್ತು ಛತ್ತೀಸ್‌ಗಢದ ಆರೋಗ್ಯ ಸಚಿವ ಟಿ.ಎಸ್. ಸಿಂಗ್ ದೇವ್ ಶುಕ್ರವಾರ ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಪಡೆಯಲು ಸಾವಿರಾರು ಭಾರತೀಯ ವಿದ್ಯಾರ್ಥಿಗಳು ಉಕ್ರೇನ್‌ಗೆ ತೆರಳುತ್ತಾರೆ. ಫೆಬ್ರವರಿ 24 ರಂದು ಉಕ್ರೇನ್ ಮೇಲಿನ ರಷ್ಯಾದ ಆಕ್ರಮಣದಿಂದಾಗಿ, ಅಲ್ಲಿ ಶಿಕ್ಷಣ ಪಡೆಯುತ್ತಿರುವ ಅನೇಕ ಭಾರತೀಯ ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿಕೊಂಡಿದ್ದಾರೆ. ಅದರಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗುಂಡೇಟು ತಗುಲಿದೆ. ಹೆಚ್ಚಿನವರನ್ನು ಸ್ಥಳಾಂತರಿಸಲಾಗುತ್ತಿದೆ.

ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಭಾರತೀಯ ವೈದ್ಯಕೀಯ ಸಂಘವು, “ಈಗ ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳು ತಮ್ಮ ಬ್ಯಾಚುಲರ್ ಆಫ್ ಮೆಡಿಸಿನ್, ಬ್ಯಾಚುಲರ್ ಆಫ್ ಸರ್ಜರಿ ಅಥವಾ ಎಂಬಿಬಿಎಸ್ ಕೋರ್ಸ್‌ನ ಉಳಿದ ಅವಧಿಗೆ ವೈದ್ಯಕೀಯ ಕಾಲೇಜುಗಳಿಗೆ ದಾಖಲಾಗಲು ಅವಕಾಶ ನೀಡಬೇಕು” ಎಂದು ಮನವಿ ಮಾಡಿದೆ.

ವೈದ್ಯಕೀಯ ಸಂಸ್ಥೆಗಳಲ್ಲಿ ಇದನ್ನು ವಿದ್ಯಾರ್ಥಿಗಳ ವಾರ್ಷಿಕ ದಾಖಲಾತಿ ಸಾಮರ್ಥ್ಯದ ಹೆಚ್ಚಳವಾಗಿ ನೋಡಬಾರದು.”ಒಂದು ಬಾರಿ ವಿನಾಯಿತಿ” ಎಂದು ಪರಿಗಣಿಸಬೇಕು. ಇದಕ್ಕಾಗಿ, ವಿದ್ಯಾರ್ಥಿಗಳು ಮೂಲತಃ ಉಕ್ರೇನ್‌ನಲ್ಲಿ ಪ್ರವೇಶ ಪಡೆದ ವೈದ್ಯಕೀಯ ಕಾಳೇಜುಗಳ ಅಧಿಕಾರಿಗಳು ಮಾಡಿದ ಮೌಲ್ಯೀಕರಣ ಪ್ರಮಾಣಪತ್ರವನ್ನು ಹಾಜರುಪಡಿಸಬೇಕಾಗುತ್ತದೆ ಎಂದು ವೈದ್ಯಕೀಯ ಸಂಘ ಹೇಳಿದೆ.

ಇದನ್ನೂ ಓದಿ: ಟಾಯ್ಲೆಟ್‌ ಕ್ಲೀನ್‌ ಮಾಡಿದ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತೇವೆ ಎಂದ ರಾಯಭಾರಿ ಕಚೇರಿ: ಆರೋಪ

ಇದರ ಜೊತೆಗೆ “ಇಲ್ಲಿ ಉತ್ತೀರ್ಣರಾದ ನಂತರ ಅವರು ಭಾರತೀಯ ವೈದ್ಯಕೀಯ ಪದವೀಧರರಾತ್ತಾರೆಯೇ ಹೊರತು ವಿದೇಶಿ ವೈದ್ಯಕೀಯ ಪದವೀಧರರಲ್ಲ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಭಾರತದಿಂದ ಉಕ್ರೇನ್‌ಗೆ ವೈದ್ಯಕೀಯ ಶಿಕ್ಷಣ ಪಡೆಯಲು ತೆರಳಲು ಕಾರಣ, ಅಲ್ಲಿ ವೈದ್ಯಕೀಯ ಶಿಕ್ಷಣ ಅಗ್ಗವಾಗಿದೆ. ಇದಲ್ಲದೆ, ವೈದ್ಯಕೀಯ ಕೋರ್ಸ್‌ಗಳ ಸೀಟುಗಳ ಸಂಖ್ಯೆಯು ಭಾರತಕ್ಕಿಂತ ಉಕ್ರೇನ್‌ನಲ್ಲಿ ಹೆಚ್ಚಾಗಿದೆ. ಅಲ್ಲಿಂದ ಹಿಂದಿರುಗಿದ ವಿದ್ಯಾರ್ಥಿಗಳು ಭಾರತದಲ್ಲಿ ವೈದ್ಯರಾಗಿ ಅಭ್ಯಾಸ ಮಾಡಲು ವಿದೇಶಿ ವೈದ್ಯಕೀಯ ಪದವೀಧರರ ಪರೀಕ್ಷೆ ಅಥವಾ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ ಸ್ಕ್ರೀನಿಂಗ್ ಟೆಸ್ಟ್ ಎಂದೂ ಕರೆಯಲ್ಪಡುವ ಪರೀಕ್ಷೆಗಳಲ್ಲಿ ಅರ್ಹರಾಗಬೇಕು.

ಸಂಘದ ಪ್ರಧಾನ ಕಾರ್ಯದರ್ಶಿ ಡಾ. ಜಯೇಶ್ ಲೇಲೆ ಅವರನ್ನು ಉಲ್ಲೇಖಿಸಿರುವ ಮಿಂಟ್, “ಭಾರತದಲ್ಲಿ ಸುಮಾರು 500 ವೈದ್ಯಕೀಯ ಕಾಲೇಜುಗಳಿದ್ದು, ಪ್ರತಿ ವರ್ಷ 70,000 ರಿಂದ 80,000 ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಾರೆ. ವಿದ್ಯಾರ್ಥಿಗಳ ವೃತ್ತಿಜೀವನವು ಹಾಳಾಗದಂತೆ ತಾತ್ಕಾಲಿಕವಾಗಿ ಸೀಟುಗಳನ್ನು ತಿದ್ದುಪಡಿ ಮಾಡಲು ಮತ್ತು ಹೆಚ್ಚಿಸಲು ಸರ್ಕಾರ ಮತ್ತು ರಾಷ್ಟ್ರೀಯ ವೈದ್ಯಕೀಯ ಆಯೋಗ ಕ್ರಮ ಕೈಗೊಳ್ಳಬೇಕು” ಎಂದಿದ್ದಾರೆ.

ಇನ್ನು, ಯುದ್ಧ ಪೀಡಿತ ಉಕ್ರೇನ್‌ನಿಂದ ವಾಪಸಾಗುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ದೇಶದ ವೈದ್ಯಕೀಯ ಕಾಲೇಜುಗಳಿಗೆ ದಾಖಲಾಗಲು ಅವಕಾಶ ನೀಡುವಂತೆ ಛತ್ತೀಸ್‌ಗಢದ ಆರೋಗ್ಯ ಸಚಿವ ಟಿ.ಎಸ್. ಸಿಂಗ್ ದೇವ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಬರೆದ ಪತ್ರದಲ್ಲಿ ಸಿಂಗ್ ಡಿಯೋ ಈ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಜೊತೆಗೆ, ಇಂಟರ್ನ್‌ಶಿಪ್ ಮುಗಿಸದ ವಿದೇಶಿ ವಿದ್ಯಾರ್ಥಿಗಳು ವಿದೇಶಿ ವೈದ್ಯಕೀಯ ಪದವೀಧರರ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಅವರು ಭಾರತದಲ್ಲಿ ಅದನ್ನು ಮುಗಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗವು ಅನುಮತಿ ನೀಡಿದೆ ಎಂದು ಎಎನ್‌ಐ ವರದಿ ಮಾಡಿದೆ.


ಇದನ್ನೂ ಓದಿ: ಉಕ್ರೇನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳಿಗೆ ಆಪದ್ಬಾಂಧವನಾದ ನಟ ಸೋನು ಸೂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...

ಬುರ್ಖಾ ಧರಿಸದ ಕಾರಣಕ್ಕೆ ಪತ್ನಿ-ಮಕ್ಕಳ ಕೊಲೆ; ಮನೆಯೊಳಗೆ ಹೂತುಹಾಕಿದ ವ್ಯಕ್ತಿ

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಘೋರ ಘಟನೆಯಿಂದು ವರದಿಯಾಗಿದೆ, ತನ್ನ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ತ್ರಿವಳಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಫಾರೂಕ್ ಎಂದು...