Homeಮುಖಪುಟಉಕ್ರೇನ್‌ನಿಂದ ಹಿಂತಿರುಗುತ್ತಿರೋ ವಿದ್ಯಾರ್ಥಿಗಳನ್ನು ದೇಶದ ವೈದ್ಯಕೀಯ ಕಾಲೇಜುಗಳಿಗೆ ದಾಖಲಿಸಿ: ವೈದ್ಯಕೀಯ ಸಂಘ

ಉಕ್ರೇನ್‌ನಿಂದ ಹಿಂತಿರುಗುತ್ತಿರೋ ವಿದ್ಯಾರ್ಥಿಗಳನ್ನು ದೇಶದ ವೈದ್ಯಕೀಯ ಕಾಲೇಜುಗಳಿಗೆ ದಾಖಲಿಸಿ: ವೈದ್ಯಕೀಯ ಸಂಘ

ಛತ್ತೀಸ್‌ಗಢದ ಆರೋಗ್ಯ ಸಚಿವ ಟಿ.ಎಸ್. ಸಿಂಗ್ ದೇವ್ ಕೂಡ ಇದೇ ಮನವಿಯನ್ನು ಒಕ್ಕೂಟ ಸರ್ಕಾರದ ಮುಂದಿಟ್ಟಿದ್ದಾರೆ.

- Advertisement -
- Advertisement -

ಉಕ್ರೇನ್‌ನಿಂದ ಹಿಂದಿರುಗುವ ಭಾರತೀಯ ವೈದ್ಯಕೀಯ ವಿದ್ಯಾರ್ಥಿಗಳನ್ನು ದೇಶದ ವೈದ್ಯಕೀಯ ಕಾಲೇಜುಗಳಿಗೆ ದಾಖಲಿಸುವಂತೆ ಭಾರತೀಯ ವೈದ್ಯಕೀಯ ಸಂಘ ಮತ್ತು ಛತ್ತೀಸ್‌ಗಢದ ಆರೋಗ್ಯ ಸಚಿವ ಟಿ.ಎಸ್. ಸಿಂಗ್ ದೇವ್ ಶುಕ್ರವಾರ ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಪಡೆಯಲು ಸಾವಿರಾರು ಭಾರತೀಯ ವಿದ್ಯಾರ್ಥಿಗಳು ಉಕ್ರೇನ್‌ಗೆ ತೆರಳುತ್ತಾರೆ. ಫೆಬ್ರವರಿ 24 ರಂದು ಉಕ್ರೇನ್ ಮೇಲಿನ ರಷ್ಯಾದ ಆಕ್ರಮಣದಿಂದಾಗಿ, ಅಲ್ಲಿ ಶಿಕ್ಷಣ ಪಡೆಯುತ್ತಿರುವ ಅನೇಕ ಭಾರತೀಯ ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿಕೊಂಡಿದ್ದಾರೆ. ಅದರಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗುಂಡೇಟು ತಗುಲಿದೆ. ಹೆಚ್ಚಿನವರನ್ನು ಸ್ಥಳಾಂತರಿಸಲಾಗುತ್ತಿದೆ.

ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಭಾರತೀಯ ವೈದ್ಯಕೀಯ ಸಂಘವು, “ಈಗ ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳು ತಮ್ಮ ಬ್ಯಾಚುಲರ್ ಆಫ್ ಮೆಡಿಸಿನ್, ಬ್ಯಾಚುಲರ್ ಆಫ್ ಸರ್ಜರಿ ಅಥವಾ ಎಂಬಿಬಿಎಸ್ ಕೋರ್ಸ್‌ನ ಉಳಿದ ಅವಧಿಗೆ ವೈದ್ಯಕೀಯ ಕಾಲೇಜುಗಳಿಗೆ ದಾಖಲಾಗಲು ಅವಕಾಶ ನೀಡಬೇಕು” ಎಂದು ಮನವಿ ಮಾಡಿದೆ.

ವೈದ್ಯಕೀಯ ಸಂಸ್ಥೆಗಳಲ್ಲಿ ಇದನ್ನು ವಿದ್ಯಾರ್ಥಿಗಳ ವಾರ್ಷಿಕ ದಾಖಲಾತಿ ಸಾಮರ್ಥ್ಯದ ಹೆಚ್ಚಳವಾಗಿ ನೋಡಬಾರದು.”ಒಂದು ಬಾರಿ ವಿನಾಯಿತಿ” ಎಂದು ಪರಿಗಣಿಸಬೇಕು. ಇದಕ್ಕಾಗಿ, ವಿದ್ಯಾರ್ಥಿಗಳು ಮೂಲತಃ ಉಕ್ರೇನ್‌ನಲ್ಲಿ ಪ್ರವೇಶ ಪಡೆದ ವೈದ್ಯಕೀಯ ಕಾಳೇಜುಗಳ ಅಧಿಕಾರಿಗಳು ಮಾಡಿದ ಮೌಲ್ಯೀಕರಣ ಪ್ರಮಾಣಪತ್ರವನ್ನು ಹಾಜರುಪಡಿಸಬೇಕಾಗುತ್ತದೆ ಎಂದು ವೈದ್ಯಕೀಯ ಸಂಘ ಹೇಳಿದೆ.

ಇದನ್ನೂ ಓದಿ: ಟಾಯ್ಲೆಟ್‌ ಕ್ಲೀನ್‌ ಮಾಡಿದ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತೇವೆ ಎಂದ ರಾಯಭಾರಿ ಕಚೇರಿ: ಆರೋಪ

ಇದರ ಜೊತೆಗೆ “ಇಲ್ಲಿ ಉತ್ತೀರ್ಣರಾದ ನಂತರ ಅವರು ಭಾರತೀಯ ವೈದ್ಯಕೀಯ ಪದವೀಧರರಾತ್ತಾರೆಯೇ ಹೊರತು ವಿದೇಶಿ ವೈದ್ಯಕೀಯ ಪದವೀಧರರಲ್ಲ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಭಾರತದಿಂದ ಉಕ್ರೇನ್‌ಗೆ ವೈದ್ಯಕೀಯ ಶಿಕ್ಷಣ ಪಡೆಯಲು ತೆರಳಲು ಕಾರಣ, ಅಲ್ಲಿ ವೈದ್ಯಕೀಯ ಶಿಕ್ಷಣ ಅಗ್ಗವಾಗಿದೆ. ಇದಲ್ಲದೆ, ವೈದ್ಯಕೀಯ ಕೋರ್ಸ್‌ಗಳ ಸೀಟುಗಳ ಸಂಖ್ಯೆಯು ಭಾರತಕ್ಕಿಂತ ಉಕ್ರೇನ್‌ನಲ್ಲಿ ಹೆಚ್ಚಾಗಿದೆ. ಅಲ್ಲಿಂದ ಹಿಂದಿರುಗಿದ ವಿದ್ಯಾರ್ಥಿಗಳು ಭಾರತದಲ್ಲಿ ವೈದ್ಯರಾಗಿ ಅಭ್ಯಾಸ ಮಾಡಲು ವಿದೇಶಿ ವೈದ್ಯಕೀಯ ಪದವೀಧರರ ಪರೀಕ್ಷೆ ಅಥವಾ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ ಸ್ಕ್ರೀನಿಂಗ್ ಟೆಸ್ಟ್ ಎಂದೂ ಕರೆಯಲ್ಪಡುವ ಪರೀಕ್ಷೆಗಳಲ್ಲಿ ಅರ್ಹರಾಗಬೇಕು.

ಸಂಘದ ಪ್ರಧಾನ ಕಾರ್ಯದರ್ಶಿ ಡಾ. ಜಯೇಶ್ ಲೇಲೆ ಅವರನ್ನು ಉಲ್ಲೇಖಿಸಿರುವ ಮಿಂಟ್, “ಭಾರತದಲ್ಲಿ ಸುಮಾರು 500 ವೈದ್ಯಕೀಯ ಕಾಲೇಜುಗಳಿದ್ದು, ಪ್ರತಿ ವರ್ಷ 70,000 ರಿಂದ 80,000 ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಾರೆ. ವಿದ್ಯಾರ್ಥಿಗಳ ವೃತ್ತಿಜೀವನವು ಹಾಳಾಗದಂತೆ ತಾತ್ಕಾಲಿಕವಾಗಿ ಸೀಟುಗಳನ್ನು ತಿದ್ದುಪಡಿ ಮಾಡಲು ಮತ್ತು ಹೆಚ್ಚಿಸಲು ಸರ್ಕಾರ ಮತ್ತು ರಾಷ್ಟ್ರೀಯ ವೈದ್ಯಕೀಯ ಆಯೋಗ ಕ್ರಮ ಕೈಗೊಳ್ಳಬೇಕು” ಎಂದಿದ್ದಾರೆ.

ಇನ್ನು, ಯುದ್ಧ ಪೀಡಿತ ಉಕ್ರೇನ್‌ನಿಂದ ವಾಪಸಾಗುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ದೇಶದ ವೈದ್ಯಕೀಯ ಕಾಲೇಜುಗಳಿಗೆ ದಾಖಲಾಗಲು ಅವಕಾಶ ನೀಡುವಂತೆ ಛತ್ತೀಸ್‌ಗಢದ ಆರೋಗ್ಯ ಸಚಿವ ಟಿ.ಎಸ್. ಸಿಂಗ್ ದೇವ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಬರೆದ ಪತ್ರದಲ್ಲಿ ಸಿಂಗ್ ಡಿಯೋ ಈ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಜೊತೆಗೆ, ಇಂಟರ್ನ್‌ಶಿಪ್ ಮುಗಿಸದ ವಿದೇಶಿ ವಿದ್ಯಾರ್ಥಿಗಳು ವಿದೇಶಿ ವೈದ್ಯಕೀಯ ಪದವೀಧರರ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಅವರು ಭಾರತದಲ್ಲಿ ಅದನ್ನು ಮುಗಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗವು ಅನುಮತಿ ನೀಡಿದೆ ಎಂದು ಎಎನ್‌ಐ ವರದಿ ಮಾಡಿದೆ.


ಇದನ್ನೂ ಓದಿ: ಉಕ್ರೇನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳಿಗೆ ಆಪದ್ಬಾಂಧವನಾದ ನಟ ಸೋನು ಸೂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...