Homeಮುಖಪುಟಉಕ್ರೇನ್‌ನಿಂದ ಹಿಂತಿರುಗುತ್ತಿರೋ ವಿದ್ಯಾರ್ಥಿಗಳನ್ನು ದೇಶದ ವೈದ್ಯಕೀಯ ಕಾಲೇಜುಗಳಿಗೆ ದಾಖಲಿಸಿ: ವೈದ್ಯಕೀಯ ಸಂಘ

ಉಕ್ರೇನ್‌ನಿಂದ ಹಿಂತಿರುಗುತ್ತಿರೋ ವಿದ್ಯಾರ್ಥಿಗಳನ್ನು ದೇಶದ ವೈದ್ಯಕೀಯ ಕಾಲೇಜುಗಳಿಗೆ ದಾಖಲಿಸಿ: ವೈದ್ಯಕೀಯ ಸಂಘ

ಛತ್ತೀಸ್‌ಗಢದ ಆರೋಗ್ಯ ಸಚಿವ ಟಿ.ಎಸ್. ಸಿಂಗ್ ದೇವ್ ಕೂಡ ಇದೇ ಮನವಿಯನ್ನು ಒಕ್ಕೂಟ ಸರ್ಕಾರದ ಮುಂದಿಟ್ಟಿದ್ದಾರೆ.

- Advertisement -
- Advertisement -

ಉಕ್ರೇನ್‌ನಿಂದ ಹಿಂದಿರುಗುವ ಭಾರತೀಯ ವೈದ್ಯಕೀಯ ವಿದ್ಯಾರ್ಥಿಗಳನ್ನು ದೇಶದ ವೈದ್ಯಕೀಯ ಕಾಲೇಜುಗಳಿಗೆ ದಾಖಲಿಸುವಂತೆ ಭಾರತೀಯ ವೈದ್ಯಕೀಯ ಸಂಘ ಮತ್ತು ಛತ್ತೀಸ್‌ಗಢದ ಆರೋಗ್ಯ ಸಚಿವ ಟಿ.ಎಸ್. ಸಿಂಗ್ ದೇವ್ ಶುಕ್ರವಾರ ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಪಡೆಯಲು ಸಾವಿರಾರು ಭಾರತೀಯ ವಿದ್ಯಾರ್ಥಿಗಳು ಉಕ್ರೇನ್‌ಗೆ ತೆರಳುತ್ತಾರೆ. ಫೆಬ್ರವರಿ 24 ರಂದು ಉಕ್ರೇನ್ ಮೇಲಿನ ರಷ್ಯಾದ ಆಕ್ರಮಣದಿಂದಾಗಿ, ಅಲ್ಲಿ ಶಿಕ್ಷಣ ಪಡೆಯುತ್ತಿರುವ ಅನೇಕ ಭಾರತೀಯ ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿಕೊಂಡಿದ್ದಾರೆ. ಅದರಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗುಂಡೇಟು ತಗುಲಿದೆ. ಹೆಚ್ಚಿನವರನ್ನು ಸ್ಥಳಾಂತರಿಸಲಾಗುತ್ತಿದೆ.

ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಭಾರತೀಯ ವೈದ್ಯಕೀಯ ಸಂಘವು, “ಈಗ ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳು ತಮ್ಮ ಬ್ಯಾಚುಲರ್ ಆಫ್ ಮೆಡಿಸಿನ್, ಬ್ಯಾಚುಲರ್ ಆಫ್ ಸರ್ಜರಿ ಅಥವಾ ಎಂಬಿಬಿಎಸ್ ಕೋರ್ಸ್‌ನ ಉಳಿದ ಅವಧಿಗೆ ವೈದ್ಯಕೀಯ ಕಾಲೇಜುಗಳಿಗೆ ದಾಖಲಾಗಲು ಅವಕಾಶ ನೀಡಬೇಕು” ಎಂದು ಮನವಿ ಮಾಡಿದೆ.

ವೈದ್ಯಕೀಯ ಸಂಸ್ಥೆಗಳಲ್ಲಿ ಇದನ್ನು ವಿದ್ಯಾರ್ಥಿಗಳ ವಾರ್ಷಿಕ ದಾಖಲಾತಿ ಸಾಮರ್ಥ್ಯದ ಹೆಚ್ಚಳವಾಗಿ ನೋಡಬಾರದು.”ಒಂದು ಬಾರಿ ವಿನಾಯಿತಿ” ಎಂದು ಪರಿಗಣಿಸಬೇಕು. ಇದಕ್ಕಾಗಿ, ವಿದ್ಯಾರ್ಥಿಗಳು ಮೂಲತಃ ಉಕ್ರೇನ್‌ನಲ್ಲಿ ಪ್ರವೇಶ ಪಡೆದ ವೈದ್ಯಕೀಯ ಕಾಳೇಜುಗಳ ಅಧಿಕಾರಿಗಳು ಮಾಡಿದ ಮೌಲ್ಯೀಕರಣ ಪ್ರಮಾಣಪತ್ರವನ್ನು ಹಾಜರುಪಡಿಸಬೇಕಾಗುತ್ತದೆ ಎಂದು ವೈದ್ಯಕೀಯ ಸಂಘ ಹೇಳಿದೆ.

ಇದನ್ನೂ ಓದಿ: ಟಾಯ್ಲೆಟ್‌ ಕ್ಲೀನ್‌ ಮಾಡಿದ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತೇವೆ ಎಂದ ರಾಯಭಾರಿ ಕಚೇರಿ: ಆರೋಪ

ಇದರ ಜೊತೆಗೆ “ಇಲ್ಲಿ ಉತ್ತೀರ್ಣರಾದ ನಂತರ ಅವರು ಭಾರತೀಯ ವೈದ್ಯಕೀಯ ಪದವೀಧರರಾತ್ತಾರೆಯೇ ಹೊರತು ವಿದೇಶಿ ವೈದ್ಯಕೀಯ ಪದವೀಧರರಲ್ಲ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಭಾರತದಿಂದ ಉಕ್ರೇನ್‌ಗೆ ವೈದ್ಯಕೀಯ ಶಿಕ್ಷಣ ಪಡೆಯಲು ತೆರಳಲು ಕಾರಣ, ಅಲ್ಲಿ ವೈದ್ಯಕೀಯ ಶಿಕ್ಷಣ ಅಗ್ಗವಾಗಿದೆ. ಇದಲ್ಲದೆ, ವೈದ್ಯಕೀಯ ಕೋರ್ಸ್‌ಗಳ ಸೀಟುಗಳ ಸಂಖ್ಯೆಯು ಭಾರತಕ್ಕಿಂತ ಉಕ್ರೇನ್‌ನಲ್ಲಿ ಹೆಚ್ಚಾಗಿದೆ. ಅಲ್ಲಿಂದ ಹಿಂದಿರುಗಿದ ವಿದ್ಯಾರ್ಥಿಗಳು ಭಾರತದಲ್ಲಿ ವೈದ್ಯರಾಗಿ ಅಭ್ಯಾಸ ಮಾಡಲು ವಿದೇಶಿ ವೈದ್ಯಕೀಯ ಪದವೀಧರರ ಪರೀಕ್ಷೆ ಅಥವಾ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ ಸ್ಕ್ರೀನಿಂಗ್ ಟೆಸ್ಟ್ ಎಂದೂ ಕರೆಯಲ್ಪಡುವ ಪರೀಕ್ಷೆಗಳಲ್ಲಿ ಅರ್ಹರಾಗಬೇಕು.

ಸಂಘದ ಪ್ರಧಾನ ಕಾರ್ಯದರ್ಶಿ ಡಾ. ಜಯೇಶ್ ಲೇಲೆ ಅವರನ್ನು ಉಲ್ಲೇಖಿಸಿರುವ ಮಿಂಟ್, “ಭಾರತದಲ್ಲಿ ಸುಮಾರು 500 ವೈದ್ಯಕೀಯ ಕಾಲೇಜುಗಳಿದ್ದು, ಪ್ರತಿ ವರ್ಷ 70,000 ರಿಂದ 80,000 ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಾರೆ. ವಿದ್ಯಾರ್ಥಿಗಳ ವೃತ್ತಿಜೀವನವು ಹಾಳಾಗದಂತೆ ತಾತ್ಕಾಲಿಕವಾಗಿ ಸೀಟುಗಳನ್ನು ತಿದ್ದುಪಡಿ ಮಾಡಲು ಮತ್ತು ಹೆಚ್ಚಿಸಲು ಸರ್ಕಾರ ಮತ್ತು ರಾಷ್ಟ್ರೀಯ ವೈದ್ಯಕೀಯ ಆಯೋಗ ಕ್ರಮ ಕೈಗೊಳ್ಳಬೇಕು” ಎಂದಿದ್ದಾರೆ.

ಇನ್ನು, ಯುದ್ಧ ಪೀಡಿತ ಉಕ್ರೇನ್‌ನಿಂದ ವಾಪಸಾಗುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ದೇಶದ ವೈದ್ಯಕೀಯ ಕಾಲೇಜುಗಳಿಗೆ ದಾಖಲಾಗಲು ಅವಕಾಶ ನೀಡುವಂತೆ ಛತ್ತೀಸ್‌ಗಢದ ಆರೋಗ್ಯ ಸಚಿವ ಟಿ.ಎಸ್. ಸಿಂಗ್ ದೇವ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಬರೆದ ಪತ್ರದಲ್ಲಿ ಸಿಂಗ್ ಡಿಯೋ ಈ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಜೊತೆಗೆ, ಇಂಟರ್ನ್‌ಶಿಪ್ ಮುಗಿಸದ ವಿದೇಶಿ ವಿದ್ಯಾರ್ಥಿಗಳು ವಿದೇಶಿ ವೈದ್ಯಕೀಯ ಪದವೀಧರರ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಅವರು ಭಾರತದಲ್ಲಿ ಅದನ್ನು ಮುಗಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗವು ಅನುಮತಿ ನೀಡಿದೆ ಎಂದು ಎಎನ್‌ಐ ವರದಿ ಮಾಡಿದೆ.


ಇದನ್ನೂ ಓದಿ: ಉಕ್ರೇನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳಿಗೆ ಆಪದ್ಬಾಂಧವನಾದ ನಟ ಸೋನು ಸೂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...