HomeUncategorizedಮಕ್ಕಳ ಕಮರ್ಷಿಯಲ್ ಚಿತ್ರಕ್ಕೆ ಐಎಂಡಿಬಿ ಗರಿ: ಪಟ್ಟಿಯಲ್ಲಿ 5ನೇ ಸ್ಥಾನ ಪಡೆದ 'ಗಿರ್ಮಿಟ್'

ಮಕ್ಕಳ ಕಮರ್ಷಿಯಲ್ ಚಿತ್ರಕ್ಕೆ ಐಎಂಡಿಬಿ ಗರಿ: ಪಟ್ಟಿಯಲ್ಲಿ 5ನೇ ಸ್ಥಾನ ಪಡೆದ ‘ಗಿರ್ಮಿಟ್’

- Advertisement -
- Advertisement -

ಬಿಡುಗಡೆಗೂ ಮುನ್ನವೇ ಮಕ್ಕಳ ಕಮರ್ಷಿಯಲ್ ಚಿತ್ರ ‘ಗಿರ್ಮಿಟ್’ ಐಎಂಡಿಬಿ ನೀಡಿದ ಭಾರತದ ಬಹು ನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ 5 ನೇ ಸ್ಥಾನ ಪಡೆಯುವ ಮೂಲಕ ದಾಖಲೆ ನಿರ್ಮಿಸಿದೆ. ಐಎಂಡಿಬಿ ನಿರೀಕ್ಷಿತ ಚಿತ್ರಗಳ ಅಗ್ರಪಟ್ಟಿಯಲ್ಲಿ 5 ನೇ ಸ್ಥಾನ ಪಡೆದ ಗಿರ್ಮಿಟ್, ಭಾರತೀಯ ಚಿತ್ರಗಳ ಬಗೆಗಿನ ನಿರೀಕ್ಷೆ ಹೆಚ್ಚಿಸಿದೆ.

ಭಾರತೀಯ ಚಿತ್ರರಂಗದಲ್ಲೇ ಮೊಟ್ಟ ಮೊದಲ ಮಕ್ಕಳ ವಾಣಿಜ್ಯಾತ್ಮಕ ಚಿತ್ರವೆಂಬ ಕೀರ್ತಿಗೆ ಪಾತ್ರವಾಗಿದೆ. ರವಿ ಬಸ್ರೂರು ಮತ್ತು ತಂಡದ ಪರಿಶ್ರಮದಲ್ಲಿ ನಿರ್ಮಾಣವಾದ ಗಿರ್ಮಿಟ್ ಚಿತ್ರ, ಚಲನಚಿತ್ರಗಳ ಮಾನದಂಡ ಸಂಸ್ಥೆಯಾದ ಐಎಂಡಿಬಿ ಬಹು ನಿರೀಕ್ಷಿತ ಭಾರತೀಯ ಚಿತ್ರಗಳ ಪೈಕಿ 5 ನೇ ಸ್ಥಾನ ಪಡೆದಿದೆ.

ಐಎಂಡಿಬಿ ಪಟ್ಟಿಯಲ್ಲಿ ಬಾಲಿವುಡ್ ನ ‘ಮರ್ಜಾವಾನ್’ ಚಿತ್ರವು ಮೊದಲ ಸ್ಥಾನ ಪಡೆದಿದೆ. ಸಿದ್ಧಾರ್ಥ್ ಮಲ್ಹೋತ್ರಾ ಅಭಿನಯದ ಈ ಚಿತ್ರವನ್ನು ಶೇ.22.8 ರಷ್ಟು ಮಂದಿ ನೋಡುವ ನಿರೀಕ್ಷೆಯಲ್ಲಿದ್ದಾರೆ. ಎರಡನೇ ಸ್ಥಾನದಲ್ಲಿ ಸಲ್ಮಾನ್ ಖಾನ್ ಅಭಿನಯದ ‘ದಬಾಂಗ್ 3’ ಇದ್ದು, ಶೇ. 21.9 ರಷ್ಟು ಮಂದಿ ನೋಡಲು ಕಾತರರಾಗಿದ್ದಾರೆ. ಮೂರನೇ ಸ್ಥಾನದಲ್ಲಿ ‘ಬಾಲಾ’ ಚಿತ್ರವಿದ್ದು, ಶೇ.20.6 ರಷ್ಟು ಜನರ ಬೇಡಿಕೆ ಚಿತ್ರವಾಗಿದೆ. ನಾಲ್ಕನೇ ಸ್ಥಾನದಲ್ಲಿ ‘ಪಾಗಲ್ ಪಂತಿ’ ಚಿತ್ರವಿದ್ದು, ಶೇ.17 ರಷ್ಟು, 5 ನೇ ಸ್ಥಾನದಲ್ಲಿ ಕನ್ನಡದ ಗಿರ್ಮಿಟ್ ಚಿತ್ರವಿದ್ದು, ಶೇ.11.1 ರಷ್ಟು ಜನರು ನೋಡುವ ನಿರೀಕ್ಷೆಯಲ್ಲಿದ್ದಾರೆ.

ಜಾಲತಾಣ ಮಾನದಂಡ ಸಂಸ್ಥೆಯು ನೀಡುವ ಅಂಕಿ ಅಂಶಗಳ ಮಾಹಿತಿಯು ಕನ್ನಡ ಸಿನಿಮಾಗಳ ಹಿರಿಮೆಯನ್ನು ಹೆಚ್ಚಿಸುತ್ತಿದೆ. ಬಸ್ರೂರು ಅವರ ಹೊಸ ಶೈಲಿಯ ಚಿತ್ರವನ್ನು ಕಣ್ತುಂಬಿಕೊಳ್ಳಲು ಪ್ರೇಕ್ಷಕರು ಕಾತರರಾಗಿದ್ದಾರೆ. ಹಾಗಾದ್ರೆ ಜಾಲತಾಣ ಮಾನದಂಡ ಅನ್ನೋದು ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ…

ಏನಿದು ಜಾಲತಾಣ ಮಾನದಂಡ..?

ಐಎಂಡಿಬಿ ಎಂದರೆ ಇಂಟರ್ನೆಟ್ ಮೂವಿ ಡೇಟಾ ಬೇಸ್ ಎಂದರ್ಥ. ಅಂದರೆ ಚಲನಚಿತ್ರಗಳ ಬಗ್ಗೆ ಜಾಲತಾಣಿಗರು ವ್ಯಕ್ತಪಡಿಸುವ ಅಭಿಪ್ರಾಯ, ವಿಮರ್ಶಿಸುವ ಒಂದು ಮಾನದಂಡ ಸಂಸ್ಥೆ ಆಗಿದೆ. ಇದು ಚಲನಚಿತ್ರಗಳಿಗೆ ಮಾತ್ರವಲ್ಲದೇ ದೂರದರ್ಶನದ ಕಾರ್ಯಕ್ರಮಗಳು, ವಿಡಿಯೋ ಗೇಮ್ ಗೆ ಸಂಬಂಧಿಸಿದ ಅಭಿಪ್ರಾಯ ಸಂಗ್ರಹಿಸಿ, ದತ್ತಾಂಶ ಕಲೆ ಹಾಕಲು ಸಹಕಾರಿಯಾಗಿದೆ.

ಇನ್ನು ಅಕ್ಟೋವರ್‌ 26 ರಂದು ಬಿಡುಗಡೆಯಾದ ಗಿರ್ಮಿಟ್ ಚಿತ್ರದ ಟ್ರೇಲರ್ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ನಿರ್ದೇಶಕ ರವಿ ಬಸ್ರೂರು ಮತ್ತು ತಂಡದ ಪ್ರಯತ್ನದ ಫಲವಾಗಿ ಮೂಡಿ ಬರುತ್ತಿರುವ ನಾಲ್ಕನೇ ಚಿತ್ರ ಇದಾಗಿದ್ದು, ನ.೮ ರಂದು ಪ್ರಪಂಚದಾದ್ಯಂತ ತೆರೆ ಕಾಣಲಿದೆ.

ಚಿತ್ರದಲ್ಲಿ ನಾಯಕ, ನಾಯಕಿ ಪಾತ್ರದಲ್ಲಿ ಮತ್ತು ಮುಖ್ಯ ಭೂಮಿಕೆಯಲ್ಲಿ ಮಕ್ಕಳೇ ಪ್ರಧಾನ ಪಾತ್ರದಲ್ಲಿ ನಟಿಸಿರುವ ವಿಭಿನ್ನ ಚಿತ್ರ ಇದಾಗಿದೆ. ರಾಕಿಂಗ್ ಸ್ಟಾರ್ ಯಶ್, ನಟಿ ರಾಧಿಕಾ ಪಂಡಿತ್ ಸೇರಿದಂತೆ ಹಿರಿಯ ಕಲಾವಿದರು, ಮಕ್ಕಳ ಪಾತ್ರಗಳಿಗೆ ಹಿನ್ನೆಲೆ ಧ್ವನಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...