HomeUncategorizedಮಕ್ಕಳ ಕಮರ್ಷಿಯಲ್ ಚಿತ್ರಕ್ಕೆ ಐಎಂಡಿಬಿ ಗರಿ: ಪಟ್ಟಿಯಲ್ಲಿ 5ನೇ ಸ್ಥಾನ ಪಡೆದ 'ಗಿರ್ಮಿಟ್'

ಮಕ್ಕಳ ಕಮರ್ಷಿಯಲ್ ಚಿತ್ರಕ್ಕೆ ಐಎಂಡಿಬಿ ಗರಿ: ಪಟ್ಟಿಯಲ್ಲಿ 5ನೇ ಸ್ಥಾನ ಪಡೆದ ‘ಗಿರ್ಮಿಟ್’

- Advertisement -
- Advertisement -

ಬಿಡುಗಡೆಗೂ ಮುನ್ನವೇ ಮಕ್ಕಳ ಕಮರ್ಷಿಯಲ್ ಚಿತ್ರ ‘ಗಿರ್ಮಿಟ್’ ಐಎಂಡಿಬಿ ನೀಡಿದ ಭಾರತದ ಬಹು ನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ 5 ನೇ ಸ್ಥಾನ ಪಡೆಯುವ ಮೂಲಕ ದಾಖಲೆ ನಿರ್ಮಿಸಿದೆ. ಐಎಂಡಿಬಿ ನಿರೀಕ್ಷಿತ ಚಿತ್ರಗಳ ಅಗ್ರಪಟ್ಟಿಯಲ್ಲಿ 5 ನೇ ಸ್ಥಾನ ಪಡೆದ ಗಿರ್ಮಿಟ್, ಭಾರತೀಯ ಚಿತ್ರಗಳ ಬಗೆಗಿನ ನಿರೀಕ್ಷೆ ಹೆಚ್ಚಿಸಿದೆ.

ಭಾರತೀಯ ಚಿತ್ರರಂಗದಲ್ಲೇ ಮೊಟ್ಟ ಮೊದಲ ಮಕ್ಕಳ ವಾಣಿಜ್ಯಾತ್ಮಕ ಚಿತ್ರವೆಂಬ ಕೀರ್ತಿಗೆ ಪಾತ್ರವಾಗಿದೆ. ರವಿ ಬಸ್ರೂರು ಮತ್ತು ತಂಡದ ಪರಿಶ್ರಮದಲ್ಲಿ ನಿರ್ಮಾಣವಾದ ಗಿರ್ಮಿಟ್ ಚಿತ್ರ, ಚಲನಚಿತ್ರಗಳ ಮಾನದಂಡ ಸಂಸ್ಥೆಯಾದ ಐಎಂಡಿಬಿ ಬಹು ನಿರೀಕ್ಷಿತ ಭಾರತೀಯ ಚಿತ್ರಗಳ ಪೈಕಿ 5 ನೇ ಸ್ಥಾನ ಪಡೆದಿದೆ.

ಐಎಂಡಿಬಿ ಪಟ್ಟಿಯಲ್ಲಿ ಬಾಲಿವುಡ್ ನ ‘ಮರ್ಜಾವಾನ್’ ಚಿತ್ರವು ಮೊದಲ ಸ್ಥಾನ ಪಡೆದಿದೆ. ಸಿದ್ಧಾರ್ಥ್ ಮಲ್ಹೋತ್ರಾ ಅಭಿನಯದ ಈ ಚಿತ್ರವನ್ನು ಶೇ.22.8 ರಷ್ಟು ಮಂದಿ ನೋಡುವ ನಿರೀಕ್ಷೆಯಲ್ಲಿದ್ದಾರೆ. ಎರಡನೇ ಸ್ಥಾನದಲ್ಲಿ ಸಲ್ಮಾನ್ ಖಾನ್ ಅಭಿನಯದ ‘ದಬಾಂಗ್ 3’ ಇದ್ದು, ಶೇ. 21.9 ರಷ್ಟು ಮಂದಿ ನೋಡಲು ಕಾತರರಾಗಿದ್ದಾರೆ. ಮೂರನೇ ಸ್ಥಾನದಲ್ಲಿ ‘ಬಾಲಾ’ ಚಿತ್ರವಿದ್ದು, ಶೇ.20.6 ರಷ್ಟು ಜನರ ಬೇಡಿಕೆ ಚಿತ್ರವಾಗಿದೆ. ನಾಲ್ಕನೇ ಸ್ಥಾನದಲ್ಲಿ ‘ಪಾಗಲ್ ಪಂತಿ’ ಚಿತ್ರವಿದ್ದು, ಶೇ.17 ರಷ್ಟು, 5 ನೇ ಸ್ಥಾನದಲ್ಲಿ ಕನ್ನಡದ ಗಿರ್ಮಿಟ್ ಚಿತ್ರವಿದ್ದು, ಶೇ.11.1 ರಷ್ಟು ಜನರು ನೋಡುವ ನಿರೀಕ್ಷೆಯಲ್ಲಿದ್ದಾರೆ.

ಜಾಲತಾಣ ಮಾನದಂಡ ಸಂಸ್ಥೆಯು ನೀಡುವ ಅಂಕಿ ಅಂಶಗಳ ಮಾಹಿತಿಯು ಕನ್ನಡ ಸಿನಿಮಾಗಳ ಹಿರಿಮೆಯನ್ನು ಹೆಚ್ಚಿಸುತ್ತಿದೆ. ಬಸ್ರೂರು ಅವರ ಹೊಸ ಶೈಲಿಯ ಚಿತ್ರವನ್ನು ಕಣ್ತುಂಬಿಕೊಳ್ಳಲು ಪ್ರೇಕ್ಷಕರು ಕಾತರರಾಗಿದ್ದಾರೆ. ಹಾಗಾದ್ರೆ ಜಾಲತಾಣ ಮಾನದಂಡ ಅನ್ನೋದು ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ…

ಏನಿದು ಜಾಲತಾಣ ಮಾನದಂಡ..?

ಐಎಂಡಿಬಿ ಎಂದರೆ ಇಂಟರ್ನೆಟ್ ಮೂವಿ ಡೇಟಾ ಬೇಸ್ ಎಂದರ್ಥ. ಅಂದರೆ ಚಲನಚಿತ್ರಗಳ ಬಗ್ಗೆ ಜಾಲತಾಣಿಗರು ವ್ಯಕ್ತಪಡಿಸುವ ಅಭಿಪ್ರಾಯ, ವಿಮರ್ಶಿಸುವ ಒಂದು ಮಾನದಂಡ ಸಂಸ್ಥೆ ಆಗಿದೆ. ಇದು ಚಲನಚಿತ್ರಗಳಿಗೆ ಮಾತ್ರವಲ್ಲದೇ ದೂರದರ್ಶನದ ಕಾರ್ಯಕ್ರಮಗಳು, ವಿಡಿಯೋ ಗೇಮ್ ಗೆ ಸಂಬಂಧಿಸಿದ ಅಭಿಪ್ರಾಯ ಸಂಗ್ರಹಿಸಿ, ದತ್ತಾಂಶ ಕಲೆ ಹಾಕಲು ಸಹಕಾರಿಯಾಗಿದೆ.

ಇನ್ನು ಅಕ್ಟೋವರ್‌ 26 ರಂದು ಬಿಡುಗಡೆಯಾದ ಗಿರ್ಮಿಟ್ ಚಿತ್ರದ ಟ್ರೇಲರ್ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ನಿರ್ದೇಶಕ ರವಿ ಬಸ್ರೂರು ಮತ್ತು ತಂಡದ ಪ್ರಯತ್ನದ ಫಲವಾಗಿ ಮೂಡಿ ಬರುತ್ತಿರುವ ನಾಲ್ಕನೇ ಚಿತ್ರ ಇದಾಗಿದ್ದು, ನ.೮ ರಂದು ಪ್ರಪಂಚದಾದ್ಯಂತ ತೆರೆ ಕಾಣಲಿದೆ.

ಚಿತ್ರದಲ್ಲಿ ನಾಯಕ, ನಾಯಕಿ ಪಾತ್ರದಲ್ಲಿ ಮತ್ತು ಮುಖ್ಯ ಭೂಮಿಕೆಯಲ್ಲಿ ಮಕ್ಕಳೇ ಪ್ರಧಾನ ಪಾತ್ರದಲ್ಲಿ ನಟಿಸಿರುವ ವಿಭಿನ್ನ ಚಿತ್ರ ಇದಾಗಿದೆ. ರಾಕಿಂಗ್ ಸ್ಟಾರ್ ಯಶ್, ನಟಿ ರಾಧಿಕಾ ಪಂಡಿತ್ ಸೇರಿದಂತೆ ಹಿರಿಯ ಕಲಾವಿದರು, ಮಕ್ಕಳ ಪಾತ್ರಗಳಿಗೆ ಹಿನ್ನೆಲೆ ಧ್ವನಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...