HomeUncategorizedಮಕ್ಕಳ ಕಮರ್ಷಿಯಲ್ ಚಿತ್ರಕ್ಕೆ ಐಎಂಡಿಬಿ ಗರಿ: ಪಟ್ಟಿಯಲ್ಲಿ 5ನೇ ಸ್ಥಾನ ಪಡೆದ 'ಗಿರ್ಮಿಟ್'

ಮಕ್ಕಳ ಕಮರ್ಷಿಯಲ್ ಚಿತ್ರಕ್ಕೆ ಐಎಂಡಿಬಿ ಗರಿ: ಪಟ್ಟಿಯಲ್ಲಿ 5ನೇ ಸ್ಥಾನ ಪಡೆದ ‘ಗಿರ್ಮಿಟ್’

- Advertisement -
- Advertisement -

ಬಿಡುಗಡೆಗೂ ಮುನ್ನವೇ ಮಕ್ಕಳ ಕಮರ್ಷಿಯಲ್ ಚಿತ್ರ ‘ಗಿರ್ಮಿಟ್’ ಐಎಂಡಿಬಿ ನೀಡಿದ ಭಾರತದ ಬಹು ನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ 5 ನೇ ಸ್ಥಾನ ಪಡೆಯುವ ಮೂಲಕ ದಾಖಲೆ ನಿರ್ಮಿಸಿದೆ. ಐಎಂಡಿಬಿ ನಿರೀಕ್ಷಿತ ಚಿತ್ರಗಳ ಅಗ್ರಪಟ್ಟಿಯಲ್ಲಿ 5 ನೇ ಸ್ಥಾನ ಪಡೆದ ಗಿರ್ಮಿಟ್, ಭಾರತೀಯ ಚಿತ್ರಗಳ ಬಗೆಗಿನ ನಿರೀಕ್ಷೆ ಹೆಚ್ಚಿಸಿದೆ.

ಭಾರತೀಯ ಚಿತ್ರರಂಗದಲ್ಲೇ ಮೊಟ್ಟ ಮೊದಲ ಮಕ್ಕಳ ವಾಣಿಜ್ಯಾತ್ಮಕ ಚಿತ್ರವೆಂಬ ಕೀರ್ತಿಗೆ ಪಾತ್ರವಾಗಿದೆ. ರವಿ ಬಸ್ರೂರು ಮತ್ತು ತಂಡದ ಪರಿಶ್ರಮದಲ್ಲಿ ನಿರ್ಮಾಣವಾದ ಗಿರ್ಮಿಟ್ ಚಿತ್ರ, ಚಲನಚಿತ್ರಗಳ ಮಾನದಂಡ ಸಂಸ್ಥೆಯಾದ ಐಎಂಡಿಬಿ ಬಹು ನಿರೀಕ್ಷಿತ ಭಾರತೀಯ ಚಿತ್ರಗಳ ಪೈಕಿ 5 ನೇ ಸ್ಥಾನ ಪಡೆದಿದೆ.

ಐಎಂಡಿಬಿ ಪಟ್ಟಿಯಲ್ಲಿ ಬಾಲಿವುಡ್ ನ ‘ಮರ್ಜಾವಾನ್’ ಚಿತ್ರವು ಮೊದಲ ಸ್ಥಾನ ಪಡೆದಿದೆ. ಸಿದ್ಧಾರ್ಥ್ ಮಲ್ಹೋತ್ರಾ ಅಭಿನಯದ ಈ ಚಿತ್ರವನ್ನು ಶೇ.22.8 ರಷ್ಟು ಮಂದಿ ನೋಡುವ ನಿರೀಕ್ಷೆಯಲ್ಲಿದ್ದಾರೆ. ಎರಡನೇ ಸ್ಥಾನದಲ್ಲಿ ಸಲ್ಮಾನ್ ಖಾನ್ ಅಭಿನಯದ ‘ದಬಾಂಗ್ 3’ ಇದ್ದು, ಶೇ. 21.9 ರಷ್ಟು ಮಂದಿ ನೋಡಲು ಕಾತರರಾಗಿದ್ದಾರೆ. ಮೂರನೇ ಸ್ಥಾನದಲ್ಲಿ ‘ಬಾಲಾ’ ಚಿತ್ರವಿದ್ದು, ಶೇ.20.6 ರಷ್ಟು ಜನರ ಬೇಡಿಕೆ ಚಿತ್ರವಾಗಿದೆ. ನಾಲ್ಕನೇ ಸ್ಥಾನದಲ್ಲಿ ‘ಪಾಗಲ್ ಪಂತಿ’ ಚಿತ್ರವಿದ್ದು, ಶೇ.17 ರಷ್ಟು, 5 ನೇ ಸ್ಥಾನದಲ್ಲಿ ಕನ್ನಡದ ಗಿರ್ಮಿಟ್ ಚಿತ್ರವಿದ್ದು, ಶೇ.11.1 ರಷ್ಟು ಜನರು ನೋಡುವ ನಿರೀಕ್ಷೆಯಲ್ಲಿದ್ದಾರೆ.

ಜಾಲತಾಣ ಮಾನದಂಡ ಸಂಸ್ಥೆಯು ನೀಡುವ ಅಂಕಿ ಅಂಶಗಳ ಮಾಹಿತಿಯು ಕನ್ನಡ ಸಿನಿಮಾಗಳ ಹಿರಿಮೆಯನ್ನು ಹೆಚ್ಚಿಸುತ್ತಿದೆ. ಬಸ್ರೂರು ಅವರ ಹೊಸ ಶೈಲಿಯ ಚಿತ್ರವನ್ನು ಕಣ್ತುಂಬಿಕೊಳ್ಳಲು ಪ್ರೇಕ್ಷಕರು ಕಾತರರಾಗಿದ್ದಾರೆ. ಹಾಗಾದ್ರೆ ಜಾಲತಾಣ ಮಾನದಂಡ ಅನ್ನೋದು ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ…

ಏನಿದು ಜಾಲತಾಣ ಮಾನದಂಡ..?

ಐಎಂಡಿಬಿ ಎಂದರೆ ಇಂಟರ್ನೆಟ್ ಮೂವಿ ಡೇಟಾ ಬೇಸ್ ಎಂದರ್ಥ. ಅಂದರೆ ಚಲನಚಿತ್ರಗಳ ಬಗ್ಗೆ ಜಾಲತಾಣಿಗರು ವ್ಯಕ್ತಪಡಿಸುವ ಅಭಿಪ್ರಾಯ, ವಿಮರ್ಶಿಸುವ ಒಂದು ಮಾನದಂಡ ಸಂಸ್ಥೆ ಆಗಿದೆ. ಇದು ಚಲನಚಿತ್ರಗಳಿಗೆ ಮಾತ್ರವಲ್ಲದೇ ದೂರದರ್ಶನದ ಕಾರ್ಯಕ್ರಮಗಳು, ವಿಡಿಯೋ ಗೇಮ್ ಗೆ ಸಂಬಂಧಿಸಿದ ಅಭಿಪ್ರಾಯ ಸಂಗ್ರಹಿಸಿ, ದತ್ತಾಂಶ ಕಲೆ ಹಾಕಲು ಸಹಕಾರಿಯಾಗಿದೆ.

ಇನ್ನು ಅಕ್ಟೋವರ್‌ 26 ರಂದು ಬಿಡುಗಡೆಯಾದ ಗಿರ್ಮಿಟ್ ಚಿತ್ರದ ಟ್ರೇಲರ್ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ನಿರ್ದೇಶಕ ರವಿ ಬಸ್ರೂರು ಮತ್ತು ತಂಡದ ಪ್ರಯತ್ನದ ಫಲವಾಗಿ ಮೂಡಿ ಬರುತ್ತಿರುವ ನಾಲ್ಕನೇ ಚಿತ್ರ ಇದಾಗಿದ್ದು, ನ.೮ ರಂದು ಪ್ರಪಂಚದಾದ್ಯಂತ ತೆರೆ ಕಾಣಲಿದೆ.

ಚಿತ್ರದಲ್ಲಿ ನಾಯಕ, ನಾಯಕಿ ಪಾತ್ರದಲ್ಲಿ ಮತ್ತು ಮುಖ್ಯ ಭೂಮಿಕೆಯಲ್ಲಿ ಮಕ್ಕಳೇ ಪ್ರಧಾನ ಪಾತ್ರದಲ್ಲಿ ನಟಿಸಿರುವ ವಿಭಿನ್ನ ಚಿತ್ರ ಇದಾಗಿದೆ. ರಾಕಿಂಗ್ ಸ್ಟಾರ್ ಯಶ್, ನಟಿ ರಾಧಿಕಾ ಪಂಡಿತ್ ಸೇರಿದಂತೆ ಹಿರಿಯ ಕಲಾವಿದರು, ಮಕ್ಕಳ ಪಾತ್ರಗಳಿಗೆ ಹಿನ್ನೆಲೆ ಧ್ವನಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...