HomeUncategorizedಮಕ್ಕಳ ಕಮರ್ಷಿಯಲ್ ಚಿತ್ರಕ್ಕೆ ಐಎಂಡಿಬಿ ಗರಿ: ಪಟ್ಟಿಯಲ್ಲಿ 5ನೇ ಸ್ಥಾನ ಪಡೆದ 'ಗಿರ್ಮಿಟ್'

ಮಕ್ಕಳ ಕಮರ್ಷಿಯಲ್ ಚಿತ್ರಕ್ಕೆ ಐಎಂಡಿಬಿ ಗರಿ: ಪಟ್ಟಿಯಲ್ಲಿ 5ನೇ ಸ್ಥಾನ ಪಡೆದ ‘ಗಿರ್ಮಿಟ್’

- Advertisement -
- Advertisement -

ಬಿಡುಗಡೆಗೂ ಮುನ್ನವೇ ಮಕ್ಕಳ ಕಮರ್ಷಿಯಲ್ ಚಿತ್ರ ‘ಗಿರ್ಮಿಟ್’ ಐಎಂಡಿಬಿ ನೀಡಿದ ಭಾರತದ ಬಹು ನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ 5 ನೇ ಸ್ಥಾನ ಪಡೆಯುವ ಮೂಲಕ ದಾಖಲೆ ನಿರ್ಮಿಸಿದೆ. ಐಎಂಡಿಬಿ ನಿರೀಕ್ಷಿತ ಚಿತ್ರಗಳ ಅಗ್ರಪಟ್ಟಿಯಲ್ಲಿ 5 ನೇ ಸ್ಥಾನ ಪಡೆದ ಗಿರ್ಮಿಟ್, ಭಾರತೀಯ ಚಿತ್ರಗಳ ಬಗೆಗಿನ ನಿರೀಕ್ಷೆ ಹೆಚ್ಚಿಸಿದೆ.

ಭಾರತೀಯ ಚಿತ್ರರಂಗದಲ್ಲೇ ಮೊಟ್ಟ ಮೊದಲ ಮಕ್ಕಳ ವಾಣಿಜ್ಯಾತ್ಮಕ ಚಿತ್ರವೆಂಬ ಕೀರ್ತಿಗೆ ಪಾತ್ರವಾಗಿದೆ. ರವಿ ಬಸ್ರೂರು ಮತ್ತು ತಂಡದ ಪರಿಶ್ರಮದಲ್ಲಿ ನಿರ್ಮಾಣವಾದ ಗಿರ್ಮಿಟ್ ಚಿತ್ರ, ಚಲನಚಿತ್ರಗಳ ಮಾನದಂಡ ಸಂಸ್ಥೆಯಾದ ಐಎಂಡಿಬಿ ಬಹು ನಿರೀಕ್ಷಿತ ಭಾರತೀಯ ಚಿತ್ರಗಳ ಪೈಕಿ 5 ನೇ ಸ್ಥಾನ ಪಡೆದಿದೆ.

ಐಎಂಡಿಬಿ ಪಟ್ಟಿಯಲ್ಲಿ ಬಾಲಿವುಡ್ ನ ‘ಮರ್ಜಾವಾನ್’ ಚಿತ್ರವು ಮೊದಲ ಸ್ಥಾನ ಪಡೆದಿದೆ. ಸಿದ್ಧಾರ್ಥ್ ಮಲ್ಹೋತ್ರಾ ಅಭಿನಯದ ಈ ಚಿತ್ರವನ್ನು ಶೇ.22.8 ರಷ್ಟು ಮಂದಿ ನೋಡುವ ನಿರೀಕ್ಷೆಯಲ್ಲಿದ್ದಾರೆ. ಎರಡನೇ ಸ್ಥಾನದಲ್ಲಿ ಸಲ್ಮಾನ್ ಖಾನ್ ಅಭಿನಯದ ‘ದಬಾಂಗ್ 3’ ಇದ್ದು, ಶೇ. 21.9 ರಷ್ಟು ಮಂದಿ ನೋಡಲು ಕಾತರರಾಗಿದ್ದಾರೆ. ಮೂರನೇ ಸ್ಥಾನದಲ್ಲಿ ‘ಬಾಲಾ’ ಚಿತ್ರವಿದ್ದು, ಶೇ.20.6 ರಷ್ಟು ಜನರ ಬೇಡಿಕೆ ಚಿತ್ರವಾಗಿದೆ. ನಾಲ್ಕನೇ ಸ್ಥಾನದಲ್ಲಿ ‘ಪಾಗಲ್ ಪಂತಿ’ ಚಿತ್ರವಿದ್ದು, ಶೇ.17 ರಷ್ಟು, 5 ನೇ ಸ್ಥಾನದಲ್ಲಿ ಕನ್ನಡದ ಗಿರ್ಮಿಟ್ ಚಿತ್ರವಿದ್ದು, ಶೇ.11.1 ರಷ್ಟು ಜನರು ನೋಡುವ ನಿರೀಕ್ಷೆಯಲ್ಲಿದ್ದಾರೆ.

ಜಾಲತಾಣ ಮಾನದಂಡ ಸಂಸ್ಥೆಯು ನೀಡುವ ಅಂಕಿ ಅಂಶಗಳ ಮಾಹಿತಿಯು ಕನ್ನಡ ಸಿನಿಮಾಗಳ ಹಿರಿಮೆಯನ್ನು ಹೆಚ್ಚಿಸುತ್ತಿದೆ. ಬಸ್ರೂರು ಅವರ ಹೊಸ ಶೈಲಿಯ ಚಿತ್ರವನ್ನು ಕಣ್ತುಂಬಿಕೊಳ್ಳಲು ಪ್ರೇಕ್ಷಕರು ಕಾತರರಾಗಿದ್ದಾರೆ. ಹಾಗಾದ್ರೆ ಜಾಲತಾಣ ಮಾನದಂಡ ಅನ್ನೋದು ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ…

ಏನಿದು ಜಾಲತಾಣ ಮಾನದಂಡ..?

ಐಎಂಡಿಬಿ ಎಂದರೆ ಇಂಟರ್ನೆಟ್ ಮೂವಿ ಡೇಟಾ ಬೇಸ್ ಎಂದರ್ಥ. ಅಂದರೆ ಚಲನಚಿತ್ರಗಳ ಬಗ್ಗೆ ಜಾಲತಾಣಿಗರು ವ್ಯಕ್ತಪಡಿಸುವ ಅಭಿಪ್ರಾಯ, ವಿಮರ್ಶಿಸುವ ಒಂದು ಮಾನದಂಡ ಸಂಸ್ಥೆ ಆಗಿದೆ. ಇದು ಚಲನಚಿತ್ರಗಳಿಗೆ ಮಾತ್ರವಲ್ಲದೇ ದೂರದರ್ಶನದ ಕಾರ್ಯಕ್ರಮಗಳು, ವಿಡಿಯೋ ಗೇಮ್ ಗೆ ಸಂಬಂಧಿಸಿದ ಅಭಿಪ್ರಾಯ ಸಂಗ್ರಹಿಸಿ, ದತ್ತಾಂಶ ಕಲೆ ಹಾಕಲು ಸಹಕಾರಿಯಾಗಿದೆ.

ಇನ್ನು ಅಕ್ಟೋವರ್‌ 26 ರಂದು ಬಿಡುಗಡೆಯಾದ ಗಿರ್ಮಿಟ್ ಚಿತ್ರದ ಟ್ರೇಲರ್ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ನಿರ್ದೇಶಕ ರವಿ ಬಸ್ರೂರು ಮತ್ತು ತಂಡದ ಪ್ರಯತ್ನದ ಫಲವಾಗಿ ಮೂಡಿ ಬರುತ್ತಿರುವ ನಾಲ್ಕನೇ ಚಿತ್ರ ಇದಾಗಿದ್ದು, ನ.೮ ರಂದು ಪ್ರಪಂಚದಾದ್ಯಂತ ತೆರೆ ಕಾಣಲಿದೆ.

ಚಿತ್ರದಲ್ಲಿ ನಾಯಕ, ನಾಯಕಿ ಪಾತ್ರದಲ್ಲಿ ಮತ್ತು ಮುಖ್ಯ ಭೂಮಿಕೆಯಲ್ಲಿ ಮಕ್ಕಳೇ ಪ್ರಧಾನ ಪಾತ್ರದಲ್ಲಿ ನಟಿಸಿರುವ ವಿಭಿನ್ನ ಚಿತ್ರ ಇದಾಗಿದೆ. ರಾಕಿಂಗ್ ಸ್ಟಾರ್ ಯಶ್, ನಟಿ ರಾಧಿಕಾ ಪಂಡಿತ್ ಸೇರಿದಂತೆ ಹಿರಿಯ ಕಲಾವಿದರು, ಮಕ್ಕಳ ಪಾತ್ರಗಳಿಗೆ ಹಿನ್ನೆಲೆ ಧ್ವನಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...