HomeUncategorizedಮಕ್ಕಳ ಕಮರ್ಷಿಯಲ್ ಚಿತ್ರಕ್ಕೆ ಐಎಂಡಿಬಿ ಗರಿ: ಪಟ್ಟಿಯಲ್ಲಿ 5ನೇ ಸ್ಥಾನ ಪಡೆದ 'ಗಿರ್ಮಿಟ್'

ಮಕ್ಕಳ ಕಮರ್ಷಿಯಲ್ ಚಿತ್ರಕ್ಕೆ ಐಎಂಡಿಬಿ ಗರಿ: ಪಟ್ಟಿಯಲ್ಲಿ 5ನೇ ಸ್ಥಾನ ಪಡೆದ ‘ಗಿರ್ಮಿಟ್’

- Advertisement -
- Advertisement -

ಬಿಡುಗಡೆಗೂ ಮುನ್ನವೇ ಮಕ್ಕಳ ಕಮರ್ಷಿಯಲ್ ಚಿತ್ರ ‘ಗಿರ್ಮಿಟ್’ ಐಎಂಡಿಬಿ ನೀಡಿದ ಭಾರತದ ಬಹು ನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ 5 ನೇ ಸ್ಥಾನ ಪಡೆಯುವ ಮೂಲಕ ದಾಖಲೆ ನಿರ್ಮಿಸಿದೆ. ಐಎಂಡಿಬಿ ನಿರೀಕ್ಷಿತ ಚಿತ್ರಗಳ ಅಗ್ರಪಟ್ಟಿಯಲ್ಲಿ 5 ನೇ ಸ್ಥಾನ ಪಡೆದ ಗಿರ್ಮಿಟ್, ಭಾರತೀಯ ಚಿತ್ರಗಳ ಬಗೆಗಿನ ನಿರೀಕ್ಷೆ ಹೆಚ್ಚಿಸಿದೆ.

ಭಾರತೀಯ ಚಿತ್ರರಂಗದಲ್ಲೇ ಮೊಟ್ಟ ಮೊದಲ ಮಕ್ಕಳ ವಾಣಿಜ್ಯಾತ್ಮಕ ಚಿತ್ರವೆಂಬ ಕೀರ್ತಿಗೆ ಪಾತ್ರವಾಗಿದೆ. ರವಿ ಬಸ್ರೂರು ಮತ್ತು ತಂಡದ ಪರಿಶ್ರಮದಲ್ಲಿ ನಿರ್ಮಾಣವಾದ ಗಿರ್ಮಿಟ್ ಚಿತ್ರ, ಚಲನಚಿತ್ರಗಳ ಮಾನದಂಡ ಸಂಸ್ಥೆಯಾದ ಐಎಂಡಿಬಿ ಬಹು ನಿರೀಕ್ಷಿತ ಭಾರತೀಯ ಚಿತ್ರಗಳ ಪೈಕಿ 5 ನೇ ಸ್ಥಾನ ಪಡೆದಿದೆ.

ಐಎಂಡಿಬಿ ಪಟ್ಟಿಯಲ್ಲಿ ಬಾಲಿವುಡ್ ನ ‘ಮರ್ಜಾವಾನ್’ ಚಿತ್ರವು ಮೊದಲ ಸ್ಥಾನ ಪಡೆದಿದೆ. ಸಿದ್ಧಾರ್ಥ್ ಮಲ್ಹೋತ್ರಾ ಅಭಿನಯದ ಈ ಚಿತ್ರವನ್ನು ಶೇ.22.8 ರಷ್ಟು ಮಂದಿ ನೋಡುವ ನಿರೀಕ್ಷೆಯಲ್ಲಿದ್ದಾರೆ. ಎರಡನೇ ಸ್ಥಾನದಲ್ಲಿ ಸಲ್ಮಾನ್ ಖಾನ್ ಅಭಿನಯದ ‘ದಬಾಂಗ್ 3’ ಇದ್ದು, ಶೇ. 21.9 ರಷ್ಟು ಮಂದಿ ನೋಡಲು ಕಾತರರಾಗಿದ್ದಾರೆ. ಮೂರನೇ ಸ್ಥಾನದಲ್ಲಿ ‘ಬಾಲಾ’ ಚಿತ್ರವಿದ್ದು, ಶೇ.20.6 ರಷ್ಟು ಜನರ ಬೇಡಿಕೆ ಚಿತ್ರವಾಗಿದೆ. ನಾಲ್ಕನೇ ಸ್ಥಾನದಲ್ಲಿ ‘ಪಾಗಲ್ ಪಂತಿ’ ಚಿತ್ರವಿದ್ದು, ಶೇ.17 ರಷ್ಟು, 5 ನೇ ಸ್ಥಾನದಲ್ಲಿ ಕನ್ನಡದ ಗಿರ್ಮಿಟ್ ಚಿತ್ರವಿದ್ದು, ಶೇ.11.1 ರಷ್ಟು ಜನರು ನೋಡುವ ನಿರೀಕ್ಷೆಯಲ್ಲಿದ್ದಾರೆ.

ಜಾಲತಾಣ ಮಾನದಂಡ ಸಂಸ್ಥೆಯು ನೀಡುವ ಅಂಕಿ ಅಂಶಗಳ ಮಾಹಿತಿಯು ಕನ್ನಡ ಸಿನಿಮಾಗಳ ಹಿರಿಮೆಯನ್ನು ಹೆಚ್ಚಿಸುತ್ತಿದೆ. ಬಸ್ರೂರು ಅವರ ಹೊಸ ಶೈಲಿಯ ಚಿತ್ರವನ್ನು ಕಣ್ತುಂಬಿಕೊಳ್ಳಲು ಪ್ರೇಕ್ಷಕರು ಕಾತರರಾಗಿದ್ದಾರೆ. ಹಾಗಾದ್ರೆ ಜಾಲತಾಣ ಮಾನದಂಡ ಅನ್ನೋದು ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ…

ಏನಿದು ಜಾಲತಾಣ ಮಾನದಂಡ..?

ಐಎಂಡಿಬಿ ಎಂದರೆ ಇಂಟರ್ನೆಟ್ ಮೂವಿ ಡೇಟಾ ಬೇಸ್ ಎಂದರ್ಥ. ಅಂದರೆ ಚಲನಚಿತ್ರಗಳ ಬಗ್ಗೆ ಜಾಲತಾಣಿಗರು ವ್ಯಕ್ತಪಡಿಸುವ ಅಭಿಪ್ರಾಯ, ವಿಮರ್ಶಿಸುವ ಒಂದು ಮಾನದಂಡ ಸಂಸ್ಥೆ ಆಗಿದೆ. ಇದು ಚಲನಚಿತ್ರಗಳಿಗೆ ಮಾತ್ರವಲ್ಲದೇ ದೂರದರ್ಶನದ ಕಾರ್ಯಕ್ರಮಗಳು, ವಿಡಿಯೋ ಗೇಮ್ ಗೆ ಸಂಬಂಧಿಸಿದ ಅಭಿಪ್ರಾಯ ಸಂಗ್ರಹಿಸಿ, ದತ್ತಾಂಶ ಕಲೆ ಹಾಕಲು ಸಹಕಾರಿಯಾಗಿದೆ.

ಇನ್ನು ಅಕ್ಟೋವರ್‌ 26 ರಂದು ಬಿಡುಗಡೆಯಾದ ಗಿರ್ಮಿಟ್ ಚಿತ್ರದ ಟ್ರೇಲರ್ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ನಿರ್ದೇಶಕ ರವಿ ಬಸ್ರೂರು ಮತ್ತು ತಂಡದ ಪ್ರಯತ್ನದ ಫಲವಾಗಿ ಮೂಡಿ ಬರುತ್ತಿರುವ ನಾಲ್ಕನೇ ಚಿತ್ರ ಇದಾಗಿದ್ದು, ನ.೮ ರಂದು ಪ್ರಪಂಚದಾದ್ಯಂತ ತೆರೆ ಕಾಣಲಿದೆ.

ಚಿತ್ರದಲ್ಲಿ ನಾಯಕ, ನಾಯಕಿ ಪಾತ್ರದಲ್ಲಿ ಮತ್ತು ಮುಖ್ಯ ಭೂಮಿಕೆಯಲ್ಲಿ ಮಕ್ಕಳೇ ಪ್ರಧಾನ ಪಾತ್ರದಲ್ಲಿ ನಟಿಸಿರುವ ವಿಭಿನ್ನ ಚಿತ್ರ ಇದಾಗಿದೆ. ರಾಕಿಂಗ್ ಸ್ಟಾರ್ ಯಶ್, ನಟಿ ರಾಧಿಕಾ ಪಂಡಿತ್ ಸೇರಿದಂತೆ ಹಿರಿಯ ಕಲಾವಿದರು, ಮಕ್ಕಳ ಪಾತ್ರಗಳಿಗೆ ಹಿನ್ನೆಲೆ ಧ್ವನಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...