Homeಅಂತರಾಷ್ಟ್ರೀಯಪಾಕಿಸ್ತಾನಕ್ಕೆ ಹೊಸದಾಗಿ 11 ಬೇಲ್ ಔಟ್ ಷರತ್ತುಗಳನ್ನು ವಿಧಿಸಿದ ಐಎಂಎಫ್‌

ಪಾಕಿಸ್ತಾನಕ್ಕೆ ಹೊಸದಾಗಿ 11 ಬೇಲ್ ಔಟ್ ಷರತ್ತುಗಳನ್ನು ವಿಧಿಸಿದ ಐಎಂಎಫ್‌

- Advertisement -
- Advertisement -

ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) ತನ್ನ ಬೇಲ್‌ಔಟ್ ಕಾರ್ಯಕ್ರಮದ ಭಾಗವಾಗಿ ಮುಂದಿನ ನಿಧಿಯ ಕಂತನ್ನು ಬಿಡುಗಡೆ ಮಾಡಲು ಪಾಕಿಸ್ತಾನಕ್ಕೆ 11 ಹೊಸ ಷರತ್ತುಗಳನ್ನು ವಿಧಿಸಿದೆ ಎಂದು ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ಭಾನುವಾರ ವರದಿ ಮಾಡಿದೆ. ಇದರೊಂದಿಗೆ ಷರತ್ತುಗಳ ಸಂಖ್ಯೆ 50 ಕ್ಕೆ ಏರಿಕೆಯಾಗಿದೆ. ಪಾಕಿಸ್ತಾನಕ್ಕೆ ಹೊಸದಾಗಿ

ಶನಿವಾರ ಬಿಡುಗಡೆಯಾದ ಸಿಬ್ಬಂದಿ ಮಟ್ಟದ ವರದಿಯಲ್ಲಿ, ವಿಶ್ವಸಂಸ್ಥೆಯ ಹಣಕಾಸು ಸಂಸ್ಥೆ “ಭಾರತ ಮತ್ತು ಪಾಕಿಸ್ತಾನದ ನಡುವಿನ ಹೆಚ್ಚುತ್ತಿರುವ ಉದ್ವಿಗ್ನತೆಗಳು ಮುಂದುವರಿದರೆ ಅಥವಾ ಮತ್ತಷ್ಟು ಹದಗೆಟ್ಟರೆ, ಕಾರ್ಯಕ್ರಮದ ಹಣಕಾಸು, ಬಾಹ್ಯ ಮತ್ತು ಸುಧಾರಣಾ ಗುರಿಗಳಿಗೆ ಅಪಾಯಗಳನ್ನು ಹೆಚ್ಚಾಗಬಹುದು” ಎಂದು ಎಚ್ಚರಿಸಿದೆ.

ಮೇ 9 ರಂದು, ವಿಶ್ವಸಂಸ್ಥೆಯ ಹಣಕಾಸು ಸಂಸ್ಥೆ ತನ್ನ ಬೇಲ್‌ಔಟ್ ಪ್ಯಾಕೇಜ್‌ನ ಭಾಗವಾಗಿ ಪಾಕಿಸ್ತಾನಕ್ಕೆ ಹೊಸ $1 ಬಿಲಿಯನ್ ಆರ್ಥಿಕ ನೆರವು ಕಾರ್ಯಕ್ರಮವನ್ನು ಅನುಮೋದಿಸಿತ್ತಿ.

ಶನಿವಾರ ಐಎಂಎಫ್‌ ವಿಧಿಸಿದ ಷರತ್ತುಗಳಲ್ಲಿ ಪಾಕಿಸ್ತಾನ ಹೊಸ $62.2 ಬಿಲಿಯನ್ ಬಜೆಟ್‌ಗೆ ಸಂಸತ್ತಿನ ಅನುಮೋದನೆಯನ್ನು ಪಡೆಯುವುದು, ವಿದ್ಯುತ್ ಬಿಲ್‌ಗಳ ಮೇಲಿನ ಸಾಲ ಸೇವೆ ಸರ್‌ಚಾರ್ಜ್‌ನಲ್ಲಿ ಹೆಚ್ಚಳವನ್ನು ಜಾರಿಗೆ ತರುವುದು ಮತ್ತು ಮೂರು ವರ್ಷಗಳಿಗಿಂತ ಹಳೆಯದಾದ ಬಳಸಿದ ಕಾರುಗಳ ಆಮದಿನ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕುವುದು ಸೇರಿವೆ ಎಂದು ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

$7 ಬಿಲಿಯನ್ ಮೌಲ್ಯದ ಸಾಲಕ್ಕೆ ಸಂಬಂಧಿಸಿದಂತೆ ಐಎಂಎಫ್‌ ಹೊಸ ಷರತ್ತುಗಳನ್ನು ವಿಧಿಸಿದೆ ಎಂದು ವರದಿ ಹೇಳಿದೆ. 2025-26ರ ಬಜೆಟ್‌ಗೆ ಸಂಸತ್ತಿನ ಅನುಮೋದನೆಯನ್ನು ಪಡೆಯುವ ಷರತ್ತು “ಜೂನ್ ಅಂತ್ಯದ ವೇಳೆಗೆ ಕಾರ್ಯಕ್ರಮದ ಗುರಿಗಳನ್ನು ತಲುಪಲು ಐಎಂಎಫ್‌ ಸಿಬ್ಬಂದಿ ಒಪ್ಪಂದಕ್ಕೆ ಅನುಗುಣವಾಗಿತ್ತು” ಎಂದು ಪತ್ರಿಕೆ ವರದಿ ಮಾಡಿದೆ.

ಮತ್ತೊಂದು ಷರತ್ತು ಎಂದರೆ ಪಾಕಿಸ್ತಾನ ಸರ್ಕಾರವು ಐಎಮ್‌ಎಫ್‌ನ ಆಡಳಿತದ ಮೌಲ್ಯಮಾಪನದ ಶಿಫಾರಸುಗಳ ಆಧಾರದ ಮೇಲೆ ಆಡಳಿತ ಕ್ರಿಯಾ ಯೋಜನೆಯನ್ನು ಪ್ರಕಟಿಸಬೇಕು ಎಂದು ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಮುಂದಿನ ಹಣಕಾಸು ವರ್ಷಕ್ಕೆ ದೇಶದ ರಕ್ಷಣಾ ಬಜೆಟ್ $8.5 ಬಿಲಿಯನ್ ಎಂದು ಐಎಮ್‌ಎಫ್‌ ವರದಿ ಅಂದಾಜಿಸಿದೆ ಎಂದು ಪತ್ರಿಕೆ ವರದಿ ಮಾಡಿದೆ. ಆದಾಗ್ಯೂ, ಈ ತಿಂಗಳ ಆರಂಭದಲ್ಲಿ ಭಾರತದೊಂಗಿನ ಮಿಲಿಟರಿ ಉದ್ವಿಗ್ನತೆ ಹೆಚ್ಚಾದ ನಂತರ ಪಾಕಿಸ್ತಾನ ರಕ್ಷಣೆಗೆ 18% ಹೆಚ್ಚಿನ ಹಂಚಿಕೆಯನ್ನು ಸೂಚಿಸಿದೆ ಎಂದು ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಮೇ 7 ರಂದು ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿದಾಗ ಉದ್ವಿಗ್ನತೆ ಹೆಚ್ಚಾಯಿತು. ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಈ ದಾಳಿಗಳು ನಡೆದವು. ಇದಕ್ಕೆ ಪ್ರತಿಕಾರವಾಗಿ ಪಾಕಿಸ್ತಾನ ಸೇನೆಯು ಜಮ್ಮು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಭಾರತೀಯ ಹಳ್ಳಿಗಳ ಮೇಲೆ ಪದೇ ಪದೇ ಶೆಲ್ ದಾಳಿ ಮಾಡಿತ್ತು. ಈ ವೇಳೆ ಕನಿಷ್ಠ 22 ಭಾರತೀಯ ನಾಗರಿಕರು ಮತ್ತು ಏಳು ರಕ್ಷಣಾ ಸಿಬ್ಬಂದಿ ಸಾವನ್ನಪ್ಪಿದರು.

ಮೇ 10 ರಂದು, ನಾಲ್ಕು ದಿನಗಳ ಸಂಘರ್ಷದ ನಂತರ ಗುಂಡಿನ ದಾಳಿಯನ್ನು ನಿಲ್ಲಿಸಲು ಭಾರತ ಮತ್ತು ಪಾಕಿಸ್ತಾನ “ಒಪ್ಪಂದ” ಮಾಡಿಕೊಂಡವು.

ಕಳೆದ ಎರಡು ವಾರಗಳಲ್ಲಿ ಎರಡು ನೆರೆಯ ರಾಷ್ಟ್ರಗಳ ನಡುವಿನ ಉದ್ವಿಗ್ನತೆ ಹೆಚ್ಚಿರುವುದನ್ನು ಐಎಂಎಫ್ ಗಮನಿಸಿದೆ. ಆದಾಗ್ಯೂ, ಮಾರುಕಟ್ಟೆಯ ಪ್ರತಿಕ್ರಿಯೆ ಸಾಧಾರಣವಾಗಿತ್ತು, ಪಾಕಿಸ್ತಾನದ ಷೇರು ಮಾರುಕಟ್ಟೆಯು ಅದರ ಇತ್ತೀಚಿನ ಲಾಭಗಳಲ್ಲಿ ಹೆಚ್ಚಿನದನ್ನು ಉಳಿಸಿಕೊಂಡಿದೆ ಎಂದು ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಮೇ 9 ರಂದು, ಪಾಕಿಸ್ತಾನಕ್ಕೆ ಐಎಂಎಫ್‌ನ ಕಾರ್ಯಕ್ರಮಗಳ ಪರಿಣಾಮಕಾರಿತ್ವದ ಬಗ್ಗೆ ಭಾರತವು ಕಳವಳ ವ್ಯಕ್ತಪಡಿಸಿತು. ಸಾಲದ ಕಳಪೆ ದಾಖಲೆಯನ್ನು ಪರಿಗಣಿಸಿ ಮತ್ತು ಸರ್ಕಾರಿ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಗೆ ಸಾಲವಾಗಿ ಪಡೆದ ಹಣಕಾಸು ನಿಧಿಯನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯ ಬಗ್ಗೆ ಕೂಡಾ ಭಾರತ ಎಚ್ಚರಿಸಿತ್ತು.

ಶುಕ್ರವಾರದಂದು ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪಾಕಿಸ್ತಾನಕ್ಕೆ ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ ನೀಡುವ ಯಾವುದೇ ಹಣಕಾಸಿನ ನೆರವು “ಭಯೋತ್ಪಾದನಾ ನಿಧಿಗಿಂತ ಕಡಿಮೆಯಿಲ್ಲ” ಮತ್ತು ಅದನ್ನು ಮರುಪರಿಶೀಲಿಸಬೇಕು ಎಂದು ಹೇಳಿದ್ದರು. ಪಾಕಿಸ್ತಾನಕ್ಕೆ ಹೊಸದಾಗಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭದ್ರತಾ ಉಲ್ಲಂಘನೆ | ಪಶ್ಚಿಮ ಬಂಗಾಳದ ಮತದಾರರು ಪಟ್ಟಿಯಿಂದ ಡಿಲೀಟ್!

ಭದ್ರತಾ ಉಲ್ಲಂಘನೆ | ಪಶ್ಚಿಮ ಬಂಗಾಳದ ಮತದಾರರು ಪಟ್ಟಿಯಿಂದ ಡಿಲೀಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...