Homeಮುಖಪುಟಪಾಕಿಸ್ತಾನಕ್ಕೆ ಐಎಂಎಫ್ ಸಾಲ | ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದಂತೆ ಎಂದ ರಾಜನಾಥ್ ಸಿಂಗ್

ಪಾಕಿಸ್ತಾನಕ್ಕೆ ಐಎಂಎಫ್ ಸಾಲ | ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದಂತೆ ಎಂದ ರಾಜನಾಥ್ ಸಿಂಗ್

- Advertisement -
- Advertisement -

ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಯಿಂದ ಪಾಕಿಸ್ತಾನಕ್ಕೆ ನೀಡಲಾಗುವ ಯಾವುದೇ ಹಣಕಾಸಿನ ನೆರವು “ಭಯೋತ್ಪಾದನಾ ನಿಧಿಗಿಂತ ಕಡಿಮೆಯಿಲ್ಲ” ಮತ್ತು ಅದನ್ನು ಮರುಪರಿಶೀಲಿಸಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಹೇಳಿದ್ದಾರೆ. ಐಎಂಎಫ್‌ ಮೇ 9 ರಂದು ಪಾಕಿಸ್ತಾನಕ್ಕೆ ತನ್ನ ಬೇಲ್‌ಔಟ್ ಪ್ಯಾಕೇಜ್‌ನ ಭಾಗವಾಗಿ ಅನುಮೋದಿಸಿದ ಹೊಸ $1 ಬಿಲಿಯನ್ ಹಣಕಾಸು ನೆರವು ಕಾರ್ಯಕ್ರಮದ ಬಗ್ಗೆ ಉಲ್ಲೇಖಿ ಅವರು ಈ ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನಕ್ಕೆ ಐಎಂಎಫ್ ಸಾಲ

ಐಎಂಎಫ್‌ನ ನಿಧಿಯ ಬಹುಪಾಲು ಭಾಗವನ್ನು ಪಾಕಿಸ್ತಾನ ದುರುಪಯೋಗಪಡಿಸಿಕೊಳ್ಳುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೊಂಡಿದ್ದಾರೆ.

“ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ ಪಡೆದ $1 ಬಿಲಿಯನ್ ನಿಧಿಯ ಹೆಚ್ಚಿನ ಭಾಗವನ್ನು ಪಾಕಿಸ್ತಾನ ಭಯೋತ್ಪಾದಕ ಮೂಲಸೌಕರ್ಯಕ್ಕಾಗಿ ಖರ್ಚು ಮಾಡುತ್ತದೆ ಎಂದು ನಾನು ನಂಬುತ್ತೇನೆ…” ಎಂದು ಭುಜ್‌ನ ವಾಯುಪಡೆಯ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಹೇಳಿದ್ದಾರೆ.

“ಇದನ್ನು ಅಂತರರಾಷ್ಟ್ರೀಯ ಸಂಸ್ಥೆಯಾದ ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ [ಭಯೋತ್ಪಾದನೆಗೆ] ಪರೋಕ್ಷ ಹಣಕಾಸು ಎಂದು ಪರಿಗಣಿಸಲಾಗುವುದಿಲ್ಲವೇ?. ಈ ಪ್ರಶ್ನೆಯನ್ನು ನಾನು ಜಗತ್ತಿಗೆ ಕೇಳಲು ಬಯಸುತ್ತೇನೆ.” ಎಂದು ಅವರು ಹೇಳಿದ್ದಾರೆ.

“ಇಂದು ಪಾಕಿಸ್ತಾನಕ್ಕೆ ನೀಡುವ ಯಾವುದೇ ಜಾಗತಿಕ ನೆರವು ಅಥವಾ ನಿಧಿ ಭಯೋತ್ಪಾದನಾ ನಿಧಿಗಿಂತ ಕಡಿಮೆಯಿಲ್ಲ ಎಂದು ನಾನು ನಂಬುತ್ತೇನೆ. ಪಾಕಿಸ್ತಾನಕ್ಕೆ ಐಎಂಎಫ್‌ ನೀಡಿರುವ $1 ಬಿಲಿಯನ್ ಸಹಾಯವನ್ನು ಮರುಪರಿಶೀಲಿಸಬೇಕೆಂದು ಭಾರತವು ಬಯಸುತ್ತದೆ.” ಎಂದು ಅವರು ಹೇಳಿದ್ದಾರೆ.

ಭಾರತವು ಐಎಂಎಫ್‌ಗೆ ನೀಡುವ ಹಣವನ್ನು ಪಾಕಿಸ್ತಾನ ಅಥವಾ ಯಾವುದೇ ದೇಶದಲ್ಲಿ ಭಯೋತ್ಪಾದಕ ಮೂಲಸೌಕರ್ಯಗಳನ್ನು ಸೃಷ್ಟಿಸಲು ಬಳಸುವುದನ್ನು ಬಯಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಈ ಹಣಕಾಸನ್ನು ಪಾಕಿಸ್ತಾನವು ಸರ್ಕಾರಿ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಗೆ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯ ಬಗ್ಗೆ ಭಾರತವು ಮೇ 9 ರಂದು ಕಳವಳ ವ್ಯಕ್ತಪಡಿಸಿತ್ತು.

ಮೇ 10 ರಂದು, ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಐಎಂಎಫ್ ನಿಧಿಯು ಭಾರತದೊಂದಿಗಿನ ಸಂಘರ್ಷದಲ್ಲಿ ಪಾಕಿಸ್ತಾನಕ್ಕೆ ಸಹಾಯ ಮಾಡುತ್ತಿದೆ ಎಂದು ಹೇಳಿದ್ದರು. ಪಾಕಿಸ್ತಾನಕ್ಕೆ ಐಎಂಎಫ್ ಸಾಲ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಹಲ್ಗಾಮ್ ದಾಳಿಯಲ್ಲಿ ಭದ್ರತಾ ವೈಪಲ್ಯ ಎತ್ತಿತೋರಿಸಿದ್ದ ‘ಗುಜರಾತ್ ಸಮಾಚಾರ್’ ಪತ್ರಿಕೆಯ ಮಾಲೀಕ ಬಾಹುಬಲಿ ಶಾ ಇಡಿ ವಶಕ್ಕೆ

ಪಹಲ್ಗಾಮ್ ದಾಳಿಯಲ್ಲಿ ಭದ್ರತಾ ವೈಪಲ್ಯ ಎತ್ತಿತೋರಿಸಿದ್ದ ‘ಗುಜರಾತ್ ಸಮಾಚಾರ್’ ಪತ್ರಿಕೆಯ ಮಾಲೀಕ ಬಾಹುಬಲಿ ಶಾ ಇಡಿ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...