Homeಮುಖಪುಟಪೋಕ್ಸೋ ಪ್ರಕರಣದಲ್ಲಿ ತಕ್ಷಣದ ಬಂಧನವು ಬಿಜೆಪಿ ಆರೋಪಿಗೆ ಅನ್ವಯಿಸುವುದಿಲ್ಲವೇ?: ಕೇಂದ್ರಕ್ಕೆ ಸಿಬಲ್ ತರಾಟೆ

ಪೋಕ್ಸೋ ಪ್ರಕರಣದಲ್ಲಿ ತಕ್ಷಣದ ಬಂಧನವು ಬಿಜೆಪಿ ಆರೋಪಿಗೆ ಅನ್ವಯಿಸುವುದಿಲ್ಲವೇ?: ಕೇಂದ್ರಕ್ಕೆ ಸಿಬಲ್ ತರಾಟೆ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಮಾಡಿರುವ ಲೈಂಗಿಕ ಕಿರುಕುಳದ ಆರೋಪದ ವಿಚಾರವಾಗಿ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪೋಕ್ಸೊ ಮತ್ತು ತಕ್ಷಣದ ಬಂಧನವು ಬಿಜೆಪಿಗೆ ಸೇರಿರುವ ಕಾರಣ ಸಿಂಗ್ ಹೊರತುಪಡಿಸಿ ಎಲ್ಲಾ ಆರೋಪಿಗಳಿಗೆ ಮಾತ್ರ ಅನ್ವಯಿಸುತ್ತದೆಯೇ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿಬಲ್, ”ಬ್ರಿಜ್ ಭೂಷಣ್ ಸಿಂಗ್: ಪೋಕ್ಸೊ ಅರ್ಜಿ ಮತ್ತು 164 ಹೇಳಿಕೆಗಳ ನಂತರ ತಕ್ಷಣದ ಬಂಧನವು ಬ್ರಿಜ್ ಭೂಷಣ್ ಹೊರತುಪಡಿಸಿ ಎಲ್ಲಾ ಆರೋಪಿಗಳಿಗೆ ಅನ್ವಯಿಸುತ್ತದೆಯೇ?ಏಕೆಂದರೆ ಅವರು: 1) ಬಿಜೆಪಿಗೆ ಸೇರಿದವರು 2) ಐಕಾನಿಕ್ ಮಹಿಳಾ ಕುಸ್ತಿಪಟುಗಳು ಬೇಕಾಗಿಲ್ಲ; ಮತಗಳು ಮಾತ್ರ ಮುಖ್ಯ ! 3) ಸರ್ಕಾರಕ್ಕೆ ಕಾಳಜಿ ಇಲ್ಲ. ಇದು ನನ್ನ ಹೊಸ ಭಾರತವೇ?” ಎಂದು ಕೇಳಿದ್ದಾರೆ.

ಒಲಿಂಪಿಕ್ ಪದಕ ವಿಜೇತ ಕುಸ್ತಿಪಟುಗಳಾದ ಬಜರಂಗ್ ಪೂನಿಯಾ ಮತ್ತು ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಅವರು ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ ಮತ್ತು ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಕಳೆದ ತಿಂಗಳು ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದ ಬಳಿಕ ಸಿಂಗ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಮೊದಲ ಎಫ್‌ಐಆರ್ ಅಪ್ರಾಪ್ತ ಕ್ರೀಡಾಪಟು ಲೈಂಗಿಕ ಕಿರುಕಳದ ಆರೋಪಕ್ಕೆ ಸಂಬಂಧಿಸಿದೆ. ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಜೊತೆಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆಯಡಿಯಲ್ಲಿ ಪ್ರಕರಣ ನೋಂದಾಯಿಸಲಾಗಿದೆ. ಎರಡನೆಯದನ್ನು ವಯಸ್ಕರ ದೂರುಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಮೇ 28ರಂದು ಜಂತರ್ ಮಂತರ್ ಬಳಿಯ ತಮ್ಮ ಪ್ರತಿಭಟನಾ ಸ್ಥಳದಿಂದ ಹೊಸ ಸಂಸತ್ ಭವನದ ಕಡೆಗೆ ಮೆರವಣಿಗೆ ನಡೆಸಲು ಪ್ರಯತ್ನಿಸುತ್ತಿದ್ದಾಗ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ತಡೆದು ಬಂಧಿಸಿದರು. ವಿಶ್ವ ಚಾಂಪಿಯನ್‌ಶಿಪ್‌ಗಳ ಕಂಚಿನ ವಿಜೇತ ವಿನೇಶ್ ಮತ್ತು ಒಲಿಂಪಿಕ್ ಪದಕ ವಿಜೇತ ಬಜರಂಗ್ ಜೊತೆಗೆ ಮಲಿಕ್ ಅವರನ್ನು ಬಂಧಿಸಿ ನಂತರ ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘನೆಗಾಗಿ ಕುಸ್ತಿಪಟುಗಳ ವಿರುದ್ಧ ಎಫ್‌ಐಆರ್ ದಾಖಲಿಸಿದರು.

ಇದನ್ನೂ ಓದಿ: ಕುಸ್ತಿಪಟುಗಳ ಪ್ರತಿಭಟನೆ ಕುರಿತು ಪ್ರಶ್ನೆ ಕೇಳುತ್ತಿದ್ದಂತೆ ಓಡಿಹೋದ ಕೇಂದ್ರ ಸಚಿವೆ: ‘ತೀಕ್ಷ್ಣ ಪ್ರತಿಕ್ರಿಯೆ’ ಎಂದು ಕಾಂಗ್ರೆಸ್ ಲೇವಡಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುತ್ತಿದ್ದಾರೆ, ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು: ಮಲ್ಲಿಕಾರ್ಜುನ ಖರ್ಗೆ

0
'ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಮೇಲೆ ಬುಲ್ಡೋಜರ್ ಹರಿಸಲಿದೆ' ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಚುನಾವಣಾ ಆಯೋಗ...