Homeಮುಖಪುಟಕೂಡಲೇ ಡಾ.ಕಫೀಲ್ ಖಾನ್ ಬಿಡುಗಡೆ ಮಾಡಿ, NSA ಪ್ರಕರಣ ಕೈಬಿಡಿ: ಅಲಹಾಬಾದ್ ಹೈಕೋರ್ಟ್

ಕೂಡಲೇ ಡಾ.ಕಫೀಲ್ ಖಾನ್ ಬಿಡುಗಡೆ ಮಾಡಿ, NSA ಪ್ರಕರಣ ಕೈಬಿಡಿ: ಅಲಹಾಬಾದ್ ಹೈಕೋರ್ಟ್

ಸಿಎಎ ವಿರೋಧಿ ಹೋರಾಟಗಳು ಉತ್ತುಂಗದಲ್ಲಿದ್ದಾಗ 2019 ರ ಡಿಸೆಂಬರ್ 13 ರಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಡಾ.ಕಫೀಲ್‌ ಖಾನ್ ಅವರನ್ನು ಜನವರಿಯಲ್ಲಿ ಮುಂಬೈನಲ್ಲಿ ಬಂಧಿಸಲಾಗಿತ್ತು.

- Advertisement -
- Advertisement -

ರಾಷ್ಟ್ರೀಯ ಭದ್ರತಾ ಕಾಯಿದೆಯಡಿ (ಎನ್‌ಎಸ್‌ಎ) ಬಂಧನದಲ್ಲಿರುವ ಉತ್ತರ ಪ್ರದೇಶದ ಡಾ.ಕಫೀಲ್‌ ಖಾನ್‌ ಅವರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಮತ್ತು ಅವರ ಮೇಲಿನ NSA ಪ್ರಕರಣ ಕೈಬಿಡುವಂತೆ ಇಂದು ಅಲಹಾಬಾದ್ ಹೈಕೋರ್ಟ್ ಆದೇಶಿಸಿದೆ.

ಸಿಎಎ ವಿರೋಧಿ ಹೋರಾಟಗಳು ಉತ್ತುಂಗದಲ್ಲಿದ್ದಾಗ 2019 ರ ಡಿಸೆಂಬರ್ 13 ರಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಡಾ.ಕಫೀಲ್‌ ಖಾನ್ ಅವರನ್ನು ಜನವರಿಯಲ್ಲಿ ಮುಂಬೈನಲ್ಲಿ ಬಂಧಿಸಲಾಗಿತ್ತು.

ಕಫೀಲ್‌ ಖಾನ್‌ರವರ ಭಾಷಣವು ಹಿಂಸೆಯನ್ನು ಪ್ರಚೋದಿಸುವಂತಿರಲಿಲ್ಲ. ಅದು ರಾಷ್ಟ್ರೀಯ ಏಕತೆ ಮತ್ತು ಜನರ ನಡುವೆ ಭಾವೈಕ್ಯತೆಯನ್ನು ಸಾರುವಂತೆ ಕರೆ ಕೊಡುವಂತಿತ್ತು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ತಮ್ಮನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ಡಾ.ಕಫೀಲ್‌ ಖಾನ್‌ ಈ ಹಿಂದೆ ಹಲವು ಮನವಿಗಳನ್ನು ಮಾಡಿದ್ದರು. ಕೊನೆಗೂ ಅವರ ಅರ್ಜಿಯನ್ನು ಮಾನ್ಯ ಮಾಡಿದ ಅಲಹಾಬಾದ್ ಹೈಕೋರ್ಟ್‌ನ ನ್ಯಾ.ಸುಮಿತ್ರಾ ದಯಾಳ್‌ ಸಿಂಗ್‌ ಮತ್ತು ನ್ಯಾ.ಗೋವಿಂದ ಮಾಥೂರ್‌ ಅವರಿದ್ದ ಪೀಠವು ಅವರ ಬಿಡುಗಡೆಗೆ ಸರ್ಕಾರಕ್ಕೆ ಸೂಚಿಸಿದೆ.

“ನಾವು ಅವರನ್ನು ಮಥುರಾ ಜೈಲಿನಲ್ಲಿ ಭೇಟಿಯಾಗಲು ಹೋದೆವು. ಬಂಧನಕ್ಕೊಳಗಾದ ನಂತರ ಅವರನ್ನು ಜೈಲಿಗೆ ಕರೆತಂದಾಗ, ಐದು ದಿನಗಳ ಕಾಲ ಅವರಿಗೆ ಆಹಾರವನ್ನು ನೀಡಲ್ಲ ಎಂದು ಅವರು ನನಗೆ ಹೇಳಿದರು. ಅವರು ತಂಗಿರುವ ಬ್ಯಾರಕ್ ತುಂಬಾ ಚಿಕ್ಕದಾಗಿದ್ದು, ಸುಮಾರು 100-150 ಜನರನ್ನು ಅಲ್ಲಿ ದಾಖಲಿಸಲಾಗಿದೆ. ಹಾಗಾಗಿ ಅವರ ಜೀವವು ಅಲ್ಲಿ ಅಪಾಯದಲ್ಲಿರಬಹುದು” ಎಂದು ಹಿಂದೆ ಖಾನ್ ಪತ್ನಿ ಶಬಿಸ್ಟಾ ಖಾನ್ ಹೈಕೋರ್ಟ್‌ಗೆ ಪತ್ರ ಬರೆದಿದ್ದರು.

ಇದನ್ನೂ ಓದಿ: ಡಾ.ಕಫೀಲ್ ಖಾನ್ ಜೀವಕ್ಕೆ ಅಪಾಯವಿದೆ : ಖಾನ್‌ ಪತ್ನಿಯ ಆರೋಪ

ಫೆಬ್ರವರಿ 13ರಂದು ಅವರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಆರೋಪ ಹೊರಿಸಿದ್ದು ಪ್ರಸ್ತುತ ಮಥುರಾ ಜೈಲಿನಲ್ಲಿದ್ದಾರೆ. ಆಗಸ್ಟ್ 16ರಂದು NSA ಪ್ರಕರಣದಲ್ಲಿ ಇನ್ನು ಮೂರು ತಿಂಗಳ ಕಾಲ ಅವರ ಬಂಧನವನ್ನು ವಿಸ್ತರಿಸುವಂತೆ ಕೇಳಿಕೊಳ್ಳಲಾಗಿತ್ತು.

ಆದರೆ ಇಂದು ವಿಚಾರಣೆ ನಡೆಸಿದ ನ್ಯಾಯಾಲಯ‌ ಎನ್‌ಎಸ್‌ಎ ಕಾಯಿದೆಯಡಿ ಡಾ. ಕಫೀಲ್‌ ಖಾನ್‌ ಬಂಧನ  ಕಾನೂನಿನಡಿ ಮಾನ್ಯವಲ್ಲ. ಹಾಗಾಗಿ ಅವರನ್ನು ಕೂಡಲೇ ಬಿಡುಗಡೆಗೊಳಿಸಿ ಎಂದು ಹೇಳಿದೆ.


ಇದನ್ನೂ ಓದಿ: ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...