Homeಮುಖಪುಟಕೂಡಲೇ ಡಾ.ಕಫೀಲ್ ಖಾನ್ ಬಿಡುಗಡೆ ಮಾಡಿ, NSA ಪ್ರಕರಣ ಕೈಬಿಡಿ: ಅಲಹಾಬಾದ್ ಹೈಕೋರ್ಟ್

ಕೂಡಲೇ ಡಾ.ಕಫೀಲ್ ಖಾನ್ ಬಿಡುಗಡೆ ಮಾಡಿ, NSA ಪ್ರಕರಣ ಕೈಬಿಡಿ: ಅಲಹಾಬಾದ್ ಹೈಕೋರ್ಟ್

ಸಿಎಎ ವಿರೋಧಿ ಹೋರಾಟಗಳು ಉತ್ತುಂಗದಲ್ಲಿದ್ದಾಗ 2019 ರ ಡಿಸೆಂಬರ್ 13 ರಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಡಾ.ಕಫೀಲ್‌ ಖಾನ್ ಅವರನ್ನು ಜನವರಿಯಲ್ಲಿ ಮುಂಬೈನಲ್ಲಿ ಬಂಧಿಸಲಾಗಿತ್ತು.

- Advertisement -
- Advertisement -

ರಾಷ್ಟ್ರೀಯ ಭದ್ರತಾ ಕಾಯಿದೆಯಡಿ (ಎನ್‌ಎಸ್‌ಎ) ಬಂಧನದಲ್ಲಿರುವ ಉತ್ತರ ಪ್ರದೇಶದ ಡಾ.ಕಫೀಲ್‌ ಖಾನ್‌ ಅವರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಮತ್ತು ಅವರ ಮೇಲಿನ NSA ಪ್ರಕರಣ ಕೈಬಿಡುವಂತೆ ಇಂದು ಅಲಹಾಬಾದ್ ಹೈಕೋರ್ಟ್ ಆದೇಶಿಸಿದೆ.

ಸಿಎಎ ವಿರೋಧಿ ಹೋರಾಟಗಳು ಉತ್ತುಂಗದಲ್ಲಿದ್ದಾಗ 2019 ರ ಡಿಸೆಂಬರ್ 13 ರಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಡಾ.ಕಫೀಲ್‌ ಖಾನ್ ಅವರನ್ನು ಜನವರಿಯಲ್ಲಿ ಮುಂಬೈನಲ್ಲಿ ಬಂಧಿಸಲಾಗಿತ್ತು.

ಕಫೀಲ್‌ ಖಾನ್‌ರವರ ಭಾಷಣವು ಹಿಂಸೆಯನ್ನು ಪ್ರಚೋದಿಸುವಂತಿರಲಿಲ್ಲ. ಅದು ರಾಷ್ಟ್ರೀಯ ಏಕತೆ ಮತ್ತು ಜನರ ನಡುವೆ ಭಾವೈಕ್ಯತೆಯನ್ನು ಸಾರುವಂತೆ ಕರೆ ಕೊಡುವಂತಿತ್ತು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ತಮ್ಮನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ಡಾ.ಕಫೀಲ್‌ ಖಾನ್‌ ಈ ಹಿಂದೆ ಹಲವು ಮನವಿಗಳನ್ನು ಮಾಡಿದ್ದರು. ಕೊನೆಗೂ ಅವರ ಅರ್ಜಿಯನ್ನು ಮಾನ್ಯ ಮಾಡಿದ ಅಲಹಾಬಾದ್ ಹೈಕೋರ್ಟ್‌ನ ನ್ಯಾ.ಸುಮಿತ್ರಾ ದಯಾಳ್‌ ಸಿಂಗ್‌ ಮತ್ತು ನ್ಯಾ.ಗೋವಿಂದ ಮಾಥೂರ್‌ ಅವರಿದ್ದ ಪೀಠವು ಅವರ ಬಿಡುಗಡೆಗೆ ಸರ್ಕಾರಕ್ಕೆ ಸೂಚಿಸಿದೆ.

“ನಾವು ಅವರನ್ನು ಮಥುರಾ ಜೈಲಿನಲ್ಲಿ ಭೇಟಿಯಾಗಲು ಹೋದೆವು. ಬಂಧನಕ್ಕೊಳಗಾದ ನಂತರ ಅವರನ್ನು ಜೈಲಿಗೆ ಕರೆತಂದಾಗ, ಐದು ದಿನಗಳ ಕಾಲ ಅವರಿಗೆ ಆಹಾರವನ್ನು ನೀಡಲ್ಲ ಎಂದು ಅವರು ನನಗೆ ಹೇಳಿದರು. ಅವರು ತಂಗಿರುವ ಬ್ಯಾರಕ್ ತುಂಬಾ ಚಿಕ್ಕದಾಗಿದ್ದು, ಸುಮಾರು 100-150 ಜನರನ್ನು ಅಲ್ಲಿ ದಾಖಲಿಸಲಾಗಿದೆ. ಹಾಗಾಗಿ ಅವರ ಜೀವವು ಅಲ್ಲಿ ಅಪಾಯದಲ್ಲಿರಬಹುದು” ಎಂದು ಹಿಂದೆ ಖಾನ್ ಪತ್ನಿ ಶಬಿಸ್ಟಾ ಖಾನ್ ಹೈಕೋರ್ಟ್‌ಗೆ ಪತ್ರ ಬರೆದಿದ್ದರು.

ಇದನ್ನೂ ಓದಿ: ಡಾ.ಕಫೀಲ್ ಖಾನ್ ಜೀವಕ್ಕೆ ಅಪಾಯವಿದೆ : ಖಾನ್‌ ಪತ್ನಿಯ ಆರೋಪ

ಫೆಬ್ರವರಿ 13ರಂದು ಅವರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಆರೋಪ ಹೊರಿಸಿದ್ದು ಪ್ರಸ್ತುತ ಮಥುರಾ ಜೈಲಿನಲ್ಲಿದ್ದಾರೆ. ಆಗಸ್ಟ್ 16ರಂದು NSA ಪ್ರಕರಣದಲ್ಲಿ ಇನ್ನು ಮೂರು ತಿಂಗಳ ಕಾಲ ಅವರ ಬಂಧನವನ್ನು ವಿಸ್ತರಿಸುವಂತೆ ಕೇಳಿಕೊಳ್ಳಲಾಗಿತ್ತು.

ಆದರೆ ಇಂದು ವಿಚಾರಣೆ ನಡೆಸಿದ ನ್ಯಾಯಾಲಯ‌ ಎನ್‌ಎಸ್‌ಎ ಕಾಯಿದೆಯಡಿ ಡಾ. ಕಫೀಲ್‌ ಖಾನ್‌ ಬಂಧನ  ಕಾನೂನಿನಡಿ ಮಾನ್ಯವಲ್ಲ. ಹಾಗಾಗಿ ಅವರನ್ನು ಕೂಡಲೇ ಬಿಡುಗಡೆಗೊಳಿಸಿ ಎಂದು ಹೇಳಿದೆ.


ಇದನ್ನೂ ಓದಿ: ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....