Homeಮುಖಪುಟಮುಂಬೈನಲ್ಲಿ ಉಪವಾಸ ಧರಣಿ ಆರಂಭಿಸಿದ ಕರ್ನಾಟಕದ ವಲಸೆ ಕಾರ್ಮಿಕರು

ಮುಂಬೈನಲ್ಲಿ ಉಪವಾಸ ಧರಣಿ ಆರಂಭಿಸಿದ ಕರ್ನಾಟಕದ ವಲಸೆ ಕಾರ್ಮಿಕರು

- Advertisement -
- Advertisement -

ಕಳೆದ 45 ದಿನಗಳಿಂದ ಮಹಾರಾಷ್ಟ್ರದ ನವಿ ಮುಂಬೈನ ವಾಸಿ ಚಿಡ್ಕೊ ವಸ್ತುಪ್ರದರ್ಶನ ಕೇಂದ್ರದ ನಿರಾಶ್ರಿತ ಶಿಬಿರದಲ್ಲಿ ಕರ್ನಾಟಕದ 180ಕ್ಕೂ ಹೆಚ್ಚು ವಲಸೆ ಕಾರ್ಮಿಕರು ಮತ್ತು ಅವರ ಕುಟುಂಬ ಗುರುವಾರ ಮಧ್ಯಾಹ್ನದಿಂದ ಉಪವಾಸ ಧರಣಿ ಆರಂಭಿಸಿದ್ದಾರೆ. ಈಗ ಅದೇ ಶಿಬಿರವನ್ನು ಕೋವಿಡ್‌ ಕೇರ್‌ ಸೆಂಟರ್‌ ಆಗಿ ಪರಿವರ್ತಿಸುತ್ತಿರುವುದರಿಂದ ನಮ್ಮನ್ನು ಯಾವಾಗ ನಮ್ಮ ಊರುಗಳಿಗೆ ಕಳಿಸುಲಾಗುತ್ತದೆ ಎಂಬ ಮಾಹಿತಿ ನೀಡಬೇಕೆಂದು ಕಾರ್ಮಿಕರು ಪಟ್ಟು ಹಿಡಿದಿದ್ದಾರೆ.

ನಮ್ಮನ್ನು ಚಿಡ್ಕೊ ವಸ್ತುಪ್ರದರ್ಶನ ಕೇಂದ್ರದ ನಿರಾಶ್ರಿತ ಶಿಬಿರದಿಂದ ಬೇರೆಡೆಗೆ ವರ್ಗಾಹಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಇದು ಸರಿಯಲ್ಲಿ. ಬದಲಿಗೆ ಬಸ್‌ ಅಥವಾ ರೈಲು ವ್ಯವಸ್ಥೆ ಮಾಡಿ ನಮ್ಮನ್ನು ನಮ್ಮ ಊರುಗಳಿಗೆ ಕಳಿಸಿಕೊಡಬೇಕು. ನಾವು ಇಲ್ಲಿ ದಿನಗೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದೇವೆ. ಲಾಕ್‌ಡೌನ್‌ ಘೋಷಣೆಯಾದಾಗ ಪೊಲೀಸರು ನಮ್ಮನ್ನು ಇಲ್ಲಿಗೆ ಕರೆತಂದಿದ್ದಾರೆ ಎಂದು ಕೆ ರಾಥೋಡ್‌ ಎಂಬುವ ಕಾರ್ಮಿಕರೊಬ್ಬರೂ ಆರೋಪಿಸಿದ್ದಾರೆ ಎಂದು ಟೈಮ್ಸ್‌ ಆಪ್‌ ಇಂಡಿಯಾ ವರದಿ ಮಾಡಿದೆ.

ಮತ್ತೊಬ್ಬ ವಲಸೆ ಕಾರ್ಮಿಕರಾದ ಹರಿಶ್ಚಂದ್ರ ಜಾಧವ್‌ ಮಾತನಾಡಿ, ಕೆಲ ಆರೋಗ್ಯ ಅಧಿಕಾರಿಗಳು ಈಗಾಗಲೇ ಇಲ್ಲಿ ಕೆಲವು ವೈದ್ಯಕೀಯ ಉಪಕರಣಗಳನ್ನು ಅಳವಡಿಸುತ್ತಿದ್ದಾರೆ. ನಮ್ಮನ್ನು ನಮ್ಮ ಊರಿಗೆ ಯಾವಾಗ ಕರೆದೊಯ್ಯುತ್ತೇವೆ ಎಂದು ಯಾರೂ ಹೇಳುತ್ತಿಲ್ಲ. ಹಾಗಾಗಿ ನಾವು ಊಟ ಮಾಡುವುದನ್ನು ಬಿಟ್ಟಿದ್ದೇವೆ. ಅವರಿಂದ ಸಮರ್ಪಕ ಉತ್ತರ ಬರುವವರೆಗೂ ಊಟ ಮಾಡುವುದಿಲ್ಲ, ಉಪವಾಸ ಮಾಡುತ್ತೇವೆ ಎಂದಿದ್ದಾರೆ.

ಇಲ್ಲಿರುವ ವಲಸೆ ಕಾರ್ಮಿಕರಿಗೆ ದಿನನಿತ್ಯ ಊಟ ಸರಬರಾಜು ಮಾಡುವ ಇನ್ಫೋಟೆಕ್‌ ಎಂಟರ್‌ಪ್ರೀನರ್‌ ಅಂಡ್‌ ಮ್ಯಾನೇಜಿಂಗ್‌ ಡೈರಕ್ಟರ್‌ ಆಫ್‌ ಇಂಟರ್‌ನೆಟ್‌ ಬ್ರಾಡ್‌ಬ್ಯಾಂಡ್‌ನ ಭೂಪೇಶ್‌ ಗುಪ್ತ ಪ್ರತಿಕ್ರಿಯಿಸಿ, “ಸದ್ಯಕ್ಕೆ 200 ಜನ ಇಲ್ಲಿ ವಾಸಿಸುತ್ತಿದ್ದಾರೆ. ಅದರಲ್ಲಿ ಕರ್ನಾಟಕದವರೆ ಹೆಚ್ಚು. ಅವರು ಸಹಜವಾಗಿ ಯಾವಾಗ ತಮ್ಮೂರಿಗೆ ಹೋಗಬಹುದೆಂಬ ಭರವಸೆಯಲ್ಲಿದ್ದಾರೆ. ಅವರ ಭವಿಷ್ಯ ಅಭದ್ರವಾಗಿದೆ” ಎಂದಿದ್ದಾರೆ.

ಈ ಕಾರ್ಮಿಕರನ್ನು ನವೀ ಮುಂಬೈನ ಮುನಿಸಿಪಲ್‌ ಶಾಲೆಗೆ ಸ್ಥಳಾಂತರಿಸಲು ಯೋಚಿಸಲಾಗುತ್ತಿದೆ. ಆದರೆ ಅದರ ಬದಲಿಗೆ ಇವರನ್ನು ತಮ್ಮ ತಮ್ಮ ಸ್ವಗ್ರಾಮಗಳಿಗೆ ಏಕೆ ಕಳಿಸಬಾರದೆಂದು ಜನ ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಅವರು ಬಹಳ ಚಿಂತಿತರಾಗಿದ್ದಾರೆ ಎಂದು ಭೂಪೇಶ್ ಗುಪ್ತ ತಿಳಿಸಿದ್ದಾರೆ.

ನವಿಮುಂಬೈ ಮುನಿಸಿಪಲ್‌ ಕಾರ್ಪೋರೇಷನ್‌ನ ಕಮಿಷನರ್‌ ಎ.ಬಿ ಮಿಶಲ್‌ “ನಾವು ಇಲ್ಲಿ ಕೋವಿಡ್‌ ಕೇರೆ ಆಸ್ಪತ್ರೆ ಕಟ್ಟುತ್ತೇವೆ. ಇಲ್ಲಿರುವ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸಲು ಕಾನೂನುರಿತ್ಯಾ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಅನಾರ್ಜಿತ್‌ ಚೌವಾಣ್‌ ಮಾತನಾಡಿ “ಇಲ್ಲಿರುವ ವಲಸೆ ಕಾರ್ಮಿಕರು ಬಡವರು. ಆದಷ್ಟು ಬೇಗ ಅವರನ್ನು ತಮ್ಮ ತಮ್ಮ ಸ್ವಂತ ಊರುಗಳಿಗೆ ಕಳಿಸಿಕೊಡಲಾಗುವುದು ಎಂಬ ಭರವಸೆ ನೀಡಲಾಗಿತ್ತು. ಆದರೆ ಮೂರನೇ ಬಾರಿ ಲಾಕ್‌ಡೌನ್‌ ಘೋಷಣೆಯಾದಾಗ ಇಲ್ಲಿರುವ ಕಾರ್ಮಿಕರಿಗೆ ತಮಗೆ ಮೋಸ ಮಾಡಲಾಗುತ್ತಿದೆ ಎಂಬ ಭಾವನೆ ಬೆಳೆದಿದೆ. ಇವರನ್ನು ಆದಷ್ಟು ಬೇಗ ಅವರ ಸ್ವಂತ ಊರುಗಳಿಗೆ ಕಳಿಸಕೊಡಬೇಕೆಂದು ನಾನು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಯವರಲ್ಲಿ ಮನವಿ ಮಾಡುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...