Homeಮುಖಪುಟಮುಂಬೈನಲ್ಲಿ ಉಪವಾಸ ಧರಣಿ ಆರಂಭಿಸಿದ ಕರ್ನಾಟಕದ ವಲಸೆ ಕಾರ್ಮಿಕರು

ಮುಂಬೈನಲ್ಲಿ ಉಪವಾಸ ಧರಣಿ ಆರಂಭಿಸಿದ ಕರ್ನಾಟಕದ ವಲಸೆ ಕಾರ್ಮಿಕರು

- Advertisement -
- Advertisement -

ಕಳೆದ 45 ದಿನಗಳಿಂದ ಮಹಾರಾಷ್ಟ್ರದ ನವಿ ಮುಂಬೈನ ವಾಸಿ ಚಿಡ್ಕೊ ವಸ್ತುಪ್ರದರ್ಶನ ಕೇಂದ್ರದ ನಿರಾಶ್ರಿತ ಶಿಬಿರದಲ್ಲಿ ಕರ್ನಾಟಕದ 180ಕ್ಕೂ ಹೆಚ್ಚು ವಲಸೆ ಕಾರ್ಮಿಕರು ಮತ್ತು ಅವರ ಕುಟುಂಬ ಗುರುವಾರ ಮಧ್ಯಾಹ್ನದಿಂದ ಉಪವಾಸ ಧರಣಿ ಆರಂಭಿಸಿದ್ದಾರೆ. ಈಗ ಅದೇ ಶಿಬಿರವನ್ನು ಕೋವಿಡ್‌ ಕೇರ್‌ ಸೆಂಟರ್‌ ಆಗಿ ಪರಿವರ್ತಿಸುತ್ತಿರುವುದರಿಂದ ನಮ್ಮನ್ನು ಯಾವಾಗ ನಮ್ಮ ಊರುಗಳಿಗೆ ಕಳಿಸುಲಾಗುತ್ತದೆ ಎಂಬ ಮಾಹಿತಿ ನೀಡಬೇಕೆಂದು ಕಾರ್ಮಿಕರು ಪಟ್ಟು ಹಿಡಿದಿದ್ದಾರೆ.

ನಮ್ಮನ್ನು ಚಿಡ್ಕೊ ವಸ್ತುಪ್ರದರ್ಶನ ಕೇಂದ್ರದ ನಿರಾಶ್ರಿತ ಶಿಬಿರದಿಂದ ಬೇರೆಡೆಗೆ ವರ್ಗಾಹಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಇದು ಸರಿಯಲ್ಲಿ. ಬದಲಿಗೆ ಬಸ್‌ ಅಥವಾ ರೈಲು ವ್ಯವಸ್ಥೆ ಮಾಡಿ ನಮ್ಮನ್ನು ನಮ್ಮ ಊರುಗಳಿಗೆ ಕಳಿಸಿಕೊಡಬೇಕು. ನಾವು ಇಲ್ಲಿ ದಿನಗೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದೇವೆ. ಲಾಕ್‌ಡೌನ್‌ ಘೋಷಣೆಯಾದಾಗ ಪೊಲೀಸರು ನಮ್ಮನ್ನು ಇಲ್ಲಿಗೆ ಕರೆತಂದಿದ್ದಾರೆ ಎಂದು ಕೆ ರಾಥೋಡ್‌ ಎಂಬುವ ಕಾರ್ಮಿಕರೊಬ್ಬರೂ ಆರೋಪಿಸಿದ್ದಾರೆ ಎಂದು ಟೈಮ್ಸ್‌ ಆಪ್‌ ಇಂಡಿಯಾ ವರದಿ ಮಾಡಿದೆ.

ಮತ್ತೊಬ್ಬ ವಲಸೆ ಕಾರ್ಮಿಕರಾದ ಹರಿಶ್ಚಂದ್ರ ಜಾಧವ್‌ ಮಾತನಾಡಿ, ಕೆಲ ಆರೋಗ್ಯ ಅಧಿಕಾರಿಗಳು ಈಗಾಗಲೇ ಇಲ್ಲಿ ಕೆಲವು ವೈದ್ಯಕೀಯ ಉಪಕರಣಗಳನ್ನು ಅಳವಡಿಸುತ್ತಿದ್ದಾರೆ. ನಮ್ಮನ್ನು ನಮ್ಮ ಊರಿಗೆ ಯಾವಾಗ ಕರೆದೊಯ್ಯುತ್ತೇವೆ ಎಂದು ಯಾರೂ ಹೇಳುತ್ತಿಲ್ಲ. ಹಾಗಾಗಿ ನಾವು ಊಟ ಮಾಡುವುದನ್ನು ಬಿಟ್ಟಿದ್ದೇವೆ. ಅವರಿಂದ ಸಮರ್ಪಕ ಉತ್ತರ ಬರುವವರೆಗೂ ಊಟ ಮಾಡುವುದಿಲ್ಲ, ಉಪವಾಸ ಮಾಡುತ್ತೇವೆ ಎಂದಿದ್ದಾರೆ.

ಇಲ್ಲಿರುವ ವಲಸೆ ಕಾರ್ಮಿಕರಿಗೆ ದಿನನಿತ್ಯ ಊಟ ಸರಬರಾಜು ಮಾಡುವ ಇನ್ಫೋಟೆಕ್‌ ಎಂಟರ್‌ಪ್ರೀನರ್‌ ಅಂಡ್‌ ಮ್ಯಾನೇಜಿಂಗ್‌ ಡೈರಕ್ಟರ್‌ ಆಫ್‌ ಇಂಟರ್‌ನೆಟ್‌ ಬ್ರಾಡ್‌ಬ್ಯಾಂಡ್‌ನ ಭೂಪೇಶ್‌ ಗುಪ್ತ ಪ್ರತಿಕ್ರಿಯಿಸಿ, “ಸದ್ಯಕ್ಕೆ 200 ಜನ ಇಲ್ಲಿ ವಾಸಿಸುತ್ತಿದ್ದಾರೆ. ಅದರಲ್ಲಿ ಕರ್ನಾಟಕದವರೆ ಹೆಚ್ಚು. ಅವರು ಸಹಜವಾಗಿ ಯಾವಾಗ ತಮ್ಮೂರಿಗೆ ಹೋಗಬಹುದೆಂಬ ಭರವಸೆಯಲ್ಲಿದ್ದಾರೆ. ಅವರ ಭವಿಷ್ಯ ಅಭದ್ರವಾಗಿದೆ” ಎಂದಿದ್ದಾರೆ.

ಈ ಕಾರ್ಮಿಕರನ್ನು ನವೀ ಮುಂಬೈನ ಮುನಿಸಿಪಲ್‌ ಶಾಲೆಗೆ ಸ್ಥಳಾಂತರಿಸಲು ಯೋಚಿಸಲಾಗುತ್ತಿದೆ. ಆದರೆ ಅದರ ಬದಲಿಗೆ ಇವರನ್ನು ತಮ್ಮ ತಮ್ಮ ಸ್ವಗ್ರಾಮಗಳಿಗೆ ಏಕೆ ಕಳಿಸಬಾರದೆಂದು ಜನ ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಅವರು ಬಹಳ ಚಿಂತಿತರಾಗಿದ್ದಾರೆ ಎಂದು ಭೂಪೇಶ್ ಗುಪ್ತ ತಿಳಿಸಿದ್ದಾರೆ.

ನವಿಮುಂಬೈ ಮುನಿಸಿಪಲ್‌ ಕಾರ್ಪೋರೇಷನ್‌ನ ಕಮಿಷನರ್‌ ಎ.ಬಿ ಮಿಶಲ್‌ “ನಾವು ಇಲ್ಲಿ ಕೋವಿಡ್‌ ಕೇರೆ ಆಸ್ಪತ್ರೆ ಕಟ್ಟುತ್ತೇವೆ. ಇಲ್ಲಿರುವ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸಲು ಕಾನೂನುರಿತ್ಯಾ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಅನಾರ್ಜಿತ್‌ ಚೌವಾಣ್‌ ಮಾತನಾಡಿ “ಇಲ್ಲಿರುವ ವಲಸೆ ಕಾರ್ಮಿಕರು ಬಡವರು. ಆದಷ್ಟು ಬೇಗ ಅವರನ್ನು ತಮ್ಮ ತಮ್ಮ ಸ್ವಂತ ಊರುಗಳಿಗೆ ಕಳಿಸಿಕೊಡಲಾಗುವುದು ಎಂಬ ಭರವಸೆ ನೀಡಲಾಗಿತ್ತು. ಆದರೆ ಮೂರನೇ ಬಾರಿ ಲಾಕ್‌ಡೌನ್‌ ಘೋಷಣೆಯಾದಾಗ ಇಲ್ಲಿರುವ ಕಾರ್ಮಿಕರಿಗೆ ತಮಗೆ ಮೋಸ ಮಾಡಲಾಗುತ್ತಿದೆ ಎಂಬ ಭಾವನೆ ಬೆಳೆದಿದೆ. ಇವರನ್ನು ಆದಷ್ಟು ಬೇಗ ಅವರ ಸ್ವಂತ ಊರುಗಳಿಗೆ ಕಳಿಸಕೊಡಬೇಕೆಂದು ನಾನು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಯವರಲ್ಲಿ ಮನವಿ ಮಾಡುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...