Homeಮುಖಪುಟಮುಂಬೈನಲ್ಲಿ ಉಪವಾಸ ಧರಣಿ ಆರಂಭಿಸಿದ ಕರ್ನಾಟಕದ ವಲಸೆ ಕಾರ್ಮಿಕರು

ಮುಂಬೈನಲ್ಲಿ ಉಪವಾಸ ಧರಣಿ ಆರಂಭಿಸಿದ ಕರ್ನಾಟಕದ ವಲಸೆ ಕಾರ್ಮಿಕರು

- Advertisement -
- Advertisement -

ಕಳೆದ 45 ದಿನಗಳಿಂದ ಮಹಾರಾಷ್ಟ್ರದ ನವಿ ಮುಂಬೈನ ವಾಸಿ ಚಿಡ್ಕೊ ವಸ್ತುಪ್ರದರ್ಶನ ಕೇಂದ್ರದ ನಿರಾಶ್ರಿತ ಶಿಬಿರದಲ್ಲಿ ಕರ್ನಾಟಕದ 180ಕ್ಕೂ ಹೆಚ್ಚು ವಲಸೆ ಕಾರ್ಮಿಕರು ಮತ್ತು ಅವರ ಕುಟುಂಬ ಗುರುವಾರ ಮಧ್ಯಾಹ್ನದಿಂದ ಉಪವಾಸ ಧರಣಿ ಆರಂಭಿಸಿದ್ದಾರೆ. ಈಗ ಅದೇ ಶಿಬಿರವನ್ನು ಕೋವಿಡ್‌ ಕೇರ್‌ ಸೆಂಟರ್‌ ಆಗಿ ಪರಿವರ್ತಿಸುತ್ತಿರುವುದರಿಂದ ನಮ್ಮನ್ನು ಯಾವಾಗ ನಮ್ಮ ಊರುಗಳಿಗೆ ಕಳಿಸುಲಾಗುತ್ತದೆ ಎಂಬ ಮಾಹಿತಿ ನೀಡಬೇಕೆಂದು ಕಾರ್ಮಿಕರು ಪಟ್ಟು ಹಿಡಿದಿದ್ದಾರೆ.

ನಮ್ಮನ್ನು ಚಿಡ್ಕೊ ವಸ್ತುಪ್ರದರ್ಶನ ಕೇಂದ್ರದ ನಿರಾಶ್ರಿತ ಶಿಬಿರದಿಂದ ಬೇರೆಡೆಗೆ ವರ್ಗಾಹಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಇದು ಸರಿಯಲ್ಲಿ. ಬದಲಿಗೆ ಬಸ್‌ ಅಥವಾ ರೈಲು ವ್ಯವಸ್ಥೆ ಮಾಡಿ ನಮ್ಮನ್ನು ನಮ್ಮ ಊರುಗಳಿಗೆ ಕಳಿಸಿಕೊಡಬೇಕು. ನಾವು ಇಲ್ಲಿ ದಿನಗೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದೇವೆ. ಲಾಕ್‌ಡೌನ್‌ ಘೋಷಣೆಯಾದಾಗ ಪೊಲೀಸರು ನಮ್ಮನ್ನು ಇಲ್ಲಿಗೆ ಕರೆತಂದಿದ್ದಾರೆ ಎಂದು ಕೆ ರಾಥೋಡ್‌ ಎಂಬುವ ಕಾರ್ಮಿಕರೊಬ್ಬರೂ ಆರೋಪಿಸಿದ್ದಾರೆ ಎಂದು ಟೈಮ್ಸ್‌ ಆಪ್‌ ಇಂಡಿಯಾ ವರದಿ ಮಾಡಿದೆ.

ಮತ್ತೊಬ್ಬ ವಲಸೆ ಕಾರ್ಮಿಕರಾದ ಹರಿಶ್ಚಂದ್ರ ಜಾಧವ್‌ ಮಾತನಾಡಿ, ಕೆಲ ಆರೋಗ್ಯ ಅಧಿಕಾರಿಗಳು ಈಗಾಗಲೇ ಇಲ್ಲಿ ಕೆಲವು ವೈದ್ಯಕೀಯ ಉಪಕರಣಗಳನ್ನು ಅಳವಡಿಸುತ್ತಿದ್ದಾರೆ. ನಮ್ಮನ್ನು ನಮ್ಮ ಊರಿಗೆ ಯಾವಾಗ ಕರೆದೊಯ್ಯುತ್ತೇವೆ ಎಂದು ಯಾರೂ ಹೇಳುತ್ತಿಲ್ಲ. ಹಾಗಾಗಿ ನಾವು ಊಟ ಮಾಡುವುದನ್ನು ಬಿಟ್ಟಿದ್ದೇವೆ. ಅವರಿಂದ ಸಮರ್ಪಕ ಉತ್ತರ ಬರುವವರೆಗೂ ಊಟ ಮಾಡುವುದಿಲ್ಲ, ಉಪವಾಸ ಮಾಡುತ್ತೇವೆ ಎಂದಿದ್ದಾರೆ.

ಇಲ್ಲಿರುವ ವಲಸೆ ಕಾರ್ಮಿಕರಿಗೆ ದಿನನಿತ್ಯ ಊಟ ಸರಬರಾಜು ಮಾಡುವ ಇನ್ಫೋಟೆಕ್‌ ಎಂಟರ್‌ಪ್ರೀನರ್‌ ಅಂಡ್‌ ಮ್ಯಾನೇಜಿಂಗ್‌ ಡೈರಕ್ಟರ್‌ ಆಫ್‌ ಇಂಟರ್‌ನೆಟ್‌ ಬ್ರಾಡ್‌ಬ್ಯಾಂಡ್‌ನ ಭೂಪೇಶ್‌ ಗುಪ್ತ ಪ್ರತಿಕ್ರಿಯಿಸಿ, “ಸದ್ಯಕ್ಕೆ 200 ಜನ ಇಲ್ಲಿ ವಾಸಿಸುತ್ತಿದ್ದಾರೆ. ಅದರಲ್ಲಿ ಕರ್ನಾಟಕದವರೆ ಹೆಚ್ಚು. ಅವರು ಸಹಜವಾಗಿ ಯಾವಾಗ ತಮ್ಮೂರಿಗೆ ಹೋಗಬಹುದೆಂಬ ಭರವಸೆಯಲ್ಲಿದ್ದಾರೆ. ಅವರ ಭವಿಷ್ಯ ಅಭದ್ರವಾಗಿದೆ” ಎಂದಿದ್ದಾರೆ.

ಈ ಕಾರ್ಮಿಕರನ್ನು ನವೀ ಮುಂಬೈನ ಮುನಿಸಿಪಲ್‌ ಶಾಲೆಗೆ ಸ್ಥಳಾಂತರಿಸಲು ಯೋಚಿಸಲಾಗುತ್ತಿದೆ. ಆದರೆ ಅದರ ಬದಲಿಗೆ ಇವರನ್ನು ತಮ್ಮ ತಮ್ಮ ಸ್ವಗ್ರಾಮಗಳಿಗೆ ಏಕೆ ಕಳಿಸಬಾರದೆಂದು ಜನ ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಅವರು ಬಹಳ ಚಿಂತಿತರಾಗಿದ್ದಾರೆ ಎಂದು ಭೂಪೇಶ್ ಗುಪ್ತ ತಿಳಿಸಿದ್ದಾರೆ.

ನವಿಮುಂಬೈ ಮುನಿಸಿಪಲ್‌ ಕಾರ್ಪೋರೇಷನ್‌ನ ಕಮಿಷನರ್‌ ಎ.ಬಿ ಮಿಶಲ್‌ “ನಾವು ಇಲ್ಲಿ ಕೋವಿಡ್‌ ಕೇರೆ ಆಸ್ಪತ್ರೆ ಕಟ್ಟುತ್ತೇವೆ. ಇಲ್ಲಿರುವ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸಲು ಕಾನೂನುರಿತ್ಯಾ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಅನಾರ್ಜಿತ್‌ ಚೌವಾಣ್‌ ಮಾತನಾಡಿ “ಇಲ್ಲಿರುವ ವಲಸೆ ಕಾರ್ಮಿಕರು ಬಡವರು. ಆದಷ್ಟು ಬೇಗ ಅವರನ್ನು ತಮ್ಮ ತಮ್ಮ ಸ್ವಂತ ಊರುಗಳಿಗೆ ಕಳಿಸಿಕೊಡಲಾಗುವುದು ಎಂಬ ಭರವಸೆ ನೀಡಲಾಗಿತ್ತು. ಆದರೆ ಮೂರನೇ ಬಾರಿ ಲಾಕ್‌ಡೌನ್‌ ಘೋಷಣೆಯಾದಾಗ ಇಲ್ಲಿರುವ ಕಾರ್ಮಿಕರಿಗೆ ತಮಗೆ ಮೋಸ ಮಾಡಲಾಗುತ್ತಿದೆ ಎಂಬ ಭಾವನೆ ಬೆಳೆದಿದೆ. ಇವರನ್ನು ಆದಷ್ಟು ಬೇಗ ಅವರ ಸ್ವಂತ ಊರುಗಳಿಗೆ ಕಳಿಸಕೊಡಬೇಕೆಂದು ನಾನು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಯವರಲ್ಲಿ ಮನವಿ ಮಾಡುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...