Homeಮುಖಪುಟಮುಂಬೈನಲ್ಲಿ ಉಪವಾಸ ಧರಣಿ ಆರಂಭಿಸಿದ ಕರ್ನಾಟಕದ ವಲಸೆ ಕಾರ್ಮಿಕರು

ಮುಂಬೈನಲ್ಲಿ ಉಪವಾಸ ಧರಣಿ ಆರಂಭಿಸಿದ ಕರ್ನಾಟಕದ ವಲಸೆ ಕಾರ್ಮಿಕರು

- Advertisement -
- Advertisement -

ಕಳೆದ 45 ದಿನಗಳಿಂದ ಮಹಾರಾಷ್ಟ್ರದ ನವಿ ಮುಂಬೈನ ವಾಸಿ ಚಿಡ್ಕೊ ವಸ್ತುಪ್ರದರ್ಶನ ಕೇಂದ್ರದ ನಿರಾಶ್ರಿತ ಶಿಬಿರದಲ್ಲಿ ಕರ್ನಾಟಕದ 180ಕ್ಕೂ ಹೆಚ್ಚು ವಲಸೆ ಕಾರ್ಮಿಕರು ಮತ್ತು ಅವರ ಕುಟುಂಬ ಗುರುವಾರ ಮಧ್ಯಾಹ್ನದಿಂದ ಉಪವಾಸ ಧರಣಿ ಆರಂಭಿಸಿದ್ದಾರೆ. ಈಗ ಅದೇ ಶಿಬಿರವನ್ನು ಕೋವಿಡ್‌ ಕೇರ್‌ ಸೆಂಟರ್‌ ಆಗಿ ಪರಿವರ್ತಿಸುತ್ತಿರುವುದರಿಂದ ನಮ್ಮನ್ನು ಯಾವಾಗ ನಮ್ಮ ಊರುಗಳಿಗೆ ಕಳಿಸುಲಾಗುತ್ತದೆ ಎಂಬ ಮಾಹಿತಿ ನೀಡಬೇಕೆಂದು ಕಾರ್ಮಿಕರು ಪಟ್ಟು ಹಿಡಿದಿದ್ದಾರೆ.

ನಮ್ಮನ್ನು ಚಿಡ್ಕೊ ವಸ್ತುಪ್ರದರ್ಶನ ಕೇಂದ್ರದ ನಿರಾಶ್ರಿತ ಶಿಬಿರದಿಂದ ಬೇರೆಡೆಗೆ ವರ್ಗಾಹಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಇದು ಸರಿಯಲ್ಲಿ. ಬದಲಿಗೆ ಬಸ್‌ ಅಥವಾ ರೈಲು ವ್ಯವಸ್ಥೆ ಮಾಡಿ ನಮ್ಮನ್ನು ನಮ್ಮ ಊರುಗಳಿಗೆ ಕಳಿಸಿಕೊಡಬೇಕು. ನಾವು ಇಲ್ಲಿ ದಿನಗೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದೇವೆ. ಲಾಕ್‌ಡೌನ್‌ ಘೋಷಣೆಯಾದಾಗ ಪೊಲೀಸರು ನಮ್ಮನ್ನು ಇಲ್ಲಿಗೆ ಕರೆತಂದಿದ್ದಾರೆ ಎಂದು ಕೆ ರಾಥೋಡ್‌ ಎಂಬುವ ಕಾರ್ಮಿಕರೊಬ್ಬರೂ ಆರೋಪಿಸಿದ್ದಾರೆ ಎಂದು ಟೈಮ್ಸ್‌ ಆಪ್‌ ಇಂಡಿಯಾ ವರದಿ ಮಾಡಿದೆ.

ಮತ್ತೊಬ್ಬ ವಲಸೆ ಕಾರ್ಮಿಕರಾದ ಹರಿಶ್ಚಂದ್ರ ಜಾಧವ್‌ ಮಾತನಾಡಿ, ಕೆಲ ಆರೋಗ್ಯ ಅಧಿಕಾರಿಗಳು ಈಗಾಗಲೇ ಇಲ್ಲಿ ಕೆಲವು ವೈದ್ಯಕೀಯ ಉಪಕರಣಗಳನ್ನು ಅಳವಡಿಸುತ್ತಿದ್ದಾರೆ. ನಮ್ಮನ್ನು ನಮ್ಮ ಊರಿಗೆ ಯಾವಾಗ ಕರೆದೊಯ್ಯುತ್ತೇವೆ ಎಂದು ಯಾರೂ ಹೇಳುತ್ತಿಲ್ಲ. ಹಾಗಾಗಿ ನಾವು ಊಟ ಮಾಡುವುದನ್ನು ಬಿಟ್ಟಿದ್ದೇವೆ. ಅವರಿಂದ ಸಮರ್ಪಕ ಉತ್ತರ ಬರುವವರೆಗೂ ಊಟ ಮಾಡುವುದಿಲ್ಲ, ಉಪವಾಸ ಮಾಡುತ್ತೇವೆ ಎಂದಿದ್ದಾರೆ.

ಇಲ್ಲಿರುವ ವಲಸೆ ಕಾರ್ಮಿಕರಿಗೆ ದಿನನಿತ್ಯ ಊಟ ಸರಬರಾಜು ಮಾಡುವ ಇನ್ಫೋಟೆಕ್‌ ಎಂಟರ್‌ಪ್ರೀನರ್‌ ಅಂಡ್‌ ಮ್ಯಾನೇಜಿಂಗ್‌ ಡೈರಕ್ಟರ್‌ ಆಫ್‌ ಇಂಟರ್‌ನೆಟ್‌ ಬ್ರಾಡ್‌ಬ್ಯಾಂಡ್‌ನ ಭೂಪೇಶ್‌ ಗುಪ್ತ ಪ್ರತಿಕ್ರಿಯಿಸಿ, “ಸದ್ಯಕ್ಕೆ 200 ಜನ ಇಲ್ಲಿ ವಾಸಿಸುತ್ತಿದ್ದಾರೆ. ಅದರಲ್ಲಿ ಕರ್ನಾಟಕದವರೆ ಹೆಚ್ಚು. ಅವರು ಸಹಜವಾಗಿ ಯಾವಾಗ ತಮ್ಮೂರಿಗೆ ಹೋಗಬಹುದೆಂಬ ಭರವಸೆಯಲ್ಲಿದ್ದಾರೆ. ಅವರ ಭವಿಷ್ಯ ಅಭದ್ರವಾಗಿದೆ” ಎಂದಿದ್ದಾರೆ.

ಈ ಕಾರ್ಮಿಕರನ್ನು ನವೀ ಮುಂಬೈನ ಮುನಿಸಿಪಲ್‌ ಶಾಲೆಗೆ ಸ್ಥಳಾಂತರಿಸಲು ಯೋಚಿಸಲಾಗುತ್ತಿದೆ. ಆದರೆ ಅದರ ಬದಲಿಗೆ ಇವರನ್ನು ತಮ್ಮ ತಮ್ಮ ಸ್ವಗ್ರಾಮಗಳಿಗೆ ಏಕೆ ಕಳಿಸಬಾರದೆಂದು ಜನ ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಅವರು ಬಹಳ ಚಿಂತಿತರಾಗಿದ್ದಾರೆ ಎಂದು ಭೂಪೇಶ್ ಗುಪ್ತ ತಿಳಿಸಿದ್ದಾರೆ.

ನವಿಮುಂಬೈ ಮುನಿಸಿಪಲ್‌ ಕಾರ್ಪೋರೇಷನ್‌ನ ಕಮಿಷನರ್‌ ಎ.ಬಿ ಮಿಶಲ್‌ “ನಾವು ಇಲ್ಲಿ ಕೋವಿಡ್‌ ಕೇರೆ ಆಸ್ಪತ್ರೆ ಕಟ್ಟುತ್ತೇವೆ. ಇಲ್ಲಿರುವ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸಲು ಕಾನೂನುರಿತ್ಯಾ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಅನಾರ್ಜಿತ್‌ ಚೌವಾಣ್‌ ಮಾತನಾಡಿ “ಇಲ್ಲಿರುವ ವಲಸೆ ಕಾರ್ಮಿಕರು ಬಡವರು. ಆದಷ್ಟು ಬೇಗ ಅವರನ್ನು ತಮ್ಮ ತಮ್ಮ ಸ್ವಂತ ಊರುಗಳಿಗೆ ಕಳಿಸಿಕೊಡಲಾಗುವುದು ಎಂಬ ಭರವಸೆ ನೀಡಲಾಗಿತ್ತು. ಆದರೆ ಮೂರನೇ ಬಾರಿ ಲಾಕ್‌ಡೌನ್‌ ಘೋಷಣೆಯಾದಾಗ ಇಲ್ಲಿರುವ ಕಾರ್ಮಿಕರಿಗೆ ತಮಗೆ ಮೋಸ ಮಾಡಲಾಗುತ್ತಿದೆ ಎಂಬ ಭಾವನೆ ಬೆಳೆದಿದೆ. ಇವರನ್ನು ಆದಷ್ಟು ಬೇಗ ಅವರ ಸ್ವಂತ ಊರುಗಳಿಗೆ ಕಳಿಸಕೊಡಬೇಕೆಂದು ನಾನು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಯವರಲ್ಲಿ ಮನವಿ ಮಾಡುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...