Homeಮುಖಪುಟಮುಂಬೈನಲ್ಲಿ ಉಪವಾಸ ಧರಣಿ ಆರಂಭಿಸಿದ ಕರ್ನಾಟಕದ ವಲಸೆ ಕಾರ್ಮಿಕರು

ಮುಂಬೈನಲ್ಲಿ ಉಪವಾಸ ಧರಣಿ ಆರಂಭಿಸಿದ ಕರ್ನಾಟಕದ ವಲಸೆ ಕಾರ್ಮಿಕರು

- Advertisement -
- Advertisement -

ಕಳೆದ 45 ದಿನಗಳಿಂದ ಮಹಾರಾಷ್ಟ್ರದ ನವಿ ಮುಂಬೈನ ವಾಸಿ ಚಿಡ್ಕೊ ವಸ್ತುಪ್ರದರ್ಶನ ಕೇಂದ್ರದ ನಿರಾಶ್ರಿತ ಶಿಬಿರದಲ್ಲಿ ಕರ್ನಾಟಕದ 180ಕ್ಕೂ ಹೆಚ್ಚು ವಲಸೆ ಕಾರ್ಮಿಕರು ಮತ್ತು ಅವರ ಕುಟುಂಬ ಗುರುವಾರ ಮಧ್ಯಾಹ್ನದಿಂದ ಉಪವಾಸ ಧರಣಿ ಆರಂಭಿಸಿದ್ದಾರೆ. ಈಗ ಅದೇ ಶಿಬಿರವನ್ನು ಕೋವಿಡ್‌ ಕೇರ್‌ ಸೆಂಟರ್‌ ಆಗಿ ಪರಿವರ್ತಿಸುತ್ತಿರುವುದರಿಂದ ನಮ್ಮನ್ನು ಯಾವಾಗ ನಮ್ಮ ಊರುಗಳಿಗೆ ಕಳಿಸುಲಾಗುತ್ತದೆ ಎಂಬ ಮಾಹಿತಿ ನೀಡಬೇಕೆಂದು ಕಾರ್ಮಿಕರು ಪಟ್ಟು ಹಿಡಿದಿದ್ದಾರೆ.

ನಮ್ಮನ್ನು ಚಿಡ್ಕೊ ವಸ್ತುಪ್ರದರ್ಶನ ಕೇಂದ್ರದ ನಿರಾಶ್ರಿತ ಶಿಬಿರದಿಂದ ಬೇರೆಡೆಗೆ ವರ್ಗಾಹಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಇದು ಸರಿಯಲ್ಲಿ. ಬದಲಿಗೆ ಬಸ್‌ ಅಥವಾ ರೈಲು ವ್ಯವಸ್ಥೆ ಮಾಡಿ ನಮ್ಮನ್ನು ನಮ್ಮ ಊರುಗಳಿಗೆ ಕಳಿಸಿಕೊಡಬೇಕು. ನಾವು ಇಲ್ಲಿ ದಿನಗೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದೇವೆ. ಲಾಕ್‌ಡೌನ್‌ ಘೋಷಣೆಯಾದಾಗ ಪೊಲೀಸರು ನಮ್ಮನ್ನು ಇಲ್ಲಿಗೆ ಕರೆತಂದಿದ್ದಾರೆ ಎಂದು ಕೆ ರಾಥೋಡ್‌ ಎಂಬುವ ಕಾರ್ಮಿಕರೊಬ್ಬರೂ ಆರೋಪಿಸಿದ್ದಾರೆ ಎಂದು ಟೈಮ್ಸ್‌ ಆಪ್‌ ಇಂಡಿಯಾ ವರದಿ ಮಾಡಿದೆ.

ಮತ್ತೊಬ್ಬ ವಲಸೆ ಕಾರ್ಮಿಕರಾದ ಹರಿಶ್ಚಂದ್ರ ಜಾಧವ್‌ ಮಾತನಾಡಿ, ಕೆಲ ಆರೋಗ್ಯ ಅಧಿಕಾರಿಗಳು ಈಗಾಗಲೇ ಇಲ್ಲಿ ಕೆಲವು ವೈದ್ಯಕೀಯ ಉಪಕರಣಗಳನ್ನು ಅಳವಡಿಸುತ್ತಿದ್ದಾರೆ. ನಮ್ಮನ್ನು ನಮ್ಮ ಊರಿಗೆ ಯಾವಾಗ ಕರೆದೊಯ್ಯುತ್ತೇವೆ ಎಂದು ಯಾರೂ ಹೇಳುತ್ತಿಲ್ಲ. ಹಾಗಾಗಿ ನಾವು ಊಟ ಮಾಡುವುದನ್ನು ಬಿಟ್ಟಿದ್ದೇವೆ. ಅವರಿಂದ ಸಮರ್ಪಕ ಉತ್ತರ ಬರುವವರೆಗೂ ಊಟ ಮಾಡುವುದಿಲ್ಲ, ಉಪವಾಸ ಮಾಡುತ್ತೇವೆ ಎಂದಿದ್ದಾರೆ.

ಇಲ್ಲಿರುವ ವಲಸೆ ಕಾರ್ಮಿಕರಿಗೆ ದಿನನಿತ್ಯ ಊಟ ಸರಬರಾಜು ಮಾಡುವ ಇನ್ಫೋಟೆಕ್‌ ಎಂಟರ್‌ಪ್ರೀನರ್‌ ಅಂಡ್‌ ಮ್ಯಾನೇಜಿಂಗ್‌ ಡೈರಕ್ಟರ್‌ ಆಫ್‌ ಇಂಟರ್‌ನೆಟ್‌ ಬ್ರಾಡ್‌ಬ್ಯಾಂಡ್‌ನ ಭೂಪೇಶ್‌ ಗುಪ್ತ ಪ್ರತಿಕ್ರಿಯಿಸಿ, “ಸದ್ಯಕ್ಕೆ 200 ಜನ ಇಲ್ಲಿ ವಾಸಿಸುತ್ತಿದ್ದಾರೆ. ಅದರಲ್ಲಿ ಕರ್ನಾಟಕದವರೆ ಹೆಚ್ಚು. ಅವರು ಸಹಜವಾಗಿ ಯಾವಾಗ ತಮ್ಮೂರಿಗೆ ಹೋಗಬಹುದೆಂಬ ಭರವಸೆಯಲ್ಲಿದ್ದಾರೆ. ಅವರ ಭವಿಷ್ಯ ಅಭದ್ರವಾಗಿದೆ” ಎಂದಿದ್ದಾರೆ.

ಈ ಕಾರ್ಮಿಕರನ್ನು ನವೀ ಮುಂಬೈನ ಮುನಿಸಿಪಲ್‌ ಶಾಲೆಗೆ ಸ್ಥಳಾಂತರಿಸಲು ಯೋಚಿಸಲಾಗುತ್ತಿದೆ. ಆದರೆ ಅದರ ಬದಲಿಗೆ ಇವರನ್ನು ತಮ್ಮ ತಮ್ಮ ಸ್ವಗ್ರಾಮಗಳಿಗೆ ಏಕೆ ಕಳಿಸಬಾರದೆಂದು ಜನ ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಅವರು ಬಹಳ ಚಿಂತಿತರಾಗಿದ್ದಾರೆ ಎಂದು ಭೂಪೇಶ್ ಗುಪ್ತ ತಿಳಿಸಿದ್ದಾರೆ.

ನವಿಮುಂಬೈ ಮುನಿಸಿಪಲ್‌ ಕಾರ್ಪೋರೇಷನ್‌ನ ಕಮಿಷನರ್‌ ಎ.ಬಿ ಮಿಶಲ್‌ “ನಾವು ಇಲ್ಲಿ ಕೋವಿಡ್‌ ಕೇರೆ ಆಸ್ಪತ್ರೆ ಕಟ್ಟುತ್ತೇವೆ. ಇಲ್ಲಿರುವ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸಲು ಕಾನೂನುರಿತ್ಯಾ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಅನಾರ್ಜಿತ್‌ ಚೌವಾಣ್‌ ಮಾತನಾಡಿ “ಇಲ್ಲಿರುವ ವಲಸೆ ಕಾರ್ಮಿಕರು ಬಡವರು. ಆದಷ್ಟು ಬೇಗ ಅವರನ್ನು ತಮ್ಮ ತಮ್ಮ ಸ್ವಂತ ಊರುಗಳಿಗೆ ಕಳಿಸಿಕೊಡಲಾಗುವುದು ಎಂಬ ಭರವಸೆ ನೀಡಲಾಗಿತ್ತು. ಆದರೆ ಮೂರನೇ ಬಾರಿ ಲಾಕ್‌ಡೌನ್‌ ಘೋಷಣೆಯಾದಾಗ ಇಲ್ಲಿರುವ ಕಾರ್ಮಿಕರಿಗೆ ತಮಗೆ ಮೋಸ ಮಾಡಲಾಗುತ್ತಿದೆ ಎಂಬ ಭಾವನೆ ಬೆಳೆದಿದೆ. ಇವರನ್ನು ಆದಷ್ಟು ಬೇಗ ಅವರ ಸ್ವಂತ ಊರುಗಳಿಗೆ ಕಳಿಸಕೊಡಬೇಕೆಂದು ನಾನು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಯವರಲ್ಲಿ ಮನವಿ ಮಾಡುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...