Homeಮುಖಪುಟಮುಂಬೈನಲ್ಲಿ ಉಪವಾಸ ಧರಣಿ ಆರಂಭಿಸಿದ ಕರ್ನಾಟಕದ ವಲಸೆ ಕಾರ್ಮಿಕರು

ಮುಂಬೈನಲ್ಲಿ ಉಪವಾಸ ಧರಣಿ ಆರಂಭಿಸಿದ ಕರ್ನಾಟಕದ ವಲಸೆ ಕಾರ್ಮಿಕರು

- Advertisement -
- Advertisement -

ಕಳೆದ 45 ದಿನಗಳಿಂದ ಮಹಾರಾಷ್ಟ್ರದ ನವಿ ಮುಂಬೈನ ವಾಸಿ ಚಿಡ್ಕೊ ವಸ್ತುಪ್ರದರ್ಶನ ಕೇಂದ್ರದ ನಿರಾಶ್ರಿತ ಶಿಬಿರದಲ್ಲಿ ಕರ್ನಾಟಕದ 180ಕ್ಕೂ ಹೆಚ್ಚು ವಲಸೆ ಕಾರ್ಮಿಕರು ಮತ್ತು ಅವರ ಕುಟುಂಬ ಗುರುವಾರ ಮಧ್ಯಾಹ್ನದಿಂದ ಉಪವಾಸ ಧರಣಿ ಆರಂಭಿಸಿದ್ದಾರೆ. ಈಗ ಅದೇ ಶಿಬಿರವನ್ನು ಕೋವಿಡ್‌ ಕೇರ್‌ ಸೆಂಟರ್‌ ಆಗಿ ಪರಿವರ್ತಿಸುತ್ತಿರುವುದರಿಂದ ನಮ್ಮನ್ನು ಯಾವಾಗ ನಮ್ಮ ಊರುಗಳಿಗೆ ಕಳಿಸುಲಾಗುತ್ತದೆ ಎಂಬ ಮಾಹಿತಿ ನೀಡಬೇಕೆಂದು ಕಾರ್ಮಿಕರು ಪಟ್ಟು ಹಿಡಿದಿದ್ದಾರೆ.

ನಮ್ಮನ್ನು ಚಿಡ್ಕೊ ವಸ್ತುಪ್ರದರ್ಶನ ಕೇಂದ್ರದ ನಿರಾಶ್ರಿತ ಶಿಬಿರದಿಂದ ಬೇರೆಡೆಗೆ ವರ್ಗಾಹಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಇದು ಸರಿಯಲ್ಲಿ. ಬದಲಿಗೆ ಬಸ್‌ ಅಥವಾ ರೈಲು ವ್ಯವಸ್ಥೆ ಮಾಡಿ ನಮ್ಮನ್ನು ನಮ್ಮ ಊರುಗಳಿಗೆ ಕಳಿಸಿಕೊಡಬೇಕು. ನಾವು ಇಲ್ಲಿ ದಿನಗೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದೇವೆ. ಲಾಕ್‌ಡೌನ್‌ ಘೋಷಣೆಯಾದಾಗ ಪೊಲೀಸರು ನಮ್ಮನ್ನು ಇಲ್ಲಿಗೆ ಕರೆತಂದಿದ್ದಾರೆ ಎಂದು ಕೆ ರಾಥೋಡ್‌ ಎಂಬುವ ಕಾರ್ಮಿಕರೊಬ್ಬರೂ ಆರೋಪಿಸಿದ್ದಾರೆ ಎಂದು ಟೈಮ್ಸ್‌ ಆಪ್‌ ಇಂಡಿಯಾ ವರದಿ ಮಾಡಿದೆ.

ಮತ್ತೊಬ್ಬ ವಲಸೆ ಕಾರ್ಮಿಕರಾದ ಹರಿಶ್ಚಂದ್ರ ಜಾಧವ್‌ ಮಾತನಾಡಿ, ಕೆಲ ಆರೋಗ್ಯ ಅಧಿಕಾರಿಗಳು ಈಗಾಗಲೇ ಇಲ್ಲಿ ಕೆಲವು ವೈದ್ಯಕೀಯ ಉಪಕರಣಗಳನ್ನು ಅಳವಡಿಸುತ್ತಿದ್ದಾರೆ. ನಮ್ಮನ್ನು ನಮ್ಮ ಊರಿಗೆ ಯಾವಾಗ ಕರೆದೊಯ್ಯುತ್ತೇವೆ ಎಂದು ಯಾರೂ ಹೇಳುತ್ತಿಲ್ಲ. ಹಾಗಾಗಿ ನಾವು ಊಟ ಮಾಡುವುದನ್ನು ಬಿಟ್ಟಿದ್ದೇವೆ. ಅವರಿಂದ ಸಮರ್ಪಕ ಉತ್ತರ ಬರುವವರೆಗೂ ಊಟ ಮಾಡುವುದಿಲ್ಲ, ಉಪವಾಸ ಮಾಡುತ್ತೇವೆ ಎಂದಿದ್ದಾರೆ.

ಇಲ್ಲಿರುವ ವಲಸೆ ಕಾರ್ಮಿಕರಿಗೆ ದಿನನಿತ್ಯ ಊಟ ಸರಬರಾಜು ಮಾಡುವ ಇನ್ಫೋಟೆಕ್‌ ಎಂಟರ್‌ಪ್ರೀನರ್‌ ಅಂಡ್‌ ಮ್ಯಾನೇಜಿಂಗ್‌ ಡೈರಕ್ಟರ್‌ ಆಫ್‌ ಇಂಟರ್‌ನೆಟ್‌ ಬ್ರಾಡ್‌ಬ್ಯಾಂಡ್‌ನ ಭೂಪೇಶ್‌ ಗುಪ್ತ ಪ್ರತಿಕ್ರಿಯಿಸಿ, “ಸದ್ಯಕ್ಕೆ 200 ಜನ ಇಲ್ಲಿ ವಾಸಿಸುತ್ತಿದ್ದಾರೆ. ಅದರಲ್ಲಿ ಕರ್ನಾಟಕದವರೆ ಹೆಚ್ಚು. ಅವರು ಸಹಜವಾಗಿ ಯಾವಾಗ ತಮ್ಮೂರಿಗೆ ಹೋಗಬಹುದೆಂಬ ಭರವಸೆಯಲ್ಲಿದ್ದಾರೆ. ಅವರ ಭವಿಷ್ಯ ಅಭದ್ರವಾಗಿದೆ” ಎಂದಿದ್ದಾರೆ.

ಈ ಕಾರ್ಮಿಕರನ್ನು ನವೀ ಮುಂಬೈನ ಮುನಿಸಿಪಲ್‌ ಶಾಲೆಗೆ ಸ್ಥಳಾಂತರಿಸಲು ಯೋಚಿಸಲಾಗುತ್ತಿದೆ. ಆದರೆ ಅದರ ಬದಲಿಗೆ ಇವರನ್ನು ತಮ್ಮ ತಮ್ಮ ಸ್ವಗ್ರಾಮಗಳಿಗೆ ಏಕೆ ಕಳಿಸಬಾರದೆಂದು ಜನ ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಅವರು ಬಹಳ ಚಿಂತಿತರಾಗಿದ್ದಾರೆ ಎಂದು ಭೂಪೇಶ್ ಗುಪ್ತ ತಿಳಿಸಿದ್ದಾರೆ.

ನವಿಮುಂಬೈ ಮುನಿಸಿಪಲ್‌ ಕಾರ್ಪೋರೇಷನ್‌ನ ಕಮಿಷನರ್‌ ಎ.ಬಿ ಮಿಶಲ್‌ “ನಾವು ಇಲ್ಲಿ ಕೋವಿಡ್‌ ಕೇರೆ ಆಸ್ಪತ್ರೆ ಕಟ್ಟುತ್ತೇವೆ. ಇಲ್ಲಿರುವ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸಲು ಕಾನೂನುರಿತ್ಯಾ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಅನಾರ್ಜಿತ್‌ ಚೌವಾಣ್‌ ಮಾತನಾಡಿ “ಇಲ್ಲಿರುವ ವಲಸೆ ಕಾರ್ಮಿಕರು ಬಡವರು. ಆದಷ್ಟು ಬೇಗ ಅವರನ್ನು ತಮ್ಮ ತಮ್ಮ ಸ್ವಂತ ಊರುಗಳಿಗೆ ಕಳಿಸಿಕೊಡಲಾಗುವುದು ಎಂಬ ಭರವಸೆ ನೀಡಲಾಗಿತ್ತು. ಆದರೆ ಮೂರನೇ ಬಾರಿ ಲಾಕ್‌ಡೌನ್‌ ಘೋಷಣೆಯಾದಾಗ ಇಲ್ಲಿರುವ ಕಾರ್ಮಿಕರಿಗೆ ತಮಗೆ ಮೋಸ ಮಾಡಲಾಗುತ್ತಿದೆ ಎಂಬ ಭಾವನೆ ಬೆಳೆದಿದೆ. ಇವರನ್ನು ಆದಷ್ಟು ಬೇಗ ಅವರ ಸ್ವಂತ ಊರುಗಳಿಗೆ ಕಳಿಸಕೊಡಬೇಕೆಂದು ನಾನು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಯವರಲ್ಲಿ ಮನವಿ ಮಾಡುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...