Homeಮುಖಪುಟಮುಂಬೈನಲ್ಲಿ ಉಪವಾಸ ಧರಣಿ ಆರಂಭಿಸಿದ ಕರ್ನಾಟಕದ ವಲಸೆ ಕಾರ್ಮಿಕರು

ಮುಂಬೈನಲ್ಲಿ ಉಪವಾಸ ಧರಣಿ ಆರಂಭಿಸಿದ ಕರ್ನಾಟಕದ ವಲಸೆ ಕಾರ್ಮಿಕರು

- Advertisement -
- Advertisement -

ಕಳೆದ 45 ದಿನಗಳಿಂದ ಮಹಾರಾಷ್ಟ್ರದ ನವಿ ಮುಂಬೈನ ವಾಸಿ ಚಿಡ್ಕೊ ವಸ್ತುಪ್ರದರ್ಶನ ಕೇಂದ್ರದ ನಿರಾಶ್ರಿತ ಶಿಬಿರದಲ್ಲಿ ಕರ್ನಾಟಕದ 180ಕ್ಕೂ ಹೆಚ್ಚು ವಲಸೆ ಕಾರ್ಮಿಕರು ಮತ್ತು ಅವರ ಕುಟುಂಬ ಗುರುವಾರ ಮಧ್ಯಾಹ್ನದಿಂದ ಉಪವಾಸ ಧರಣಿ ಆರಂಭಿಸಿದ್ದಾರೆ. ಈಗ ಅದೇ ಶಿಬಿರವನ್ನು ಕೋವಿಡ್‌ ಕೇರ್‌ ಸೆಂಟರ್‌ ಆಗಿ ಪರಿವರ್ತಿಸುತ್ತಿರುವುದರಿಂದ ನಮ್ಮನ್ನು ಯಾವಾಗ ನಮ್ಮ ಊರುಗಳಿಗೆ ಕಳಿಸುಲಾಗುತ್ತದೆ ಎಂಬ ಮಾಹಿತಿ ನೀಡಬೇಕೆಂದು ಕಾರ್ಮಿಕರು ಪಟ್ಟು ಹಿಡಿದಿದ್ದಾರೆ.

ನಮ್ಮನ್ನು ಚಿಡ್ಕೊ ವಸ್ತುಪ್ರದರ್ಶನ ಕೇಂದ್ರದ ನಿರಾಶ್ರಿತ ಶಿಬಿರದಿಂದ ಬೇರೆಡೆಗೆ ವರ್ಗಾಹಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಇದು ಸರಿಯಲ್ಲಿ. ಬದಲಿಗೆ ಬಸ್‌ ಅಥವಾ ರೈಲು ವ್ಯವಸ್ಥೆ ಮಾಡಿ ನಮ್ಮನ್ನು ನಮ್ಮ ಊರುಗಳಿಗೆ ಕಳಿಸಿಕೊಡಬೇಕು. ನಾವು ಇಲ್ಲಿ ದಿನಗೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದೇವೆ. ಲಾಕ್‌ಡೌನ್‌ ಘೋಷಣೆಯಾದಾಗ ಪೊಲೀಸರು ನಮ್ಮನ್ನು ಇಲ್ಲಿಗೆ ಕರೆತಂದಿದ್ದಾರೆ ಎಂದು ಕೆ ರಾಥೋಡ್‌ ಎಂಬುವ ಕಾರ್ಮಿಕರೊಬ್ಬರೂ ಆರೋಪಿಸಿದ್ದಾರೆ ಎಂದು ಟೈಮ್ಸ್‌ ಆಪ್‌ ಇಂಡಿಯಾ ವರದಿ ಮಾಡಿದೆ.

ಮತ್ತೊಬ್ಬ ವಲಸೆ ಕಾರ್ಮಿಕರಾದ ಹರಿಶ್ಚಂದ್ರ ಜಾಧವ್‌ ಮಾತನಾಡಿ, ಕೆಲ ಆರೋಗ್ಯ ಅಧಿಕಾರಿಗಳು ಈಗಾಗಲೇ ಇಲ್ಲಿ ಕೆಲವು ವೈದ್ಯಕೀಯ ಉಪಕರಣಗಳನ್ನು ಅಳವಡಿಸುತ್ತಿದ್ದಾರೆ. ನಮ್ಮನ್ನು ನಮ್ಮ ಊರಿಗೆ ಯಾವಾಗ ಕರೆದೊಯ್ಯುತ್ತೇವೆ ಎಂದು ಯಾರೂ ಹೇಳುತ್ತಿಲ್ಲ. ಹಾಗಾಗಿ ನಾವು ಊಟ ಮಾಡುವುದನ್ನು ಬಿಟ್ಟಿದ್ದೇವೆ. ಅವರಿಂದ ಸಮರ್ಪಕ ಉತ್ತರ ಬರುವವರೆಗೂ ಊಟ ಮಾಡುವುದಿಲ್ಲ, ಉಪವಾಸ ಮಾಡುತ್ತೇವೆ ಎಂದಿದ್ದಾರೆ.

ಇಲ್ಲಿರುವ ವಲಸೆ ಕಾರ್ಮಿಕರಿಗೆ ದಿನನಿತ್ಯ ಊಟ ಸರಬರಾಜು ಮಾಡುವ ಇನ್ಫೋಟೆಕ್‌ ಎಂಟರ್‌ಪ್ರೀನರ್‌ ಅಂಡ್‌ ಮ್ಯಾನೇಜಿಂಗ್‌ ಡೈರಕ್ಟರ್‌ ಆಫ್‌ ಇಂಟರ್‌ನೆಟ್‌ ಬ್ರಾಡ್‌ಬ್ಯಾಂಡ್‌ನ ಭೂಪೇಶ್‌ ಗುಪ್ತ ಪ್ರತಿಕ್ರಿಯಿಸಿ, “ಸದ್ಯಕ್ಕೆ 200 ಜನ ಇಲ್ಲಿ ವಾಸಿಸುತ್ತಿದ್ದಾರೆ. ಅದರಲ್ಲಿ ಕರ್ನಾಟಕದವರೆ ಹೆಚ್ಚು. ಅವರು ಸಹಜವಾಗಿ ಯಾವಾಗ ತಮ್ಮೂರಿಗೆ ಹೋಗಬಹುದೆಂಬ ಭರವಸೆಯಲ್ಲಿದ್ದಾರೆ. ಅವರ ಭವಿಷ್ಯ ಅಭದ್ರವಾಗಿದೆ” ಎಂದಿದ್ದಾರೆ.

ಈ ಕಾರ್ಮಿಕರನ್ನು ನವೀ ಮುಂಬೈನ ಮುನಿಸಿಪಲ್‌ ಶಾಲೆಗೆ ಸ್ಥಳಾಂತರಿಸಲು ಯೋಚಿಸಲಾಗುತ್ತಿದೆ. ಆದರೆ ಅದರ ಬದಲಿಗೆ ಇವರನ್ನು ತಮ್ಮ ತಮ್ಮ ಸ್ವಗ್ರಾಮಗಳಿಗೆ ಏಕೆ ಕಳಿಸಬಾರದೆಂದು ಜನ ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಅವರು ಬಹಳ ಚಿಂತಿತರಾಗಿದ್ದಾರೆ ಎಂದು ಭೂಪೇಶ್ ಗುಪ್ತ ತಿಳಿಸಿದ್ದಾರೆ.

ನವಿಮುಂಬೈ ಮುನಿಸಿಪಲ್‌ ಕಾರ್ಪೋರೇಷನ್‌ನ ಕಮಿಷನರ್‌ ಎ.ಬಿ ಮಿಶಲ್‌ “ನಾವು ಇಲ್ಲಿ ಕೋವಿಡ್‌ ಕೇರೆ ಆಸ್ಪತ್ರೆ ಕಟ್ಟುತ್ತೇವೆ. ಇಲ್ಲಿರುವ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸಲು ಕಾನೂನುರಿತ್ಯಾ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಅನಾರ್ಜಿತ್‌ ಚೌವಾಣ್‌ ಮಾತನಾಡಿ “ಇಲ್ಲಿರುವ ವಲಸೆ ಕಾರ್ಮಿಕರು ಬಡವರು. ಆದಷ್ಟು ಬೇಗ ಅವರನ್ನು ತಮ್ಮ ತಮ್ಮ ಸ್ವಂತ ಊರುಗಳಿಗೆ ಕಳಿಸಿಕೊಡಲಾಗುವುದು ಎಂಬ ಭರವಸೆ ನೀಡಲಾಗಿತ್ತು. ಆದರೆ ಮೂರನೇ ಬಾರಿ ಲಾಕ್‌ಡೌನ್‌ ಘೋಷಣೆಯಾದಾಗ ಇಲ್ಲಿರುವ ಕಾರ್ಮಿಕರಿಗೆ ತಮಗೆ ಮೋಸ ಮಾಡಲಾಗುತ್ತಿದೆ ಎಂಬ ಭಾವನೆ ಬೆಳೆದಿದೆ. ಇವರನ್ನು ಆದಷ್ಟು ಬೇಗ ಅವರ ಸ್ವಂತ ಊರುಗಳಿಗೆ ಕಳಿಸಕೊಡಬೇಕೆಂದು ನಾನು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಯವರಲ್ಲಿ ಮನವಿ ಮಾಡುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...