Homeಅಂಕಣಗಳುಬಹುಜನ ಭಾರತ: ಕಲ್ಲನಾಗರಕೆ ಹಾಲೆರೆವವರ ಡಾಂಭಿಕತನ!

ಬಹುಜನ ಭಾರತ: ಕಲ್ಲನಾಗರಕೆ ಹಾಲೆರೆವವರ ಡಾಂಭಿಕತನ!

- Advertisement -
- Advertisement -

ಅಂಬೇಡ್ಕರ್ ಸಿದ್ಧಾಂತವ ನಿತ್ಯ ಬದುಕಿನಲಿ ವಧಿಸಿ ಅವರ ಹೆಸರಿನ ಸ್ಮಾರಕಗಳ ನಿರ್ಮಿಸುವುದು ಕಪಟ ನಾಟಕ
1956ರಲ್ಲಿ ಮರೆಯಾದದ್ದು ಬಾಬಾಸಾಹೇಬರ ನಶ್ವರ ದೇಹವೇ ವಿನಾ ಅವರ ಪ್ರಖರ ಜೀವಪರ ವಿಚಾರಗಳಲ್ಲ ಎಂಬ ಕಠೋರ ಸತ್ಯವನ್ನು ಆಳುವವರ ಕಣ್ಣುಗಳು ಕಾಣದಾಗಿವೆ. ಈ ನೆಲವನ್ನು ಈವರೆಗೆ ಆಳಿಕೊಂಡು ಬಂದಿರುವ ಬಹುತೇಕ ಎಲ್ಲ ಸರ್ಕಾರಗಳು ಮಾಡಿಕೊಂಡು ಬಂದಿರುವ ತಪ್ಪನ್ನೇ ನರೇಂದ್ರ ಮೋದಿ ಮತ್ತು ಅವರ ಸಂಗಾತಿಗಳು ಮಾಡುತ್ತಿದ್ದಾರೆ.

ತುಳಿದಿಟ್ಟ ಸಮುದಾಯಗಳು ಎದೆಯೊಳಗೆ ಧರಿಸಿರುವ ದೀಪವಾಗಿ ಬಾಬಾಸಾಹೇಬರು ಧಗಧಗಿಸಿ ಹೊಳೆದಿದ್ದಾರೆ. ಸಮಸಮಾಜವನ್ನು ಅರಸುವ ಆಂದೋಲನಗಳಲ್ಲಿ, ಸ್ವಾತಂತ್ರ್ಯ ಸಮಾನತೆ ಸೋದರಭಾವ ಸಾರುವ ಸಂವಿಧಾನದಲ್ಲಿ ಅವರು ಇಂದಿಗೂ ಜೀವಂತವಾಗಿದ್ದಾರೆ. ಬದುಕಿರುವ ಈ ಅಂಬೇಡ್ಕರರನ್ನು ಕಣ್ಣು ತೆರೆದು ಕಾಣಬೇಕಿದೆ. ಹಾಗೆ ಕಣ್ಣು ತೆರೆಯುವುದನ್ನು ಒಲ್ಲದವರು ಯಥಾಸ್ಥಿತಿಯ ಪೋಷಕರು ಮತ್ತು ಫಲಾನುಭವಿಗಳು. ಹಾಗೆ ಸತ್ಯವನ್ನು ಕಣ್ಣಲ್ಲಿ ಕಟ್ಟಿಟ್ಟು ನೋಡುವುದಾದರೆ ಅಸಮಾನತೆಯ ತಳಪಾಯದ ಮೇಲೆ ಅವರು ಕಟ್ಟಿಕೊಂಡು ಬಂದಿರುವ ಶೋಷಣೆಯ ಸೌಧಗಳು ಬುಡಮೇಲಾಗಲಿವೆ.

ಹೀಗಾಗಿ ನಶ್ವರ ದೇಹಕ್ಕೆ ಮತ್ತು ನಾಮಧೇಯಕ್ಕೆ ಪ್ರತಿಮೆಗಳು, ಮಹಲುಗಳು, ಭವನಗಳು, ಭವ್ಯ ಸ್ಮಾರಕಗಳನ್ನು ಕಟ್ಟಿಸಿ ನಿಲ್ಲಿಸಲಾಗುತ್ತಿದೆ. ಅಂಬೇಡ್ಕರ್ ಅವರನ್ನು ಗೌರವಿಸುವವರು ನಾವು ಎಂದು ಎದೆಬಡಿದು ಹೇಳಿಕೊಳ್ಳಲಾಗುತ್ತಿದೆ.

ಏಣಿ ಶ್ರೇಣಿಗಳು, ಭೇದ ಭಾವಗಳ ಸಾಮಾಜಿಕ ವ್ಯವಸ್ಥೆಯಲ್ಲಿ ಸುಧಾರಣೆಗಳನ್ನು ತರದೆ ಆರ್ಥಿಕ ಸುಧಾರಣೆಯಾದರೂ ಹೇಗೆ ಸಾಧ್ಯ ಎಂಬ ಅಂಬೇಡ್ಕರ್ ಪ್ರಶ್ನೆ ಇಂದಿಗೂ ಪ್ರಸ್ತುತ. ಬಹುತೇಕ ರಾಜಕೀಯ ಪಕ್ಷಗಳಿಗೆ ಅಂಬೇಡ್ಕರ್ ರೂಪವಾಗಿ ಬೇಕೇ ವಿನಾ ಸಾರವಾಗಿ ಅಲ್ಲ. “ಕಲ್ಲ ನಾಗರಕೆ ಹಾಲೆರೆವ” ಮತ್ತು “ಉಣ್ಣದ ಲಿಂಗಕ್ಕೆ ಬೋನವ ಹಿಡಿವ” ಡಾಂಭಿಕತನವನ್ನು ನಮ್ಮ ರಾಜಕೀಯ ಪಕ್ಷಗಳು ಅಂಬೇಡ್ಕರರ ಕುರಿತು ಪ್ರದರ್ಶಿಸಿವೆ. ಜಾತಿ ವ್ಯವಸ್ಥೆಯ ವಿರುದ್ಧ ಅಂಬೇಡ್ಕರ್ ಸಿಡಿಸಿದ ವಿಚಾರಗಳು ಈ ಪಕ್ಷಗಳಿಗೆ ಬೇಕಿಲ್ಲ. ಅವುಗಳನ್ನು ಮಡಿಕೋಲಿನಿಂದಲೂ ಮುಟ್ಟಿಲ್ಲ.

PC :ShareChat

ಹಿಂದೂ ಸಮಾಜ ನಿರ್ವಂಚನೆಯಿಂದ ದಲಿತರನ್ನು ಸರಿಸಮನಾಗಿ ನಡೆಸಿಕೊಳ್ಳಬೇಕು ಎಂಬ ಅಂಬೇಡ್ಕರ್ ಆಗ್ರಹಕ್ಕೆ ಇಂದಿಗೂ ರಾಜಕೀಯ ಪಕ್ಷ-ಪರಿವಾರಗಳು ಜಾಣ ಕಿವುಡು ಮತ್ತು ಕುರುಡನ್ನೇ ತೋರಿವೆ. ಶೂದ್ರರು ಸೃಷ್ಟಿಯಾದದ್ದು ಬ್ರಾಹ್ಮಣ, ಕ್ಷತ್ರಿಯ, ವೈಶ್ಯರ ಸೇವೆಗೆ ಎಂದು ಸಾರಿದ್ದ ಪ್ರಾಚೀನ ಭಾರತದ ಕಾನೂನು ಸಂಹಿತೆ ಮನುಸ್ಮೃತಿಯನ್ನು ಅಂತರಂಗದಲ್ಲಿ ಆರಾಧಿಸುವ ವಿಚಾರಧಾರೆಗೆ ಸೇರಿದವರು ನರೇಂದ್ರ ಮೋದಿ. ಇದೇ ಮನುಸ್ಮೃತಿಯ ಪ್ರತಿಯನ್ನು ಸಾಂಕೇತಿಕವಾಗಿ ಸುಟ್ಟಿದ್ದವರು ಅಂಬೇಡ್ಕರ್.

ಅಸಮಾನತೆಯ ನರಕಕೂಪದಿಂದ ನಿಜ ಸಮಾನತೆಯ ಎತ್ತರವನ್ನು ಭಾರತ ಏರಬೇಕೆಂಬ ಅಂಬೇಡ್ಕರ್ ಕನಸು ಇಂದಿಗೂ ನನಸಾಗಿಲ್ಲ. ಅವರು ನೀಡಿದ ಈ ದಸ್ತಾವೇಜನ್ನು ತಿದ್ದಿ ಬರೆಯುತ್ತೇವೆಂದು ಎದೆ ಸೆಟೆಸುವುದು ಈ ನಾಯಕನಿಗೆ ಮಾಡುವ ಅವಮಾನ. ಏಕಕಾಲಕ್ಕೆ ಹಲವು ನಾಲಗೆಗಳಲ್ಲಿ ನುಡಿಯುವ ಧೂರ್ತತನವನ್ನು ಆಳುವವರು ಬಿಡಬೇಕು. ಒಂದೇ ನಾಲಗೆಯಲ್ಲಿ ಮಾತಾಡಬೇಕು. ಏಕಕಾಲಕ್ಕೆ ಬೇಟೆನಾಯಿಯೊಂದಿಗೆ ಬೆನ್ನಟ್ಟುವ ಮತ್ತು ಪ್ರಾಣ ಉಳಿಸಿಕೊಳ್ಳಲು ಧಾವಿಸುವ ಮೊಲದೊಂದಿಗೆ ಓಡುವ ಆಷಾಡಭೂತಿತನದ ಮರ್ಮವೇನು?

ಆಚರಣೆಯಲ್ಲಿ ಅಂಬೇಡ್ಕರ್ ಸಿದ್ಧಾಂತವನ್ನು ಇಡಿಯಾಗಿ ವಿರೋಧಿಸಿ, ನಿತ್ಯದ ಬದುಕಿನಲ್ಲಿ ದಲಿತ ದ್ವೇಷವನ್ನು ಕಾರುವ ಜಾತಿ ವರ್ಗಗಳ ಜೊತೆ ನಿಲ್ಲುವವರು ಅಂಬೇಡ್ಕರ್ ಅವರಿಗೆ ತೋರುವ ಆದರವು ಅಪ್ಪಟ ಕಪಟ.

ದಲಿತರ ಮತಗಳನ್ನು ಸೆಳೆಯುವ ಕೇವಲ ಪ್ರತಿಮೆ- ಪ್ರತೀಕ- ಸ್ಮಾರಕ ರೂಪಕಗಳಾಗಿ ಮಾತ್ರವೇ ಪಕ್ಷ ಪರಿವಾರಗಳು ಅಂಬೇಡ್ಕರ್ ವರ್ಚಸ್ಸನ್ನು ದೋಚತೊಡಗಿವೆ. ನಿಜದ ಬಾಬಾಸಾಹೇಬರನ್ನೂ ಅವರ ಪ್ರಖರ ವಿಚಾರಗಳನ್ನು ದಿನನಿತ್ಯ ಬಗೆ ಬಗೆಯಲ್ಲಿ ವಧಿಸಲಾಗುತ್ತಿದೆ.

ಹನ್ನೆರಡನೆಯ ಶತಮಾನದಲ್ಲಿ ಸಮಸಮಾಜವನ್ನು ಕನಸಿ ಅದನ್ನು ನನಸಾಗಿಸಲು ಕ್ರಾಂತಿಯನ್ನೇ ನಡೆಸಿ ಪಟ್ಟಭದ್ರ ಹಿತಗಳಿಗೆ ಬಲಿಯಾದ ಬಸವಣ್ಣನವರ ಈ ವಚನ ಈಗಲೂ ಅತ್ಯಂತ ಪ್ರಸ್ತುತ.

ಕಲ್ಲ ನಾಗರ ಕಂಡರೆ ಹಾಲನೆರೆ ಎಂಬರು; ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ! ಉಂಬ ಜಂಗಮ ಬಂದರೆ ನಡೆ ಎಂಬರು; ಉಣ್ಣದ ಲಿಂಗಕ್ಕೆ ಬೋನವ ಹಿಡಿ ಎಂಬರಯ್ಯ! ನಮ್ಮ ಕೂಡಲಸಂಗನ ಶರಣರ ಕಂಡು ಉದಾಸೀನವ ಮಾಡಿದರೆ, ಕಲ್ಲ ತಾಗಿದ ಮಿಟ್ಟೆಯಂತಪ್ಪರಯ್ಯ! ಮಾಡಿ ಮಾಡಿ ಕೆಟ್ಟರು ಮನವಿಲ್ಲದೆ. ನೀಡ ನೀಡಿ ಕೆಟ್ಟರು ನಿಜವಿಲ್ಲದೆ. ಮಾಡುವ ನೀಡುವ ನಿಜಗುಣವುಳ್ಳಡೆ. ಕೂಡಿಕೊಂಬ ನಮ್ಮ ಕೂಡಲಸಂಗಮದೇವ.


ಇದನ್ನೂ ಓದಿ: ಹಳತು ವಿವೇಕ: ಭಾರತದಲ್ಲಿ ಪ್ರಜಾಪ್ರಭುತ್ವಕ್ಕಿರುವ ನಿರೀಕ್ಷೆಗಳು: ಡಾ. ಬಿ ಆರ್ ಅಂಬೇಡ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಲೇಖನವನ್ನು ಡಾಬಸ್ಪೇಟೆ ವಾಯ್ಸ್ ನ ಮುಂದಿನ ಸಂಚಿಕೆಯಲ್ಲಿ (ಮೇ 2021) ಪ್ರಕಟಿಸಲು ಅನುಮತಿ ನೀಡಬೇಕಾಗಿ ವಿನಂತಿ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...