Homeಅಂಕಣಗಳುಬಹುಜನ ಭಾರತ: ಕಲ್ಲನಾಗರಕೆ ಹಾಲೆರೆವವರ ಡಾಂಭಿಕತನ!

ಬಹುಜನ ಭಾರತ: ಕಲ್ಲನಾಗರಕೆ ಹಾಲೆರೆವವರ ಡಾಂಭಿಕತನ!

- Advertisement -
- Advertisement -

ಅಂಬೇಡ್ಕರ್ ಸಿದ್ಧಾಂತವ ನಿತ್ಯ ಬದುಕಿನಲಿ ವಧಿಸಿ ಅವರ ಹೆಸರಿನ ಸ್ಮಾರಕಗಳ ನಿರ್ಮಿಸುವುದು ಕಪಟ ನಾಟಕ
1956ರಲ್ಲಿ ಮರೆಯಾದದ್ದು ಬಾಬಾಸಾಹೇಬರ ನಶ್ವರ ದೇಹವೇ ವಿನಾ ಅವರ ಪ್ರಖರ ಜೀವಪರ ವಿಚಾರಗಳಲ್ಲ ಎಂಬ ಕಠೋರ ಸತ್ಯವನ್ನು ಆಳುವವರ ಕಣ್ಣುಗಳು ಕಾಣದಾಗಿವೆ. ಈ ನೆಲವನ್ನು ಈವರೆಗೆ ಆಳಿಕೊಂಡು ಬಂದಿರುವ ಬಹುತೇಕ ಎಲ್ಲ ಸರ್ಕಾರಗಳು ಮಾಡಿಕೊಂಡು ಬಂದಿರುವ ತಪ್ಪನ್ನೇ ನರೇಂದ್ರ ಮೋದಿ ಮತ್ತು ಅವರ ಸಂಗಾತಿಗಳು ಮಾಡುತ್ತಿದ್ದಾರೆ.

ತುಳಿದಿಟ್ಟ ಸಮುದಾಯಗಳು ಎದೆಯೊಳಗೆ ಧರಿಸಿರುವ ದೀಪವಾಗಿ ಬಾಬಾಸಾಹೇಬರು ಧಗಧಗಿಸಿ ಹೊಳೆದಿದ್ದಾರೆ. ಸಮಸಮಾಜವನ್ನು ಅರಸುವ ಆಂದೋಲನಗಳಲ್ಲಿ, ಸ್ವಾತಂತ್ರ್ಯ ಸಮಾನತೆ ಸೋದರಭಾವ ಸಾರುವ ಸಂವಿಧಾನದಲ್ಲಿ ಅವರು ಇಂದಿಗೂ ಜೀವಂತವಾಗಿದ್ದಾರೆ. ಬದುಕಿರುವ ಈ ಅಂಬೇಡ್ಕರರನ್ನು ಕಣ್ಣು ತೆರೆದು ಕಾಣಬೇಕಿದೆ. ಹಾಗೆ ಕಣ್ಣು ತೆರೆಯುವುದನ್ನು ಒಲ್ಲದವರು ಯಥಾಸ್ಥಿತಿಯ ಪೋಷಕರು ಮತ್ತು ಫಲಾನುಭವಿಗಳು. ಹಾಗೆ ಸತ್ಯವನ್ನು ಕಣ್ಣಲ್ಲಿ ಕಟ್ಟಿಟ್ಟು ನೋಡುವುದಾದರೆ ಅಸಮಾನತೆಯ ತಳಪಾಯದ ಮೇಲೆ ಅವರು ಕಟ್ಟಿಕೊಂಡು ಬಂದಿರುವ ಶೋಷಣೆಯ ಸೌಧಗಳು ಬುಡಮೇಲಾಗಲಿವೆ.

ಹೀಗಾಗಿ ನಶ್ವರ ದೇಹಕ್ಕೆ ಮತ್ತು ನಾಮಧೇಯಕ್ಕೆ ಪ್ರತಿಮೆಗಳು, ಮಹಲುಗಳು, ಭವನಗಳು, ಭವ್ಯ ಸ್ಮಾರಕಗಳನ್ನು ಕಟ್ಟಿಸಿ ನಿಲ್ಲಿಸಲಾಗುತ್ತಿದೆ. ಅಂಬೇಡ್ಕರ್ ಅವರನ್ನು ಗೌರವಿಸುವವರು ನಾವು ಎಂದು ಎದೆಬಡಿದು ಹೇಳಿಕೊಳ್ಳಲಾಗುತ್ತಿದೆ.

ಏಣಿ ಶ್ರೇಣಿಗಳು, ಭೇದ ಭಾವಗಳ ಸಾಮಾಜಿಕ ವ್ಯವಸ್ಥೆಯಲ್ಲಿ ಸುಧಾರಣೆಗಳನ್ನು ತರದೆ ಆರ್ಥಿಕ ಸುಧಾರಣೆಯಾದರೂ ಹೇಗೆ ಸಾಧ್ಯ ಎಂಬ ಅಂಬೇಡ್ಕರ್ ಪ್ರಶ್ನೆ ಇಂದಿಗೂ ಪ್ರಸ್ತುತ. ಬಹುತೇಕ ರಾಜಕೀಯ ಪಕ್ಷಗಳಿಗೆ ಅಂಬೇಡ್ಕರ್ ರೂಪವಾಗಿ ಬೇಕೇ ವಿನಾ ಸಾರವಾಗಿ ಅಲ್ಲ. “ಕಲ್ಲ ನಾಗರಕೆ ಹಾಲೆರೆವ” ಮತ್ತು “ಉಣ್ಣದ ಲಿಂಗಕ್ಕೆ ಬೋನವ ಹಿಡಿವ” ಡಾಂಭಿಕತನವನ್ನು ನಮ್ಮ ರಾಜಕೀಯ ಪಕ್ಷಗಳು ಅಂಬೇಡ್ಕರರ ಕುರಿತು ಪ್ರದರ್ಶಿಸಿವೆ. ಜಾತಿ ವ್ಯವಸ್ಥೆಯ ವಿರುದ್ಧ ಅಂಬೇಡ್ಕರ್ ಸಿಡಿಸಿದ ವಿಚಾರಗಳು ಈ ಪಕ್ಷಗಳಿಗೆ ಬೇಕಿಲ್ಲ. ಅವುಗಳನ್ನು ಮಡಿಕೋಲಿನಿಂದಲೂ ಮುಟ್ಟಿಲ್ಲ.

PC :ShareChat

ಹಿಂದೂ ಸಮಾಜ ನಿರ್ವಂಚನೆಯಿಂದ ದಲಿತರನ್ನು ಸರಿಸಮನಾಗಿ ನಡೆಸಿಕೊಳ್ಳಬೇಕು ಎಂಬ ಅಂಬೇಡ್ಕರ್ ಆಗ್ರಹಕ್ಕೆ ಇಂದಿಗೂ ರಾಜಕೀಯ ಪಕ್ಷ-ಪರಿವಾರಗಳು ಜಾಣ ಕಿವುಡು ಮತ್ತು ಕುರುಡನ್ನೇ ತೋರಿವೆ. ಶೂದ್ರರು ಸೃಷ್ಟಿಯಾದದ್ದು ಬ್ರಾಹ್ಮಣ, ಕ್ಷತ್ರಿಯ, ವೈಶ್ಯರ ಸೇವೆಗೆ ಎಂದು ಸಾರಿದ್ದ ಪ್ರಾಚೀನ ಭಾರತದ ಕಾನೂನು ಸಂಹಿತೆ ಮನುಸ್ಮೃತಿಯನ್ನು ಅಂತರಂಗದಲ್ಲಿ ಆರಾಧಿಸುವ ವಿಚಾರಧಾರೆಗೆ ಸೇರಿದವರು ನರೇಂದ್ರ ಮೋದಿ. ಇದೇ ಮನುಸ್ಮೃತಿಯ ಪ್ರತಿಯನ್ನು ಸಾಂಕೇತಿಕವಾಗಿ ಸುಟ್ಟಿದ್ದವರು ಅಂಬೇಡ್ಕರ್.

ಅಸಮಾನತೆಯ ನರಕಕೂಪದಿಂದ ನಿಜ ಸಮಾನತೆಯ ಎತ್ತರವನ್ನು ಭಾರತ ಏರಬೇಕೆಂಬ ಅಂಬೇಡ್ಕರ್ ಕನಸು ಇಂದಿಗೂ ನನಸಾಗಿಲ್ಲ. ಅವರು ನೀಡಿದ ಈ ದಸ್ತಾವೇಜನ್ನು ತಿದ್ದಿ ಬರೆಯುತ್ತೇವೆಂದು ಎದೆ ಸೆಟೆಸುವುದು ಈ ನಾಯಕನಿಗೆ ಮಾಡುವ ಅವಮಾನ. ಏಕಕಾಲಕ್ಕೆ ಹಲವು ನಾಲಗೆಗಳಲ್ಲಿ ನುಡಿಯುವ ಧೂರ್ತತನವನ್ನು ಆಳುವವರು ಬಿಡಬೇಕು. ಒಂದೇ ನಾಲಗೆಯಲ್ಲಿ ಮಾತಾಡಬೇಕು. ಏಕಕಾಲಕ್ಕೆ ಬೇಟೆನಾಯಿಯೊಂದಿಗೆ ಬೆನ್ನಟ್ಟುವ ಮತ್ತು ಪ್ರಾಣ ಉಳಿಸಿಕೊಳ್ಳಲು ಧಾವಿಸುವ ಮೊಲದೊಂದಿಗೆ ಓಡುವ ಆಷಾಡಭೂತಿತನದ ಮರ್ಮವೇನು?

ಆಚರಣೆಯಲ್ಲಿ ಅಂಬೇಡ್ಕರ್ ಸಿದ್ಧಾಂತವನ್ನು ಇಡಿಯಾಗಿ ವಿರೋಧಿಸಿ, ನಿತ್ಯದ ಬದುಕಿನಲ್ಲಿ ದಲಿತ ದ್ವೇಷವನ್ನು ಕಾರುವ ಜಾತಿ ವರ್ಗಗಳ ಜೊತೆ ನಿಲ್ಲುವವರು ಅಂಬೇಡ್ಕರ್ ಅವರಿಗೆ ತೋರುವ ಆದರವು ಅಪ್ಪಟ ಕಪಟ.

ದಲಿತರ ಮತಗಳನ್ನು ಸೆಳೆಯುವ ಕೇವಲ ಪ್ರತಿಮೆ- ಪ್ರತೀಕ- ಸ್ಮಾರಕ ರೂಪಕಗಳಾಗಿ ಮಾತ್ರವೇ ಪಕ್ಷ ಪರಿವಾರಗಳು ಅಂಬೇಡ್ಕರ್ ವರ್ಚಸ್ಸನ್ನು ದೋಚತೊಡಗಿವೆ. ನಿಜದ ಬಾಬಾಸಾಹೇಬರನ್ನೂ ಅವರ ಪ್ರಖರ ವಿಚಾರಗಳನ್ನು ದಿನನಿತ್ಯ ಬಗೆ ಬಗೆಯಲ್ಲಿ ವಧಿಸಲಾಗುತ್ತಿದೆ.

ಹನ್ನೆರಡನೆಯ ಶತಮಾನದಲ್ಲಿ ಸಮಸಮಾಜವನ್ನು ಕನಸಿ ಅದನ್ನು ನನಸಾಗಿಸಲು ಕ್ರಾಂತಿಯನ್ನೇ ನಡೆಸಿ ಪಟ್ಟಭದ್ರ ಹಿತಗಳಿಗೆ ಬಲಿಯಾದ ಬಸವಣ್ಣನವರ ಈ ವಚನ ಈಗಲೂ ಅತ್ಯಂತ ಪ್ರಸ್ತುತ.

ಕಲ್ಲ ನಾಗರ ಕಂಡರೆ ಹಾಲನೆರೆ ಎಂಬರು; ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ! ಉಂಬ ಜಂಗಮ ಬಂದರೆ ನಡೆ ಎಂಬರು; ಉಣ್ಣದ ಲಿಂಗಕ್ಕೆ ಬೋನವ ಹಿಡಿ ಎಂಬರಯ್ಯ! ನಮ್ಮ ಕೂಡಲಸಂಗನ ಶರಣರ ಕಂಡು ಉದಾಸೀನವ ಮಾಡಿದರೆ, ಕಲ್ಲ ತಾಗಿದ ಮಿಟ್ಟೆಯಂತಪ್ಪರಯ್ಯ! ಮಾಡಿ ಮಾಡಿ ಕೆಟ್ಟರು ಮನವಿಲ್ಲದೆ. ನೀಡ ನೀಡಿ ಕೆಟ್ಟರು ನಿಜವಿಲ್ಲದೆ. ಮಾಡುವ ನೀಡುವ ನಿಜಗುಣವುಳ್ಳಡೆ. ಕೂಡಿಕೊಂಬ ನಮ್ಮ ಕೂಡಲಸಂಗಮದೇವ.


ಇದನ್ನೂ ಓದಿ: ಹಳತು ವಿವೇಕ: ಭಾರತದಲ್ಲಿ ಪ್ರಜಾಪ್ರಭುತ್ವಕ್ಕಿರುವ ನಿರೀಕ್ಷೆಗಳು: ಡಾ. ಬಿ ಆರ್ ಅಂಬೇಡ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಲೇಖನವನ್ನು ಡಾಬಸ್ಪೇಟೆ ವಾಯ್ಸ್ ನ ಮುಂದಿನ ಸಂಚಿಕೆಯಲ್ಲಿ (ಮೇ 2021) ಪ್ರಕಟಿಸಲು ಅನುಮತಿ ನೀಡಬೇಕಾಗಿ ವಿನಂತಿ.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...