Homeಅಂಕಣಗಳುಬಹುಜನ ಭಾರತ: ಕಲ್ಲನಾಗರಕೆ ಹಾಲೆರೆವವರ ಡಾಂಭಿಕತನ!

ಬಹುಜನ ಭಾರತ: ಕಲ್ಲನಾಗರಕೆ ಹಾಲೆರೆವವರ ಡಾಂಭಿಕತನ!

- Advertisement -
- Advertisement -

ಅಂಬೇಡ್ಕರ್ ಸಿದ್ಧಾಂತವ ನಿತ್ಯ ಬದುಕಿನಲಿ ವಧಿಸಿ ಅವರ ಹೆಸರಿನ ಸ್ಮಾರಕಗಳ ನಿರ್ಮಿಸುವುದು ಕಪಟ ನಾಟಕ
1956ರಲ್ಲಿ ಮರೆಯಾದದ್ದು ಬಾಬಾಸಾಹೇಬರ ನಶ್ವರ ದೇಹವೇ ವಿನಾ ಅವರ ಪ್ರಖರ ಜೀವಪರ ವಿಚಾರಗಳಲ್ಲ ಎಂಬ ಕಠೋರ ಸತ್ಯವನ್ನು ಆಳುವವರ ಕಣ್ಣುಗಳು ಕಾಣದಾಗಿವೆ. ಈ ನೆಲವನ್ನು ಈವರೆಗೆ ಆಳಿಕೊಂಡು ಬಂದಿರುವ ಬಹುತೇಕ ಎಲ್ಲ ಸರ್ಕಾರಗಳು ಮಾಡಿಕೊಂಡು ಬಂದಿರುವ ತಪ್ಪನ್ನೇ ನರೇಂದ್ರ ಮೋದಿ ಮತ್ತು ಅವರ ಸಂಗಾತಿಗಳು ಮಾಡುತ್ತಿದ್ದಾರೆ.

ತುಳಿದಿಟ್ಟ ಸಮುದಾಯಗಳು ಎದೆಯೊಳಗೆ ಧರಿಸಿರುವ ದೀಪವಾಗಿ ಬಾಬಾಸಾಹೇಬರು ಧಗಧಗಿಸಿ ಹೊಳೆದಿದ್ದಾರೆ. ಸಮಸಮಾಜವನ್ನು ಅರಸುವ ಆಂದೋಲನಗಳಲ್ಲಿ, ಸ್ವಾತಂತ್ರ್ಯ ಸಮಾನತೆ ಸೋದರಭಾವ ಸಾರುವ ಸಂವಿಧಾನದಲ್ಲಿ ಅವರು ಇಂದಿಗೂ ಜೀವಂತವಾಗಿದ್ದಾರೆ. ಬದುಕಿರುವ ಈ ಅಂಬೇಡ್ಕರರನ್ನು ಕಣ್ಣು ತೆರೆದು ಕಾಣಬೇಕಿದೆ. ಹಾಗೆ ಕಣ್ಣು ತೆರೆಯುವುದನ್ನು ಒಲ್ಲದವರು ಯಥಾಸ್ಥಿತಿಯ ಪೋಷಕರು ಮತ್ತು ಫಲಾನುಭವಿಗಳು. ಹಾಗೆ ಸತ್ಯವನ್ನು ಕಣ್ಣಲ್ಲಿ ಕಟ್ಟಿಟ್ಟು ನೋಡುವುದಾದರೆ ಅಸಮಾನತೆಯ ತಳಪಾಯದ ಮೇಲೆ ಅವರು ಕಟ್ಟಿಕೊಂಡು ಬಂದಿರುವ ಶೋಷಣೆಯ ಸೌಧಗಳು ಬುಡಮೇಲಾಗಲಿವೆ.

ಹೀಗಾಗಿ ನಶ್ವರ ದೇಹಕ್ಕೆ ಮತ್ತು ನಾಮಧೇಯಕ್ಕೆ ಪ್ರತಿಮೆಗಳು, ಮಹಲುಗಳು, ಭವನಗಳು, ಭವ್ಯ ಸ್ಮಾರಕಗಳನ್ನು ಕಟ್ಟಿಸಿ ನಿಲ್ಲಿಸಲಾಗುತ್ತಿದೆ. ಅಂಬೇಡ್ಕರ್ ಅವರನ್ನು ಗೌರವಿಸುವವರು ನಾವು ಎಂದು ಎದೆಬಡಿದು ಹೇಳಿಕೊಳ್ಳಲಾಗುತ್ತಿದೆ.

ಏಣಿ ಶ್ರೇಣಿಗಳು, ಭೇದ ಭಾವಗಳ ಸಾಮಾಜಿಕ ವ್ಯವಸ್ಥೆಯಲ್ಲಿ ಸುಧಾರಣೆಗಳನ್ನು ತರದೆ ಆರ್ಥಿಕ ಸುಧಾರಣೆಯಾದರೂ ಹೇಗೆ ಸಾಧ್ಯ ಎಂಬ ಅಂಬೇಡ್ಕರ್ ಪ್ರಶ್ನೆ ಇಂದಿಗೂ ಪ್ರಸ್ತುತ. ಬಹುತೇಕ ರಾಜಕೀಯ ಪಕ್ಷಗಳಿಗೆ ಅಂಬೇಡ್ಕರ್ ರೂಪವಾಗಿ ಬೇಕೇ ವಿನಾ ಸಾರವಾಗಿ ಅಲ್ಲ. “ಕಲ್ಲ ನಾಗರಕೆ ಹಾಲೆರೆವ” ಮತ್ತು “ಉಣ್ಣದ ಲಿಂಗಕ್ಕೆ ಬೋನವ ಹಿಡಿವ” ಡಾಂಭಿಕತನವನ್ನು ನಮ್ಮ ರಾಜಕೀಯ ಪಕ್ಷಗಳು ಅಂಬೇಡ್ಕರರ ಕುರಿತು ಪ್ರದರ್ಶಿಸಿವೆ. ಜಾತಿ ವ್ಯವಸ್ಥೆಯ ವಿರುದ್ಧ ಅಂಬೇಡ್ಕರ್ ಸಿಡಿಸಿದ ವಿಚಾರಗಳು ಈ ಪಕ್ಷಗಳಿಗೆ ಬೇಕಿಲ್ಲ. ಅವುಗಳನ್ನು ಮಡಿಕೋಲಿನಿಂದಲೂ ಮುಟ್ಟಿಲ್ಲ.

PC :ShareChat

ಹಿಂದೂ ಸಮಾಜ ನಿರ್ವಂಚನೆಯಿಂದ ದಲಿತರನ್ನು ಸರಿಸಮನಾಗಿ ನಡೆಸಿಕೊಳ್ಳಬೇಕು ಎಂಬ ಅಂಬೇಡ್ಕರ್ ಆಗ್ರಹಕ್ಕೆ ಇಂದಿಗೂ ರಾಜಕೀಯ ಪಕ್ಷ-ಪರಿವಾರಗಳು ಜಾಣ ಕಿವುಡು ಮತ್ತು ಕುರುಡನ್ನೇ ತೋರಿವೆ. ಶೂದ್ರರು ಸೃಷ್ಟಿಯಾದದ್ದು ಬ್ರಾಹ್ಮಣ, ಕ್ಷತ್ರಿಯ, ವೈಶ್ಯರ ಸೇವೆಗೆ ಎಂದು ಸಾರಿದ್ದ ಪ್ರಾಚೀನ ಭಾರತದ ಕಾನೂನು ಸಂಹಿತೆ ಮನುಸ್ಮೃತಿಯನ್ನು ಅಂತರಂಗದಲ್ಲಿ ಆರಾಧಿಸುವ ವಿಚಾರಧಾರೆಗೆ ಸೇರಿದವರು ನರೇಂದ್ರ ಮೋದಿ. ಇದೇ ಮನುಸ್ಮೃತಿಯ ಪ್ರತಿಯನ್ನು ಸಾಂಕೇತಿಕವಾಗಿ ಸುಟ್ಟಿದ್ದವರು ಅಂಬೇಡ್ಕರ್.

ಅಸಮಾನತೆಯ ನರಕಕೂಪದಿಂದ ನಿಜ ಸಮಾನತೆಯ ಎತ್ತರವನ್ನು ಭಾರತ ಏರಬೇಕೆಂಬ ಅಂಬೇಡ್ಕರ್ ಕನಸು ಇಂದಿಗೂ ನನಸಾಗಿಲ್ಲ. ಅವರು ನೀಡಿದ ಈ ದಸ್ತಾವೇಜನ್ನು ತಿದ್ದಿ ಬರೆಯುತ್ತೇವೆಂದು ಎದೆ ಸೆಟೆಸುವುದು ಈ ನಾಯಕನಿಗೆ ಮಾಡುವ ಅವಮಾನ. ಏಕಕಾಲಕ್ಕೆ ಹಲವು ನಾಲಗೆಗಳಲ್ಲಿ ನುಡಿಯುವ ಧೂರ್ತತನವನ್ನು ಆಳುವವರು ಬಿಡಬೇಕು. ಒಂದೇ ನಾಲಗೆಯಲ್ಲಿ ಮಾತಾಡಬೇಕು. ಏಕಕಾಲಕ್ಕೆ ಬೇಟೆನಾಯಿಯೊಂದಿಗೆ ಬೆನ್ನಟ್ಟುವ ಮತ್ತು ಪ್ರಾಣ ಉಳಿಸಿಕೊಳ್ಳಲು ಧಾವಿಸುವ ಮೊಲದೊಂದಿಗೆ ಓಡುವ ಆಷಾಡಭೂತಿತನದ ಮರ್ಮವೇನು?

ಆಚರಣೆಯಲ್ಲಿ ಅಂಬೇಡ್ಕರ್ ಸಿದ್ಧಾಂತವನ್ನು ಇಡಿಯಾಗಿ ವಿರೋಧಿಸಿ, ನಿತ್ಯದ ಬದುಕಿನಲ್ಲಿ ದಲಿತ ದ್ವೇಷವನ್ನು ಕಾರುವ ಜಾತಿ ವರ್ಗಗಳ ಜೊತೆ ನಿಲ್ಲುವವರು ಅಂಬೇಡ್ಕರ್ ಅವರಿಗೆ ತೋರುವ ಆದರವು ಅಪ್ಪಟ ಕಪಟ.

ದಲಿತರ ಮತಗಳನ್ನು ಸೆಳೆಯುವ ಕೇವಲ ಪ್ರತಿಮೆ- ಪ್ರತೀಕ- ಸ್ಮಾರಕ ರೂಪಕಗಳಾಗಿ ಮಾತ್ರವೇ ಪಕ್ಷ ಪರಿವಾರಗಳು ಅಂಬೇಡ್ಕರ್ ವರ್ಚಸ್ಸನ್ನು ದೋಚತೊಡಗಿವೆ. ನಿಜದ ಬಾಬಾಸಾಹೇಬರನ್ನೂ ಅವರ ಪ್ರಖರ ವಿಚಾರಗಳನ್ನು ದಿನನಿತ್ಯ ಬಗೆ ಬಗೆಯಲ್ಲಿ ವಧಿಸಲಾಗುತ್ತಿದೆ.

ಹನ್ನೆರಡನೆಯ ಶತಮಾನದಲ್ಲಿ ಸಮಸಮಾಜವನ್ನು ಕನಸಿ ಅದನ್ನು ನನಸಾಗಿಸಲು ಕ್ರಾಂತಿಯನ್ನೇ ನಡೆಸಿ ಪಟ್ಟಭದ್ರ ಹಿತಗಳಿಗೆ ಬಲಿಯಾದ ಬಸವಣ್ಣನವರ ಈ ವಚನ ಈಗಲೂ ಅತ್ಯಂತ ಪ್ರಸ್ತುತ.

ಕಲ್ಲ ನಾಗರ ಕಂಡರೆ ಹಾಲನೆರೆ ಎಂಬರು; ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ! ಉಂಬ ಜಂಗಮ ಬಂದರೆ ನಡೆ ಎಂಬರು; ಉಣ್ಣದ ಲಿಂಗಕ್ಕೆ ಬೋನವ ಹಿಡಿ ಎಂಬರಯ್ಯ! ನಮ್ಮ ಕೂಡಲಸಂಗನ ಶರಣರ ಕಂಡು ಉದಾಸೀನವ ಮಾಡಿದರೆ, ಕಲ್ಲ ತಾಗಿದ ಮಿಟ್ಟೆಯಂತಪ್ಪರಯ್ಯ! ಮಾಡಿ ಮಾಡಿ ಕೆಟ್ಟರು ಮನವಿಲ್ಲದೆ. ನೀಡ ನೀಡಿ ಕೆಟ್ಟರು ನಿಜವಿಲ್ಲದೆ. ಮಾಡುವ ನೀಡುವ ನಿಜಗುಣವುಳ್ಳಡೆ. ಕೂಡಿಕೊಂಬ ನಮ್ಮ ಕೂಡಲಸಂಗಮದೇವ.


ಇದನ್ನೂ ಓದಿ: ಹಳತು ವಿವೇಕ: ಭಾರತದಲ್ಲಿ ಪ್ರಜಾಪ್ರಭುತ್ವಕ್ಕಿರುವ ನಿರೀಕ್ಷೆಗಳು: ಡಾ. ಬಿ ಆರ್ ಅಂಬೇಡ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಲೇಖನವನ್ನು ಡಾಬಸ್ಪೇಟೆ ವಾಯ್ಸ್ ನ ಮುಂದಿನ ಸಂಚಿಕೆಯಲ್ಲಿ (ಮೇ 2021) ಪ್ರಕಟಿಸಲು ಅನುಮತಿ ನೀಡಬೇಕಾಗಿ ವಿನಂತಿ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...