Homeಅಂಕಣಗಳುಬಹುಜನ ಭಾರತ: ಕಲ್ಲನಾಗರಕೆ ಹಾಲೆರೆವವರ ಡಾಂಭಿಕತನ!

ಬಹುಜನ ಭಾರತ: ಕಲ್ಲನಾಗರಕೆ ಹಾಲೆರೆವವರ ಡಾಂಭಿಕತನ!

- Advertisement -
- Advertisement -

ಅಂಬೇಡ್ಕರ್ ಸಿದ್ಧಾಂತವ ನಿತ್ಯ ಬದುಕಿನಲಿ ವಧಿಸಿ ಅವರ ಹೆಸರಿನ ಸ್ಮಾರಕಗಳ ನಿರ್ಮಿಸುವುದು ಕಪಟ ನಾಟಕ
1956ರಲ್ಲಿ ಮರೆಯಾದದ್ದು ಬಾಬಾಸಾಹೇಬರ ನಶ್ವರ ದೇಹವೇ ವಿನಾ ಅವರ ಪ್ರಖರ ಜೀವಪರ ವಿಚಾರಗಳಲ್ಲ ಎಂಬ ಕಠೋರ ಸತ್ಯವನ್ನು ಆಳುವವರ ಕಣ್ಣುಗಳು ಕಾಣದಾಗಿವೆ. ಈ ನೆಲವನ್ನು ಈವರೆಗೆ ಆಳಿಕೊಂಡು ಬಂದಿರುವ ಬಹುತೇಕ ಎಲ್ಲ ಸರ್ಕಾರಗಳು ಮಾಡಿಕೊಂಡು ಬಂದಿರುವ ತಪ್ಪನ್ನೇ ನರೇಂದ್ರ ಮೋದಿ ಮತ್ತು ಅವರ ಸಂಗಾತಿಗಳು ಮಾಡುತ್ತಿದ್ದಾರೆ.

ತುಳಿದಿಟ್ಟ ಸಮುದಾಯಗಳು ಎದೆಯೊಳಗೆ ಧರಿಸಿರುವ ದೀಪವಾಗಿ ಬಾಬಾಸಾಹೇಬರು ಧಗಧಗಿಸಿ ಹೊಳೆದಿದ್ದಾರೆ. ಸಮಸಮಾಜವನ್ನು ಅರಸುವ ಆಂದೋಲನಗಳಲ್ಲಿ, ಸ್ವಾತಂತ್ರ್ಯ ಸಮಾನತೆ ಸೋದರಭಾವ ಸಾರುವ ಸಂವಿಧಾನದಲ್ಲಿ ಅವರು ಇಂದಿಗೂ ಜೀವಂತವಾಗಿದ್ದಾರೆ. ಬದುಕಿರುವ ಈ ಅಂಬೇಡ್ಕರರನ್ನು ಕಣ್ಣು ತೆರೆದು ಕಾಣಬೇಕಿದೆ. ಹಾಗೆ ಕಣ್ಣು ತೆರೆಯುವುದನ್ನು ಒಲ್ಲದವರು ಯಥಾಸ್ಥಿತಿಯ ಪೋಷಕರು ಮತ್ತು ಫಲಾನುಭವಿಗಳು. ಹಾಗೆ ಸತ್ಯವನ್ನು ಕಣ್ಣಲ್ಲಿ ಕಟ್ಟಿಟ್ಟು ನೋಡುವುದಾದರೆ ಅಸಮಾನತೆಯ ತಳಪಾಯದ ಮೇಲೆ ಅವರು ಕಟ್ಟಿಕೊಂಡು ಬಂದಿರುವ ಶೋಷಣೆಯ ಸೌಧಗಳು ಬುಡಮೇಲಾಗಲಿವೆ.

ಹೀಗಾಗಿ ನಶ್ವರ ದೇಹಕ್ಕೆ ಮತ್ತು ನಾಮಧೇಯಕ್ಕೆ ಪ್ರತಿಮೆಗಳು, ಮಹಲುಗಳು, ಭವನಗಳು, ಭವ್ಯ ಸ್ಮಾರಕಗಳನ್ನು ಕಟ್ಟಿಸಿ ನಿಲ್ಲಿಸಲಾಗುತ್ತಿದೆ. ಅಂಬೇಡ್ಕರ್ ಅವರನ್ನು ಗೌರವಿಸುವವರು ನಾವು ಎಂದು ಎದೆಬಡಿದು ಹೇಳಿಕೊಳ್ಳಲಾಗುತ್ತಿದೆ.

ಏಣಿ ಶ್ರೇಣಿಗಳು, ಭೇದ ಭಾವಗಳ ಸಾಮಾಜಿಕ ವ್ಯವಸ್ಥೆಯಲ್ಲಿ ಸುಧಾರಣೆಗಳನ್ನು ತರದೆ ಆರ್ಥಿಕ ಸುಧಾರಣೆಯಾದರೂ ಹೇಗೆ ಸಾಧ್ಯ ಎಂಬ ಅಂಬೇಡ್ಕರ್ ಪ್ರಶ್ನೆ ಇಂದಿಗೂ ಪ್ರಸ್ತುತ. ಬಹುತೇಕ ರಾಜಕೀಯ ಪಕ್ಷಗಳಿಗೆ ಅಂಬೇಡ್ಕರ್ ರೂಪವಾಗಿ ಬೇಕೇ ವಿನಾ ಸಾರವಾಗಿ ಅಲ್ಲ. “ಕಲ್ಲ ನಾಗರಕೆ ಹಾಲೆರೆವ” ಮತ್ತು “ಉಣ್ಣದ ಲಿಂಗಕ್ಕೆ ಬೋನವ ಹಿಡಿವ” ಡಾಂಭಿಕತನವನ್ನು ನಮ್ಮ ರಾಜಕೀಯ ಪಕ್ಷಗಳು ಅಂಬೇಡ್ಕರರ ಕುರಿತು ಪ್ರದರ್ಶಿಸಿವೆ. ಜಾತಿ ವ್ಯವಸ್ಥೆಯ ವಿರುದ್ಧ ಅಂಬೇಡ್ಕರ್ ಸಿಡಿಸಿದ ವಿಚಾರಗಳು ಈ ಪಕ್ಷಗಳಿಗೆ ಬೇಕಿಲ್ಲ. ಅವುಗಳನ್ನು ಮಡಿಕೋಲಿನಿಂದಲೂ ಮುಟ್ಟಿಲ್ಲ.

PC :ShareChat

ಹಿಂದೂ ಸಮಾಜ ನಿರ್ವಂಚನೆಯಿಂದ ದಲಿತರನ್ನು ಸರಿಸಮನಾಗಿ ನಡೆಸಿಕೊಳ್ಳಬೇಕು ಎಂಬ ಅಂಬೇಡ್ಕರ್ ಆಗ್ರಹಕ್ಕೆ ಇಂದಿಗೂ ರಾಜಕೀಯ ಪಕ್ಷ-ಪರಿವಾರಗಳು ಜಾಣ ಕಿವುಡು ಮತ್ತು ಕುರುಡನ್ನೇ ತೋರಿವೆ. ಶೂದ್ರರು ಸೃಷ್ಟಿಯಾದದ್ದು ಬ್ರಾಹ್ಮಣ, ಕ್ಷತ್ರಿಯ, ವೈಶ್ಯರ ಸೇವೆಗೆ ಎಂದು ಸಾರಿದ್ದ ಪ್ರಾಚೀನ ಭಾರತದ ಕಾನೂನು ಸಂಹಿತೆ ಮನುಸ್ಮೃತಿಯನ್ನು ಅಂತರಂಗದಲ್ಲಿ ಆರಾಧಿಸುವ ವಿಚಾರಧಾರೆಗೆ ಸೇರಿದವರು ನರೇಂದ್ರ ಮೋದಿ. ಇದೇ ಮನುಸ್ಮೃತಿಯ ಪ್ರತಿಯನ್ನು ಸಾಂಕೇತಿಕವಾಗಿ ಸುಟ್ಟಿದ್ದವರು ಅಂಬೇಡ್ಕರ್.

ಅಸಮಾನತೆಯ ನರಕಕೂಪದಿಂದ ನಿಜ ಸಮಾನತೆಯ ಎತ್ತರವನ್ನು ಭಾರತ ಏರಬೇಕೆಂಬ ಅಂಬೇಡ್ಕರ್ ಕನಸು ಇಂದಿಗೂ ನನಸಾಗಿಲ್ಲ. ಅವರು ನೀಡಿದ ಈ ದಸ್ತಾವೇಜನ್ನು ತಿದ್ದಿ ಬರೆಯುತ್ತೇವೆಂದು ಎದೆ ಸೆಟೆಸುವುದು ಈ ನಾಯಕನಿಗೆ ಮಾಡುವ ಅವಮಾನ. ಏಕಕಾಲಕ್ಕೆ ಹಲವು ನಾಲಗೆಗಳಲ್ಲಿ ನುಡಿಯುವ ಧೂರ್ತತನವನ್ನು ಆಳುವವರು ಬಿಡಬೇಕು. ಒಂದೇ ನಾಲಗೆಯಲ್ಲಿ ಮಾತಾಡಬೇಕು. ಏಕಕಾಲಕ್ಕೆ ಬೇಟೆನಾಯಿಯೊಂದಿಗೆ ಬೆನ್ನಟ್ಟುವ ಮತ್ತು ಪ್ರಾಣ ಉಳಿಸಿಕೊಳ್ಳಲು ಧಾವಿಸುವ ಮೊಲದೊಂದಿಗೆ ಓಡುವ ಆಷಾಡಭೂತಿತನದ ಮರ್ಮವೇನು?

ಆಚರಣೆಯಲ್ಲಿ ಅಂಬೇಡ್ಕರ್ ಸಿದ್ಧಾಂತವನ್ನು ಇಡಿಯಾಗಿ ವಿರೋಧಿಸಿ, ನಿತ್ಯದ ಬದುಕಿನಲ್ಲಿ ದಲಿತ ದ್ವೇಷವನ್ನು ಕಾರುವ ಜಾತಿ ವರ್ಗಗಳ ಜೊತೆ ನಿಲ್ಲುವವರು ಅಂಬೇಡ್ಕರ್ ಅವರಿಗೆ ತೋರುವ ಆದರವು ಅಪ್ಪಟ ಕಪಟ.

ದಲಿತರ ಮತಗಳನ್ನು ಸೆಳೆಯುವ ಕೇವಲ ಪ್ರತಿಮೆ- ಪ್ರತೀಕ- ಸ್ಮಾರಕ ರೂಪಕಗಳಾಗಿ ಮಾತ್ರವೇ ಪಕ್ಷ ಪರಿವಾರಗಳು ಅಂಬೇಡ್ಕರ್ ವರ್ಚಸ್ಸನ್ನು ದೋಚತೊಡಗಿವೆ. ನಿಜದ ಬಾಬಾಸಾಹೇಬರನ್ನೂ ಅವರ ಪ್ರಖರ ವಿಚಾರಗಳನ್ನು ದಿನನಿತ್ಯ ಬಗೆ ಬಗೆಯಲ್ಲಿ ವಧಿಸಲಾಗುತ್ತಿದೆ.

ಹನ್ನೆರಡನೆಯ ಶತಮಾನದಲ್ಲಿ ಸಮಸಮಾಜವನ್ನು ಕನಸಿ ಅದನ್ನು ನನಸಾಗಿಸಲು ಕ್ರಾಂತಿಯನ್ನೇ ನಡೆಸಿ ಪಟ್ಟಭದ್ರ ಹಿತಗಳಿಗೆ ಬಲಿಯಾದ ಬಸವಣ್ಣನವರ ಈ ವಚನ ಈಗಲೂ ಅತ್ಯಂತ ಪ್ರಸ್ತುತ.

ಕಲ್ಲ ನಾಗರ ಕಂಡರೆ ಹಾಲನೆರೆ ಎಂಬರು; ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ! ಉಂಬ ಜಂಗಮ ಬಂದರೆ ನಡೆ ಎಂಬರು; ಉಣ್ಣದ ಲಿಂಗಕ್ಕೆ ಬೋನವ ಹಿಡಿ ಎಂಬರಯ್ಯ! ನಮ್ಮ ಕೂಡಲಸಂಗನ ಶರಣರ ಕಂಡು ಉದಾಸೀನವ ಮಾಡಿದರೆ, ಕಲ್ಲ ತಾಗಿದ ಮಿಟ್ಟೆಯಂತಪ್ಪರಯ್ಯ! ಮಾಡಿ ಮಾಡಿ ಕೆಟ್ಟರು ಮನವಿಲ್ಲದೆ. ನೀಡ ನೀಡಿ ಕೆಟ್ಟರು ನಿಜವಿಲ್ಲದೆ. ಮಾಡುವ ನೀಡುವ ನಿಜಗುಣವುಳ್ಳಡೆ. ಕೂಡಿಕೊಂಬ ನಮ್ಮ ಕೂಡಲಸಂಗಮದೇವ.


ಇದನ್ನೂ ಓದಿ: ಹಳತು ವಿವೇಕ: ಭಾರತದಲ್ಲಿ ಪ್ರಜಾಪ್ರಭುತ್ವಕ್ಕಿರುವ ನಿರೀಕ್ಷೆಗಳು: ಡಾ. ಬಿ ಆರ್ ಅಂಬೇಡ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಲೇಖನವನ್ನು ಡಾಬಸ್ಪೇಟೆ ವಾಯ್ಸ್ ನ ಮುಂದಿನ ಸಂಚಿಕೆಯಲ್ಲಿ (ಮೇ 2021) ಪ್ರಕಟಿಸಲು ಅನುಮತಿ ನೀಡಬೇಕಾಗಿ ವಿನಂತಿ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...