Homeಅಂಕಣಗಳುಬಹುಜನ ಭಾರತ: ಕಲ್ಲನಾಗರಕೆ ಹಾಲೆರೆವವರ ಡಾಂಭಿಕತನ!

ಬಹುಜನ ಭಾರತ: ಕಲ್ಲನಾಗರಕೆ ಹಾಲೆರೆವವರ ಡಾಂಭಿಕತನ!

- Advertisement -
- Advertisement -

ಅಂಬೇಡ್ಕರ್ ಸಿದ್ಧಾಂತವ ನಿತ್ಯ ಬದುಕಿನಲಿ ವಧಿಸಿ ಅವರ ಹೆಸರಿನ ಸ್ಮಾರಕಗಳ ನಿರ್ಮಿಸುವುದು ಕಪಟ ನಾಟಕ
1956ರಲ್ಲಿ ಮರೆಯಾದದ್ದು ಬಾಬಾಸಾಹೇಬರ ನಶ್ವರ ದೇಹವೇ ವಿನಾ ಅವರ ಪ್ರಖರ ಜೀವಪರ ವಿಚಾರಗಳಲ್ಲ ಎಂಬ ಕಠೋರ ಸತ್ಯವನ್ನು ಆಳುವವರ ಕಣ್ಣುಗಳು ಕಾಣದಾಗಿವೆ. ಈ ನೆಲವನ್ನು ಈವರೆಗೆ ಆಳಿಕೊಂಡು ಬಂದಿರುವ ಬಹುತೇಕ ಎಲ್ಲ ಸರ್ಕಾರಗಳು ಮಾಡಿಕೊಂಡು ಬಂದಿರುವ ತಪ್ಪನ್ನೇ ನರೇಂದ್ರ ಮೋದಿ ಮತ್ತು ಅವರ ಸಂಗಾತಿಗಳು ಮಾಡುತ್ತಿದ್ದಾರೆ.

ತುಳಿದಿಟ್ಟ ಸಮುದಾಯಗಳು ಎದೆಯೊಳಗೆ ಧರಿಸಿರುವ ದೀಪವಾಗಿ ಬಾಬಾಸಾಹೇಬರು ಧಗಧಗಿಸಿ ಹೊಳೆದಿದ್ದಾರೆ. ಸಮಸಮಾಜವನ್ನು ಅರಸುವ ಆಂದೋಲನಗಳಲ್ಲಿ, ಸ್ವಾತಂತ್ರ್ಯ ಸಮಾನತೆ ಸೋದರಭಾವ ಸಾರುವ ಸಂವಿಧಾನದಲ್ಲಿ ಅವರು ಇಂದಿಗೂ ಜೀವಂತವಾಗಿದ್ದಾರೆ. ಬದುಕಿರುವ ಈ ಅಂಬೇಡ್ಕರರನ್ನು ಕಣ್ಣು ತೆರೆದು ಕಾಣಬೇಕಿದೆ. ಹಾಗೆ ಕಣ್ಣು ತೆರೆಯುವುದನ್ನು ಒಲ್ಲದವರು ಯಥಾಸ್ಥಿತಿಯ ಪೋಷಕರು ಮತ್ತು ಫಲಾನುಭವಿಗಳು. ಹಾಗೆ ಸತ್ಯವನ್ನು ಕಣ್ಣಲ್ಲಿ ಕಟ್ಟಿಟ್ಟು ನೋಡುವುದಾದರೆ ಅಸಮಾನತೆಯ ತಳಪಾಯದ ಮೇಲೆ ಅವರು ಕಟ್ಟಿಕೊಂಡು ಬಂದಿರುವ ಶೋಷಣೆಯ ಸೌಧಗಳು ಬುಡಮೇಲಾಗಲಿವೆ.

ಹೀಗಾಗಿ ನಶ್ವರ ದೇಹಕ್ಕೆ ಮತ್ತು ನಾಮಧೇಯಕ್ಕೆ ಪ್ರತಿಮೆಗಳು, ಮಹಲುಗಳು, ಭವನಗಳು, ಭವ್ಯ ಸ್ಮಾರಕಗಳನ್ನು ಕಟ್ಟಿಸಿ ನಿಲ್ಲಿಸಲಾಗುತ್ತಿದೆ. ಅಂಬೇಡ್ಕರ್ ಅವರನ್ನು ಗೌರವಿಸುವವರು ನಾವು ಎಂದು ಎದೆಬಡಿದು ಹೇಳಿಕೊಳ್ಳಲಾಗುತ್ತಿದೆ.

ಏಣಿ ಶ್ರೇಣಿಗಳು, ಭೇದ ಭಾವಗಳ ಸಾಮಾಜಿಕ ವ್ಯವಸ್ಥೆಯಲ್ಲಿ ಸುಧಾರಣೆಗಳನ್ನು ತರದೆ ಆರ್ಥಿಕ ಸುಧಾರಣೆಯಾದರೂ ಹೇಗೆ ಸಾಧ್ಯ ಎಂಬ ಅಂಬೇಡ್ಕರ್ ಪ್ರಶ್ನೆ ಇಂದಿಗೂ ಪ್ರಸ್ತುತ. ಬಹುತೇಕ ರಾಜಕೀಯ ಪಕ್ಷಗಳಿಗೆ ಅಂಬೇಡ್ಕರ್ ರೂಪವಾಗಿ ಬೇಕೇ ವಿನಾ ಸಾರವಾಗಿ ಅಲ್ಲ. “ಕಲ್ಲ ನಾಗರಕೆ ಹಾಲೆರೆವ” ಮತ್ತು “ಉಣ್ಣದ ಲಿಂಗಕ್ಕೆ ಬೋನವ ಹಿಡಿವ” ಡಾಂಭಿಕತನವನ್ನು ನಮ್ಮ ರಾಜಕೀಯ ಪಕ್ಷಗಳು ಅಂಬೇಡ್ಕರರ ಕುರಿತು ಪ್ರದರ್ಶಿಸಿವೆ. ಜಾತಿ ವ್ಯವಸ್ಥೆಯ ವಿರುದ್ಧ ಅಂಬೇಡ್ಕರ್ ಸಿಡಿಸಿದ ವಿಚಾರಗಳು ಈ ಪಕ್ಷಗಳಿಗೆ ಬೇಕಿಲ್ಲ. ಅವುಗಳನ್ನು ಮಡಿಕೋಲಿನಿಂದಲೂ ಮುಟ್ಟಿಲ್ಲ.

PC :ShareChat

ಹಿಂದೂ ಸಮಾಜ ನಿರ್ವಂಚನೆಯಿಂದ ದಲಿತರನ್ನು ಸರಿಸಮನಾಗಿ ನಡೆಸಿಕೊಳ್ಳಬೇಕು ಎಂಬ ಅಂಬೇಡ್ಕರ್ ಆಗ್ರಹಕ್ಕೆ ಇಂದಿಗೂ ರಾಜಕೀಯ ಪಕ್ಷ-ಪರಿವಾರಗಳು ಜಾಣ ಕಿವುಡು ಮತ್ತು ಕುರುಡನ್ನೇ ತೋರಿವೆ. ಶೂದ್ರರು ಸೃಷ್ಟಿಯಾದದ್ದು ಬ್ರಾಹ್ಮಣ, ಕ್ಷತ್ರಿಯ, ವೈಶ್ಯರ ಸೇವೆಗೆ ಎಂದು ಸಾರಿದ್ದ ಪ್ರಾಚೀನ ಭಾರತದ ಕಾನೂನು ಸಂಹಿತೆ ಮನುಸ್ಮೃತಿಯನ್ನು ಅಂತರಂಗದಲ್ಲಿ ಆರಾಧಿಸುವ ವಿಚಾರಧಾರೆಗೆ ಸೇರಿದವರು ನರೇಂದ್ರ ಮೋದಿ. ಇದೇ ಮನುಸ್ಮೃತಿಯ ಪ್ರತಿಯನ್ನು ಸಾಂಕೇತಿಕವಾಗಿ ಸುಟ್ಟಿದ್ದವರು ಅಂಬೇಡ್ಕರ್.

ಅಸಮಾನತೆಯ ನರಕಕೂಪದಿಂದ ನಿಜ ಸಮಾನತೆಯ ಎತ್ತರವನ್ನು ಭಾರತ ಏರಬೇಕೆಂಬ ಅಂಬೇಡ್ಕರ್ ಕನಸು ಇಂದಿಗೂ ನನಸಾಗಿಲ್ಲ. ಅವರು ನೀಡಿದ ಈ ದಸ್ತಾವೇಜನ್ನು ತಿದ್ದಿ ಬರೆಯುತ್ತೇವೆಂದು ಎದೆ ಸೆಟೆಸುವುದು ಈ ನಾಯಕನಿಗೆ ಮಾಡುವ ಅವಮಾನ. ಏಕಕಾಲಕ್ಕೆ ಹಲವು ನಾಲಗೆಗಳಲ್ಲಿ ನುಡಿಯುವ ಧೂರ್ತತನವನ್ನು ಆಳುವವರು ಬಿಡಬೇಕು. ಒಂದೇ ನಾಲಗೆಯಲ್ಲಿ ಮಾತಾಡಬೇಕು. ಏಕಕಾಲಕ್ಕೆ ಬೇಟೆನಾಯಿಯೊಂದಿಗೆ ಬೆನ್ನಟ್ಟುವ ಮತ್ತು ಪ್ರಾಣ ಉಳಿಸಿಕೊಳ್ಳಲು ಧಾವಿಸುವ ಮೊಲದೊಂದಿಗೆ ಓಡುವ ಆಷಾಡಭೂತಿತನದ ಮರ್ಮವೇನು?

ಆಚರಣೆಯಲ್ಲಿ ಅಂಬೇಡ್ಕರ್ ಸಿದ್ಧಾಂತವನ್ನು ಇಡಿಯಾಗಿ ವಿರೋಧಿಸಿ, ನಿತ್ಯದ ಬದುಕಿನಲ್ಲಿ ದಲಿತ ದ್ವೇಷವನ್ನು ಕಾರುವ ಜಾತಿ ವರ್ಗಗಳ ಜೊತೆ ನಿಲ್ಲುವವರು ಅಂಬೇಡ್ಕರ್ ಅವರಿಗೆ ತೋರುವ ಆದರವು ಅಪ್ಪಟ ಕಪಟ.

ದಲಿತರ ಮತಗಳನ್ನು ಸೆಳೆಯುವ ಕೇವಲ ಪ್ರತಿಮೆ- ಪ್ರತೀಕ- ಸ್ಮಾರಕ ರೂಪಕಗಳಾಗಿ ಮಾತ್ರವೇ ಪಕ್ಷ ಪರಿವಾರಗಳು ಅಂಬೇಡ್ಕರ್ ವರ್ಚಸ್ಸನ್ನು ದೋಚತೊಡಗಿವೆ. ನಿಜದ ಬಾಬಾಸಾಹೇಬರನ್ನೂ ಅವರ ಪ್ರಖರ ವಿಚಾರಗಳನ್ನು ದಿನನಿತ್ಯ ಬಗೆ ಬಗೆಯಲ್ಲಿ ವಧಿಸಲಾಗುತ್ತಿದೆ.

ಹನ್ನೆರಡನೆಯ ಶತಮಾನದಲ್ಲಿ ಸಮಸಮಾಜವನ್ನು ಕನಸಿ ಅದನ್ನು ನನಸಾಗಿಸಲು ಕ್ರಾಂತಿಯನ್ನೇ ನಡೆಸಿ ಪಟ್ಟಭದ್ರ ಹಿತಗಳಿಗೆ ಬಲಿಯಾದ ಬಸವಣ್ಣನವರ ಈ ವಚನ ಈಗಲೂ ಅತ್ಯಂತ ಪ್ರಸ್ತುತ.

ಕಲ್ಲ ನಾಗರ ಕಂಡರೆ ಹಾಲನೆರೆ ಎಂಬರು; ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ! ಉಂಬ ಜಂಗಮ ಬಂದರೆ ನಡೆ ಎಂಬರು; ಉಣ್ಣದ ಲಿಂಗಕ್ಕೆ ಬೋನವ ಹಿಡಿ ಎಂಬರಯ್ಯ! ನಮ್ಮ ಕೂಡಲಸಂಗನ ಶರಣರ ಕಂಡು ಉದಾಸೀನವ ಮಾಡಿದರೆ, ಕಲ್ಲ ತಾಗಿದ ಮಿಟ್ಟೆಯಂತಪ್ಪರಯ್ಯ! ಮಾಡಿ ಮಾಡಿ ಕೆಟ್ಟರು ಮನವಿಲ್ಲದೆ. ನೀಡ ನೀಡಿ ಕೆಟ್ಟರು ನಿಜವಿಲ್ಲದೆ. ಮಾಡುವ ನೀಡುವ ನಿಜಗುಣವುಳ್ಳಡೆ. ಕೂಡಿಕೊಂಬ ನಮ್ಮ ಕೂಡಲಸಂಗಮದೇವ.


ಇದನ್ನೂ ಓದಿ: ಹಳತು ವಿವೇಕ: ಭಾರತದಲ್ಲಿ ಪ್ರಜಾಪ್ರಭುತ್ವಕ್ಕಿರುವ ನಿರೀಕ್ಷೆಗಳು: ಡಾ. ಬಿ ಆರ್ ಅಂಬೇಡ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಲೇಖನವನ್ನು ಡಾಬಸ್ಪೇಟೆ ವಾಯ್ಸ್ ನ ಮುಂದಿನ ಸಂಚಿಕೆಯಲ್ಲಿ (ಮೇ 2021) ಪ್ರಕಟಿಸಲು ಅನುಮತಿ ನೀಡಬೇಕಾಗಿ ವಿನಂತಿ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....