Homeಅಂತರಾಷ್ಟ್ರೀಯಇಸ್ರೇಲ್ ದಿಗ್ಬಂಧನ ಪರಿಣಾಮ: ಗಾಜಾದಲ್ಲಿ 24 ಗಂಟೆಗಳಲ್ಲಿ ಹಸಿವಿನಿಂದ 19 ಸಾವುಗಳು

ಇಸ್ರೇಲ್ ದಿಗ್ಬಂಧನ ಪರಿಣಾಮ: ಗಾಜಾದಲ್ಲಿ 24 ಗಂಟೆಗಳಲ್ಲಿ ಹಸಿವಿನಿಂದ 19 ಸಾವುಗಳು

- Advertisement -
- Advertisement -

ಗಾಜಾ: ಗಾಜಾ ಪಟ್ಟಿಯಲ್ಲಿ ಹಸಿವು, ರಕ್ತಪಾತ ಮತ್ತು ಬದುಕುಳಿದವರ ಆಕ್ರಂದನಗಳು ನಿತ್ಯದ ಸಂಗತಿಗಳಾಗಿವೆ. ಭಾನುವಾರದಂದು ಗಾಜಾದ ಆರೋಗ್ಯ ಅಧಿಕಾರಿಗಳು ಬಿಡುಗಡೆ ಮಾಡಿದ ಆಘಾತಕಾರಿ ಅಂಕಿಅಂಶಗಳ ಪ್ರಕಾರ, ಒಂದೇ ದಿನದಲ್ಲಿ 19 ಪ್ಯಾಲೆಸ್ತೀನಿಯನ್ನರು ಹಸಿವಿನಿಂದ ಸಾವನ್ನಪ್ಪಿದ್ದಾರೆ. ತಿಂಗಳುಗಟ್ಟಲೆ ನಿರಂತರ ಹಸಿವಿನಿಂದ ಬಳಲುತ್ತಿರುವ ನೂರಾರು ಮಂದಿ ಸಾವಿನ ದವಡೆಯಲ್ಲಿ ಸಿಲುಕಿದ್ದು, “ಶರೀರ ಕೃಶವಾಗಿರುವ ನೂರಾರು ಜನರು ಸದ್ಯದಲ್ಲೇ ಸಾವನ್ನಪ್ಪುವ ಅಪಾಯದಲ್ಲಿದ್ದಾರೆ” ಎಂದು ಗಾಜಾ ಆರೋಗ್ಯ ಸಚಿವಾಲಯದ ವಕ್ತಾರರು ಆತಂಕ ವ್ಯಕ್ತಪಡಿಸಿದ್ದಾರೆ.

2023ರಲ್ಲಿ ಇಸ್ರೇಲ್ ಗಾಜಾ ಮೇಲೆ ದಾಳಿ ಆರಂಭಿಸಿದಾಗಿನಿಂದ, ಕನಿಷ್ಠ 71 ಮುಗ್ಧ ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಮೃತಪಟ್ಟಿದ್ದಾರೆ. ಈ ಸಾವುಗಳು ಕೇವಲ ಅಂಕಿಅಂಶಗಳಾಗಿ ಉಳಿದಿಲ್ಲ, ಬದಲಿಗೆ ನೂರಾರು ಕನಸುಗಳು ಮತ್ತು ಭವಿಷ್ಯವನ್ನು ಕೊಂದಿವೆ. ಪ್ರಸ್ತುತ, 60,000 ಮಕ್ಕಳು ತೀವ್ರ ಅಪೌಷ್ಟಿಕತೆಯ ಲಕ್ಷಣಗಳನ್ನು ಪ್ರದರ್ಶಿಸುತ್ತಿದ್ದು, ಮುಂದಿನ ಬಲಿಪಶುಗಳು ಯಾರು ಎಂಬ ಆತಂಕ ಎಲ್ಲೆಡೆ ಮನೆ ಮಾಡಿದೆ. ತಮ್ಮ ಮಕ್ಕಳಿಗೆ ಕುಡಿಯಲು ನೀರು ಮಾತ್ರ ನೀಡುವ ಅಸಹಾಯಕ ತಾಯಂದಿರನ್ನು ಭೇಟಿ ಮಾಡಲಾಗಿದೆ; ಅವರಿಗೆ ಹಿಟ್ಟು ಕೊಳ್ಳಲು ಸಾಧ್ಯವಾಗುತ್ತಿಲ್ಲ ಅಥವಾ ಸಿಕ್ಕರೂ ಅದು ದೊರೆಯುತ್ತಿಲ್ಲ ಎಂದು ಅಲ್ ಜಝೀರಾ ವರದಿ ಮಾಡಿದೆ.

ವಿಶ್ವ ಆಹಾರ ಕಾರ್ಯಕ್ರಮ (WFP) ಗಾಜಾದ ಹಸಿವಿನ ಬಿಕ್ಕಟ್ಟನ್ನು “ಹತಾಶೆಯ ಹೊಸ ಹಂತಗಳು” ಎಂದು ಬಣ್ಣಿಸಿದೆ. ಅವರ ಎಚ್ಚರಿಕೆ ಸ್ಪಷ್ಟವಾಗಿದೆ. “ಮಾನವೀಯ ನೆರವಿನ ಕೊರತೆಯಿಂದ ಜನರು ಸಾಯುತ್ತಿದ್ದಾರೆ. ಅಪೌಷ್ಟಿಕತೆ ಹೆಚ್ಚಾಗಿದ್ದು, 90,000 ಮಹಿಳೆಯರು ಮತ್ತು ಮಕ್ಕಳಿಗೆ ತುರ್ತು ಚಿಕಿತ್ಸೆಯ ಅಗತ್ಯವಿದೆ. ಪ್ರತಿ ಮೂವರಲ್ಲಿ ಒಬ್ಬರು ಹಲವು ದಿನಗಳಿಂದ ಏನನ್ನೂ ತಿಂದಿಲ್ಲ.” ಇದು ಕೇವಲ ಮಾನವೀಯ ಬಿಕ್ಕಟ್ಟಲ್ಲ, ಬದಲಿಗೆ ಉದ್ದೇಶಪೂರ್ವಕವಾಗಿ ಸೃಷ್ಟಿಸಲಾದ ಹಸಿವಿನ ಸಾವು. WFP ಬೃಹತ್ ಪ್ರಮಾಣದಲ್ಲಿ ಆಹಾರ ವಿತರಣೆಯನ್ನು ಹೆಚ್ಚಿಸಲು ಒತ್ತಾಯಿಸಿದ್ದರೂ, ಆ ಕೂಗುಗಳು ಕೇಳಿಸದಂತಿವೆ ಎಂದು ಅಲ್ ಜಝೀರಾದ ವರದಿ ತಿಳಿಸಿದೆ.

ವಾಸ್ತವ ಕಟುವಾಗಿದೆ. ಅಂತರರಾಷ್ಟ್ರೀಯ ಸಂಸ್ಥೆಗಳು ಎಚ್ಚರಿಕೆ ನೀಡುತ್ತಿದ್ದರೂ, ಇಸ್ರೇಲಿ ಪಡೆಗಳು ನೆರವಿನ ವಿತರಣೆಯನ್ನು ತಡೆಯುತ್ತಿವೆ ಮಾತ್ರವಲ್ಲದೆ, ಆಹಾರಕ್ಕಾಗಿ ಹಸಿದು ಅಲೆದಾಡುವ ಪ್ಯಾಲೆಸ್ಟೀನಿಯನ್ನರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿವೆ. ಕಳೆದ 24 ಗಂಟೆಗಳಲ್ಲಿ, ಇಸ್ರೇಲಿ ಪಡೆಗಳು ಗಾಜಾದುದ್ದಕ್ಕೂ ಕನಿಷ್ಠ 115 ಪ್ಯಾಲೆಸ್ಟೀನಿಯನ್ನರನ್ನು ಕೊಂದು ಹಾಕಿವೆ. ಝಿಕಿಮ್ ಕ್ರಾಸಿಂಗ್‌ನಲ್ಲಿ, ರಫಾ ಮತ್ತು ಖಾನ್ ಯೂನಿಸ್‌ನಲ್ಲಿರುವ ನೆರವು ವಿತರಣಾ ಕೇಂದ್ರಗಳಲ್ಲಿ ಆಹಾರ ಪಡೆಯಲು ಪ್ರಯತ್ನಿಸುತ್ತಿದ್ದ 92 ಜನರು ಗುಂಡೇಟಿಗೆ ಬಲಿಯಾಗಿದ್ದಾರೆ. ಉತ್ತರ ಗಾಜಾಕ್ಕೆ ನೆರವು ಟ್ರಕ್‌ಗಳು ತಲುಪಿದಾಗ 80 ಜನರನ್ನು ಹತ್ಯೆ ಮಾಡಲಾಗಿದೆ. ರಫಾದಲ್ಲಿನ ನೆರವು ಕೇಂದ್ರದ ಬಳಿ 9 ಜನರನ್ನು ಮತ್ತು ಖಾನ್ ಯೂನಿಸ್‌ನಲ್ಲಿ ಮತ್ತೊಂದು ಸ್ಥಳದ ಬಳಿ 4 ಜನರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಹಸಿವಿನಿಂದ ಬಳಲುತ್ತಿರುವವರನ್ನು ಗುರಿಯಾಗಿಸುವುದು ಸ್ಪಷ್ಟ ಯುದ್ಧಾಪರಾಧವಾಗಿದೆ ಎಂದು ಅದು ಹೇಳಿದೆ.

ಇಸ್ರೇಲ್‌ನ ಯುದ್ಧದಲ್ಲಿ ಇದುವರೆಗೆ ಸುಮಾರು 59,000 ಪ್ಯಾಲೆಸ್ತೀನಿಯನ್ನರು, ಅವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು, ಸಾವನ್ನಪ್ಪಿದ್ದಾರೆ. ಪ್ಯಾಲೆಸ್ತೀನ್‌ನ ವಾಫಾ ಸುದ್ದಿ ಸಂಸ್ಥೆಯ ಪ್ರಕಾರ, ಸುಮಾರು 11,000 ಪ್ಯಾಲೆಸ್ತೀನಿಯನ್ನರು ನಾಶವಾದ ಮನೆಗಳ ಅವಶೇಷಗಳ ಅಡಿಯಲ್ಲಿ ಸಿಕ್ಕಿಬಿದ್ದಿದ್ದಾರೆ. ಸಾವಿನ ಸಂಖ್ಯೆ 200,000 ಮೀರಬಹುದು. ಗಾಜಾ ಈಗ ಬೃಹತ್ ಸ್ಮಶಾನಭೂಮಿಯಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಪ್ಯಾಲೆಸ್ತೀನಿಯನ್ ಪ್ರದೇಶಗಳಲ್ಲಿನ ಮಾನವ ಹಕ್ಕುಗಳ ಪರಿಸ್ಥಿತಿ ಕುರಿತ ಯುಎನ್ ವಿಶೇಷ ವರದಿಗಾರ್ತಿ ಫ್ರಾನ್ಸೆಸ್ಕಾ ಅಲ್ಬನೀಸ್ ಅವರ ಮಾತುಗಳು ಗಾಜಾದಲ್ಲಿನ ವಾಸ್ತವದ ಸ್ಪಷ್ಟ ಚಿತ್ರಣವನ್ನು ನೀಡುತ್ತವೆ. “ಇಸ್ರೇಲ್ ಉದ್ದೇಶಪೂರ್ವಕವಾಗಿ ಸಾವಿರಾರು ಜನರನ್ನು ಹತ್ಯೆಗೈಯುತ್ತಿದೆ ಮತ್ತು ಗಾಜಾದಲ್ಲಿ ಮಕ್ಕಳನ್ನು ಹಸಿವಿನಿಂದ ಕೊಲ್ಲುತ್ತಿದೆ” ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಇಸ್ರೇಲ್‌ನ ಕ್ರೂರತೆ ಮತ್ತು ಜಾಗತಿಕ ಸಮುದಾಯದ ಮೌನವನ್ನು ಖಂಡಿಸಿ, “ನಾವು ಇದನ್ನು ಹೇಗೆ ಬದುಕುಳಿಯುತ್ತೇವೆ?” ಎಂಬ ಅವರ ಪ್ರಶ್ನೆ ಜಾಗತಿಕ ಆತ್ಮಸಾಕ್ಷಿಗೆ ಸವಾಲು ಹಾಕುತ್ತದೆ ಎಂದು ಅವರು ಹೇಳಿದ್ದಾರೆ.

ಗಾಜಾ ಹಸಿವಿನಿಂದ ಬಳಲುತ್ತಿರುವಾಗ, ಅದರ ಬೀದಿಗಳು ರಕ್ತದಿಂದ ಕೆಂಪಾಗಿವೆ. ಇಸ್ರೇಲ್‌ನ ಯುದ್ಧವು ಗಾಜಾವನ್ನು ಅವಶೇಷಗಳ ರಾಶಿಯನ್ನಾಗಿ ಮಾಡಿದೆ, ಅದರ ಬಹುತೇಕ ಜನಸಂಖ್ಯೆಯನ್ನು ಸ್ಥಳಾಂತರಿಸಿದೆ ಮತ್ತು ಛಿದ್ರಗೊಂಡ ದೇಹಗಳು ಹಾಗೂ ಉತ್ತರವಿಲ್ಲದ ಸಹಾಯದ ಕೂಗುಗಳನ್ನು ಮಾತ್ರ ಉಳಿಸಿದೆ. ಈ ಕರುಣಾಜನಕ ಪರಿಸ್ಥಿತಿಗೆ ತಕ್ಷಣದ ಅಂತ್ಯ ಹಾಡಲು ಜಾಗತಿಕ ಒತ್ತಡ ಅನಿವಾರ್ಯವಾಗಿದೆ ಎಂದು ಫ್ರಾನ್ಸೆಸ್ಕಾ ತಿಳಿಸಿದ್ದಾರೆ.

ಕೊಪ್ಪ: ನಿವೇಶನರಹಿತ ಎಸ್ಟೇಟ್ ಕಾರ್ಮಿಕರಿಂದ ಸರ್ಕಾರಿ ಜಾಗದಲ್ಲಿ ಟೆಂಟ್‌ ನಿರ್ಮಾಣ: ಭೂಮಾಲೀಕ ಗುರು ಹೆಬ್ಬಾರ್‌ಗೆ ಕೆ.ಎಲ್.ಅಶೋಕ್ ಎಚ್ಚರಿಕೆ-video

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...