Homeಅಂತರಾಷ್ಟ್ರೀಯಇಸ್ರೇಲ್ ದಿಗ್ಬಂಧನ ಪರಿಣಾಮ: ಗಾಜಾದಲ್ಲಿ 24 ಗಂಟೆಗಳಲ್ಲಿ ಹಸಿವಿನಿಂದ 19 ಸಾವುಗಳು

ಇಸ್ರೇಲ್ ದಿಗ್ಬಂಧನ ಪರಿಣಾಮ: ಗಾಜಾದಲ್ಲಿ 24 ಗಂಟೆಗಳಲ್ಲಿ ಹಸಿವಿನಿಂದ 19 ಸಾವುಗಳು

- Advertisement -
- Advertisement -

ಗಾಜಾ: ಗಾಜಾ ಪಟ್ಟಿಯಲ್ಲಿ ಹಸಿವು, ರಕ್ತಪಾತ ಮತ್ತು ಬದುಕುಳಿದವರ ಆಕ್ರಂದನಗಳು ನಿತ್ಯದ ಸಂಗತಿಗಳಾಗಿವೆ. ಭಾನುವಾರದಂದು ಗಾಜಾದ ಆರೋಗ್ಯ ಅಧಿಕಾರಿಗಳು ಬಿಡುಗಡೆ ಮಾಡಿದ ಆಘಾತಕಾರಿ ಅಂಕಿಅಂಶಗಳ ಪ್ರಕಾರ, ಒಂದೇ ದಿನದಲ್ಲಿ 19 ಪ್ಯಾಲೆಸ್ತೀನಿಯನ್ನರು ಹಸಿವಿನಿಂದ ಸಾವನ್ನಪ್ಪಿದ್ದಾರೆ. ತಿಂಗಳುಗಟ್ಟಲೆ ನಿರಂತರ ಹಸಿವಿನಿಂದ ಬಳಲುತ್ತಿರುವ ನೂರಾರು ಮಂದಿ ಸಾವಿನ ದವಡೆಯಲ್ಲಿ ಸಿಲುಕಿದ್ದು, “ಶರೀರ ಕೃಶವಾಗಿರುವ ನೂರಾರು ಜನರು ಸದ್ಯದಲ್ಲೇ ಸಾವನ್ನಪ್ಪುವ ಅಪಾಯದಲ್ಲಿದ್ದಾರೆ” ಎಂದು ಗಾಜಾ ಆರೋಗ್ಯ ಸಚಿವಾಲಯದ ವಕ್ತಾರರು ಆತಂಕ ವ್ಯಕ್ತಪಡಿಸಿದ್ದಾರೆ.

2023ರಲ್ಲಿ ಇಸ್ರೇಲ್ ಗಾಜಾ ಮೇಲೆ ದಾಳಿ ಆರಂಭಿಸಿದಾಗಿನಿಂದ, ಕನಿಷ್ಠ 71 ಮುಗ್ಧ ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಮೃತಪಟ್ಟಿದ್ದಾರೆ. ಈ ಸಾವುಗಳು ಕೇವಲ ಅಂಕಿಅಂಶಗಳಾಗಿ ಉಳಿದಿಲ್ಲ, ಬದಲಿಗೆ ನೂರಾರು ಕನಸುಗಳು ಮತ್ತು ಭವಿಷ್ಯವನ್ನು ಕೊಂದಿವೆ. ಪ್ರಸ್ತುತ, 60,000 ಮಕ್ಕಳು ತೀವ್ರ ಅಪೌಷ್ಟಿಕತೆಯ ಲಕ್ಷಣಗಳನ್ನು ಪ್ರದರ್ಶಿಸುತ್ತಿದ್ದು, ಮುಂದಿನ ಬಲಿಪಶುಗಳು ಯಾರು ಎಂಬ ಆತಂಕ ಎಲ್ಲೆಡೆ ಮನೆ ಮಾಡಿದೆ. ತಮ್ಮ ಮಕ್ಕಳಿಗೆ ಕುಡಿಯಲು ನೀರು ಮಾತ್ರ ನೀಡುವ ಅಸಹಾಯಕ ತಾಯಂದಿರನ್ನು ಭೇಟಿ ಮಾಡಲಾಗಿದೆ; ಅವರಿಗೆ ಹಿಟ್ಟು ಕೊಳ್ಳಲು ಸಾಧ್ಯವಾಗುತ್ತಿಲ್ಲ ಅಥವಾ ಸಿಕ್ಕರೂ ಅದು ದೊರೆಯುತ್ತಿಲ್ಲ ಎಂದು ಅಲ್ ಜಝೀರಾ ವರದಿ ಮಾಡಿದೆ.

ವಿಶ್ವ ಆಹಾರ ಕಾರ್ಯಕ್ರಮ (WFP) ಗಾಜಾದ ಹಸಿವಿನ ಬಿಕ್ಕಟ್ಟನ್ನು “ಹತಾಶೆಯ ಹೊಸ ಹಂತಗಳು” ಎಂದು ಬಣ್ಣಿಸಿದೆ. ಅವರ ಎಚ್ಚರಿಕೆ ಸ್ಪಷ್ಟವಾಗಿದೆ. “ಮಾನವೀಯ ನೆರವಿನ ಕೊರತೆಯಿಂದ ಜನರು ಸಾಯುತ್ತಿದ್ದಾರೆ. ಅಪೌಷ್ಟಿಕತೆ ಹೆಚ್ಚಾಗಿದ್ದು, 90,000 ಮಹಿಳೆಯರು ಮತ್ತು ಮಕ್ಕಳಿಗೆ ತುರ್ತು ಚಿಕಿತ್ಸೆಯ ಅಗತ್ಯವಿದೆ. ಪ್ರತಿ ಮೂವರಲ್ಲಿ ಒಬ್ಬರು ಹಲವು ದಿನಗಳಿಂದ ಏನನ್ನೂ ತಿಂದಿಲ್ಲ.” ಇದು ಕೇವಲ ಮಾನವೀಯ ಬಿಕ್ಕಟ್ಟಲ್ಲ, ಬದಲಿಗೆ ಉದ್ದೇಶಪೂರ್ವಕವಾಗಿ ಸೃಷ್ಟಿಸಲಾದ ಹಸಿವಿನ ಸಾವು. WFP ಬೃಹತ್ ಪ್ರಮಾಣದಲ್ಲಿ ಆಹಾರ ವಿತರಣೆಯನ್ನು ಹೆಚ್ಚಿಸಲು ಒತ್ತಾಯಿಸಿದ್ದರೂ, ಆ ಕೂಗುಗಳು ಕೇಳಿಸದಂತಿವೆ ಎಂದು ಅಲ್ ಜಝೀರಾದ ವರದಿ ತಿಳಿಸಿದೆ.

ವಾಸ್ತವ ಕಟುವಾಗಿದೆ. ಅಂತರರಾಷ್ಟ್ರೀಯ ಸಂಸ್ಥೆಗಳು ಎಚ್ಚರಿಕೆ ನೀಡುತ್ತಿದ್ದರೂ, ಇಸ್ರೇಲಿ ಪಡೆಗಳು ನೆರವಿನ ವಿತರಣೆಯನ್ನು ತಡೆಯುತ್ತಿವೆ ಮಾತ್ರವಲ್ಲದೆ, ಆಹಾರಕ್ಕಾಗಿ ಹಸಿದು ಅಲೆದಾಡುವ ಪ್ಯಾಲೆಸ್ಟೀನಿಯನ್ನರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿವೆ. ಕಳೆದ 24 ಗಂಟೆಗಳಲ್ಲಿ, ಇಸ್ರೇಲಿ ಪಡೆಗಳು ಗಾಜಾದುದ್ದಕ್ಕೂ ಕನಿಷ್ಠ 115 ಪ್ಯಾಲೆಸ್ಟೀನಿಯನ್ನರನ್ನು ಕೊಂದು ಹಾಕಿವೆ. ಝಿಕಿಮ್ ಕ್ರಾಸಿಂಗ್‌ನಲ್ಲಿ, ರಫಾ ಮತ್ತು ಖಾನ್ ಯೂನಿಸ್‌ನಲ್ಲಿರುವ ನೆರವು ವಿತರಣಾ ಕೇಂದ್ರಗಳಲ್ಲಿ ಆಹಾರ ಪಡೆಯಲು ಪ್ರಯತ್ನಿಸುತ್ತಿದ್ದ 92 ಜನರು ಗುಂಡೇಟಿಗೆ ಬಲಿಯಾಗಿದ್ದಾರೆ. ಉತ್ತರ ಗಾಜಾಕ್ಕೆ ನೆರವು ಟ್ರಕ್‌ಗಳು ತಲುಪಿದಾಗ 80 ಜನರನ್ನು ಹತ್ಯೆ ಮಾಡಲಾಗಿದೆ. ರಫಾದಲ್ಲಿನ ನೆರವು ಕೇಂದ್ರದ ಬಳಿ 9 ಜನರನ್ನು ಮತ್ತು ಖಾನ್ ಯೂನಿಸ್‌ನಲ್ಲಿ ಮತ್ತೊಂದು ಸ್ಥಳದ ಬಳಿ 4 ಜನರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಹಸಿವಿನಿಂದ ಬಳಲುತ್ತಿರುವವರನ್ನು ಗುರಿಯಾಗಿಸುವುದು ಸ್ಪಷ್ಟ ಯುದ್ಧಾಪರಾಧವಾಗಿದೆ ಎಂದು ಅದು ಹೇಳಿದೆ.

ಇಸ್ರೇಲ್‌ನ ಯುದ್ಧದಲ್ಲಿ ಇದುವರೆಗೆ ಸುಮಾರು 59,000 ಪ್ಯಾಲೆಸ್ತೀನಿಯನ್ನರು, ಅವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು, ಸಾವನ್ನಪ್ಪಿದ್ದಾರೆ. ಪ್ಯಾಲೆಸ್ತೀನ್‌ನ ವಾಫಾ ಸುದ್ದಿ ಸಂಸ್ಥೆಯ ಪ್ರಕಾರ, ಸುಮಾರು 11,000 ಪ್ಯಾಲೆಸ್ತೀನಿಯನ್ನರು ನಾಶವಾದ ಮನೆಗಳ ಅವಶೇಷಗಳ ಅಡಿಯಲ್ಲಿ ಸಿಕ್ಕಿಬಿದ್ದಿದ್ದಾರೆ. ಸಾವಿನ ಸಂಖ್ಯೆ 200,000 ಮೀರಬಹುದು. ಗಾಜಾ ಈಗ ಬೃಹತ್ ಸ್ಮಶಾನಭೂಮಿಯಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಪ್ಯಾಲೆಸ್ತೀನಿಯನ್ ಪ್ರದೇಶಗಳಲ್ಲಿನ ಮಾನವ ಹಕ್ಕುಗಳ ಪರಿಸ್ಥಿತಿ ಕುರಿತ ಯುಎನ್ ವಿಶೇಷ ವರದಿಗಾರ್ತಿ ಫ್ರಾನ್ಸೆಸ್ಕಾ ಅಲ್ಬನೀಸ್ ಅವರ ಮಾತುಗಳು ಗಾಜಾದಲ್ಲಿನ ವಾಸ್ತವದ ಸ್ಪಷ್ಟ ಚಿತ್ರಣವನ್ನು ನೀಡುತ್ತವೆ. “ಇಸ್ರೇಲ್ ಉದ್ದೇಶಪೂರ್ವಕವಾಗಿ ಸಾವಿರಾರು ಜನರನ್ನು ಹತ್ಯೆಗೈಯುತ್ತಿದೆ ಮತ್ತು ಗಾಜಾದಲ್ಲಿ ಮಕ್ಕಳನ್ನು ಹಸಿವಿನಿಂದ ಕೊಲ್ಲುತ್ತಿದೆ” ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಇಸ್ರೇಲ್‌ನ ಕ್ರೂರತೆ ಮತ್ತು ಜಾಗತಿಕ ಸಮುದಾಯದ ಮೌನವನ್ನು ಖಂಡಿಸಿ, “ನಾವು ಇದನ್ನು ಹೇಗೆ ಬದುಕುಳಿಯುತ್ತೇವೆ?” ಎಂಬ ಅವರ ಪ್ರಶ್ನೆ ಜಾಗತಿಕ ಆತ್ಮಸಾಕ್ಷಿಗೆ ಸವಾಲು ಹಾಕುತ್ತದೆ ಎಂದು ಅವರು ಹೇಳಿದ್ದಾರೆ.

ಗಾಜಾ ಹಸಿವಿನಿಂದ ಬಳಲುತ್ತಿರುವಾಗ, ಅದರ ಬೀದಿಗಳು ರಕ್ತದಿಂದ ಕೆಂಪಾಗಿವೆ. ಇಸ್ರೇಲ್‌ನ ಯುದ್ಧವು ಗಾಜಾವನ್ನು ಅವಶೇಷಗಳ ರಾಶಿಯನ್ನಾಗಿ ಮಾಡಿದೆ, ಅದರ ಬಹುತೇಕ ಜನಸಂಖ್ಯೆಯನ್ನು ಸ್ಥಳಾಂತರಿಸಿದೆ ಮತ್ತು ಛಿದ್ರಗೊಂಡ ದೇಹಗಳು ಹಾಗೂ ಉತ್ತರವಿಲ್ಲದ ಸಹಾಯದ ಕೂಗುಗಳನ್ನು ಮಾತ್ರ ಉಳಿಸಿದೆ. ಈ ಕರುಣಾಜನಕ ಪರಿಸ್ಥಿತಿಗೆ ತಕ್ಷಣದ ಅಂತ್ಯ ಹಾಡಲು ಜಾಗತಿಕ ಒತ್ತಡ ಅನಿವಾರ್ಯವಾಗಿದೆ ಎಂದು ಫ್ರಾನ್ಸೆಸ್ಕಾ ತಿಳಿಸಿದ್ದಾರೆ.

ಕೊಪ್ಪ: ನಿವೇಶನರಹಿತ ಎಸ್ಟೇಟ್ ಕಾರ್ಮಿಕರಿಂದ ಸರ್ಕಾರಿ ಜಾಗದಲ್ಲಿ ಟೆಂಟ್‌ ನಿರ್ಮಾಣ: ಭೂಮಾಲೀಕ ಗುರು ಹೆಬ್ಬಾರ್‌ಗೆ ಕೆ.ಎಲ್.ಅಶೋಕ್ ಎಚ್ಚರಿಕೆ-video

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...