Homeಮುಖಪುಟಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

- Advertisement -
- Advertisement -

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ, ಯುದ್ಧದ ಪರಿಣಾಮ ಭಾರತೀಯರ ಅಡುಗೆ ಮನೆಗೆ ಬಂದು ತಲುಪಿದೆ.

ಪಶ್ಚಿಮ ಏಷ್ಯಾ ಸಂಘರ್ಷ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯ ಮೇಲೆ ಪರಿಣಾಮ ಬೀರಿದೆ. ಮುಖ್ಯವಾಗಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕಳೆದ ಎರಡು ದಿನಗಳಿಂದ ವ್ಯತ್ಯವಾಗಿದೆ. ಇದರಿಂದ ಬೆಂಗಳೂರು, ಚೆನ್ನೈ, ಕೋಲ್ಕತ್ತಾ, ಮುಂಬೈ ಸೇರಿದಂತೆ ಪ್ರಮುಖ ನಗರಗಳಲ್ಲಿ ಹೋಟೆಲ್‌ ಉದ್ಯಮದ ಮೇಲೆ ಹೊಡೆತ ಬಿದ್ದಿದೆ. ಮಾಧ್ಯಮ ವರದಿಗಳು ಇದನ್ನು ದೃಢಪಡಿಸಿವೆ.

ಬೆಂಗಳೂರಿನ ಪ್ರಸಿದ್ದ ವಿದ್ಯಾರ್ಥಿ ಭವನ ಸೇರಿದಂತೆ ಹಲವು ಹೋಟೆಲ್ ಮಾಲೀಕರು ಮಾಧ್ಯಮಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಗ್ಯಾಸ್‌ ಪೂರೈಕೆಯಲ್ಲಿ ವ್ಯತ್ಯಯವಾದ ಹಿನ್ನೆಲೆ, ಅನಿವಾರ್ಯವಾಗಿ ಹೋಟೆಲ್ ಬಂದ್ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದಿದ್ದಾರೆ.

ಮುಂಬೈ ನಗರದ ಹೋಟೆಲ್ ಮತ್ತು ರೆಸ್ಟೋರೆಂಟ್ ಸಂಘ ಎಹೆಚ್‌ಎಆರ್ ಪ್ರಕಾರ, ವಾಣಿಜ್ಯ ಎಲ್‌ಪಿಜಿ ಪೂರೈಕೆಯಲ್ಲಿನ ಅಡಚಣೆಗಳಿಂದಾಗಿ ಮಂಗಳವಾರದವರೆಗೆ (ಮಾ.10) ಸುಮಾರು ಶೇಕಡ 20ರಷ್ಟು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಮುಚ್ಚಲ್ಪಟ್ಟಿವೆ.

ಆಹಾರ ಉದ್ಯಮಕ್ಕೆ ಅಗತ್ಯ ವಸ್ತುಗಳ ಅಡಿಯಲ್ಲಿ ವಾಣಿಜ್ಯ ಎಲ್‌ಪಿಜಿಯನ್ನು ನಿರಂತರವಾಗಿ ಪೂರೈಸುವಂತೆ ಕೋರಿ ಚೆನ್ನೈ ಹೋಟೆಲ್‌ಗಳ ಸಂಘ ಸೋಮವಾರ (ಮಾ.9) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ.

“ಪರಿಸ್ಥಿತಿ ಗಂಭೀರವಾಗಿದೆ. ವಾಣಿಜ್ಯ ಎಲ್‌ಪಿಜಿ ವಿತರಕರು ಸಿಲಿಂಡರ್‌ಗಳ ಪೂರೈಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿದ್ದಾರೆ. ನಮ್ಮ ಬಳಿ ಸ್ಟಾಕ್ ಲಭ್ಯವಿಲ್ಲ ಎಂದು ಹೇಳಿದ್ದಾರೆ. ಪರಿಣಾಮ, ಅನೇಕ ರೆಸ್ಟೋರೆಂಟ್‌ಗಳನ್ನು ಮುಚ್ಚುವ ಅನಿವಾರ್ಯತೆ ಎದುರಾಗಿದೆ” ಎಂದು ಸಂಘ ​ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದು, ​ಸಿಎಂ ಎಂ.ಕೆ ಸ್ಟಾಲಿನ್ ಮತ್ತು ಡಿಸಿಎಂ ಉದಯನಿಧಿ ಸ್ಟಾಲಿನ್ ಅವರಿಗೆ ಪೋಸ್ಟನ್ನು ಟ್ಯಾಗ್ ಮಾಡಿದೆ.

ಪ್ರಮುಖ ನಗರಗಳಲ್ಲಿ ಎಲ್‌ಪಿಜಿ ಅಭಾವದ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ, ಗೃಹ ಬಳಕೆಯ ಎಲ್‌ಪಿಜಿ ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಮತ್ತು ಎಲ್‌ಪಿಜಿ ಉತ್ಪಾದನೆಯನ್ನು ಶೇಕಡ 10 ರಷ್ಟು ಹೆಚ್ಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಾರ್ವಜನಿಕರಿಗೆ ಭರವಸೆ ನೀಡಿದೆ.

ಆದಾಗ್ಯೂ, ಎಲ್‌ಪಿಜಿ ಸಿಲಿಂಡರ್‌ಗಳ ಬುಕಿಂಗ್ ಮತ್ತು ವಿತರಣೆಯಲ್ಲಿ ವಿಳಂಬವಾಗುತ್ತಿದೆ ಎಂಬ ವರದಿಗಳು ಬರುತ್ತಿವೆ. ಇದರ ನಡುವೆ ಅನಿಲ ಸಿಲಿಂಡರ್‌ಗಳ ಕಾಳಸಂತೆ ಮಾರಾಟದ ಆರೋಪಗಳೂ ಕೂಡ ಕೇಳಿ ಬಂದಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಬುಧವಾರ (ಮಾ.11) ವರದಿ ಮಾಡಿದೆ.

ಮುಂಬೈ, ಬೆಂಗಳೂರು ಮತ್ತು ಚೆನ್ನೈನ ಹೋಟೆಲ್ ಸಂಘಟನೆಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಅಭಾವದ ಬಗ್ಗೆ ಕಳವಳ ವ್ಯಕ್ತಪಡಿಸಿವೆ. ಪೂರೈಕೆಯು ತಕ್ಷಣವೇ ಪುನರಾರಂಭಗೊಳ್ಳದಿದ್ದರೆ ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳು ಮುಚ್ಚುವ ಭೀತಿಯನ್ನು ಎದುರಿಸಬಹುದು ಎಂಬುವುದಾಗಿ ಅವು ಎಚ್ಚರಿಸಿವೆ ಎಂದು ವರದಿ ಉಲ್ಲೇಖಿಸಿದೆ.

ಎಲ್‌ಪಿಜಿ ಚಿಲ್ಲರೆ ಮಾರಾಟಗಾರರ ಸಂಘಗಳು ನೀಡಿದ ಮಾಹಿತಿಯ ಪ್ರಕಾರ, ಮಾರ್ಚ್ 8 ರಿಂದ ಜಾರಿಗೆ ಬರುವಂತೆ ಸರ್ಕಾರವು ವಾಣಿಜ್ಯ ಬಳಕೆಯ ಗ್ಯಾಸ್ ಪೂರೈಕೆಯನ್ನು ಇದ್ದಕ್ಕಿದ್ದಂತೆ ಸ್ಥಗಿತಗೊಳಿಸಿದೆ. ಆದರೆ, ನಂತರದ ದಿನಗಳಲ್ಲಿ ಆಸ್ಪತ್ರೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಂತಹ ಅಗತ್ಯ ಸೇವೆಗಳಿಗೆ ಮಾತ್ರ ಪೂರೈಕೆಯನ್ನು ಪುನರಾರಂಭಿಸಲಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ತಿಳಿಸಿದೆ.

ಗೃಹ ಬಳಕೆಯ ಎಲ್‌ಪಿಜಿ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲದಿದ್ದರೂ, ವಾಣಿಜ್ಯ ಬಳಕೆಯ ಪೂರೈಕೆಯ ಬಗ್ಗೆ ಅನಿಶ್ಚಿತತೆ ಮುಂದುವರಿದಿದೆ ಎಂದು ಸಂಘಟನೆಗಳು ತಿಳಿಸಿವೆ. ಗೃಹಬಳಕೆಯ ಅಗತ್ಯಗಳನ್ನು ಪೂರೈಸಿದ ನಂತರ, ವಾಣಿಜ್ಯ ಸಂಸ್ಥೆಗಳಿಗೂ ಎಲ್‌ಪಿಜಿ ಲಭ್ಯವಾಗುವಂತೆ ಮಾಡಬೇಕು ಎಂದು ಅವು ವಿನಂತಿಸಿವೆ ಎಂದು ವರದಿ ಹೇಳಿದೆ.

ಮಧ್ಯಪ್ರಾಚ್ಯ ಸಂಘರ್ಷಕ್ಕೂ ಭಾರತ ಎಲ್‌ಪಿಜಿಗೂ ಏನು ಸಂಬಂಧ?

ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಸಾಗಾಟಕ್ಕೆ ಅಡ್ಡಿಯಾಗಿದೆ. ಭಾರತವು ತನ್ನ ಒಟ್ಟು ಎಲ್‌ಪಿಜಿ ಬಳಕೆಯ ಸುಮಾರು 60-62% ರಷ್ಟನ್ನು ಆಮದು ಮಾಡಿಕೊಳ್ಳುತ್ತದೆ. ಇದರಲ್ಲಿ ಹೆಚ್ಚಿನ ಪಾಲು ಮಧ್ಯಪ್ರಾಚ್ಯ ರಾಷ್ಟ್ರಗಳಿಂದ ಬರುತ್ತದೆ.

ಕೇಂದ್ರ ಸರ್ಕಾರವು ಗೃಹಬಳಕೆಯ ಗ್ರಾಹಕರಿಗೆ ಆದ್ಯತೆ ನೀಡಲು ವಾಣಿಜ್ಯ ಬಳಕೆಯ ಪೂರೈಕೆಯನ್ನು ಸದ್ಯಕ್ಕೆ ನಿಯಂತ್ರಿಸಿದೆ. ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಗೃಹಬಳಕೆಯ ಸಿಲಿಂಡರ್ ಖರೀದಿಸಿದ ನಂತರ ಮುಂದಿನ ಬುಕಿಂಗ್‌ಗೆ 25 ದಿನಗಳವರೆಗೆ ಕಾಯುವ ನಿಯಮ ಜಾರಿಗೆ ಬಂದಿದೆ.

ಎಲ್‌ಪಿಜಿ ಉತ್ಪಾದನೆಯನ್ನು 10% ಹೆಚ್ಚಿಸಲು ಕೇಂದ್ರ ಸರ್ಕಾರವು ತೈಲ ಕಂಪನಿಗಳಿಗೆ ಆದೇಶಿಸಿದೆ. ರಷ್ಯಾ ಮತ್ತು ಪಶ್ಚಿಮ ಆಫ್ರಿಕಾದಂತಹ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ವರದಿಯಾಗಿದೆ.

ಭಾರತ ಮಧ್ಯ ಪ್ರಾಚ್ಯದಿಂದ ಅನಿಲ ತರುವುದು ಏಕೆ?

ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಗಳು ಇರಾನ್, ಕತಾರ್, ಸೌದಿ ಅರೇಬಿಯಾ ಮತ್ತು ಯುಎಇನಂತಹ ಮಧ್ಯಪ್ರಾಚ್ಯ ದೇಶಗಳಲ್ಲಿವೆ. ಭಾರತದಲ್ಲಿ ಗೃಹಬಳಕೆ ಮತ್ತು ಕೈಗಾರಿಕೆಗಳಿಗೆ ಬೇಕಾದಷ್ಟು ಪ್ರಮಾಣದ ಅನಿಲ ಉತ್ಪಾದನೆಯಾಗುವುದಿಲ್ಲ.

ಮಧ್ಯಪ್ರಾಚ್ಯ ದೇಶಗಳು ಭಾರತಕ್ಕೆ ಹತ್ತಿರದಲ್ಲಿವೆ. ಇದರಿಂದಾಗಿ ಸಮುದ್ರ ಮಾರ್ಗದ ಮೂಲಕ ಅನಿಲವನ್ನು ಹಡಗುಗಳಲ್ಲಿ ಸಾಗಿಸುವುದು ಸುಲಭ ಮತ್ತು ಸಾರಿಗೆ ವೆಚ್ಚ ಕಡಿಮೆಯಾಗುತ್ತದೆ.

ಭಾರತದ ಜನಸಂಖ್ಯೆ ಮತ್ತು ಕೈಗಾರಿಕಾ ಬೆಳವಣಿಗೆಯಿಂದಾಗಿ ಇಂಧನದ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಬೃಹತ್ ಬೇಡಿಕೆಯನ್ನು ಪೂರೈಸಲು ಆಮದು ಮಾಡಿಕೊಳ್ಳುವುದು ಅನಿವಾರ್ಯ.

ಭಾರತವು ಈ ದೇಶಗಳೊಂದಿಗೆ ದೀರ್ಘಕಾಲದ ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಂಡಿದೆ. ಇದರಿಂದಾಗಿ ಮಾರುಕಟ್ಟೆಯ ಏರಿಳಿತಗಳ ನಡುವೆಯೂ ನಿರಂತರ ಪೂರೈಕೆಯ ಭರವಸೆ ಇರುತ್ತದೆ.

ಎಲ್‌ಪಿಜಿ ನೈಸರ್ಗಿಕವಾಗಿ ಸಿಗುವ ವಸ್ತುವೇ?

ಭೂಮಿಯಿಂದ ನೈಸರ್ಗಿಕ ಅನಿಲವನ್ನು ತೆಗೆಯುವಾಗ ಅದರಲ್ಲಿ ಪ್ರೋಪೇನ್ ಮತ್ತು ಬ್ಯುಟೇನ್ ಎಂಬ ಅನಿಲಗಳಿರುತ್ತವೆ. ಇವುಗಳನ್ನು ಬೇರ್ಪಡಿಸಿದಾಗ ಎಲ್‌ಪಿಜಿ ದೊರೆಯುತ್ತದೆ.

ಪೆಟ್ರೋಲಿಯಂ ರಿಫೈನರಿಗಳಲ್ಲಿ ಕಚ್ಚಾ ತೈಲವನ್ನು ಶುದ್ಧೀಕರಿಸಿ ಪೆಟ್ರೋಲ್ ಅಥವಾ ಡೀಸೆಲ್ ಮಾಡುವಾಗ ಒಂದು ಹಂತದಲ್ಲಿ ಉಪ ಉತ್ಪನ್ನವಾಗಿ ಎಲ್‌ಪಿಜಿ ಬಿಡುಗಡೆಯಾಗುತ್ತದೆ.

ಇದು ನೈಸರ್ಗಿಕವಾಗಿ ಅನಿಲ ರೂಪದಲ್ಲಿರುತ್ತದೆ, ಆದರೆ ಸಾಗಾಟದ ಅನುಕೂಲಕ್ಕಾಗಿ ಅದನ್ನು ಹೆಚ್ಚಿನ ಒತ್ತಡದಲ್ಲಿ ದ್ರವ ರೂಪಕ್ಕೆ ಪರಿವರ್ತಿಸಿ ಸಿಲಿಂಡರ್‌ಗಳಲ್ಲಿ ತುಂಬಲಾಗುತ್ತದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...