Homeಮುಖಪುಟಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

- Advertisement -
- Advertisement -

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ, ಯುದ್ಧದ ಪರಿಣಾಮ ಭಾರತೀಯರ ಅಡುಗೆ ಮನೆಗೆ ಬಂದು ತಲುಪಿದೆ.

ಪಶ್ಚಿಮ ಏಷ್ಯಾ ಸಂಘರ್ಷ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯ ಮೇಲೆ ಪರಿಣಾಮ ಬೀರಿದೆ. ಮುಖ್ಯವಾಗಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕಳೆದ ಎರಡು ದಿನಗಳಿಂದ ವ್ಯತ್ಯವಾಗಿದೆ. ಇದರಿಂದ ಬೆಂಗಳೂರು, ಚೆನ್ನೈ, ಕೋಲ್ಕತ್ತಾ, ಮುಂಬೈ ಸೇರಿದಂತೆ ಪ್ರಮುಖ ನಗರಗಳಲ್ಲಿ ಹೋಟೆಲ್‌ ಉದ್ಯಮದ ಮೇಲೆ ಹೊಡೆತ ಬಿದ್ದಿದೆ. ಮಾಧ್ಯಮ ವರದಿಗಳು ಇದನ್ನು ದೃಢಪಡಿಸಿವೆ.

ಬೆಂಗಳೂರಿನ ಪ್ರಸಿದ್ದ ವಿದ್ಯಾರ್ಥಿ ಭವನ ಸೇರಿದಂತೆ ಹಲವು ಹೋಟೆಲ್ ಮಾಲೀಕರು ಮಾಧ್ಯಮಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಗ್ಯಾಸ್‌ ಪೂರೈಕೆಯಲ್ಲಿ ವ್ಯತ್ಯಯವಾದ ಹಿನ್ನೆಲೆ, ಅನಿವಾರ್ಯವಾಗಿ ಹೋಟೆಲ್ ಬಂದ್ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದಿದ್ದಾರೆ.

ಮುಂಬೈ ನಗರದ ಹೋಟೆಲ್ ಮತ್ತು ರೆಸ್ಟೋರೆಂಟ್ ಸಂಘ ಎಹೆಚ್‌ಎಆರ್ ಪ್ರಕಾರ, ವಾಣಿಜ್ಯ ಎಲ್‌ಪಿಜಿ ಪೂರೈಕೆಯಲ್ಲಿನ ಅಡಚಣೆಗಳಿಂದಾಗಿ ಮಂಗಳವಾರದವರೆಗೆ (ಮಾ.10) ಸುಮಾರು ಶೇಕಡ 20ರಷ್ಟು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಮುಚ್ಚಲ್ಪಟ್ಟಿವೆ.

ಆಹಾರ ಉದ್ಯಮಕ್ಕೆ ಅಗತ್ಯ ವಸ್ತುಗಳ ಅಡಿಯಲ್ಲಿ ವಾಣಿಜ್ಯ ಎಲ್‌ಪಿಜಿಯನ್ನು ನಿರಂತರವಾಗಿ ಪೂರೈಸುವಂತೆ ಕೋರಿ ಚೆನ್ನೈ ಹೋಟೆಲ್‌ಗಳ ಸಂಘ ಸೋಮವಾರ (ಮಾ.9) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ.

“ಪರಿಸ್ಥಿತಿ ಗಂಭೀರವಾಗಿದೆ. ವಾಣಿಜ್ಯ ಎಲ್‌ಪಿಜಿ ವಿತರಕರು ಸಿಲಿಂಡರ್‌ಗಳ ಪೂರೈಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿದ್ದಾರೆ. ನಮ್ಮ ಬಳಿ ಸ್ಟಾಕ್ ಲಭ್ಯವಿಲ್ಲ ಎಂದು ಹೇಳಿದ್ದಾರೆ. ಪರಿಣಾಮ, ಅನೇಕ ರೆಸ್ಟೋರೆಂಟ್‌ಗಳನ್ನು ಮುಚ್ಚುವ ಅನಿವಾರ್ಯತೆ ಎದುರಾಗಿದೆ” ಎಂದು ಸಂಘ ​ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದು, ​ಸಿಎಂ ಎಂ.ಕೆ ಸ್ಟಾಲಿನ್ ಮತ್ತು ಡಿಸಿಎಂ ಉದಯನಿಧಿ ಸ್ಟಾಲಿನ್ ಅವರಿಗೆ ಪೋಸ್ಟನ್ನು ಟ್ಯಾಗ್ ಮಾಡಿದೆ.

ಪ್ರಮುಖ ನಗರಗಳಲ್ಲಿ ಎಲ್‌ಪಿಜಿ ಅಭಾವದ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ, ಗೃಹ ಬಳಕೆಯ ಎಲ್‌ಪಿಜಿ ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಮತ್ತು ಎಲ್‌ಪಿಜಿ ಉತ್ಪಾದನೆಯನ್ನು ಶೇಕಡ 10 ರಷ್ಟು ಹೆಚ್ಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಾರ್ವಜನಿಕರಿಗೆ ಭರವಸೆ ನೀಡಿದೆ.

ಆದಾಗ್ಯೂ, ಎಲ್‌ಪಿಜಿ ಸಿಲಿಂಡರ್‌ಗಳ ಬುಕಿಂಗ್ ಮತ್ತು ವಿತರಣೆಯಲ್ಲಿ ವಿಳಂಬವಾಗುತ್ತಿದೆ ಎಂಬ ವರದಿಗಳು ಬರುತ್ತಿವೆ. ಇದರ ನಡುವೆ ಅನಿಲ ಸಿಲಿಂಡರ್‌ಗಳ ಕಾಳಸಂತೆ ಮಾರಾಟದ ಆರೋಪಗಳೂ ಕೂಡ ಕೇಳಿ ಬಂದಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಬುಧವಾರ (ಮಾ.11) ವರದಿ ಮಾಡಿದೆ.

ಮುಂಬೈ, ಬೆಂಗಳೂರು ಮತ್ತು ಚೆನ್ನೈನ ಹೋಟೆಲ್ ಸಂಘಟನೆಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಅಭಾವದ ಬಗ್ಗೆ ಕಳವಳ ವ್ಯಕ್ತಪಡಿಸಿವೆ. ಪೂರೈಕೆಯು ತಕ್ಷಣವೇ ಪುನರಾರಂಭಗೊಳ್ಳದಿದ್ದರೆ ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳು ಮುಚ್ಚುವ ಭೀತಿಯನ್ನು ಎದುರಿಸಬಹುದು ಎಂಬುವುದಾಗಿ ಅವು ಎಚ್ಚರಿಸಿವೆ ಎಂದು ವರದಿ ಉಲ್ಲೇಖಿಸಿದೆ.

ಎಲ್‌ಪಿಜಿ ಚಿಲ್ಲರೆ ಮಾರಾಟಗಾರರ ಸಂಘಗಳು ನೀಡಿದ ಮಾಹಿತಿಯ ಪ್ರಕಾರ, ಮಾರ್ಚ್ 8 ರಿಂದ ಜಾರಿಗೆ ಬರುವಂತೆ ಸರ್ಕಾರವು ವಾಣಿಜ್ಯ ಬಳಕೆಯ ಗ್ಯಾಸ್ ಪೂರೈಕೆಯನ್ನು ಇದ್ದಕ್ಕಿದ್ದಂತೆ ಸ್ಥಗಿತಗೊಳಿಸಿದೆ. ಆದರೆ, ನಂತರದ ದಿನಗಳಲ್ಲಿ ಆಸ್ಪತ್ರೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಂತಹ ಅಗತ್ಯ ಸೇವೆಗಳಿಗೆ ಮಾತ್ರ ಪೂರೈಕೆಯನ್ನು ಪುನರಾರಂಭಿಸಲಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ತಿಳಿಸಿದೆ.

ಗೃಹ ಬಳಕೆಯ ಎಲ್‌ಪಿಜಿ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲದಿದ್ದರೂ, ವಾಣಿಜ್ಯ ಬಳಕೆಯ ಪೂರೈಕೆಯ ಬಗ್ಗೆ ಅನಿಶ್ಚಿತತೆ ಮುಂದುವರಿದಿದೆ ಎಂದು ಸಂಘಟನೆಗಳು ತಿಳಿಸಿವೆ. ಗೃಹಬಳಕೆಯ ಅಗತ್ಯಗಳನ್ನು ಪೂರೈಸಿದ ನಂತರ, ವಾಣಿಜ್ಯ ಸಂಸ್ಥೆಗಳಿಗೂ ಎಲ್‌ಪಿಜಿ ಲಭ್ಯವಾಗುವಂತೆ ಮಾಡಬೇಕು ಎಂದು ಅವು ವಿನಂತಿಸಿವೆ ಎಂದು ವರದಿ ಹೇಳಿದೆ.

ಮಧ್ಯಪ್ರಾಚ್ಯ ಸಂಘರ್ಷಕ್ಕೂ ಭಾರತ ಎಲ್‌ಪಿಜಿಗೂ ಏನು ಸಂಬಂಧ?

ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಸಾಗಾಟಕ್ಕೆ ಅಡ್ಡಿಯಾಗಿದೆ. ಭಾರತವು ತನ್ನ ಒಟ್ಟು ಎಲ್‌ಪಿಜಿ ಬಳಕೆಯ ಸುಮಾರು 60-62% ರಷ್ಟನ್ನು ಆಮದು ಮಾಡಿಕೊಳ್ಳುತ್ತದೆ. ಇದರಲ್ಲಿ ಹೆಚ್ಚಿನ ಪಾಲು ಮಧ್ಯಪ್ರಾಚ್ಯ ರಾಷ್ಟ್ರಗಳಿಂದ ಬರುತ್ತದೆ.

ಕೇಂದ್ರ ಸರ್ಕಾರವು ಗೃಹಬಳಕೆಯ ಗ್ರಾಹಕರಿಗೆ ಆದ್ಯತೆ ನೀಡಲು ವಾಣಿಜ್ಯ ಬಳಕೆಯ ಪೂರೈಕೆಯನ್ನು ಸದ್ಯಕ್ಕೆ ನಿಯಂತ್ರಿಸಿದೆ. ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಗೃಹಬಳಕೆಯ ಸಿಲಿಂಡರ್ ಖರೀದಿಸಿದ ನಂತರ ಮುಂದಿನ ಬುಕಿಂಗ್‌ಗೆ 25 ದಿನಗಳವರೆಗೆ ಕಾಯುವ ನಿಯಮ ಜಾರಿಗೆ ಬಂದಿದೆ.

ಎಲ್‌ಪಿಜಿ ಉತ್ಪಾದನೆಯನ್ನು 10% ಹೆಚ್ಚಿಸಲು ಕೇಂದ್ರ ಸರ್ಕಾರವು ತೈಲ ಕಂಪನಿಗಳಿಗೆ ಆದೇಶಿಸಿದೆ. ರಷ್ಯಾ ಮತ್ತು ಪಶ್ಚಿಮ ಆಫ್ರಿಕಾದಂತಹ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ವರದಿಯಾಗಿದೆ.

ಭಾರತ ಮಧ್ಯ ಪ್ರಾಚ್ಯದಿಂದ ಅನಿಲ ತರುವುದು ಏಕೆ?

ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಗಳು ಇರಾನ್, ಕತಾರ್, ಸೌದಿ ಅರೇಬಿಯಾ ಮತ್ತು ಯುಎಇನಂತಹ ಮಧ್ಯಪ್ರಾಚ್ಯ ದೇಶಗಳಲ್ಲಿವೆ. ಭಾರತದಲ್ಲಿ ಗೃಹಬಳಕೆ ಮತ್ತು ಕೈಗಾರಿಕೆಗಳಿಗೆ ಬೇಕಾದಷ್ಟು ಪ್ರಮಾಣದ ಅನಿಲ ಉತ್ಪಾದನೆಯಾಗುವುದಿಲ್ಲ.

ಮಧ್ಯಪ್ರಾಚ್ಯ ದೇಶಗಳು ಭಾರತಕ್ಕೆ ಹತ್ತಿರದಲ್ಲಿವೆ. ಇದರಿಂದಾಗಿ ಸಮುದ್ರ ಮಾರ್ಗದ ಮೂಲಕ ಅನಿಲವನ್ನು ಹಡಗುಗಳಲ್ಲಿ ಸಾಗಿಸುವುದು ಸುಲಭ ಮತ್ತು ಸಾರಿಗೆ ವೆಚ್ಚ ಕಡಿಮೆಯಾಗುತ್ತದೆ.

ಭಾರತದ ಜನಸಂಖ್ಯೆ ಮತ್ತು ಕೈಗಾರಿಕಾ ಬೆಳವಣಿಗೆಯಿಂದಾಗಿ ಇಂಧನದ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಬೃಹತ್ ಬೇಡಿಕೆಯನ್ನು ಪೂರೈಸಲು ಆಮದು ಮಾಡಿಕೊಳ್ಳುವುದು ಅನಿವಾರ್ಯ.

ಭಾರತವು ಈ ದೇಶಗಳೊಂದಿಗೆ ದೀರ್ಘಕಾಲದ ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಂಡಿದೆ. ಇದರಿಂದಾಗಿ ಮಾರುಕಟ್ಟೆಯ ಏರಿಳಿತಗಳ ನಡುವೆಯೂ ನಿರಂತರ ಪೂರೈಕೆಯ ಭರವಸೆ ಇರುತ್ತದೆ.

ಎಲ್‌ಪಿಜಿ ನೈಸರ್ಗಿಕವಾಗಿ ಸಿಗುವ ವಸ್ತುವೇ?

ಭೂಮಿಯಿಂದ ನೈಸರ್ಗಿಕ ಅನಿಲವನ್ನು ತೆಗೆಯುವಾಗ ಅದರಲ್ಲಿ ಪ್ರೋಪೇನ್ ಮತ್ತು ಬ್ಯುಟೇನ್ ಎಂಬ ಅನಿಲಗಳಿರುತ್ತವೆ. ಇವುಗಳನ್ನು ಬೇರ್ಪಡಿಸಿದಾಗ ಎಲ್‌ಪಿಜಿ ದೊರೆಯುತ್ತದೆ.

ಪೆಟ್ರೋಲಿಯಂ ರಿಫೈನರಿಗಳಲ್ಲಿ ಕಚ್ಚಾ ತೈಲವನ್ನು ಶುದ್ಧೀಕರಿಸಿ ಪೆಟ್ರೋಲ್ ಅಥವಾ ಡೀಸೆಲ್ ಮಾಡುವಾಗ ಒಂದು ಹಂತದಲ್ಲಿ ಉಪ ಉತ್ಪನ್ನವಾಗಿ ಎಲ್‌ಪಿಜಿ ಬಿಡುಗಡೆಯಾಗುತ್ತದೆ.

ಇದು ನೈಸರ್ಗಿಕವಾಗಿ ಅನಿಲ ರೂಪದಲ್ಲಿರುತ್ತದೆ, ಆದರೆ ಸಾಗಾಟದ ಅನುಕೂಲಕ್ಕಾಗಿ ಅದನ್ನು ಹೆಚ್ಚಿನ ಒತ್ತಡದಲ್ಲಿ ದ್ರವ ರೂಪಕ್ಕೆ ಪರಿವರ್ತಿಸಿ ಸಿಲಿಂಡರ್‌ಗಳಲ್ಲಿ ತುಂಬಲಾಗುತ್ತದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...