Homeಮುಖಪುಟರಾಜ್ಯಸಭೆ : ಅಲಹಾಬಾದ್ ಹೈಕೋರ್ಟ್‌ ನ್ಯಾಯಮೂರ್ತಿಯ ವಾಗ್ದಂಡನೆಗೆ ವಿಪಕ್ಷಗಳ ನೋಟಿಸ್

ರಾಜ್ಯಸಭೆ : ಅಲಹಾಬಾದ್ ಹೈಕೋರ್ಟ್‌ ನ್ಯಾಯಮೂರ್ತಿಯ ವಾಗ್ದಂಡನೆಗೆ ವಿಪಕ್ಷಗಳ ನೋಟಿಸ್

- Advertisement -
- Advertisement -

ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಕಾರ್ಯಕ್ರಮದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿ ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಅಲಹಾಬಾದ್ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರನ್ನು ವಾಗ್ದಂಡನೆಗೆ ಗುರಿಪಡಿಸುವಂತೆ ರಾಜ್ಯಸಭೆಯಲ್ಲಿ ನೋಟಿಸ್ ನೀಡಲಾಗಿದೆ.

ವರದಿಗಳ ಪ್ರಕಾರ, ಕಪಿಲ್ ಸಿಬಲ್, ವಿವೇಕ್ ಟಂಖಾ, ದಿಗ್ವಿಜಯ ಸಿಂಗ್, ಜಾನ್ ಬ್ರಿಟ್ಟಾಸ್, ಮನೋಜ್ ಕುಮಾರ್ ಝಾ ಮತ್ತು ಸಾಕೇತ್ ಗೋಖಲೆ ಸೇರಿದಂತೆ ಪ್ರತಿಪಕ್ಷಗಳ 55 ಸದಸ್ಯರು ವಾಗ್ದಂಡನೆ ನೋಟಿಸ್‌ಗೆ ಸಹಿ ಹಾಕಿದ್ದಾರೆ.

ನಿಯಮಗಳ ಪ್ರಕಾರ, ಸುಮಾರು 50 ಸಂಸದರ ಸಹಿ ಅಗತ್ಯವಿದೆ. ಆದರೆ, ಇಲ್ಲಿ ಹೆಚ್ಚುವರಿಯಾಗಿ 5 ಸಂಸದರು ಸಹಿ ಹಾಕಿದ್ದಾರೆ.

“ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು ವಿಹೆಚ್‌ಪಿ ಕಾರ್ಯಕ್ರಮದಲ್ಲಿ ಮಾಡಿದ ಭಾಷಣ ದ್ವೇಷದಿಂದ ಕೂಡಿತ್ತು. ಪೂರ್ವಾಗ್ರಹ ಪೀಡತವಾಗಿತ್ತು. ಅಲ್ಪಸಂಖ್ಯಾತರನ್ನು ನೇರವಾಗಿ ಗುರಿಯಾಗಿಸಲಾಗಿದೆ” ಎಂದು ವಾಗ್ದಂಡನೆ ನೋಟಿಸ್‌ನಲ್ಲಿ ಆರೋಪಿಸಲಾಗಿದೆ.

ಬಹುಸಂಖ್ಯಾತರ ಅಪೇಕ್ಷೆಯಂತೆ ಈ ದೇಶ ನಡೆಯಲಿದೆ ಎಂಬ ನ್ಯಾಯಮೂರ್ತಿ ಯಾದವ್ ಅವರ ಹೇಳಿಕೆ, ಮುಸ್ಲಿಂ ಸಮುದಾಯದ ವಿರುದ್ಧದ ಅವರ ಟೀಕೆಗಳು ಮತ್ತು “ಕಠ್ಮುಲ್ಲಾ” ಎಂಬ ಪದ ಬಳಕೆಯನ್ನು ಉಲ್ಲೇಖಿಸಿ ವಾಗ್ದಂಡನೆ ನೋಟಿಸ್ ನೀಡಲಾಗಿದೆ.

ನ್ಯಾ. ಯಾದವ್ ಅವರು ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸುವಾಗ ಮಾಡಿರುವ ಪ್ರತಿಜ್ಞೆ ಮತ್ತು ಸಂವಿಧಾನದ ಜಾತ್ಯತೀತ ತತ್ವಗಳನ್ನು ಉಲ್ಲಂಘಿಸಿದ್ದಾರೆ. “ಸಣ್ಣ ವಯಸ್ಸಿನಲ್ಲಿಯೇ ಪ್ರಾಣಿಗಳ ಹತ್ಯೆಯನ್ನು ನೋಡುವುದರಿಂದ ಮುಸ್ಲಿಂ ಮಕ್ಕಳು ದಯೆ ತೋರುತ್ತಾರೆ ಎಂದು ನಿರೀಕ್ಷಿಸುವಂತಿಲ್ಲ” ಎಂಬ ಅವರ ಹೇಳಿಕೆಗೆ ಆಕ್ಷೇಪಾರ್ಹವಾಗಿದೆ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

ವಿಭಜಕ ಮತ್ತು ಪೂರ್ವಾಗ್ರಹ ಪೀಡಿತ ಹೇಳಿಕೆಗಳನ್ನು ನೀಡುವ ಮೂಲಕ ನ್ಯಾಯಮೂರ್ತಿ ಯಾದವ್ ಅವರು ನ್ಯಾಯಾಂಗದ ಮೇಲೆ ಸಾರ್ವಜನಿಕರು ವಿಶ್ವಾಸ ಕಳೆದುಕೊಳ್ಳುವಂತೆ ಮಾಡಿದ್ದಾರೆ. ರಾಮ ಜನ್ಮಭೂಮಿ ಆಂದೋಲನಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ಹೇಳಿಕೆಗಳು ರಾಜಕೀಯ ಸ್ವರೂಪದ್ದಾಗಿದ್ದು, ನ್ಯಾಯಾಂಗದ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುತ್ತದೆ. ತಟಸ್ಥ ಮಧ್ಯಸ್ಥಗಾರ ಮತ್ತು ಹಕ್ಕುಗಳ ರಕ್ಷಕನಾಗಿ ನ್ಯಾಯಾಧೀಶರು ನೀಡಿರುವ ಹೇಳಿಕೆ ನ್ಯಾಯಾಂಗಕ್ಕೆ ಅಪಾಯವನ್ನುಂಟುಮಾಡುತ್ತವೆ ಎಂದು ವಾಗ್ದಂಡನೆ ನೋಟಿಸ್ ಅಸಮಾಧಾನ ವ್ಯಕ್ತಪಡಿಸಿದೆ.

ವಿಧಿ 124(4) ಮತ್ತು 124(5) ರೊಂದಿಗೆ ಓದಲಾಗುವ ಭಾರತದ ಸಂವಿಧಾನದ ವಿಧಿ 217(1)(ಬಿ) ಮತ್ತು ವಿಧಿ 218ರ ಪ್ರಕಾರ, ನ್ಯಾಯಾಂಗ ನೀತಿಗಳು, ನಿಷ್ಪಕ್ಷಪಾತ ಮತ್ತು ನ್ಯಾಯಾಂಗದಲ್ಲಿ ಮೇಲಿನ ಸಾರ್ವಜನಿಕರ ನಂಬಿಕೆಯನ್ನು ದುರ್ಬಲಗೊಳಿಸುವ ನಡೆಯ ಆಧಾರದ ಮೇಲೆ ನ್ಯಾಯಾಧೀಶರನ್ನು ಹುದ್ದೆಯಿಂದ ತೆಗೆದು ಹಾಕಬಹುದು.

ಲೋಕಸಭೆಯಲ್ಲೂ ಸಂಸದ ಅಸಾದುದ್ದೀನ್ ಓವೈಸಿ ನ್ಯಾ. ಶೇಖರ್ ಯಾದವ್ ಪದಚ್ಯುತಿಗೆ ಆಗ್ರಹಿಸಿ ನೋಟಿಸ್ ನೀಡಿದ್ದಾರೆ. ಅದಕ್ಕೆ 100 ಸಂಸದರ ಸಹಿಯ ಅಗತ್ಯವಿದೆ.

ಸಿಜೆಐ ಸಂಜೀವ್ ಖನ್ನಾ ಅವರಿಗೆ ಹಲವು ದೂರುಗಳು ಬಂದಿರುವ ಹಿನ್ನೆಲೆ ಶೇಖರ್ ಯಾದವ್ ಅವರ ಭಾಷಣದ ಕುರಿತು ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್‌ನಿಂದ ಮಾಹಿತಿ ಕೋರಿದೆ.

ಇದನ್ನೂ ಓದಿ : ‘ಒಬ್ಬ ವ್ಯಕ್ತಿಗಾಗಿ 142 ಕೋಟಿ ಜನರನ್ನು ಕಡೆಗಣಿಸಲಾಗಿದೆ’ : ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...