Homeಕರ್ನಾಟಕಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

’ಚಕ್ರವರ್ತಿ ಸೂಲಿಬೆಲೆಯವರು ಸುಳ್ಳಿನ ಸರಮಾಲೆಯಲ್ಲಿ ಜನರಿಗೆ ಮಂಕು ಬೂದಿ ಎರಚುತ್ತಿದ್ದಾರೆ. ಹಾಗಾಗಿ ಜನರಿಗೆ ಈ ಸುಳ್ಳುಗಳ ಬಗ್ಗೆ ಅರಿವು ಮೂಡಬೇಕು. ಆ ಕೆಲಸ ಮಾಡುತ್ತೇವೆ’

- Advertisement -
- Advertisement -

ಕಾಂಗ್ರೆಸ್ ಬಗ್ಗೆ ಅಪಪ್ರಚಾರ ನಡೆಸಿರುವ ಆರೋಪದಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಂಗ್ರೆಸ್​ ಪಕ್ಷದ ವಿರುದ್ಧ ಸೂಲಿಬೆಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಹನುಮಂತನಗರ ಬ್ಲಾಕ್ ಕಾಂಗ್ರೆಸ್ ಮುಖಂಡ ತೇಜೇಶ್ ಕುಮಾರ್ ದೂರು ನೀಡಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಜೂ. 7 ರಂದು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಲೇಖನವೊಂದನ್ನು ಹಂಚಿಕೊಂಡಿದ್ದರು. ’ಜನ ದಡ್ಡರಲ್ಲ: ಎಲ್ಲವನ್ನೂ ಗಮನಿಸುತ್ತಿದ್ದಾರೆ’ ಎಂದು ಶೀರ್ಷಿಕೆ ಅಡಿಯಲ್ಲಿ ಪ್ರಕಟವಾಗಿದ್ದ ಬರಹದಲ್ಲಿ, “ಮೋದಿಯನ್ನು ವಿರೋಧಿಸುವ ಭರದಲ್ಲಿ ಕಾಂಗ್ರೆಸ್ಸು ಆಕ್ಸಿಜೆನ್ ಜನರಿಗೆ ಸಿಗದಂತೆ ದಾಸ್ತಾನು ಮಾಡಿಕೊಂಡಿತು. ವ್ಯಾಕ್ಸಿನ್‌ಗಳನ್ನು ಜನರಿಗೆ ನೀಡದೇ ಕಸದಬುಟ್ಟಿಗೆಸೆಯಿತು. ಆಸ್ಪತ್ರೆಗಳಲ್ಲಿ ಬೆಡ್‌ಗಳನ್ನು ಬ್ಲಾಕ್ ಮಾಡಿಕೊಂಡು ಜನ ಸಾಯುವಂತೆ ನೋಡಿಕೊಂಡಿತು. ಕೊನೆಗೆ ಅಮಾಯಕರ ಸಾವನ್ನು ವೈಭವೀಕರಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜು ಹಾಕಿತು. ರಾಷ್ಟ್ರೀಯ ಪಕ್ಷವೊಂದು ನಾಲ್ಕು ಕಾಸಿಗೆ ಈ ಹಂತಕ್ಕೆ ಇಳಿಯಬಹುದೆಂದು ಯಾರೂ ಊಹಿಸಿರಲಿಲ್ಲ” ಎಂದು ಬರೆದಿದ್ದಾರೆ.

ಹೀಗೆ ಸುಖಾ ಸುಮ್ಮನೆ ರಾಷ್ಟ್ರೀಯ ಪಕ್ಷವೊಂದರ ಬಗ್ಗೆ ಸುಳ್ಳು ಆರೋಪಗಳನ್ನು ಮಾಡುತ್ತಾ, ಪಕ್ಷದ ಬಗ್ಗೆ ಅಪ್ರಚಾರ ಮಾಡಲಾಗುತ್ತಿದೆ ಎಂದು ಹನುಮಂತನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ತೇಜೇಶ್ ಕುಮಾರ್ ದೂರು ನೀಡಿದ್ದಾರೆ.

ಇದನ್ನೂ ಓದಿ: ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ಈ ಕುರಿತು ನಾನುಗೌರಿ.ಕಾಂಗೆ ಪ್ರತಿಕ್ರಿಯೆ ನೀಡಿರುವ ತೇಜೇಶ್ ಕುಮಾರ್‌, ’ಚಕ್ರವರ್ತಿ ಸೂಲಿಬೆಲೆ ಸುಳ್ಳು ಹೇಳುತ್ತಿರುವುದು ಇದು ಮೊದಲನೇ ಬಾರಿಯಲ್ಲ. 7 ವರ್ಷಗಳಿಂದ ಸುಳ್ಳು ಹೇಳಿಕೊಂಡು ಬರುತ್ತಿದ್ದಾರೆ. ಚಿನ್ನದ ರಸ್ತೆಯಿಂದ ಹಿಡಿದು ಮೋದಿಯವರು ಲ್ಯಾಪ್‌ಟಾಪ್ ಮುಂದೆ ಕುಳಿತು ಕೊರೊನಾ ಮಾಹಿತಿ ಪಡೆಯುತ್ತಿದ್ದಾರೆ. ಡಾಲರ್‌ ಬೆಲೆ, ಪೆಟ್ರೋಲೆ ಬೆಲೆ, ಬುಲೆಟ್ ಟ್ರೈನ್‌ನಗಳ ಬಗ್ಗೆ ಸುಳ್ಳಿನ ಸರಮಾಲೆಗಳನ್ನು ಪೋಣಿಸುತ್ತಲೇ ಇದ್ದಾರೆ. ಪರೋಕ್ಷವಾಗಿ ಬಿಜೆಪಿಗೆ ಅನುಕೂಲ ಮಾಡುತ್ತಿದ್ದು, ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡುತ್ತಲೆ ಇದ್ದಾರೆ. ಹೀಗೆ ಜೂನ್ 7 ರಂದು ತಮ್ಮ ಫೇಸ್‌ಬುಕ್‌ನಲ್ಲಿ ಕಾಂಗ್ರೆಸ್ ಬಗ್ಗೆ ತುಂಬಾ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಜೊತೆಗೆ ವಿಜಯವಾಣಿಯಲ್ಲಿ ನಮ್ಮ ರೈತರು ಮತ್ತು ಮುಸಲ್ಮಾನ ಬಂಧುಗಳ ಬಗ್ಗೆಯೂ ಕೆಟ್ಟದಾಗಿ ಬರೆದಿದ್ದಾರೆ. ಹಾಗಾಗಿ ಈ ಆರೋಪಗಳಿಗೆ ಸಾಕ್ಷಿ, ದಾಖಲಾತಿ ನೀಡುವಂತೆ ಕೇಳಿದ್ದೇವೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುವಂತೆ  ಮತ್ತು ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದೇವೆ. ನಾವು ಇಲ್ಲಿಗೆ ಇದನ್ನು ಬಿಡುವುದಿಲ್ಲ. ಕಾನೂನು ಕ್ರಮ ಜರುಗಿಸುವವರೆಗು ಹೋರಾಟ ಮುಂದುವರೆಸುತ್ತೇವೆ.” ಎಂದಿದ್ದಾರೆ.

’ಇರುವ ಸತ್ಯವನ್ನು ಬರೆಯಲಿ. ತಪ್ಪುನ್ನು ತೋರಿಸಿದರೇ ತಪ್ಪು ತಿದ್ದಿಕೊಳ್ಳುತ್ತೇವೆ. ಆದರೆ ನಡೆಯದೇ ಇರುವ ವಿಷಯದ ಬಗ್ಗೆ, ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ರಾಷ್ಟ್ರೀಯ ಪಕ್ಷದ ಬಗ್ಗೆ ಸುಳ್ಳು ಹೇಳುವುದು, ಅಪಪ್ರಚಾರ ಮಾಡುವುದು ಎಷ್ಟು ಸರಿ? ಇಷ್ಟು ದಿನ ನಾವು ಇದನ್ನು ಸುಮ್ಮನೆ ಕಡೆಗಣಿಸಿದ್ದೇವೆ. ಆದರೆ, ಈಗಲೂ ಇಂತಹದ್ದೇ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಹೀಗಾಗಿ ನಾವು ಇದನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ತೇಜೇಶ್ ಕುಮಾರ್‌ ಹೇಳಿದ್ದಾರೆ.

“ಬೆಡ್ ಬ್ಲಾಕಿಂಗ್ ದಂಧೆ ಬಗ್ಗೆ ಕೂಡ ಕಾಂಗ್ರೆಸ್‌ ಅನ್ನು ಅನುಮಾನಿಸಿದ್ದರು. ಆದರೆ, ಕೊನೆಗೆ ಯಾರು ಸಿಕ್ಕಿಹಾಕಿಕೊಂಡಿದ್ದು, ಯಾರು ಯಾರು ಅದರಲ್ಲಿ ನಂಟು ಹೊಂದಿದ್ದರು ಎಂಬುದು ಎಲ್ಲರಿಗೂ ಗೊತ್ತಾಯಿತು. ಚಕ್ರವರ್ತಿ ಸೂಲಿಬೆಲೆಯವರು ಸುಳ್ಳಿನ ಸರಮಾಲೆಯಲ್ಲಿ ಜನರಿಗೆ ಮಂಕು ಬೂದಿ ಎರಚುತ್ತಿದ್ದಾರೆ. ಹಾಗಾಗಿ ಜನರಿಗೆ ಈ ಸುಳ್ಳುಗಳ ಬಗ್ಗೆ ಅರಿವು ಮೂಡಬೇಕು. ಅವರ ವಿರುದ್ಧ ಬರೀ ದೂರು ನೀಡಿ ಸುಮ್ಮನಾಗುವುದಿಲ್ಲ. ಜನರಿಗೆ ಈ ಬಗ್ಗೆ ತಿಳಿಸುವ ಪ್ರಯತ್ನ ಮಾಡುತ್ತೇವೆ” ಎಂದು ತೇಜೇಶ್ ಕುಮಾರ್‌ ನಾನುಗೌರಿ.ಕಾಂಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ 3ನೇ ಅಲೆಯಲ್ಲಿ ರಾಜ್ಯದಲ್ಲಿ 3.4 ಲಕ್ಷ ಮಕ್ಕಳಿಗೆ ಸೋಂಕು ಸಾಧ್ಯತೆ: ತಜ್ಞರ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದೊಂದು ಒಳ್ಳೆಯ ಕೆಲಸ. ಇವನು ಮತ್ತು ಇವನಂತಹ ಅವಿವೇಕಿಗಳಿಗೆ ಕಾನೂನಿನ ವ್ಯಾಪ್ತಿಯಲ್ಲಿಯೇ ಬುದ್ದಿ ಕಲಿಸಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...