Homeಕರ್ನಾಟಕಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

’ಚಕ್ರವರ್ತಿ ಸೂಲಿಬೆಲೆಯವರು ಸುಳ್ಳಿನ ಸರಮಾಲೆಯಲ್ಲಿ ಜನರಿಗೆ ಮಂಕು ಬೂದಿ ಎರಚುತ್ತಿದ್ದಾರೆ. ಹಾಗಾಗಿ ಜನರಿಗೆ ಈ ಸುಳ್ಳುಗಳ ಬಗ್ಗೆ ಅರಿವು ಮೂಡಬೇಕು. ಆ ಕೆಲಸ ಮಾಡುತ್ತೇವೆ’

- Advertisement -
- Advertisement -

ಕಾಂಗ್ರೆಸ್ ಬಗ್ಗೆ ಅಪಪ್ರಚಾರ ನಡೆಸಿರುವ ಆರೋಪದಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಂಗ್ರೆಸ್​ ಪಕ್ಷದ ವಿರುದ್ಧ ಸೂಲಿಬೆಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಹನುಮಂತನಗರ ಬ್ಲಾಕ್ ಕಾಂಗ್ರೆಸ್ ಮುಖಂಡ ತೇಜೇಶ್ ಕುಮಾರ್ ದೂರು ನೀಡಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಜೂ. 7 ರಂದು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಲೇಖನವೊಂದನ್ನು ಹಂಚಿಕೊಂಡಿದ್ದರು. ’ಜನ ದಡ್ಡರಲ್ಲ: ಎಲ್ಲವನ್ನೂ ಗಮನಿಸುತ್ತಿದ್ದಾರೆ’ ಎಂದು ಶೀರ್ಷಿಕೆ ಅಡಿಯಲ್ಲಿ ಪ್ರಕಟವಾಗಿದ್ದ ಬರಹದಲ್ಲಿ, “ಮೋದಿಯನ್ನು ವಿರೋಧಿಸುವ ಭರದಲ್ಲಿ ಕಾಂಗ್ರೆಸ್ಸು ಆಕ್ಸಿಜೆನ್ ಜನರಿಗೆ ಸಿಗದಂತೆ ದಾಸ್ತಾನು ಮಾಡಿಕೊಂಡಿತು. ವ್ಯಾಕ್ಸಿನ್‌ಗಳನ್ನು ಜನರಿಗೆ ನೀಡದೇ ಕಸದಬುಟ್ಟಿಗೆಸೆಯಿತು. ಆಸ್ಪತ್ರೆಗಳಲ್ಲಿ ಬೆಡ್‌ಗಳನ್ನು ಬ್ಲಾಕ್ ಮಾಡಿಕೊಂಡು ಜನ ಸಾಯುವಂತೆ ನೋಡಿಕೊಂಡಿತು. ಕೊನೆಗೆ ಅಮಾಯಕರ ಸಾವನ್ನು ವೈಭವೀಕರಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜು ಹಾಕಿತು. ರಾಷ್ಟ್ರೀಯ ಪಕ್ಷವೊಂದು ನಾಲ್ಕು ಕಾಸಿಗೆ ಈ ಹಂತಕ್ಕೆ ಇಳಿಯಬಹುದೆಂದು ಯಾರೂ ಊಹಿಸಿರಲಿಲ್ಲ” ಎಂದು ಬರೆದಿದ್ದಾರೆ.

ಹೀಗೆ ಸುಖಾ ಸುಮ್ಮನೆ ರಾಷ್ಟ್ರೀಯ ಪಕ್ಷವೊಂದರ ಬಗ್ಗೆ ಸುಳ್ಳು ಆರೋಪಗಳನ್ನು ಮಾಡುತ್ತಾ, ಪಕ್ಷದ ಬಗ್ಗೆ ಅಪ್ರಚಾರ ಮಾಡಲಾಗುತ್ತಿದೆ ಎಂದು ಹನುಮಂತನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ತೇಜೇಶ್ ಕುಮಾರ್ ದೂರು ನೀಡಿದ್ದಾರೆ.

ಇದನ್ನೂ ಓದಿ: ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ಈ ಕುರಿತು ನಾನುಗೌರಿ.ಕಾಂಗೆ ಪ್ರತಿಕ್ರಿಯೆ ನೀಡಿರುವ ತೇಜೇಶ್ ಕುಮಾರ್‌, ’ಚಕ್ರವರ್ತಿ ಸೂಲಿಬೆಲೆ ಸುಳ್ಳು ಹೇಳುತ್ತಿರುವುದು ಇದು ಮೊದಲನೇ ಬಾರಿಯಲ್ಲ. 7 ವರ್ಷಗಳಿಂದ ಸುಳ್ಳು ಹೇಳಿಕೊಂಡು ಬರುತ್ತಿದ್ದಾರೆ. ಚಿನ್ನದ ರಸ್ತೆಯಿಂದ ಹಿಡಿದು ಮೋದಿಯವರು ಲ್ಯಾಪ್‌ಟಾಪ್ ಮುಂದೆ ಕುಳಿತು ಕೊರೊನಾ ಮಾಹಿತಿ ಪಡೆಯುತ್ತಿದ್ದಾರೆ. ಡಾಲರ್‌ ಬೆಲೆ, ಪೆಟ್ರೋಲೆ ಬೆಲೆ, ಬುಲೆಟ್ ಟ್ರೈನ್‌ನಗಳ ಬಗ್ಗೆ ಸುಳ್ಳಿನ ಸರಮಾಲೆಗಳನ್ನು ಪೋಣಿಸುತ್ತಲೇ ಇದ್ದಾರೆ. ಪರೋಕ್ಷವಾಗಿ ಬಿಜೆಪಿಗೆ ಅನುಕೂಲ ಮಾಡುತ್ತಿದ್ದು, ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡುತ್ತಲೆ ಇದ್ದಾರೆ. ಹೀಗೆ ಜೂನ್ 7 ರಂದು ತಮ್ಮ ಫೇಸ್‌ಬುಕ್‌ನಲ್ಲಿ ಕಾಂಗ್ರೆಸ್ ಬಗ್ಗೆ ತುಂಬಾ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಜೊತೆಗೆ ವಿಜಯವಾಣಿಯಲ್ಲಿ ನಮ್ಮ ರೈತರು ಮತ್ತು ಮುಸಲ್ಮಾನ ಬಂಧುಗಳ ಬಗ್ಗೆಯೂ ಕೆಟ್ಟದಾಗಿ ಬರೆದಿದ್ದಾರೆ. ಹಾಗಾಗಿ ಈ ಆರೋಪಗಳಿಗೆ ಸಾಕ್ಷಿ, ದಾಖಲಾತಿ ನೀಡುವಂತೆ ಕೇಳಿದ್ದೇವೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುವಂತೆ  ಮತ್ತು ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದೇವೆ. ನಾವು ಇಲ್ಲಿಗೆ ಇದನ್ನು ಬಿಡುವುದಿಲ್ಲ. ಕಾನೂನು ಕ್ರಮ ಜರುಗಿಸುವವರೆಗು ಹೋರಾಟ ಮುಂದುವರೆಸುತ್ತೇವೆ.” ಎಂದಿದ್ದಾರೆ.

’ಇರುವ ಸತ್ಯವನ್ನು ಬರೆಯಲಿ. ತಪ್ಪುನ್ನು ತೋರಿಸಿದರೇ ತಪ್ಪು ತಿದ್ದಿಕೊಳ್ಳುತ್ತೇವೆ. ಆದರೆ ನಡೆಯದೇ ಇರುವ ವಿಷಯದ ಬಗ್ಗೆ, ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ರಾಷ್ಟ್ರೀಯ ಪಕ್ಷದ ಬಗ್ಗೆ ಸುಳ್ಳು ಹೇಳುವುದು, ಅಪಪ್ರಚಾರ ಮಾಡುವುದು ಎಷ್ಟು ಸರಿ? ಇಷ್ಟು ದಿನ ನಾವು ಇದನ್ನು ಸುಮ್ಮನೆ ಕಡೆಗಣಿಸಿದ್ದೇವೆ. ಆದರೆ, ಈಗಲೂ ಇಂತಹದ್ದೇ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಹೀಗಾಗಿ ನಾವು ಇದನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ತೇಜೇಶ್ ಕುಮಾರ್‌ ಹೇಳಿದ್ದಾರೆ.

“ಬೆಡ್ ಬ್ಲಾಕಿಂಗ್ ದಂಧೆ ಬಗ್ಗೆ ಕೂಡ ಕಾಂಗ್ರೆಸ್‌ ಅನ್ನು ಅನುಮಾನಿಸಿದ್ದರು. ಆದರೆ, ಕೊನೆಗೆ ಯಾರು ಸಿಕ್ಕಿಹಾಕಿಕೊಂಡಿದ್ದು, ಯಾರು ಯಾರು ಅದರಲ್ಲಿ ನಂಟು ಹೊಂದಿದ್ದರು ಎಂಬುದು ಎಲ್ಲರಿಗೂ ಗೊತ್ತಾಯಿತು. ಚಕ್ರವರ್ತಿ ಸೂಲಿಬೆಲೆಯವರು ಸುಳ್ಳಿನ ಸರಮಾಲೆಯಲ್ಲಿ ಜನರಿಗೆ ಮಂಕು ಬೂದಿ ಎರಚುತ್ತಿದ್ದಾರೆ. ಹಾಗಾಗಿ ಜನರಿಗೆ ಈ ಸುಳ್ಳುಗಳ ಬಗ್ಗೆ ಅರಿವು ಮೂಡಬೇಕು. ಅವರ ವಿರುದ್ಧ ಬರೀ ದೂರು ನೀಡಿ ಸುಮ್ಮನಾಗುವುದಿಲ್ಲ. ಜನರಿಗೆ ಈ ಬಗ್ಗೆ ತಿಳಿಸುವ ಪ್ರಯತ್ನ ಮಾಡುತ್ತೇವೆ” ಎಂದು ತೇಜೇಶ್ ಕುಮಾರ್‌ ನಾನುಗೌರಿ.ಕಾಂಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ 3ನೇ ಅಲೆಯಲ್ಲಿ ರಾಜ್ಯದಲ್ಲಿ 3.4 ಲಕ್ಷ ಮಕ್ಕಳಿಗೆ ಸೋಂಕು ಸಾಧ್ಯತೆ: ತಜ್ಞರ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದೊಂದು ಒಳ್ಳೆಯ ಕೆಲಸ. ಇವನು ಮತ್ತು ಇವನಂತಹ ಅವಿವೇಕಿಗಳಿಗೆ ಕಾನೂನಿನ ವ್ಯಾಪ್ತಿಯಲ್ಲಿಯೇ ಬುದ್ದಿ ಕಲಿಸಬೇಕು.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...