Homeಚಳವಳಿರಕ್ತವನ್ನು ಚೆಲ್ಲುತ್ತೇವೆ, ಒಳಮೀಸಲಾತಿ ಪಡೆಯುತ್ತೇವೆ: ಬೆಂಗಳೂರಿನಲ್ಲಿ ಭೀಮಸೈನಿಕರ ಘರ್ಜನೆ

ರಕ್ತವನ್ನು ಚೆಲ್ಲುತ್ತೇವೆ, ಒಳಮೀಸಲಾತಿ ಪಡೆಯುತ್ತೇವೆ: ಬೆಂಗಳೂರಿನಲ್ಲಿ ಭೀಮಸೈನಿಕರ ಘರ್ಜನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂದು ನಮ್ಮ ಹಕ್ಕೊತ್ತಾಯ ಆಲಿಸುವವರೆಗೂ ನಾವು ಮನೆಗಳಿಗೆ ಹೋಗುವುದಿಲ್ಲ. ಡಿಸೆಂಬರ್ 28ರವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ...

- Advertisement -
- Advertisement -

ರಕ್ತವನ್ನು ಚೆಲ್ಲುತ್ತೇವೆ – ಒಳಮೀಸಲಾತಿ ಪಡೆಯುತ್ತೇವೆ, ಹಂಚಿ ತಿನ್ನುವುದು ಅಂಬೇಡ್ಕರ್ ವಾದ – ಕಿತ್ತು ತಿನ್ನುವುದು ಮನುವಾದ, ಸರ್ವರಿಗೂ ಸಮಪಾಲು -ಸರ್ವರಿಗೂ ಸಮಬಾಳು, ಮೀಸಲಾತಿ ವರ್ಗೀಕರಣ ಆಗಲೇಬೇಕು, ಸದಾಶಿವ ಆಯೋಗದ ವರದಿ ಚರ್ಚೆಯಾಗಲಿ ಮತ್ತು ಜಾರಿಯಾಗಲಿ.. ಜೈ ಮಾದಿಗ, ಜೈ ಜೈ ಮಾದಿಗ… ಇವು ಇಂದು ಬೆಂಗಳೂರಿನಲ್ಲಿ ಭೀಮಸಾಗರದಲ್ಲಿ ಮೊಳಗಿದ ಘೋಷಣೆಗಳು.

‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ’ ಹಮ್ಮಿಕೊಂಡಿದ್ದ ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಜಾರಿಯಾಗಲಿ ಹೋರಾಟಕ್ಕೆ ರಾಜ್ಯದ ಮೂಲೆ-ಮೂಲೆಗಳಿಂದ  ಶೋಷಿತ ಸಮುದಾಯಗಳ ಜನಸಾಗರವೇ ಹರಿದುಬಂದಿತ್ತು. ಸಹಸ್ರಾರು ಜನರ ಒಡಲಾಳದ ಕಿಚ್ಚು ಪ್ರವಾಹವಾಗಿ ಹರಿಯಿತು. ಮಳೆ-ಚಳಿ-ಗಾಳಿಯನ್ನು ಲೆಕ್ಕಿಸದೆ ಹಾಡುತ್ತ, ಕುಣಿಯುತ್ತ, ಘೋಷಣೆ ಕೂಗುತ್ತಾ ಒಳ ಮೀಸಲಾತಿ ಜಾರಿಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಕ್ರಾಂತಿವೀರ ಸಂಗೊಳ್ಳಿ ರೈಲು ನಿಲ್ದಾಣದಿಂದ ಮೆರವಣಿಗೆ ಹೊರಟು ಫ್ರೀಡಂ ಪಾರ್ಕ್ ಎದುರಿನ ರಸ್ತೆಯಲ್ಲಿ ಸಮಾವೇಶಗೊಳ್ಳಲಾಯಿತು. ಹಿರಿಯ ಹೋರಾಟಗಾರ ಅಂಬಣ್ಣ ಅರೋಲಿಕರ್‌ರವರ ನೇತೃತ್ವದಲ್ಲಿ ನವೆಂಬರ್ 28ರಿಂದ ಹರಿಹರದಲ್ಲಿರುವ ದಸಸಂ ಸಂಸ್ಥಾಪಕರಾದ ಬಿ.ಕೃಷ್ಣಪ್ಪನವರ ಚೈತ್ಯಭೂಮಿಯಿಂದ ಪಾದಯಾತ್ರೆ ಹೊರಟಿದ್ದ ನೂರಕ್ಕೂ ಹೆಚ್ಚು ಪಾದಯಾತ್ರಿಗಳು ಹೋರಾಟದ ಸಾಗರ ಸೇರಿಕೊಂಡರು.

ಅಂಬೇಡ್ಕರ್‌ರವರ ಹಾಡು ಹಾಡುವ ಮೂಲಕ ಹೋರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅಂಬಣ್ಣನವರು, “ನೊಂದ ಜನರು ಮೂರು ದಶಕದಿಂದ ಒಳಮೀಸಲಾತಿಗಾಗಿ ಹೋರಾಡುತ್ತಿದ್ದಾರೆ. ಆದರೆ ಮೂರು ಪಕ್ಷಗಳು ಆಶ್ವಾಸನೆ ನೀಡಿದವು ಹೊರತು, ಜಾರಿ ಮಾಡಲಿಲ್ಲ. ಜಸ್ಟೀಸ್ ಸದಾಶಿವ ಆಯೋಗವನ್ನು ಕಾಂಗ್ರೆಸ್ ಸರ್ಕಾರ ನೇಮಿಸಿತು. ಬಿಜೆಪಿ ಸರ್ಕಾರ ಅದಕ್ಕೆ ಅನುದಾನ ನೀಡಿತು. ಜೆಡಿಎಸ್ ತನ್ನ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಜಾರಿಗೊಳಿಸುವುದಾಗಿ ಹೇಳಿಕೊಂಡಿತು. ಆದರೆ ಯಾರೂ ಸಹ ವರದಿಯನ್ನು ಬಿಡುಗಡೆ ಮಾಡಲಿಲ್ಲ, ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಈಗ ಮತ್ತೊಂದು ಚುನಾವಣೆ ಬಂದಿದೆ. ನಿಮ್ಮ ಭರವಸೆಗಳು ಸಾಕು. ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿ ಹಾಗೂ ಕೇಂದ್ರ ಸರ್ಕಾರವು ಸಂವಿಧಾನದ ಅನುಚ್ಛೇದ 341(3)ಕ್ಕೆ ತಿದ್ದುಪಡಿ ತರಬೇಕು. ಆಗ ನಾವು ವೋಟು ಯಾರಿಗಾಗಬೇಕೆಂದು ತೀರ್ಮಾನ ಮಾಡ್ತೀವಿ. ಇಲ್ಲದಿದ್ದರೆ ನೋಟಾ ಒತ್ತಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂದು ನಮ್ಮ ಹಕ್ಕೊತ್ತಾಯ ಆಲಿಸುವವರೆಗೂ ನಾವು ಮನೆಗಳಿಗೆ ಹೋಗುವುದಿಲ್ಲ. ಡಿಸೆಂಬರ್ 28ರವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು.

ಹರಿಹರದಿಂದ ಪಾದಯಾತ್ರೆಯಲ್ಲಿ ಭಾಗವಹಿಸಿರುವ ಮಾದಿಗ ರಕ್ಷಣಾ ವೇದಿಕೆ ಮತ್ತು ಕರ್ನಾಟಕ ಜನಶಕ್ತಿಯ ಮುಖಂಡರಾದ ಕರಿಯಪ್ಪ ಗುಡಿಮನಿಯವರು ಮಾತನಾಡಿ, “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಲ್ಲಿ ಬಂದು ನಮ್ಮನ್ನು ಸಮಾಧಾನ ಮಾಡಿದರೆ ಪ್ರಯೋಜನವಾಗದು. ವಿಧಾನಸೌಧದಲ್ಲಿ ಕೊಳೆಯುತ್ತಿರುವ ಸದಾಶಿವ ಆಯೋಗದ ವರದಿಯ ಗಂಟು ಬಿಚ್ಚಬೇಕು. ಆ ಕುರಿತು ಚರ್ಚೆ ನಡೆದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ನೊಂದ ಜನರಿಗೆ ನ್ಯಾಯ ಸಿಗಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ” ಎಂದರು.

ಆರ್ ಮೋಹನ್‌ರಾಜ್‌ರವರು ಮಾತನಾಡಿ, “ಬಾಬಾಸಾಹೇಬರ ಆಶಯ ಸಾಮಾಜಿಕ ನ್ಯಾಯ. ಶೋಷಣೆಗೆ ಒಳಗಾದವರಿಗೆ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಸಿಗಬೇಕು ಎಂಬುದಾಗಿದೆ. ಆದರೆ ಮೂರು ಪರ್ಸೆಂಟ್ ಇರುವ ಜನರಿಗೆ 10% ಇಡಬ್ಲೂಎಸ್ ಮೀಸಲಾತಿಯನ್ನು ಏಕಾಏಕಿ ಜಾರಿಗೊಳಿಸಲಾಗಿದೆ. 25 % ಇರುವ ನಾವು ಹಂಚಿಕೊಳ್ಳುತ್ತೇವೆ, ಮೀಸಲಾತಿ ವರ್ಗೀಕರಣ ಮಾಡಿ ಎಂದರೆ ಮೀನಾಮೇಷ ಎಣಿಸಲಾಗುತ್ತಿದೆ” ಎಂದು ಕಿಡಿಕಾರಿದರು.

ಸರ್ಕಾರದ ಒಡೆದು ಆಳುವ ನೀತಿಗೆ ವಿರುದ್ಧವಾಗಿ ನಮ್ಮ ಹೋರಾಟ ನಡೆಯುತ್ತಿದೆ. ಮೀಸಲಾತಿ ವರ್ಗೀಕರಣದ ಮೂಲಕ ಅನ್ಯಾಯವಾದ ಸಮುದಾಯಕ್ಕೆ ಸಮಪಾಲು ದಕ್ಕಬೇಕು. ಒಳ ಮೀಸಲಾತಿಗಾಗಿ ರಾಜಕೀಯ ಪಕ್ಷಗಳು ಸಬ್‌ ಕಮಿಟಿ ರಚಿಸುವುದು ನಮಗೆ ಬೇಕಾಗಿಲ್ಲ. ಬದಲಾಗಿ ಮುಂಬರುವ ಅಧಿವೇಶನದಲ್ಲಿ ಘೋಷಣೆ ಮಾಡಬೇಕು, ಎಲ್ಲಾ ಪಕ್ಷಗಳು ಸರ್ವಾನುಮತದಿಂದ ಅಂಗೀಕರಿಸಬೇಕು. ಸುಳ್ಳು ಜಾತಿ ಪತ್ರ ಪಡೆದವರಿಗೆ ಕಠಿಣ ಶಿಕ್ಷೆಯಾಗಬೇಕು, ಪಿಟಿಸಿಎಲ್ ಕಾಯ್ದೆ ಬಲಪಡಿಸಬೇಕು ಎಂದು ಒತ್ತಾಯಿಸಿದರು.

ದಲಿತ ಶಾಸಕರು, ಸಂಸದರು, ರಾಜಕಾರಣಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಹರಿದಿರುವ ಚಡ್ಡಿ ಹೊತ್ತು ಓಡಾಡುವುದನ್ನು ನಿಲ್ಲಿಸಿ… ನಮ್ಮ ನ್ಯಾಯಯುತ ಪಾಲು ಪಡೆಯಲು ಹೋರಾಡಿ. ಇಲ್ಲದಿದ್ದರೆ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ಕಾರ್ಯದರ್ಶಿ ಎಸ್ ಮಾರಪ್ಪನವರು, ವೆಂಕಟಗಿರಿಯಯ್ಯನವರು, ಬಿ.ಆರ್ ಭಾಸ್ಕರ್ ಪ್ರಸಾದ್, ಬಸವರಾಜ್ ಕೌತಾಳ್, ದಾನಪ್ಪ ಸಿ ನೀಲೋಗಲ್, ಎಂ.ಆರ್ ಭೇರಿ ಸೇರಿದಂತೆ ಹಲವು ಮುಖಂಡರು ಮಾತನಾಡಿದರು.

ಗೋ ಬ್ಯಾಕ್ ಸೋಮಣ್ಣ ಎಂದ ಪ್ರತಿಭಟನಾಕಾರರು

ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ವಸತಿ ಸಚಿವ ವಿ.ಸೋಮಣ್ಣ ಭೇಟಿ ನೀಡಿದರು.  ವೇದಿಕೆಯ ಹಿಂಭಾಗಕ್ಕೆ ಆಗಮಿಸಿದ ಅವರನ್ನು ವೇದಿಕೆಯ ಬಳಿ ಹೋಗಲು ಬಿಡದೆ ಪ್ರತಿಭಟನಾಕಾರರು ತಡೆದರು. ನೀವೇಕೆ ಬಂದೀರಿ? ನೀವು ನಮಗಾಗಿ ಏನು ಮಾಡಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಬೊಮ್ಮಾಯಿಯವರನ್ನು ಕರೆದುಕೊಂಡು ಬನ್ನಿ ಎಂದು ತಾಕೀತು ಮಾಡಿದರು. ಸುಮಾರು 15 ನಿಮಿಷ ಕಾದ ನಂತರ ಸೋಮಣ್ಣ ಪೊಲೀಸರ ಸಹಾಯದೊಂದಿಗೆ ಜನರ ವಿರೋಧದ ನಡುವೆಯೂ ವೇದಿಕೆ ಏರಿದರು. ಆದರೆ ಜನರು ಗೋ ಬ್ಯಾಕ್ ಸೋಮಣ್ಣ, ಸಿಎಂ ಬೊಮ್ಮಾಯಿ ಬರಲೇಬೇಕು ಎಂದು ಜೋರಾಗಿ ಘೋಷಣೆ ಕೂಗಿದರು. ಸೋಮಣ್ಣನವರು ಮಾತನಾಡಲು ಬಿಡದೇ ಜನರು ಜೋರಾಗಿ ಘೋಷಣೆ ಕೂಗುತ್ತಲೇ ಇದ್ದರು. ಕಡೆಗೆ ಸಚಿವ ಸೋಮಣ್ಣ ದಾರಿಕಾಣದೆ ವೇದಿಕೆ ಇಳಿದು ವಾಪಸ್ ಹೋದರು.

ಇದನ್ನೂ ಓದಿ; ಒಳಮೀಸಲಾತಿಯೇ ಸಾಮಾಜಿಕ ನ್ಯಾಯವಾಗುವ ಜಾಯಮಾನದಲ್ಲಿದ್ದೇವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...