Homeಚಳವಳಿರಕ್ತವನ್ನು ಚೆಲ್ಲುತ್ತೇವೆ, ಒಳಮೀಸಲಾತಿ ಪಡೆಯುತ್ತೇವೆ: ಬೆಂಗಳೂರಿನಲ್ಲಿ ಭೀಮಸೈನಿಕರ ಘರ್ಜನೆ

ರಕ್ತವನ್ನು ಚೆಲ್ಲುತ್ತೇವೆ, ಒಳಮೀಸಲಾತಿ ಪಡೆಯುತ್ತೇವೆ: ಬೆಂಗಳೂರಿನಲ್ಲಿ ಭೀಮಸೈನಿಕರ ಘರ್ಜನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂದು ನಮ್ಮ ಹಕ್ಕೊತ್ತಾಯ ಆಲಿಸುವವರೆಗೂ ನಾವು ಮನೆಗಳಿಗೆ ಹೋಗುವುದಿಲ್ಲ. ಡಿಸೆಂಬರ್ 28ರವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ...

- Advertisement -
- Advertisement -

ರಕ್ತವನ್ನು ಚೆಲ್ಲುತ್ತೇವೆ – ಒಳಮೀಸಲಾತಿ ಪಡೆಯುತ್ತೇವೆ, ಹಂಚಿ ತಿನ್ನುವುದು ಅಂಬೇಡ್ಕರ್ ವಾದ – ಕಿತ್ತು ತಿನ್ನುವುದು ಮನುವಾದ, ಸರ್ವರಿಗೂ ಸಮಪಾಲು -ಸರ್ವರಿಗೂ ಸಮಬಾಳು, ಮೀಸಲಾತಿ ವರ್ಗೀಕರಣ ಆಗಲೇಬೇಕು, ಸದಾಶಿವ ಆಯೋಗದ ವರದಿ ಚರ್ಚೆಯಾಗಲಿ ಮತ್ತು ಜಾರಿಯಾಗಲಿ.. ಜೈ ಮಾದಿಗ, ಜೈ ಜೈ ಮಾದಿಗ… ಇವು ಇಂದು ಬೆಂಗಳೂರಿನಲ್ಲಿ ಭೀಮಸಾಗರದಲ್ಲಿ ಮೊಳಗಿದ ಘೋಷಣೆಗಳು.

‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ’ ಹಮ್ಮಿಕೊಂಡಿದ್ದ ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಜಾರಿಯಾಗಲಿ ಹೋರಾಟಕ್ಕೆ ರಾಜ್ಯದ ಮೂಲೆ-ಮೂಲೆಗಳಿಂದ  ಶೋಷಿತ ಸಮುದಾಯಗಳ ಜನಸಾಗರವೇ ಹರಿದುಬಂದಿತ್ತು. ಸಹಸ್ರಾರು ಜನರ ಒಡಲಾಳದ ಕಿಚ್ಚು ಪ್ರವಾಹವಾಗಿ ಹರಿಯಿತು. ಮಳೆ-ಚಳಿ-ಗಾಳಿಯನ್ನು ಲೆಕ್ಕಿಸದೆ ಹಾಡುತ್ತ, ಕುಣಿಯುತ್ತ, ಘೋಷಣೆ ಕೂಗುತ್ತಾ ಒಳ ಮೀಸಲಾತಿ ಜಾರಿಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಕ್ರಾಂತಿವೀರ ಸಂಗೊಳ್ಳಿ ರೈಲು ನಿಲ್ದಾಣದಿಂದ ಮೆರವಣಿಗೆ ಹೊರಟು ಫ್ರೀಡಂ ಪಾರ್ಕ್ ಎದುರಿನ ರಸ್ತೆಯಲ್ಲಿ ಸಮಾವೇಶಗೊಳ್ಳಲಾಯಿತು. ಹಿರಿಯ ಹೋರಾಟಗಾರ ಅಂಬಣ್ಣ ಅರೋಲಿಕರ್‌ರವರ ನೇತೃತ್ವದಲ್ಲಿ ನವೆಂಬರ್ 28ರಿಂದ ಹರಿಹರದಲ್ಲಿರುವ ದಸಸಂ ಸಂಸ್ಥಾಪಕರಾದ ಬಿ.ಕೃಷ್ಣಪ್ಪನವರ ಚೈತ್ಯಭೂಮಿಯಿಂದ ಪಾದಯಾತ್ರೆ ಹೊರಟಿದ್ದ ನೂರಕ್ಕೂ ಹೆಚ್ಚು ಪಾದಯಾತ್ರಿಗಳು ಹೋರಾಟದ ಸಾಗರ ಸೇರಿಕೊಂಡರು.

ಅಂಬೇಡ್ಕರ್‌ರವರ ಹಾಡು ಹಾಡುವ ಮೂಲಕ ಹೋರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅಂಬಣ್ಣನವರು, “ನೊಂದ ಜನರು ಮೂರು ದಶಕದಿಂದ ಒಳಮೀಸಲಾತಿಗಾಗಿ ಹೋರಾಡುತ್ತಿದ್ದಾರೆ. ಆದರೆ ಮೂರು ಪಕ್ಷಗಳು ಆಶ್ವಾಸನೆ ನೀಡಿದವು ಹೊರತು, ಜಾರಿ ಮಾಡಲಿಲ್ಲ. ಜಸ್ಟೀಸ್ ಸದಾಶಿವ ಆಯೋಗವನ್ನು ಕಾಂಗ್ರೆಸ್ ಸರ್ಕಾರ ನೇಮಿಸಿತು. ಬಿಜೆಪಿ ಸರ್ಕಾರ ಅದಕ್ಕೆ ಅನುದಾನ ನೀಡಿತು. ಜೆಡಿಎಸ್ ತನ್ನ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಜಾರಿಗೊಳಿಸುವುದಾಗಿ ಹೇಳಿಕೊಂಡಿತು. ಆದರೆ ಯಾರೂ ಸಹ ವರದಿಯನ್ನು ಬಿಡುಗಡೆ ಮಾಡಲಿಲ್ಲ, ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಈಗ ಮತ್ತೊಂದು ಚುನಾವಣೆ ಬಂದಿದೆ. ನಿಮ್ಮ ಭರವಸೆಗಳು ಸಾಕು. ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿ ಹಾಗೂ ಕೇಂದ್ರ ಸರ್ಕಾರವು ಸಂವಿಧಾನದ ಅನುಚ್ಛೇದ 341(3)ಕ್ಕೆ ತಿದ್ದುಪಡಿ ತರಬೇಕು. ಆಗ ನಾವು ವೋಟು ಯಾರಿಗಾಗಬೇಕೆಂದು ತೀರ್ಮಾನ ಮಾಡ್ತೀವಿ. ಇಲ್ಲದಿದ್ದರೆ ನೋಟಾ ಒತ್ತಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂದು ನಮ್ಮ ಹಕ್ಕೊತ್ತಾಯ ಆಲಿಸುವವರೆಗೂ ನಾವು ಮನೆಗಳಿಗೆ ಹೋಗುವುದಿಲ್ಲ. ಡಿಸೆಂಬರ್ 28ರವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು.

ಹರಿಹರದಿಂದ ಪಾದಯಾತ್ರೆಯಲ್ಲಿ ಭಾಗವಹಿಸಿರುವ ಮಾದಿಗ ರಕ್ಷಣಾ ವೇದಿಕೆ ಮತ್ತು ಕರ್ನಾಟಕ ಜನಶಕ್ತಿಯ ಮುಖಂಡರಾದ ಕರಿಯಪ್ಪ ಗುಡಿಮನಿಯವರು ಮಾತನಾಡಿ, “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಲ್ಲಿ ಬಂದು ನಮ್ಮನ್ನು ಸಮಾಧಾನ ಮಾಡಿದರೆ ಪ್ರಯೋಜನವಾಗದು. ವಿಧಾನಸೌಧದಲ್ಲಿ ಕೊಳೆಯುತ್ತಿರುವ ಸದಾಶಿವ ಆಯೋಗದ ವರದಿಯ ಗಂಟು ಬಿಚ್ಚಬೇಕು. ಆ ಕುರಿತು ಚರ್ಚೆ ನಡೆದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ನೊಂದ ಜನರಿಗೆ ನ್ಯಾಯ ಸಿಗಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ” ಎಂದರು.

ಆರ್ ಮೋಹನ್‌ರಾಜ್‌ರವರು ಮಾತನಾಡಿ, “ಬಾಬಾಸಾಹೇಬರ ಆಶಯ ಸಾಮಾಜಿಕ ನ್ಯಾಯ. ಶೋಷಣೆಗೆ ಒಳಗಾದವರಿಗೆ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಸಿಗಬೇಕು ಎಂಬುದಾಗಿದೆ. ಆದರೆ ಮೂರು ಪರ್ಸೆಂಟ್ ಇರುವ ಜನರಿಗೆ 10% ಇಡಬ್ಲೂಎಸ್ ಮೀಸಲಾತಿಯನ್ನು ಏಕಾಏಕಿ ಜಾರಿಗೊಳಿಸಲಾಗಿದೆ. 25 % ಇರುವ ನಾವು ಹಂಚಿಕೊಳ್ಳುತ್ತೇವೆ, ಮೀಸಲಾತಿ ವರ್ಗೀಕರಣ ಮಾಡಿ ಎಂದರೆ ಮೀನಾಮೇಷ ಎಣಿಸಲಾಗುತ್ತಿದೆ” ಎಂದು ಕಿಡಿಕಾರಿದರು.

ಸರ್ಕಾರದ ಒಡೆದು ಆಳುವ ನೀತಿಗೆ ವಿರುದ್ಧವಾಗಿ ನಮ್ಮ ಹೋರಾಟ ನಡೆಯುತ್ತಿದೆ. ಮೀಸಲಾತಿ ವರ್ಗೀಕರಣದ ಮೂಲಕ ಅನ್ಯಾಯವಾದ ಸಮುದಾಯಕ್ಕೆ ಸಮಪಾಲು ದಕ್ಕಬೇಕು. ಒಳ ಮೀಸಲಾತಿಗಾಗಿ ರಾಜಕೀಯ ಪಕ್ಷಗಳು ಸಬ್‌ ಕಮಿಟಿ ರಚಿಸುವುದು ನಮಗೆ ಬೇಕಾಗಿಲ್ಲ. ಬದಲಾಗಿ ಮುಂಬರುವ ಅಧಿವೇಶನದಲ್ಲಿ ಘೋಷಣೆ ಮಾಡಬೇಕು, ಎಲ್ಲಾ ಪಕ್ಷಗಳು ಸರ್ವಾನುಮತದಿಂದ ಅಂಗೀಕರಿಸಬೇಕು. ಸುಳ್ಳು ಜಾತಿ ಪತ್ರ ಪಡೆದವರಿಗೆ ಕಠಿಣ ಶಿಕ್ಷೆಯಾಗಬೇಕು, ಪಿಟಿಸಿಎಲ್ ಕಾಯ್ದೆ ಬಲಪಡಿಸಬೇಕು ಎಂದು ಒತ್ತಾಯಿಸಿದರು.

ದಲಿತ ಶಾಸಕರು, ಸಂಸದರು, ರಾಜಕಾರಣಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಹರಿದಿರುವ ಚಡ್ಡಿ ಹೊತ್ತು ಓಡಾಡುವುದನ್ನು ನಿಲ್ಲಿಸಿ… ನಮ್ಮ ನ್ಯಾಯಯುತ ಪಾಲು ಪಡೆಯಲು ಹೋರಾಡಿ. ಇಲ್ಲದಿದ್ದರೆ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ಕಾರ್ಯದರ್ಶಿ ಎಸ್ ಮಾರಪ್ಪನವರು, ವೆಂಕಟಗಿರಿಯಯ್ಯನವರು, ಬಿ.ಆರ್ ಭಾಸ್ಕರ್ ಪ್ರಸಾದ್, ಬಸವರಾಜ್ ಕೌತಾಳ್, ದಾನಪ್ಪ ಸಿ ನೀಲೋಗಲ್, ಎಂ.ಆರ್ ಭೇರಿ ಸೇರಿದಂತೆ ಹಲವು ಮುಖಂಡರು ಮಾತನಾಡಿದರು.

ಗೋ ಬ್ಯಾಕ್ ಸೋಮಣ್ಣ ಎಂದ ಪ್ರತಿಭಟನಾಕಾರರು

ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ವಸತಿ ಸಚಿವ ವಿ.ಸೋಮಣ್ಣ ಭೇಟಿ ನೀಡಿದರು.  ವೇದಿಕೆಯ ಹಿಂಭಾಗಕ್ಕೆ ಆಗಮಿಸಿದ ಅವರನ್ನು ವೇದಿಕೆಯ ಬಳಿ ಹೋಗಲು ಬಿಡದೆ ಪ್ರತಿಭಟನಾಕಾರರು ತಡೆದರು. ನೀವೇಕೆ ಬಂದೀರಿ? ನೀವು ನಮಗಾಗಿ ಏನು ಮಾಡಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಬೊಮ್ಮಾಯಿಯವರನ್ನು ಕರೆದುಕೊಂಡು ಬನ್ನಿ ಎಂದು ತಾಕೀತು ಮಾಡಿದರು. ಸುಮಾರು 15 ನಿಮಿಷ ಕಾದ ನಂತರ ಸೋಮಣ್ಣ ಪೊಲೀಸರ ಸಹಾಯದೊಂದಿಗೆ ಜನರ ವಿರೋಧದ ನಡುವೆಯೂ ವೇದಿಕೆ ಏರಿದರು. ಆದರೆ ಜನರು ಗೋ ಬ್ಯಾಕ್ ಸೋಮಣ್ಣ, ಸಿಎಂ ಬೊಮ್ಮಾಯಿ ಬರಲೇಬೇಕು ಎಂದು ಜೋರಾಗಿ ಘೋಷಣೆ ಕೂಗಿದರು. ಸೋಮಣ್ಣನವರು ಮಾತನಾಡಲು ಬಿಡದೇ ಜನರು ಜೋರಾಗಿ ಘೋಷಣೆ ಕೂಗುತ್ತಲೇ ಇದ್ದರು. ಕಡೆಗೆ ಸಚಿವ ಸೋಮಣ್ಣ ದಾರಿಕಾಣದೆ ವೇದಿಕೆ ಇಳಿದು ವಾಪಸ್ ಹೋದರು.

ಇದನ್ನೂ ಓದಿ; ಒಳಮೀಸಲಾತಿಯೇ ಸಾಮಾಜಿಕ ನ್ಯಾಯವಾಗುವ ಜಾಯಮಾನದಲ್ಲಿದ್ದೇವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...